Homeಮುಖಪುಟಶೇ.33 ಹಾಲಿ ರಾಜ್ಯಸಭಾ ಸಂಸದರ ಮೇಲಿದೆ ಕ್ರಿಮಿನಲ್ ಕೇಸ್: ವರದಿ

ಶೇ.33 ಹಾಲಿ ರಾಜ್ಯಸಭಾ ಸಂಸದರ ಮೇಲಿದೆ ಕ್ರಿಮಿನಲ್ ಕೇಸ್: ವರದಿ

- Advertisement -
- Advertisement -

ರಾಜ್ಯಸಭೆಯ 225 ಹಾಲಿ ಸದಸ್ಯರ ಪೈಕಿ, ಶೇಕಡಾ 33ರಷ್ಟು ಜನರು ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ಇರುವುದಾಗಿ ಘೋಷಿಸಿಕೊಂಡಿದ್ದಾರೆ. ಹಾಲಿ ಸದಸ್ಯರ ಒಟ್ಟು ಆಸ್ತಿ ಮೌಲ್ಯ ₹19,602 ಕೋಟಿಗಳಷ್ಟಿದೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್‌(ಎಡಿಆರ್)ನ ವಿಶ್ಲೇಷಣೆ ತಿಳಿಸಿದೆ.

ಇಬ್ಬರು ರಾಜ್ಯಸಭಾ ಹಾಲಿ ಸದಸ್ಯರು ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಕೊಲೆಗೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ನಾಲ್ವರು ಸದಸ್ಯರ ಮೇಲೆ ಐಪಿಸಿ ಸೆಕ್ಷನ್ 307ರ ಅಡಿಯಲ್ಲಿ ಕೊಲೆ ಯತ್ನಕ್ಕೆ ಸಂಬಂಧಿಸಿದ ಪ್ರಕರಣಗಳಿವೆ. ಒಟ್ಟು ಸದಸ್ಯರ ಪೈಕಿ 31 ಮಂದಿ, ಅಂದರೆ ಶೇ.14ರಷ್ಟು ಜನರು ಕೋಟ್ಯಾಧಿಪತಿಗಳಾಗಿದ್ದಾರೆ ಎಂದು ಎಡಿಆರ್ ವರದಿ ತಿಳಿಸಿದೆ.

ರಾಜ್ಯಸಭೆಯ 225 ಹಾಲಿ ಸಂಸದರ ಪೈಕಿ 75 (ಶೇ. 33) ಮಂದಿ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ಇರುವುದಾಗಿ ಘೋಷಿಸಿದ್ದಾರೆ. 40 (ಶೇ. 18) ಮಂದಿ ಸಂಸದರು ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ವರದಿ ಹೇಳಿದೆ.

ಎಡಿಆರ್ ವಿಶ್ಲೇಷಣೆಯಲ್ಲಿ ವಿವಿಧ ರಾಜಕೀಯ ಪಕ್ಷಗಳಲ್ಲಿ ಎಷ್ಟು ಜನ ರಾಜ್ಯಸಭಾ ಸದಸ್ಯರ ಮೇಲೆ ಕ್ರಿಮಿನಲ್ ಪ್ರಕರಣಗಳಿವೆ ಎಂಬುವುದನ್ನು ತಿಳಿಸಿದೆ. ಅದರಂತೆ, ಬಿಜೆಪಿಯ 90 (ಶೇ.23), ಕಾಂಗ್ರೆಸ್‌ನ 28 (ಶೇ. 50) ಸದಸ್ಯರ ಮೇಲೆ ಕ್ರಿಮಿನಲ್ ಪ್ರಕರಣಗಳಿವೆ.

ಟಿಎಂಸಿಯ 13 ರಾಜ್ಯಸಭಾ ಸದಸ್ಯರ ಪೈಕಿ 5 (ಶೇ. 38), ಆರ್‌ಜೆಡಿಯ 6 ಸದಸ್ಯರಲ್ಲಿ 4 (ಶೇ. 67), ಸಿಪಿಐಎಂನ 5 ಸದಸ್ಯರಲ್ಲಿ 4 (ಶೇ.80), ಎಎಪಿಯ 10 ಸದಸ್ಯರ ಪೈಕಿ 3 (ಶೇ.10), ವೈಎಸ್‌ಆರ್‌ಸಿಪಿಯ 11 ಸದಸ್ಯರ ಪೈಕಿ 4 (ಶೇ.36) ಮತ್ತು ಡಿಎಂಕೆಯ 10 ಸದಸ್ಯರಲ್ಲಿ 2 (ಶೇ.20) ಮಂದಿ ಚುನಾವಣಾ ಅಫಿಡವಿಟ್‌ಗಳಲ್ಲಿ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ಇರುವುದಾಗಿ ಘೋಷಿಸಿದ್ದಾರೆ ಎಂದು ಎಡಿಆರ್‌ ವಿಶ್ಲೇಷಣೆ ತಿಳಿಸಿದೆ.

