Homeಕರ್ನಾಟಕಜಾತಿಗಣತಿ ನಮೂನೆಯಿಂದ 33 ಕ್ರಿಶ್ಚಿಯನ್ ಜಾತಿಗಳನ್ನು ಕೈಬಿಡಲಾಗಿದೆ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್...

ಜಾತಿಗಣತಿ ನಮೂನೆಯಿಂದ 33 ಕ್ರಿಶ್ಚಿಯನ್ ಜಾತಿಗಳನ್ನು ಕೈಬಿಡಲಾಗಿದೆ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯ್ಕ್

- Advertisement -
- Advertisement -

ವಿವಿಧ ಜಾತಿಗಳ ಮುಂದೆ ‘ಕ್ರಿಶ್ಚಿಯನ್’ ಎಂಬ ಪದ ಸೇರಿಸಿದ್ದ ವಿಚಾರ ವಿವಾದ ಸ್ವರೂಪ ಪಡೆದ ಹಿನ್ನೆಲೆ,
ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಿಂದ ಲಿಂಗಾಯತ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್ ಸೇರಿದಂತೆ 33 ಜಾತಿಗಳನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕೈಬಿಟ್ಟಿದೆ.

ಭಾನುವಾರ (ಸೆ.21) ದೇವರಾಜು ಅರಸು ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ಆರ್.ನಾಯ್ಕ್‌, “ಸೆ.22ರಿಂದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ರಾಜ್ಯದಾದ್ಯಂತ ಪ್ರಾರಂಭಗೊಳ್ಳಲಿದೆ. ಇದರಲ್ಲಿ ಪಟ್ಟಿ ಮಾಡಿರುವ 1,561 ಜಾತಿಗಳ ಪೈಕಿ 33 ಜಾತಿಗಳನ್ನು ಕೈಬಿಡಲಾಗಿದೆ ಎಂದು ತಿಳಿಸಿದರು.

ಈ ಹಿಂದಿನ ಕಾಂತರಾಜು ಆಯೋಗದ ಸಮೀಕ್ಷೆಯಲ್ಲಿ ಇದ್ದ ಮಾಹಿತಿ, ಕಲಂಗಳನ್ನೇ ಉಪಯೋಗಿಸಿಕೊಂಡು ಸಮೀಕ್ಷೆ ಮಾಡಲಾಗುತ್ತಿದೆ. ಇದರಿಂದ ಕಾನೂನು ಉಲ್ಲಂಘನೆ ಆಗಿಲ್ಲ. ಈ ಮಾಹಿತಿಯನ್ನು ಸಮುದಾಯಗಳ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಪರಿಸ್ಥಿತಿಗಳನ್ನು ಬಗ್ಗೆ ತಿಳಿಯಲು ಸಂಗ್ರಹಿಸಿತ್ತಿದ್ದೇವೆಯೇ ಹೊರತು, ಬೇರೆ ಉದ್ದೇಶಕ್ಕಾಗಿ ಉಪಯೋಗ ಮಾಡುವುದಿಲ್ಲ ಎಂದರು.

ಈ ಹಿಂದೆಯೇ ಆಯೋಗ ಸಮೀಕ್ಷೆ ನಡೆಸುವ ಮೊದಲೇ ಬಿಟ್ಟು ಹೋದ ಜಾತಿಗಳನ್ನು ಗಮನಕ್ಕೆ ತನ್ನಿ ಎಂದು ಜಾಗೃತಿ ಮೂಡಿಸುವ ಪ್ರಕಟಣೆಯೊಂದನ್ನು ಸಾರ್ವಜನಿಕವಾಗಿ ಪ್ರಕಟಿಸಲಾಗಿತ್ತು. ಇದಾದ ಬಳಿಕ ಅನೇಕರು ತಮ್ಮ ಜಾತಿಗಳನ್ನು ಪರಿಗಣಿಸುವಂತೆ ಕೋರಿದ್ದರು. ಅದರಂತೆ 148 ಜಾತಿಗಳನ್ನು ಸಮೀಕ್ಷೆಯಲ್ಲಿ ಸೇರಿಸಲಾಗಿದೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ತಿಳಿಸಿದರು.

