Homeಮುಖಪುಟಶೇ.33 ಹಾಲಿ ರಾಜ್ಯಸಭಾ ಸಂಸದರ ಮೇಲಿದೆ ಕ್ರಿಮಿನಲ್ ಕೇಸ್: ವರದಿ

ಶೇ.33 ಹಾಲಿ ರಾಜ್ಯಸಭಾ ಸಂಸದರ ಮೇಲಿದೆ ಕ್ರಿಮಿನಲ್ ಕೇಸ್: ವರದಿ

- Advertisement -
- Advertisement -

ರಾಜ್ಯಸಭೆಯ 225 ಹಾಲಿ ಸದಸ್ಯರ ಪೈಕಿ, ಶೇಕಡಾ 33ರಷ್ಟು ಜನರು ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ಇರುವುದಾಗಿ ಘೋಷಿಸಿಕೊಂಡಿದ್ದಾರೆ. ಹಾಲಿ ಸದಸ್ಯರ ಒಟ್ಟು ಆಸ್ತಿ ಮೌಲ್ಯ ₹19,602 ಕೋಟಿಗಳಷ್ಟಿದೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್‌(ಎಡಿಆರ್)ನ ವಿಶ್ಲೇಷಣೆ ತಿಳಿಸಿದೆ.

ಇಬ್ಬರು ರಾಜ್ಯಸಭಾ ಹಾಲಿ ಸದಸ್ಯರು ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಕೊಲೆಗೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ನಾಲ್ವರು ಸದಸ್ಯರ ಮೇಲೆ ಐಪಿಸಿ ಸೆಕ್ಷನ್ 307ರ ಅಡಿಯಲ್ಲಿ ಕೊಲೆ ಯತ್ನಕ್ಕೆ ಸಂಬಂಧಿಸಿದ ಪ್ರಕರಣಗಳಿವೆ. ಒಟ್ಟು ಸದಸ್ಯರ ಪೈಕಿ 31 ಮಂದಿ, ಅಂದರೆ ಶೇ.14ರಷ್ಟು ಜನರು ಕೋಟ್ಯಾಧಿಪತಿಗಳಾಗಿದ್ದಾರೆ ಎಂದು ಎಡಿಆರ್ ವರದಿ ತಿಳಿಸಿದೆ.

ರಾಜ್ಯಸಭೆಯ 225 ಹಾಲಿ ಸಂಸದರ ಪೈಕಿ 75 (ಶೇ. 33) ಮಂದಿ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ಇರುವುದಾಗಿ ಘೋಷಿಸಿದ್ದಾರೆ. 40 (ಶೇ. 18) ಮಂದಿ ಸಂಸದರು ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ವರದಿ ಹೇಳಿದೆ.

ಎಡಿಆರ್ ವಿಶ್ಲೇಷಣೆಯಲ್ಲಿ ವಿವಿಧ ರಾಜಕೀಯ ಪಕ್ಷಗಳಲ್ಲಿ ಎಷ್ಟು ಜನ ರಾಜ್ಯಸಭಾ ಸದಸ್ಯರ ಮೇಲೆ ಕ್ರಿಮಿನಲ್ ಪ್ರಕರಣಗಳಿವೆ ಎಂಬುವುದನ್ನು ತಿಳಿಸಿದೆ. ಅದರಂತೆ, ಬಿಜೆಪಿಯ 90 (ಶೇ.23), ಕಾಂಗ್ರೆಸ್‌ನ 28 (ಶೇ. 50) ಸದಸ್ಯರ ಮೇಲೆ ಕ್ರಿಮಿನಲ್ ಪ್ರಕರಣಗಳಿವೆ.

ಟಿಎಂಸಿಯ 13 ರಾಜ್ಯಸಭಾ ಸದಸ್ಯರ ಪೈಕಿ 5 (ಶೇ. 38), ಆರ್‌ಜೆಡಿಯ 6 ಸದಸ್ಯರಲ್ಲಿ 4 (ಶೇ. 67), ಸಿಪಿಐಎಂನ 5 ಸದಸ್ಯರಲ್ಲಿ 4 (ಶೇ.80), ಎಎಪಿಯ 10 ಸದಸ್ಯರ ಪೈಕಿ 3 (ಶೇ.10), ವೈಎಸ್‌ಆರ್‌ಸಿಪಿಯ 11 ಸದಸ್ಯರ ಪೈಕಿ 4 (ಶೇ.36) ಮತ್ತು ಡಿಎಂಕೆಯ 10 ಸದಸ್ಯರಲ್ಲಿ 2 (ಶೇ.20) ಮಂದಿ ಚುನಾವಣಾ ಅಫಿಡವಿಟ್‌ಗಳಲ್ಲಿ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ಇರುವುದಾಗಿ ಘೋಷಿಸಿದ್ದಾರೆ ಎಂದು ಎಡಿಆರ್‌ ವಿಶ್ಲೇಷಣೆ ತಿಳಿಸಿದೆ.

