Homeಕರ್ನಾಟಕಜಾತಿಗಣತಿ ನಮೂನೆಯಿಂದ 33 ಕ್ರಿಶ್ಚಿಯನ್ ಜಾತಿಗಳನ್ನು ಕೈಬಿಡಲಾಗಿದೆ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್...

ಜಾತಿಗಣತಿ ನಮೂನೆಯಿಂದ 33 ಕ್ರಿಶ್ಚಿಯನ್ ಜಾತಿಗಳನ್ನು ಕೈಬಿಡಲಾಗಿದೆ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯ್ಕ್

- Advertisement -
- Advertisement -

ವಿವಿಧ ಜಾತಿಗಳ ಮುಂದೆ ‘ಕ್ರಿಶ್ಚಿಯನ್’ ಎಂಬ ಪದ ಸೇರಿಸಿದ್ದ ವಿಚಾರ ವಿವಾದ ಸ್ವರೂಪ ಪಡೆದ ಹಿನ್ನೆಲೆ,
ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಿಂದ ಲಿಂಗಾಯತ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್ ಸೇರಿದಂತೆ 33 ಜಾತಿಗಳನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕೈಬಿಟ್ಟಿದೆ.

ಭಾನುವಾರ (ಸೆ.21) ದೇವರಾಜು ಅರಸು ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ಆರ್.ನಾಯ್ಕ್‌, “ಸೆ.22ರಿಂದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ರಾಜ್ಯದಾದ್ಯಂತ ಪ್ರಾರಂಭಗೊಳ್ಳಲಿದೆ. ಇದರಲ್ಲಿ ಪಟ್ಟಿ ಮಾಡಿರುವ 1,561 ಜಾತಿಗಳ ಪೈಕಿ 33 ಜಾತಿಗಳನ್ನು ಕೈಬಿಡಲಾಗಿದೆ ಎಂದು ತಿಳಿಸಿದರು.

ಈ ಹಿಂದಿನ ಕಾಂತರಾಜು ಆಯೋಗದ ಸಮೀಕ್ಷೆಯಲ್ಲಿ ಇದ್ದ ಮಾಹಿತಿ, ಕಲಂಗಳನ್ನೇ ಉಪಯೋಗಿಸಿಕೊಂಡು ಸಮೀಕ್ಷೆ ಮಾಡಲಾಗುತ್ತಿದೆ. ಇದರಿಂದ ಕಾನೂನು ಉಲ್ಲಂಘನೆ ಆಗಿಲ್ಲ. ಈ ಮಾಹಿತಿಯನ್ನು ಸಮುದಾಯಗಳ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಪರಿಸ್ಥಿತಿಗಳನ್ನು ಬಗ್ಗೆ ತಿಳಿಯಲು ಸಂಗ್ರಹಿಸಿತ್ತಿದ್ದೇವೆಯೇ ಹೊರತು, ಬೇರೆ ಉದ್ದೇಶಕ್ಕಾಗಿ ಉಪಯೋಗ ಮಾಡುವುದಿಲ್ಲ ಎಂದರು.

ಈ ಹಿಂದೆಯೇ ಆಯೋಗ ಸಮೀಕ್ಷೆ ನಡೆಸುವ ಮೊದಲೇ ಬಿಟ್ಟು ಹೋದ ಜಾತಿಗಳನ್ನು ಗಮನಕ್ಕೆ ತನ್ನಿ ಎಂದು ಜಾಗೃತಿ ಮೂಡಿಸುವ ಪ್ರಕಟಣೆಯೊಂದನ್ನು ಸಾರ್ವಜನಿಕವಾಗಿ ಪ್ರಕಟಿಸಲಾಗಿತ್ತು. ಇದಾದ ಬಳಿಕ ಅನೇಕರು ತಮ್ಮ ಜಾತಿಗಳನ್ನು ಪರಿಗಣಿಸುವಂತೆ ಕೋರಿದ್ದರು. ಅದರಂತೆ 148 ಜಾತಿಗಳನ್ನು ಸಮೀಕ್ಷೆಯಲ್ಲಿ ಸೇರಿಸಲಾಗಿದೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ತಿಳಿಸಿದರು.