33 ಜಾತಿಗಳನ್ನು ಕೈಬಿಡಲಾಗಿದೆ ಎಂದರೆ ಅದನ್ನು ತೆಗೆದು ಹಾಕಿದ್ದೇವೆ ಎಂದಲ್ಲ. ಅರ್ಹ ಜಾತಿಯವರು ತಮ್ಮ ಮೂಲವನ್ನು ಸಮೀಕ್ಷೆದಾರರಿಗೆ ತಿಳಿಸಿ ಉಲ್ಲೇಖ ಮಾಡಬಹುದು ಎಂದೂ ಹೇಳಿದರು.

ಸಮೀಕ್ಷೆಯಲ್ಲಿ 60 ಪ್ರಶ್ನೆಗಳಿರುತ್ತವೆ. ಅದನ್ನು ಸಮೀಕ್ಷೆ ಮಾಡುವವರ ಮೊಬೈಲ್‌ಗೆ ಅಪ್ಲೋಡ್ ಮಾಡಲಾಗಿದೆ. ಅವುಗಳ ಮೂಲಕ ಮಾಹಿತಿ ಕಲೆ ಹಾಕಲಾಗುತ್ತದೆ. ಏನು ಪ್ರಶ್ನೆಗಳಿರುತ್ತವೆ ಎಂದು ನಾವು ಜನರಿಗೆ ತಿಳಿವಳಿಕೆ ಕೊಟ್ಟಿದ್ದೇವೆ. ಹ್ಯಾಂಡ್ ಬಿಲ್ ಪ್ರಿಂಟ್ ಮಾಡಿ ಮನೆ ಮನೆಗ ತಲುಪಿಸಲು ವ್ಯವಸ್ಥೆ ಮಾಡಿದ್ದೇವೆ. ಇನ್ನೆರಡು ದಿನಗಳಲ್ಲಿ ಅದು ಪೂರ್ಣಗೊಳ್ಳಲಿದೆ ಎಂದರು.

ಏನಿದು ‘ಕ್ರಿಶ್ಚಿಯನ್’ ಜಾತಿ ವಿವಾದ

ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಬಳಿಕವೂ ನಾನಾ ಕಾರಣಕ್ಕಾಗಿ ಮೂಲ ಜಾತಿಯನ್ನೂ ಸೇರಿಸಿಕೊಂಡು ಕ್ರಿಶ್ಚಿಯನ್ ಎಂಬುದಾಗಿ ಗುರುತಿಸಿಕೊಂಡಿರುವ ಜಾತಿಗಳ ಹೆಸರು ಆಯೋಗ ಪ್ರಕಟಿಸಿರುವ ಜಾತಿಗಳ ಪಟ್ಟಿಯಲ್ಲಿ ದಾಖಲಾಗಿತ್ತು.

ಬ್ರಾಹ್ಮಣ ಕ್ರಿಶ್ಚಿಯನ್, ಲಿಂಗಾಯತ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್, ಕುರುಬ ಕ್ರಿಶ್ಚಿಯನ್, ವಾಲ್ಮೀಕಿ ಕ್ರಿಶ್ಚಿಯನ್, ಆದಿ ಆಂಧ್ರ ಕ್ರಿಶ್ಚಿಯನ್, ಆದಿ ದ್ರಾವಿಡ ಕ್ರಿಶ್ಚಿಯನ್, ಆದಿ ಕರ್ನಾಟಕ ಕ್ರಿಶ್ಚಿಯನ್ ಸೇರಿದಂತೆ ಸುಮಾರು 46 ಜಾತಿಗಳ ಹೆಸರಿನೊಂದಿಗೆ ಕ್ರಿಶ್ಚಿಯನ್ ಎಂಬುದಾಗಿ ದಾಖಲಿಸಿರುವುದು ಕಂಡುಬಂದಿತ್ತು.

ಇದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ಷೇಪ ವ್ಯಕ್ತವಾಗಿತ್ತು. ನಾನಾ ಜಾತಿ- ಸಮುದಾಯಗಳ ನಾಯಕರು, ಸ್ವಾಮೀಜಿಗಳು ಕೂಡ ಮತಾಂತರದ ಬಳಿಕ ಹಿಂದೂ ಮೂಲ ಜಾತಿಯನ್ನು ಸೇರಿಸಿಕೊಂಡು ಕ್ರಿಶ್ಚಿಯನ್ ಎಂಬುದಾಗಿ ದಾಖಲಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದರು.