ಬಿಜೆಪಿಯ 90 ಸದಸ್ಯರ ಪೈಕಿ 10 (ಶೇ.11), ಕಾಂಗ್ರೆಸ್‌ನ 28 ಸದಸ್ಯರ ಪೈಕಿ 9 (ಶೇ.32), ಟಿಎಂಸಿಯ 13 ಸದಸ್ಯರ ಪೈಕಿ 3 (ಶೇ.23), ಆರ್‌ಜೆಡಿಯ 6 ಸದಸ್ಯರ ಪೈಕಿ 2 (ಶೇ.33) ಸಿಪಿಐಎಂನ 5 ಸದಸ್ಯರ ಪೈಕಿ 2 (ಶೇ. 40), ಎಎಪಿಯ 10 ಸದಸ್ಯರ ಪೈಕಿ 1 (ಶೇ.10), ವೈಎಸ್‌ಆರ್‌ಸಿಪಿಯ 11 ಸದಸ್ಯರ ಪೈಕಿ 3(ಶೇ.27) ಮತ್ತು ಡಿಎಂಕೆಯ 10 ಸದಸ್ಯರ ಪೈಕಿ ಒಬ್ಬರು (ಶೇ.10) ಅಫಿಡವಿಟ್‌ಗಳಲ್ಲಿ ತಮ್ಮ ವಿರುದ್ಧ ಗಂಭೀರ ಕ್ರಿಮಿನಲ್ ಮೊಕದ್ದಮೆಗಳು ಇರುವುದಾಗಿ ಘೋಷಿಸಿದ್ದಾರೆ ಎಂದು ವರದಿ ಹೇಳಿದೆ.

ರಾಜ್ಯವಾರು ಸಂಸದರ ವಿಶ್ಲೇಷಣೆ ನೋಡುವುದಾದರೆ, ಮಹಾರಾಷ್ಟ್ರದ 18 ಸಂಸದರಲ್ಲಿ 11 (ಶೇ.61), ಬಿಹಾರದ 16 ಸಂಸದರಲ್ಲಿ 8 (ಶೇ.50), ಉತ್ತರ ಪ್ರದೇಶದ 31 ಸಂಸದರಲ್ಲಿ 9 (ಶೇ.29), ತಮಿಳುನಾಡಿನ 18 ಸಂಸದರ ಪೈಕಿ 6 (ಶೇ.33), ಕೇರಳದ 9 ಸಂಸದರ ಪೈಕಿ 6 (ಶೇ.67) ಮತ್ತು ಪಶ್ಚಿಮ ಬಂಗಾಳದ 16 ಸಂಸದರ ಪೈಕಿ 7(ಶೇ.44) ಮಂದಿ ಅಫಿಡವಿಟ್‌ಗಳಲ್ಲಿ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ಇರುವುದಾಗಿ ಘೋಷಿಸಿದ್ದಾರೆ.

ವಿಶ್ಲೇಷಣೆಯು 233 ರಾಜ್ಯಸಭಾ ಸದಸ್ಯರ ಪೈಕಿ 225 ಮಂದಿಯನ್ನು ಒಳಗೊಂಡಿದೆ. ಮಹಾರಾಷ್ಟ್ರದಿಂದ ಒಂದು ಸ್ಥಾನ ಖಾಲಿಯಾಗಿದೆ, ಜಮ್ಮು ಕಾಶ್ಮೀರದ ನಾಲ್ವರನ್ನು ವಿಶ್ಲೇಷಣೆಗೆ ಒಳಪಡಿಸಿಲ್ಲ. ಕರ್ನಾಟಕ, ಪುದುಚ್ಚೇರಿ ಮತ್ತು ಅಸ್ಸಾಂನ ತಲಾ ಒಬ್ಬ ಸಂಸದರ ಅಫಿಡವಿಟ್‌ಗಳ ಅಲಭ್ಯತೆಯಿಂದಾಗಿ ವಿಶ್ಲೇಷಣೆ ಮಾಡಿಲ್ಲ ಎಂದು ಎಡಿಆರ್ ಹೇಳಿದೆ.

ಕ್ರಿಮಿನಲ್ ಪ್ರಕರಣಗಳ ಜೊತೆಗೆ ರಾಜ್ಯಸಭಾ ಸದಸ್ಯರ ಆಸ್ತಿ ಮೌಲ್ಯವನ್ನೂ ವಿಶ್ಲೇಷಿಸಲಾಗಿದೆ. ಪ್ರತಿ ಸಂಸದರ ಸರಾಸರಿ ಆಸ್ತಿ ಮೌಲ್ಯ ₹87.12 ಕೋಟಿಗಳಷ್ಟಿದೆ ಎಂದು ತಿಳಿದು ಬಂದಿದೆ. ದತ್ತಾಂಶಗಳನ್ನು ಮತ್ತಷ್ಟು ವಿಭಜಿಸಿ ವಿಶ್ಲೇಷಿಸಿದಾಗ ವಿವಿಧ ರಾಜಕೀಯ ಪಕ್ಷಗಳ ಸದಸ್ಯರ ಆಸ್ತಿ ಮೌಲ್ಯಗಳ ನಡುವೆ ಗಮನಾರ್ಹ ವ್ಯತ್ಯಾಸಗಳು ಕಂಡು ಬಂದಿವೆ.