33 ಜಾತಿಗಳನ್ನು ಕೈಬಿಡಲಾಗಿದೆ ಎಂದರೆ ಅದನ್ನು ತೆಗೆದು ಹಾಕಿದ್ದೇವೆ ಎಂದಲ್ಲ. ಅರ್ಹ ಜಾತಿಯವರು ತಮ್ಮ ಮೂಲವನ್ನು ಸಮೀಕ್ಷೆದಾರರಿಗೆ ತಿಳಿಸಿ ಉಲ್ಲೇಖ ಮಾಡಬಹುದು ಎಂದೂ ಹೇಳಿದರು.

ಸಮೀಕ್ಷೆಯಲ್ಲಿ 60 ಪ್ರಶ್ನೆಗಳಿರುತ್ತವೆ. ಅದನ್ನು ಸಮೀಕ್ಷೆ ಮಾಡುವವರ ಮೊಬೈಲ್‌ಗೆ ಅಪ್ಲೋಡ್ ಮಾಡಲಾಗಿದೆ. ಅವುಗಳ ಮೂಲಕ ಮಾಹಿತಿ ಕಲೆ ಹಾಕಲಾಗುತ್ತದೆ. ಏನು ಪ್ರಶ್ನೆಗಳಿರುತ್ತವೆ ಎಂದು ನಾವು ಜನರಿಗೆ ತಿಳಿವಳಿಕೆ ಕೊಟ್ಟಿದ್ದೇವೆ. ಹ್ಯಾಂಡ್ ಬಿಲ್ ಪ್ರಿಂಟ್ ಮಾಡಿ ಮನೆ ಮನೆಗ ತಲುಪಿಸಲು ವ್ಯವಸ್ಥೆ ಮಾಡಿದ್ದೇವೆ. ಇನ್ನೆರಡು ದಿನಗಳಲ್ಲಿ ಅದು ಪೂರ್ಣಗೊಳ್ಳಲಿದೆ ಎಂದರು.

ಏನಿದು ‘ಕ್ರಿಶ್ಚಿಯನ್’ ಜಾತಿ ವಿವಾದ

ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಬಳಿಕವೂ ನಾನಾ ಕಾರಣಕ್ಕಾಗಿ ಮೂಲ ಜಾತಿಯನ್ನೂ ಸೇರಿಸಿಕೊಂಡು ಕ್ರಿಶ್ಚಿಯನ್ ಎಂಬುದಾಗಿ ಗುರುತಿಸಿಕೊಂಡಿರುವ ಜಾತಿಗಳ ಹೆಸರು ಆಯೋಗ ಪ್ರಕಟಿಸಿರುವ ಜಾತಿಗಳ ಪಟ್ಟಿಯಲ್ಲಿ ದಾಖಲಾಗಿತ್ತು.

ಬ್ರಾಹ್ಮಣ ಕ್ರಿಶ್ಚಿಯನ್, ಲಿಂಗಾಯತ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್, ಕುರುಬ ಕ್ರಿಶ್ಚಿಯನ್, ವಾಲ್ಮೀಕಿ ಕ್ರಿಶ್ಚಿಯನ್, ಆದಿ ಆಂಧ್ರ ಕ್ರಿಶ್ಚಿಯನ್, ಆದಿ ದ್ರಾವಿಡ ಕ್ರಿಶ್ಚಿಯನ್, ಆದಿ ಕರ್ನಾಟಕ ಕ್ರಿಶ್ಚಿಯನ್ ಸೇರಿದಂತೆ ಸುಮಾರು 46 ಜಾತಿಗಳ ಹೆಸರಿನೊಂದಿಗೆ ಕ್ರಿಶ್ಚಿಯನ್ ಎಂಬುದಾಗಿ ದಾಖಲಿಸಿರುವುದು ಕಂಡುಬಂದಿತ್ತು.

ಇದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ಷೇಪ ವ್ಯಕ್ತವಾಗಿತ್ತು. ನಾನಾ ಜಾತಿ- ಸಮುದಾಯಗಳ ನಾಯಕರು, ಸ್ವಾಮೀಜಿಗಳು ಕೂಡ ಮತಾಂತರದ ಬಳಿಕ ಹಿಂದೂ ಮೂಲ ಜಾತಿಯನ್ನು ಸೇರಿಸಿಕೊಂಡು ಕ್ರಿಶ್ಚಿಯನ್ ಎಂಬುದಾಗಿ ದಾಖಲಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದರು.

