Homeಮುಖಪುಟಶೇ.33 ಹಾಲಿ ರಾಜ್ಯಸಭಾ ಸಂಸದರ ಮೇಲಿದೆ ಕ್ರಿಮಿನಲ್ ಕೇಸ್: ವರದಿ

ಶೇ.33 ಹಾಲಿ ರಾಜ್ಯಸಭಾ ಸಂಸದರ ಮೇಲಿದೆ ಕ್ರಿಮಿನಲ್ ಕೇಸ್: ವರದಿ

- Advertisement -
- Advertisement -

ರಾಜ್ಯಸಭೆಯ 225 ಹಾಲಿ ಸದಸ್ಯರ ಪೈಕಿ, ಶೇಕಡಾ 33ರಷ್ಟು ಜನರು ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ಇರುವುದಾಗಿ ಘೋಷಿಸಿಕೊಂಡಿದ್ದಾರೆ. ಹಾಲಿ ಸದಸ್ಯರ ಒಟ್ಟು ಆಸ್ತಿ ಮೌಲ್ಯ ₹19,602 ಕೋಟಿಗಳಷ್ಟಿದೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್‌(ಎಡಿಆರ್)ನ ವಿಶ್ಲೇಷಣೆ ತಿಳಿಸಿದೆ.

ಇಬ್ಬರು ರಾಜ್ಯಸಭಾ ಹಾಲಿ ಸದಸ್ಯರು ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಕೊಲೆಗೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ನಾಲ್ವರು ಸದಸ್ಯರ ಮೇಲೆ ಐಪಿಸಿ ಸೆಕ್ಷನ್ 307ರ ಅಡಿಯಲ್ಲಿ ಕೊಲೆ ಯತ್ನಕ್ಕೆ ಸಂಬಂಧಿಸಿದ ಪ್ರಕರಣಗಳಿವೆ. ಒಟ್ಟು ಸದಸ್ಯರ ಪೈಕಿ 31 ಮಂದಿ, ಅಂದರೆ ಶೇ.14ರಷ್ಟು ಜನರು ಕೋಟ್ಯಾಧಿಪತಿಗಳಾಗಿದ್ದಾರೆ ಎಂದು ಎಡಿಆರ್ ವರದಿ ತಿಳಿಸಿದೆ.

ರಾಜ್ಯಸಭೆಯ 225 ಹಾಲಿ ಸಂಸದರ ಪೈಕಿ 75 (ಶೇ. 33) ಮಂದಿ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ಇರುವುದಾಗಿ ಘೋಷಿಸಿದ್ದಾರೆ. 40 (ಶೇ. 18) ಮಂದಿ ಸಂಸದರು ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ವರದಿ ಹೇಳಿದೆ.

ಎಡಿಆರ್ ವಿಶ್ಲೇಷಣೆಯಲ್ಲಿ ವಿವಿಧ ರಾಜಕೀಯ ಪಕ್ಷಗಳಲ್ಲಿ ಎಷ್ಟು ಜನ ರಾಜ್ಯಸಭಾ ಸದಸ್ಯರ ಮೇಲೆ ಕ್ರಿಮಿನಲ್ ಪ್ರಕರಣಗಳಿವೆ ಎಂಬುವುದನ್ನು ತಿಳಿಸಿದೆ. ಅದರಂತೆ, ಬಿಜೆಪಿಯ 90 (ಶೇ.23), ಕಾಂಗ್ರೆಸ್‌ನ 28 (ಶೇ. 50) ಸದಸ್ಯರ ಮೇಲೆ ಕ್ರಿಮಿನಲ್ ಪ್ರಕರಣಗಳಿವೆ.

ಟಿಎಂಸಿಯ 13 ರಾಜ್ಯಸಭಾ ಸದಸ್ಯರ ಪೈಕಿ 5 (ಶೇ. 38), ಆರ್‌ಜೆಡಿಯ 6 ಸದಸ್ಯರಲ್ಲಿ 4 (ಶೇ. 67), ಸಿಪಿಐಎಂನ 5 ಸದಸ್ಯರಲ್ಲಿ 4 (ಶೇ.80), ಎಎಪಿಯ 10 ಸದಸ್ಯರ ಪೈಕಿ 3 (ಶೇ.10), ವೈಎಸ್‌ಆರ್‌ಸಿಪಿಯ 11 ಸದಸ್ಯರ ಪೈಕಿ 4 (ಶೇ.36) ಮತ್ತು ಡಿಎಂಕೆಯ 10 ಸದಸ್ಯರಲ್ಲಿ 2 (ಶೇ.20) ಮಂದಿ ಚುನಾವಣಾ ಅಫಿಡವಿಟ್‌ಗಳಲ್ಲಿ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ಇರುವುದಾಗಿ ಘೋಷಿಸಿದ್ದಾರೆ ಎಂದು ಎಡಿಆರ್‌ ವಿಶ್ಲೇಷಣೆ ತಿಳಿಸಿದೆ.

