Homeಕರ್ನಾಟಕಜಾತಿಗಣತಿ ನಮೂನೆಯಿಂದ 33 ಕ್ರಿಶ್ಚಿಯನ್ ಜಾತಿಗಳನ್ನು ಕೈಬಿಡಲಾಗಿದೆ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್...

ಜಾತಿಗಣತಿ ನಮೂನೆಯಿಂದ 33 ಕ್ರಿಶ್ಚಿಯನ್ ಜಾತಿಗಳನ್ನು ಕೈಬಿಡಲಾಗಿದೆ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯ್ಕ್

- Advertisement -
- Advertisement -

ವಿವಿಧ ಜಾತಿಗಳ ಮುಂದೆ ‘ಕ್ರಿಶ್ಚಿಯನ್’ ಎಂಬ ಪದ ಸೇರಿಸಿದ್ದ ವಿಚಾರ ವಿವಾದ ಸ್ವರೂಪ ಪಡೆದ ಹಿನ್ನೆಲೆ,
ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಿಂದ ಲಿಂಗಾಯತ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್ ಸೇರಿದಂತೆ 33 ಜಾತಿಗಳನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕೈಬಿಟ್ಟಿದೆ.

ಭಾನುವಾರ (ಸೆ.21) ದೇವರಾಜು ಅರಸು ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ಆರ್.ನಾಯ್ಕ್‌, “ಸೆ.22ರಿಂದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ರಾಜ್ಯದಾದ್ಯಂತ ಪ್ರಾರಂಭಗೊಳ್ಳಲಿದೆ. ಇದರಲ್ಲಿ ಪಟ್ಟಿ ಮಾಡಿರುವ 1,561 ಜಾತಿಗಳ ಪೈಕಿ 33 ಜಾತಿಗಳನ್ನು ಕೈಬಿಡಲಾಗಿದೆ ಎಂದು ತಿಳಿಸಿದರು.

ಈ ಹಿಂದಿನ ಕಾಂತರಾಜು ಆಯೋಗದ ಸಮೀಕ್ಷೆಯಲ್ಲಿ ಇದ್ದ ಮಾಹಿತಿ, ಕಲಂಗಳನ್ನೇ ಉಪಯೋಗಿಸಿಕೊಂಡು ಸಮೀಕ್ಷೆ ಮಾಡಲಾಗುತ್ತಿದೆ. ಇದರಿಂದ ಕಾನೂನು ಉಲ್ಲಂಘನೆ ಆಗಿಲ್ಲ. ಈ ಮಾಹಿತಿಯನ್ನು ಸಮುದಾಯಗಳ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಪರಿಸ್ಥಿತಿಗಳನ್ನು ಬಗ್ಗೆ ತಿಳಿಯಲು ಸಂಗ್ರಹಿಸಿತ್ತಿದ್ದೇವೆಯೇ ಹೊರತು, ಬೇರೆ ಉದ್ದೇಶಕ್ಕಾಗಿ ಉಪಯೋಗ ಮಾಡುವುದಿಲ್ಲ ಎಂದರು.

ಈ ಹಿಂದೆಯೇ ಆಯೋಗ ಸಮೀಕ್ಷೆ ನಡೆಸುವ ಮೊದಲೇ ಬಿಟ್ಟು ಹೋದ ಜಾತಿಗಳನ್ನು ಗಮನಕ್ಕೆ ತನ್ನಿ ಎಂದು ಜಾಗೃತಿ ಮೂಡಿಸುವ ಪ್ರಕಟಣೆಯೊಂದನ್ನು ಸಾರ್ವಜನಿಕವಾಗಿ ಪ್ರಕಟಿಸಲಾಗಿತ್ತು. ಇದಾದ ಬಳಿಕ ಅನೇಕರು ತಮ್ಮ ಜಾತಿಗಳನ್ನು ಪರಿಗಣಿಸುವಂತೆ ಕೋರಿದ್ದರು. ಅದರಂತೆ 148 ಜಾತಿಗಳನ್ನು ಸಮೀಕ್ಷೆಯಲ್ಲಿ ಸೇರಿಸಲಾಗಿದೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ತಿಳಿಸಿದರು.