ಬಿಜೆಪಿಯ 90 ಸದಸ್ಯರ ಪೈಕಿ 10 (ಶೇ.11), ಕಾಂಗ್ರೆಸ್‌ನ 28 ಸದಸ್ಯರ ಪೈಕಿ 9 (ಶೇ.32), ಟಿಎಂಸಿಯ 13 ಸದಸ್ಯರ ಪೈಕಿ 3 (ಶೇ.23), ಆರ್‌ಜೆಡಿಯ 6 ಸದಸ್ಯರ ಪೈಕಿ 2 (ಶೇ.33) ಸಿಪಿಐಎಂನ 5 ಸದಸ್ಯರ ಪೈಕಿ 2 (ಶೇ. 40), ಎಎಪಿಯ 10 ಸದಸ್ಯರ ಪೈಕಿ 1 (ಶೇ.10), ವೈಎಸ್‌ಆರ್‌ಸಿಪಿಯ 11 ಸದಸ್ಯರ ಪೈಕಿ 3(ಶೇ.27) ಮತ್ತು ಡಿಎಂಕೆಯ 10 ಸದಸ್ಯರ ಪೈಕಿ ಒಬ್ಬರು (ಶೇ.10) ಅಫಿಡವಿಟ್‌ಗಳಲ್ಲಿ ತಮ್ಮ ವಿರುದ್ಧ ಗಂಭೀರ ಕ್ರಿಮಿನಲ್ ಮೊಕದ್ದಮೆಗಳು ಇರುವುದಾಗಿ ಘೋಷಿಸಿದ್ದಾರೆ ಎಂದು ವರದಿ ಹೇಳಿದೆ.

ರಾಜ್ಯವಾರು ಸಂಸದರ ವಿಶ್ಲೇಷಣೆ ನೋಡುವುದಾದರೆ, ಮಹಾರಾಷ್ಟ್ರದ 18 ಸಂಸದರಲ್ಲಿ 11 (ಶೇ.61), ಬಿಹಾರದ 16 ಸಂಸದರಲ್ಲಿ 8 (ಶೇ.50), ಉತ್ತರ ಪ್ರದೇಶದ 31 ಸಂಸದರಲ್ಲಿ 9 (ಶೇ.29), ತಮಿಳುನಾಡಿನ 18 ಸಂಸದರ ಪೈಕಿ 6 (ಶೇ.33), ಕೇರಳದ 9 ಸಂಸದರ ಪೈಕಿ 6 (ಶೇ.67) ಮತ್ತು ಪಶ್ಚಿಮ ಬಂಗಾಳದ 16 ಸಂಸದರ ಪೈಕಿ 7(ಶೇ.44) ಮಂದಿ ಅಫಿಡವಿಟ್‌ಗಳಲ್ಲಿ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ಇರುವುದಾಗಿ ಘೋಷಿಸಿದ್ದಾರೆ.

ವಿಶ್ಲೇಷಣೆಯು 233 ರಾಜ್ಯಸಭಾ ಸದಸ್ಯರ ಪೈಕಿ 225 ಮಂದಿಯನ್ನು ಒಳಗೊಂಡಿದೆ. ಮಹಾರಾಷ್ಟ್ರದಿಂದ ಒಂದು ಸ್ಥಾನ ಖಾಲಿಯಾಗಿದೆ, ಜಮ್ಮು ಕಾಶ್ಮೀರದ ನಾಲ್ವರನ್ನು ವಿಶ್ಲೇಷಣೆಗೆ ಒಳಪಡಿಸಿಲ್ಲ. ಕರ್ನಾಟಕ, ಪುದುಚ್ಚೇರಿ ಮತ್ತು ಅಸ್ಸಾಂನ ತಲಾ ಒಬ್ಬ ಸಂಸದರ ಅಫಿಡವಿಟ್‌ಗಳ ಅಲಭ್ಯತೆಯಿಂದಾಗಿ ವಿಶ್ಲೇಷಣೆ ಮಾಡಿಲ್ಲ ಎಂದು ಎಡಿಆರ್ ಹೇಳಿದೆ.

ಕ್ರಿಮಿನಲ್ ಪ್ರಕರಣಗಳ ಜೊತೆಗೆ ರಾಜ್ಯಸಭಾ ಸದಸ್ಯರ ಆಸ್ತಿ ಮೌಲ್ಯವನ್ನೂ ವಿಶ್ಲೇಷಿಸಲಾಗಿದೆ. ಪ್ರತಿ ಸಂಸದರ ಸರಾಸರಿ ಆಸ್ತಿ ಮೌಲ್ಯ ₹87.12 ಕೋಟಿಗಳಷ್ಟಿದೆ ಎಂದು ತಿಳಿದು ಬಂದಿದೆ. ದತ್ತಾಂಶಗಳನ್ನು ಮತ್ತಷ್ಟು ವಿಭಜಿಸಿ ವಿಶ್ಲೇಷಿಸಿದಾಗ ವಿವಿಧ ರಾಜಕೀಯ ಪಕ್ಷಗಳ ಸದಸ್ಯರ ಆಸ್ತಿ ಮೌಲ್ಯಗಳ ನಡುವೆ ಗಮನಾರ್ಹ ವ್ಯತ್ಯಾಸಗಳು ಕಂಡು ಬಂದಿವೆ.