ಬಿಜೆಪಿಯ 90 ಸದಸ್ಯರ ಪೈಕಿ 10 (ಶೇ.11), ಕಾಂಗ್ರೆಸ್‌ನ 28 ಸದಸ್ಯರ ಪೈಕಿ 9 (ಶೇ.32), ಟಿಎಂಸಿಯ 13 ಸದಸ್ಯರ ಪೈಕಿ 3 (ಶೇ.23), ಆರ್‌ಜೆಡಿಯ 6 ಸದಸ್ಯರ ಪೈಕಿ 2 (ಶೇ.33) ಸಿಪಿಐಎಂನ 5 ಸದಸ್ಯರ ಪೈಕಿ 2 (ಶೇ. 40), ಎಎಪಿಯ 10 ಸದಸ್ಯರ ಪೈಕಿ 1 (ಶೇ.10), ವೈಎಸ್‌ಆರ್‌ಸಿಪಿಯ 11 ಸದಸ್ಯರ ಪೈಕಿ 3(ಶೇ.27) ಮತ್ತು ಡಿಎಂಕೆಯ 10 ಸದಸ್ಯರ ಪೈಕಿ ಒಬ್ಬರು (ಶೇ.10) ಅಫಿಡವಿಟ್‌ಗಳಲ್ಲಿ ತಮ್ಮ ವಿರುದ್ಧ ಗಂಭೀರ ಕ್ರಿಮಿನಲ್ ಮೊಕದ್ದಮೆಗಳು ಇರುವುದಾಗಿ ಘೋಷಿಸಿದ್ದಾರೆ ಎಂದು ವರದಿ ಹೇಳಿದೆ.

ರಾಜ್ಯವಾರು ಸಂಸದರ ವಿಶ್ಲೇಷಣೆ ನೋಡುವುದಾದರೆ, ಮಹಾರಾಷ್ಟ್ರದ 18 ಸಂಸದರಲ್ಲಿ 11 (ಶೇ.61), ಬಿಹಾರದ 16 ಸಂಸದರಲ್ಲಿ 8 (ಶೇ.50), ಉತ್ತರ ಪ್ರದೇಶದ 31 ಸಂಸದರಲ್ಲಿ 9 (ಶೇ.29), ತಮಿಳುನಾಡಿನ 18 ಸಂಸದರ ಪೈಕಿ 6 (ಶೇ.33), ಕೇರಳದ 9 ಸಂಸದರ ಪೈಕಿ 6 (ಶೇ.67) ಮತ್ತು ಪಶ್ಚಿಮ ಬಂಗಾಳದ 16 ಸಂಸದರ ಪೈಕಿ 7(ಶೇ.44) ಮಂದಿ ಅಫಿಡವಿಟ್‌ಗಳಲ್ಲಿ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ಇರುವುದಾಗಿ ಘೋಷಿಸಿದ್ದಾರೆ.

ವಿಶ್ಲೇಷಣೆಯು 233 ರಾಜ್ಯಸಭಾ ಸದಸ್ಯರ ಪೈಕಿ 225 ಮಂದಿಯನ್ನು ಒಳಗೊಂಡಿದೆ. ಮಹಾರಾಷ್ಟ್ರದಿಂದ ಒಂದು ಸ್ಥಾನ ಖಾಲಿಯಾಗಿದೆ, ಜಮ್ಮು ಕಾಶ್ಮೀರದ ನಾಲ್ವರನ್ನು ವಿಶ್ಲೇಷಣೆಗೆ ಒಳಪಡಿಸಿಲ್ಲ. ಕರ್ನಾಟಕ, ಪುದುಚ್ಚೇರಿ ಮತ್ತು ಅಸ್ಸಾಂನ ತಲಾ ಒಬ್ಬ ಸಂಸದರ ಅಫಿಡವಿಟ್‌ಗಳ ಅಲಭ್ಯತೆಯಿಂದಾಗಿ ವಿಶ್ಲೇಷಣೆ ಮಾಡಿಲ್ಲ ಎಂದು ಎಡಿಆರ್ ಹೇಳಿದೆ.

ಕ್ರಿಮಿನಲ್ ಪ್ರಕರಣಗಳ ಜೊತೆಗೆ ರಾಜ್ಯಸಭಾ ಸದಸ್ಯರ ಆಸ್ತಿ ಮೌಲ್ಯವನ್ನೂ ವಿಶ್ಲೇಷಿಸಲಾಗಿದೆ. ಪ್ರತಿ ಸಂಸದರ ಸರಾಸರಿ ಆಸ್ತಿ ಮೌಲ್ಯ ₹87.12 ಕೋಟಿಗಳಷ್ಟಿದೆ ಎಂದು ತಿಳಿದು ಬಂದಿದೆ. ದತ್ತಾಂಶಗಳನ್ನು ಮತ್ತಷ್ಟು ವಿಭಜಿಸಿ ವಿಶ್ಲೇಷಿಸಿದಾಗ ವಿವಿಧ ರಾಜಕೀಯ ಪಕ್ಷಗಳ ಸದಸ್ಯರ ಆಸ್ತಿ ಮೌಲ್ಯಗಳ ನಡುವೆ ಗಮನಾರ್ಹ ವ್ಯತ್ಯಾಸಗಳು ಕಂಡು ಬಂದಿವೆ.