ಹಲವು ಸಚಿವರು, ಶಾಸಕರಿಂದಲೂ ಪರೋಕ್ಷವಾಗಿ ಈ ಬಗ್ಗೆ ಆಕ್ಷೇಪ ಕೇಳಿಬಂದಿತ್ತು. ಸಚಿವ ಸಂಪುಟ ಸಭೆಯಲ್ಲೂಈ ಬಗ್ಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ ಜನಾಭಿಪ್ರಾಯ, ಆಕ್ಷೇಪಗಳ ಬಗ್ಗೆ ಆಯೋಗದ ಗಮನಕ್ಕೆ ತಂದಿತ್ತು.

ಸೆ.22ರಿಂದ ಸಮೀಕ್ಷೆ

ರಾಜ್ಯದ ವಿವಿಧ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಕಲೆ ಹಾಕಲು ಸೆ.22ರಿಂದ, ಅಂದರೆ ನಾಳೆಯಿಂದ ಸಮೀಕ್ಷೆ ನಡೆಯಲಿದೆ. ಇದಕ್ಕಾಗಿ ಶಿಕ್ಷಕರು, ಕಂದಾಯ ಇಲಾಖೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರನ್ನು ಬಳಸಿಕೊಳ್ಳಲಾಗುತ್ತಿದೆ. ಅವರಿಗೆ ಈಗಾಗಲೇ ಈ ಬಗ್ಗೆ ತರಬೇತಿ ನೀಡಲಾಗಿದೆ. ಈ ಬಾರಿ ಸಂಪೂರ್ಣ ಡಿಜಿಟಲ್ ಮಾದರಿಯಲ್ಲಿ ಸಮೀಕ್ಷೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಬೆಂಗಳೂರಿನಲ್ಲಿ ಸಮೀಕ್ಷೆ ತಡ

ಬೆಂಗಳೂರಿನಲ್ಲಿ ಎರಡು ಮೂರು ದಿನ ಸಮೀಕ್ಷೆ ತಡವಾಗಿ ಆರಂಭ ಆಗಲಿದೆ. ತರಬೇತಿ ನೀಡುವುದಕ್ಕೆ ಒಂದು ವಾರ ತಡವಾಗಿದೆ. ಜೊತೆಗೆ ಜಿಬಿಎ ನೊಟಿಫಿಕೇಷನ್ ತಡ ಆಗಿದ್ದರಿಂದ ಇಲ್ಲಿ ತಡ ಆಗಿದೆ. ಬೆಂಗಳೂರು ನಗರದಲ್ಲಿ ಹೆಚ್ಚುವರಿ ಸಿಬ್ಬಂದಿ ನೇಮಿಸಲಾಗಿದೆ. ಬೇರೆ ಇಲಾಖೆಯಿಂದಲೂ ನೇಮಕ ಮಾಡಲಾಗಿದೆ ಎಂದು ಮಧುಸೂದನ್ ನಾಯ್ಕ್ ತಿಳಿಸಿದ್ದಾರೆ.

ಆಧಾರ್ ಕಾರ್ಡ್‌ ಕಡ್ಡಾಯ

ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಆಧಾರ್ ಕಾರ್ಡ್ ಕಡ್ಡಾಯಗೊಳಿಸಲಾಗಿದೆ. ಪ್ರತಿಯೊಬ್ಬರು ತಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿದರೆ ಮಾತ್ರ ಸಮೀಕ್ಷೆಯಲ್ಲಿ ಪರಿಗಣಿಸಲಾಗುವುದು ಎಂದು ಮಧುಸೂದನ್ ನಾಯ್ಕ್ ತಿಳಿಸಿದ್ದಾರೆ.

ಆಳಂದ ಸೇರಿ ರಾಜ್ಯದ ಎಲ್ಲಾ ‘ಮತಗಳ್ಳತನ’ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...