ಪ್ರಮುಖ ಪಕ್ಷಗಳ ಪೈಕಿ, ಬಿಜೆಪಿಯ 90 ಸದಸ್ಯರಲ್ಲಿ 9 (ಶೇ.10), ಕಾಂಗ್ರೆಸ್‌ನ 28 ಸದಸ್ಯರಲ್ಲಿ 4 (ಶೇ.14), ವೈಎಸ್‌ಆರ್‌ಸಿಪಿಯ 11 ಸದಸ್ಯರಲ್ಲಿ 5 (ಶೇ.45), ಎಎಪಿಯ 10 ಸದಸ್ಯರಲ್ಲಿ 2 (ಶೇ.20) ಟಿಆರ್‌ಎಸ್‌ನ 4 ಸದಸ್ಯರಲ್ಲಿ 3 (ಶೇ.75) ಮತ್ತು ಆರ್‌ಜೆಡಿಯ 6 ಸದಸ್ಯರಲ್ಲಿ 2 (ಶೇ.33) ಮಂದಿ ₹100 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಹೊಂದಿದ್ದಾರೆ.

ಪ್ರಮುಖ ಪಕ್ಷಗಳ ಸಂಸದರ ಸರಾಸರಿ ಆಸ್ತಿ ಮೌಲ್ಯ ಹೀಗಿದೆ : ಬಿಜೆಪಿ ಸದಸ್ಯರ ಸರಾಸರಿ ಆಸ್ತಿ ಮೌಲ್ಯ ₹37.34 ಕೋಟಿ, ಕಾಂಗ್ರೆಸ್ ಸದಸ್ಯರ ಸರಾಸರಿ ಆಸ್ತಿ ಮೌಲ್ಯ ₹40.70 ಕೋಟಿ, ಟಿಎಂಸಿ ಸದಸ್ಯರ ಸರಾಸರಿ ಆಸ್ತಿ ಮೌಲ್ಯ ₹10.25 ಕೋಟಿ, ವೈಎಸ್‌ಆರ್‌ಸಿಪಿ ಸದಸ್ಯರ ಸರಾಸರಿ ಆಸ್ತಿ ಮೌಲ್ಯ ₹357.68 ಕೋಟಿ, ಟಿಆರ್‌ಎಸ್ ಸದಸ್ಯರ ಸರಾಸರಿ ಆಸ್ತಿ ಮೌಲ್ಯ ₹1,383.74 ಕೋಟಿ, ಡಿಎಂಕೆ ಸದಸ್ಯರ ಸರಾಸರಿ ಆಸ್ತಿ ಮೌಲ್ಯ ₹6.37 ಕೋಟಿ ಮತ್ತು ಎಎಪಿ ಸದಸ್ಯರ ಸರಾಸರಿ ಆಸ್ತಿ ಮೌಲ್ಯ ₹114.81 ಕೋಟಿಯಾಗಿದೆ. ಇದಲ್ಲದೆ, ವಿಶ್ಲೇಷಿಸಲಾದ ರಾಜ್ಯಸಭೆಯ ಹಾಲಿ ಸದಸ್ಯರ ಒಟ್ಟು ಆಸ್ತಿ ಮೌಲ್ಯ ₹19,602 ಕೋಟಿಗಳಷ್ಟಿದೆ

ಪಕ್ಷವಾರು ವಿಂಗಡಿಸಿದಾಗ ವಿಶ್ಲೇಷಿಸಿದ ಸಂಸದರ ಒಟ್ಟು ಆಸ್ತಿ ಮೌಲ್ಯ ಹೀಗಿದೆ : ಬಿಜೆಪಿ ಸದಸ್ಯರ ಒಟ್ಟು ಆಸ್ತಿ ಮೌಲ್ಯ ₹3,360 ಕೋಟಿ, ಕಾಂಗ್ರೆಸ್ ಸದಸ್ಯರ ಒಟ್ಟು ಆಸ್ತಿ ಮೌಲ್ಯ ₹1,139 ಕೋಟಿ, ವೈಎಸ್‌ಆರ್‌ಸಿಪಿ ಸದಸ್ಯರ ಒಟ್ಟು ಆಸ್ತಿ ಮೌಲ್ಯ ₹3,934 ಕೋಟಿ, ಬಿಆರ್‌ಎಸ್ ಸದಸ್ಯರ ಒಟ್ಟು ಆಸ್ತಿ ಮೌಲ್ಯ ₹5,534 ಕೋಟಿ ಆಸ್ತಿ ಮತ್ತು ಎಎಪಿ ಸದಸ್ಯರ ಒಟ್ಟು ಆಸ್ತಿ ಮೌಲ್ಯ ₹ 1,148 ಕೋಟಿ.

ಇದನ್ನೂ ಓದಿ : ಬಿಜೆಪಿಯ ಚುನಾವಣಾ ಬಾಂಡ್‌ ವಂಚನೆ ಪ್ರಕರಣ: ದೂರು ಹಿಂಪಡೆದ ಜಡ್ಜ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...