ಪ್ರಮುಖ ಪಕ್ಷಗಳ ಪೈಕಿ, ಬಿಜೆಪಿಯ 90 ಸದಸ್ಯರಲ್ಲಿ 9 (ಶೇ.10), ಕಾಂಗ್ರೆಸ್‌ನ 28 ಸದಸ್ಯರಲ್ಲಿ 4 (ಶೇ.14), ವೈಎಸ್‌ಆರ್‌ಸಿಪಿಯ 11 ಸದಸ್ಯರಲ್ಲಿ 5 (ಶೇ.45), ಎಎಪಿಯ 10 ಸದಸ್ಯರಲ್ಲಿ 2 (ಶೇ.20) ಟಿಆರ್‌ಎಸ್‌ನ 4 ಸದಸ್ಯರಲ್ಲಿ 3 (ಶೇ.75) ಮತ್ತು ಆರ್‌ಜೆಡಿಯ 6 ಸದಸ್ಯರಲ್ಲಿ 2 (ಶೇ.33) ಮಂದಿ ₹100 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಹೊಂದಿದ್ದಾರೆ.

ಪ್ರಮುಖ ಪಕ್ಷಗಳ ಸಂಸದರ ಸರಾಸರಿ ಆಸ್ತಿ ಮೌಲ್ಯ ಹೀಗಿದೆ : ಬಿಜೆಪಿ ಸದಸ್ಯರ ಸರಾಸರಿ ಆಸ್ತಿ ಮೌಲ್ಯ ₹37.34 ಕೋಟಿ, ಕಾಂಗ್ರೆಸ್ ಸದಸ್ಯರ ಸರಾಸರಿ ಆಸ್ತಿ ಮೌಲ್ಯ ₹40.70 ಕೋಟಿ, ಟಿಎಂಸಿ ಸದಸ್ಯರ ಸರಾಸರಿ ಆಸ್ತಿ ಮೌಲ್ಯ ₹10.25 ಕೋಟಿ, ವೈಎಸ್‌ಆರ್‌ಸಿಪಿ ಸದಸ್ಯರ ಸರಾಸರಿ ಆಸ್ತಿ ಮೌಲ್ಯ ₹357.68 ಕೋಟಿ, ಟಿಆರ್‌ಎಸ್ ಸದಸ್ಯರ ಸರಾಸರಿ ಆಸ್ತಿ ಮೌಲ್ಯ ₹1,383.74 ಕೋಟಿ, ಡಿಎಂಕೆ ಸದಸ್ಯರ ಸರಾಸರಿ ಆಸ್ತಿ ಮೌಲ್ಯ ₹6.37 ಕೋಟಿ ಮತ್ತು ಎಎಪಿ ಸದಸ್ಯರ ಸರಾಸರಿ ಆಸ್ತಿ ಮೌಲ್ಯ ₹114.81 ಕೋಟಿಯಾಗಿದೆ. ಇದಲ್ಲದೆ, ವಿಶ್ಲೇಷಿಸಲಾದ ರಾಜ್ಯಸಭೆಯ ಹಾಲಿ ಸದಸ್ಯರ ಒಟ್ಟು ಆಸ್ತಿ ಮೌಲ್ಯ ₹19,602 ಕೋಟಿಗಳಷ್ಟಿದೆ

ಪಕ್ಷವಾರು ವಿಂಗಡಿಸಿದಾಗ ವಿಶ್ಲೇಷಿಸಿದ ಸಂಸದರ ಒಟ್ಟು ಆಸ್ತಿ ಮೌಲ್ಯ ಹೀಗಿದೆ : ಬಿಜೆಪಿ ಸದಸ್ಯರ ಒಟ್ಟು ಆಸ್ತಿ ಮೌಲ್ಯ ₹3,360 ಕೋಟಿ, ಕಾಂಗ್ರೆಸ್ ಸದಸ್ಯರ ಒಟ್ಟು ಆಸ್ತಿ ಮೌಲ್ಯ ₹1,139 ಕೋಟಿ, ವೈಎಸ್‌ಆರ್‌ಸಿಪಿ ಸದಸ್ಯರ ಒಟ್ಟು ಆಸ್ತಿ ಮೌಲ್ಯ ₹3,934 ಕೋಟಿ, ಬಿಆರ್‌ಎಸ್ ಸದಸ್ಯರ ಒಟ್ಟು ಆಸ್ತಿ ಮೌಲ್ಯ ₹5,534 ಕೋಟಿ ಆಸ್ತಿ ಮತ್ತು ಎಎಪಿ ಸದಸ್ಯರ ಒಟ್ಟು ಆಸ್ತಿ ಮೌಲ್ಯ ₹ 1,148 ಕೋಟಿ.

ಇದನ್ನೂ ಓದಿ : ಬಿಜೆಪಿಯ ಚುನಾವಣಾ ಬಾಂಡ್‌ ವಂಚನೆ ಪ್ರಕರಣ: ದೂರು ಹಿಂಪಡೆದ ಜಡ್ಜ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...