ಹಲವು ಸಚಿವರು, ಶಾಸಕರಿಂದಲೂ ಪರೋಕ್ಷವಾಗಿ ಈ ಬಗ್ಗೆ ಆಕ್ಷೇಪ ಕೇಳಿಬಂದಿತ್ತು. ಸಚಿವ ಸಂಪುಟ ಸಭೆಯಲ್ಲೂಈ ಬಗ್ಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ ಜನಾಭಿಪ್ರಾಯ, ಆಕ್ಷೇಪಗಳ ಬಗ್ಗೆ ಆಯೋಗದ ಗಮನಕ್ಕೆ ತಂದಿತ್ತು.

ಸೆ.22ರಿಂದ ಸಮೀಕ್ಷೆ

ರಾಜ್ಯದ ವಿವಿಧ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಕಲೆ ಹಾಕಲು ಸೆ.22ರಿಂದ, ಅಂದರೆ ನಾಳೆಯಿಂದ ಸಮೀಕ್ಷೆ ನಡೆಯಲಿದೆ. ಇದಕ್ಕಾಗಿ ಶಿಕ್ಷಕರು, ಕಂದಾಯ ಇಲಾಖೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರನ್ನು ಬಳಸಿಕೊಳ್ಳಲಾಗುತ್ತಿದೆ. ಅವರಿಗೆ ಈಗಾಗಲೇ ಈ ಬಗ್ಗೆ ತರಬೇತಿ ನೀಡಲಾಗಿದೆ. ಈ ಬಾರಿ ಸಂಪೂರ್ಣ ಡಿಜಿಟಲ್ ಮಾದರಿಯಲ್ಲಿ ಸಮೀಕ್ಷೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಬೆಂಗಳೂರಿನಲ್ಲಿ ಸಮೀಕ್ಷೆ ತಡ

ಬೆಂಗಳೂರಿನಲ್ಲಿ ಎರಡು ಮೂರು ದಿನ ಸಮೀಕ್ಷೆ ತಡವಾಗಿ ಆರಂಭ ಆಗಲಿದೆ. ತರಬೇತಿ ನೀಡುವುದಕ್ಕೆ ಒಂದು ವಾರ ತಡವಾಗಿದೆ. ಜೊತೆಗೆ ಜಿಬಿಎ ನೊಟಿಫಿಕೇಷನ್ ತಡ ಆಗಿದ್ದರಿಂದ ಇಲ್ಲಿ ತಡ ಆಗಿದೆ. ಬೆಂಗಳೂರು ನಗರದಲ್ಲಿ ಹೆಚ್ಚುವರಿ ಸಿಬ್ಬಂದಿ ನೇಮಿಸಲಾಗಿದೆ. ಬೇರೆ ಇಲಾಖೆಯಿಂದಲೂ ನೇಮಕ ಮಾಡಲಾಗಿದೆ ಎಂದು ಮಧುಸೂದನ್ ನಾಯ್ಕ್ ತಿಳಿಸಿದ್ದಾರೆ.

ಆಧಾರ್ ಕಾರ್ಡ್‌ ಕಡ್ಡಾಯ

ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಆಧಾರ್ ಕಾರ್ಡ್ ಕಡ್ಡಾಯಗೊಳಿಸಲಾಗಿದೆ. ಪ್ರತಿಯೊಬ್ಬರು ತಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿದರೆ ಮಾತ್ರ ಸಮೀಕ್ಷೆಯಲ್ಲಿ ಪರಿಗಣಿಸಲಾಗುವುದು ಎಂದು ಮಧುಸೂದನ್ ನಾಯ್ಕ್ ತಿಳಿಸಿದ್ದಾರೆ.

ಆಳಂದ ಸೇರಿ ರಾಜ್ಯದ ಎಲ್ಲಾ ‘ಮತಗಳ್ಳತನ’ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...