33 ಜಾತಿಗಳನ್ನು ಕೈಬಿಡಲಾಗಿದೆ ಎಂದರೆ ಅದನ್ನು ತೆಗೆದು ಹಾಕಿದ್ದೇವೆ ಎಂದಲ್ಲ. ಅರ್ಹ ಜಾತಿಯವರು ತಮ್ಮ ಮೂಲವನ್ನು ಸಮೀಕ್ಷೆದಾರರಿಗೆ ತಿಳಿಸಿ ಉಲ್ಲೇಖ ಮಾಡಬಹುದು ಎಂದೂ ಹೇಳಿದರು.

ಸಮೀಕ್ಷೆಯಲ್ಲಿ 60 ಪ್ರಶ್ನೆಗಳಿರುತ್ತವೆ. ಅದನ್ನು ಸಮೀಕ್ಷೆ ಮಾಡುವವರ ಮೊಬೈಲ್‌ಗೆ ಅಪ್ಲೋಡ್ ಮಾಡಲಾಗಿದೆ. ಅವುಗಳ ಮೂಲಕ ಮಾಹಿತಿ ಕಲೆ ಹಾಕಲಾಗುತ್ತದೆ. ಏನು ಪ್ರಶ್ನೆಗಳಿರುತ್ತವೆ ಎಂದು ನಾವು ಜನರಿಗೆ ತಿಳಿವಳಿಕೆ ಕೊಟ್ಟಿದ್ದೇವೆ. ಹ್ಯಾಂಡ್ ಬಿಲ್ ಪ್ರಿಂಟ್ ಮಾಡಿ ಮನೆ ಮನೆಗ ತಲುಪಿಸಲು ವ್ಯವಸ್ಥೆ ಮಾಡಿದ್ದೇವೆ. ಇನ್ನೆರಡು ದಿನಗಳಲ್ಲಿ ಅದು ಪೂರ್ಣಗೊಳ್ಳಲಿದೆ ಎಂದರು.

ಏನಿದು ‘ಕ್ರಿಶ್ಚಿಯನ್’ ಜಾತಿ ವಿವಾದ

ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಬಳಿಕವೂ ನಾನಾ ಕಾರಣಕ್ಕಾಗಿ ಮೂಲ ಜಾತಿಯನ್ನೂ ಸೇರಿಸಿಕೊಂಡು ಕ್ರಿಶ್ಚಿಯನ್ ಎಂಬುದಾಗಿ ಗುರುತಿಸಿಕೊಂಡಿರುವ ಜಾತಿಗಳ ಹೆಸರು ಆಯೋಗ ಪ್ರಕಟಿಸಿರುವ ಜಾತಿಗಳ ಪಟ್ಟಿಯಲ್ಲಿ ದಾಖಲಾಗಿತ್ತು.

ಬ್ರಾಹ್ಮಣ ಕ್ರಿಶ್ಚಿಯನ್, ಲಿಂಗಾಯತ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್, ಕುರುಬ ಕ್ರಿಶ್ಚಿಯನ್, ವಾಲ್ಮೀಕಿ ಕ್ರಿಶ್ಚಿಯನ್, ಆದಿ ಆಂಧ್ರ ಕ್ರಿಶ್ಚಿಯನ್, ಆದಿ ದ್ರಾವಿಡ ಕ್ರಿಶ್ಚಿಯನ್, ಆದಿ ಕರ್ನಾಟಕ ಕ್ರಿಶ್ಚಿಯನ್ ಸೇರಿದಂತೆ ಸುಮಾರು 46 ಜಾತಿಗಳ ಹೆಸರಿನೊಂದಿಗೆ ಕ್ರಿಶ್ಚಿಯನ್ ಎಂಬುದಾಗಿ ದಾಖಲಿಸಿರುವುದು ಕಂಡುಬಂದಿತ್ತು.

ಇದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ಷೇಪ ವ್ಯಕ್ತವಾಗಿತ್ತು. ನಾನಾ ಜಾತಿ- ಸಮುದಾಯಗಳ ನಾಯಕರು, ಸ್ವಾಮೀಜಿಗಳು ಕೂಡ ಮತಾಂತರದ ಬಳಿಕ ಹಿಂದೂ ಮೂಲ ಜಾತಿಯನ್ನು ಸೇರಿಸಿಕೊಂಡು ಕ್ರಿಶ್ಚಿಯನ್ ಎಂಬುದಾಗಿ ದಾಖಲಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದರು.