ಪ್ರಮುಖ ಪಕ್ಷಗಳ ಪೈಕಿ, ಬಿಜೆಪಿಯ 90 ಸದಸ್ಯರಲ್ಲಿ 9 (ಶೇ.10), ಕಾಂಗ್ರೆಸ್‌ನ 28 ಸದಸ್ಯರಲ್ಲಿ 4 (ಶೇ.14), ವೈಎಸ್‌ಆರ್‌ಸಿಪಿಯ 11 ಸದಸ್ಯರಲ್ಲಿ 5 (ಶೇ.45), ಎಎಪಿಯ 10 ಸದಸ್ಯರಲ್ಲಿ 2 (ಶೇ.20) ಟಿಆರ್‌ಎಸ್‌ನ 4 ಸದಸ್ಯರಲ್ಲಿ 3 (ಶೇ.75) ಮತ್ತು ಆರ್‌ಜೆಡಿಯ 6 ಸದಸ್ಯರಲ್ಲಿ 2 (ಶೇ.33) ಮಂದಿ ₹100 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಹೊಂದಿದ್ದಾರೆ.

ಪ್ರಮುಖ ಪಕ್ಷಗಳ ಸಂಸದರ ಸರಾಸರಿ ಆಸ್ತಿ ಮೌಲ್ಯ ಹೀಗಿದೆ : ಬಿಜೆಪಿ ಸದಸ್ಯರ ಸರಾಸರಿ ಆಸ್ತಿ ಮೌಲ್ಯ ₹37.34 ಕೋಟಿ, ಕಾಂಗ್ರೆಸ್ ಸದಸ್ಯರ ಸರಾಸರಿ ಆಸ್ತಿ ಮೌಲ್ಯ ₹40.70 ಕೋಟಿ, ಟಿಎಂಸಿ ಸದಸ್ಯರ ಸರಾಸರಿ ಆಸ್ತಿ ಮೌಲ್ಯ ₹10.25 ಕೋಟಿ, ವೈಎಸ್‌ಆರ್‌ಸಿಪಿ ಸದಸ್ಯರ ಸರಾಸರಿ ಆಸ್ತಿ ಮೌಲ್ಯ ₹357.68 ಕೋಟಿ, ಟಿಆರ್‌ಎಸ್ ಸದಸ್ಯರ ಸರಾಸರಿ ಆಸ್ತಿ ಮೌಲ್ಯ ₹1,383.74 ಕೋಟಿ, ಡಿಎಂಕೆ ಸದಸ್ಯರ ಸರಾಸರಿ ಆಸ್ತಿ ಮೌಲ್ಯ ₹6.37 ಕೋಟಿ ಮತ್ತು ಎಎಪಿ ಸದಸ್ಯರ ಸರಾಸರಿ ಆಸ್ತಿ ಮೌಲ್ಯ ₹114.81 ಕೋಟಿಯಾಗಿದೆ. ಇದಲ್ಲದೆ, ವಿಶ್ಲೇಷಿಸಲಾದ ರಾಜ್ಯಸಭೆಯ ಹಾಲಿ ಸದಸ್ಯರ ಒಟ್ಟು ಆಸ್ತಿ ಮೌಲ್ಯ ₹19,602 ಕೋಟಿಗಳಷ್ಟಿದೆ

ಪಕ್ಷವಾರು ವಿಂಗಡಿಸಿದಾಗ ವಿಶ್ಲೇಷಿಸಿದ ಸಂಸದರ ಒಟ್ಟು ಆಸ್ತಿ ಮೌಲ್ಯ ಹೀಗಿದೆ : ಬಿಜೆಪಿ ಸದಸ್ಯರ ಒಟ್ಟು ಆಸ್ತಿ ಮೌಲ್ಯ ₹3,360 ಕೋಟಿ, ಕಾಂಗ್ರೆಸ್ ಸದಸ್ಯರ ಒಟ್ಟು ಆಸ್ತಿ ಮೌಲ್ಯ ₹1,139 ಕೋಟಿ, ವೈಎಸ್‌ಆರ್‌ಸಿಪಿ ಸದಸ್ಯರ ಒಟ್ಟು ಆಸ್ತಿ ಮೌಲ್ಯ ₹3,934 ಕೋಟಿ, ಬಿಆರ್‌ಎಸ್ ಸದಸ್ಯರ ಒಟ್ಟು ಆಸ್ತಿ ಮೌಲ್ಯ ₹5,534 ಕೋಟಿ ಆಸ್ತಿ ಮತ್ತು ಎಎಪಿ ಸದಸ್ಯರ ಒಟ್ಟು ಆಸ್ತಿ ಮೌಲ್ಯ ₹ 1,148 ಕೋಟಿ.

ಇದನ್ನೂ ಓದಿ : ಬಿಜೆಪಿಯ ಚುನಾವಣಾ ಬಾಂಡ್‌ ವಂಚನೆ ಪ್ರಕರಣ: ದೂರು ಹಿಂಪಡೆದ ಜಡ್ಜ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...