ಹಲವು ಸಚಿವರು, ಶಾಸಕರಿಂದಲೂ ಪರೋಕ್ಷವಾಗಿ ಈ ಬಗ್ಗೆ ಆಕ್ಷೇಪ ಕೇಳಿಬಂದಿತ್ತು. ಸಚಿವ ಸಂಪುಟ ಸಭೆಯಲ್ಲೂಈ ಬಗ್ಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ ಜನಾಭಿಪ್ರಾಯ, ಆಕ್ಷೇಪಗಳ ಬಗ್ಗೆ ಆಯೋಗದ ಗಮನಕ್ಕೆ ತಂದಿತ್ತು.

ಸೆ.22ರಿಂದ ಸಮೀಕ್ಷೆ

ರಾಜ್ಯದ ವಿವಿಧ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಕಲೆ ಹಾಕಲು ಸೆ.22ರಿಂದ, ಅಂದರೆ ನಾಳೆಯಿಂದ ಸಮೀಕ್ಷೆ ನಡೆಯಲಿದೆ. ಇದಕ್ಕಾಗಿ ಶಿಕ್ಷಕರು, ಕಂದಾಯ ಇಲಾಖೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರನ್ನು ಬಳಸಿಕೊಳ್ಳಲಾಗುತ್ತಿದೆ. ಅವರಿಗೆ ಈಗಾಗಲೇ ಈ ಬಗ್ಗೆ ತರಬೇತಿ ನೀಡಲಾಗಿದೆ. ಈ ಬಾರಿ ಸಂಪೂರ್ಣ ಡಿಜಿಟಲ್ ಮಾದರಿಯಲ್ಲಿ ಸಮೀಕ್ಷೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಬೆಂಗಳೂರಿನಲ್ಲಿ ಸಮೀಕ್ಷೆ ತಡ

ಬೆಂಗಳೂರಿನಲ್ಲಿ ಎರಡು ಮೂರು ದಿನ ಸಮೀಕ್ಷೆ ತಡವಾಗಿ ಆರಂಭ ಆಗಲಿದೆ. ತರಬೇತಿ ನೀಡುವುದಕ್ಕೆ ಒಂದು ವಾರ ತಡವಾಗಿದೆ. ಜೊತೆಗೆ ಜಿಬಿಎ ನೊಟಿಫಿಕೇಷನ್ ತಡ ಆಗಿದ್ದರಿಂದ ಇಲ್ಲಿ ತಡ ಆಗಿದೆ. ಬೆಂಗಳೂರು ನಗರದಲ್ಲಿ ಹೆಚ್ಚುವರಿ ಸಿಬ್ಬಂದಿ ನೇಮಿಸಲಾಗಿದೆ. ಬೇರೆ ಇಲಾಖೆಯಿಂದಲೂ ನೇಮಕ ಮಾಡಲಾಗಿದೆ ಎಂದು ಮಧುಸೂದನ್ ನಾಯ್ಕ್ ತಿಳಿಸಿದ್ದಾರೆ.

ಆಧಾರ್ ಕಾರ್ಡ್‌ ಕಡ್ಡಾಯ

ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಆಧಾರ್ ಕಾರ್ಡ್ ಕಡ್ಡಾಯಗೊಳಿಸಲಾಗಿದೆ. ಪ್ರತಿಯೊಬ್ಬರು ತಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿದರೆ ಮಾತ್ರ ಸಮೀಕ್ಷೆಯಲ್ಲಿ ಪರಿಗಣಿಸಲಾಗುವುದು ಎಂದು ಮಧುಸೂದನ್ ನಾಯ್ಕ್ ತಿಳಿಸಿದ್ದಾರೆ.

ಆಳಂದ ಸೇರಿ ರಾಜ್ಯದ ಎಲ್ಲಾ ‘ಮತಗಳ್ಳತನ’ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...