Homeಮುಖಪುಟಶೇ.33 ಹಾಲಿ ರಾಜ್ಯಸಭಾ ಸಂಸದರ ಮೇಲಿದೆ ಕ್ರಿಮಿನಲ್ ಕೇಸ್: ವರದಿ

ಶೇ.33 ಹಾಲಿ ರಾಜ್ಯಸಭಾ ಸಂಸದರ ಮೇಲಿದೆ ಕ್ರಿಮಿನಲ್ ಕೇಸ್: ವರದಿ

- Advertisement -
- Advertisement -

ರಾಜ್ಯಸಭೆಯ 225 ಹಾಲಿ ಸದಸ್ಯರ ಪೈಕಿ, ಶೇಕಡಾ 33ರಷ್ಟು ಜನರು ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ಇರುವುದಾಗಿ ಘೋಷಿಸಿಕೊಂಡಿದ್ದಾರೆ. ಹಾಲಿ ಸದಸ್ಯರ ಒಟ್ಟು ಆಸ್ತಿ ಮೌಲ್ಯ ₹19,602 ಕೋಟಿಗಳಷ್ಟಿದೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್‌(ಎಡಿಆರ್)ನ ವಿಶ್ಲೇಷಣೆ ತಿಳಿಸಿದೆ.

ಇಬ್ಬರು ರಾಜ್ಯಸಭಾ ಹಾಲಿ ಸದಸ್ಯರು ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಕೊಲೆಗೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ನಾಲ್ವರು ಸದಸ್ಯರ ಮೇಲೆ ಐಪಿಸಿ ಸೆಕ್ಷನ್ 307ರ ಅಡಿಯಲ್ಲಿ ಕೊಲೆ ಯತ್ನಕ್ಕೆ ಸಂಬಂಧಿಸಿದ ಪ್ರಕರಣಗಳಿವೆ. ಒಟ್ಟು ಸದಸ್ಯರ ಪೈಕಿ 31 ಮಂದಿ, ಅಂದರೆ ಶೇ.14ರಷ್ಟು ಜನರು ಕೋಟ್ಯಾಧಿಪತಿಗಳಾಗಿದ್ದಾರೆ ಎಂದು ಎಡಿಆರ್ ವರದಿ ತಿಳಿಸಿದೆ.

ರಾಜ್ಯಸಭೆಯ 225 ಹಾಲಿ ಸಂಸದರ ಪೈಕಿ 75 (ಶೇ. 33) ಮಂದಿ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ಇರುವುದಾಗಿ ಘೋಷಿಸಿದ್ದಾರೆ. 40 (ಶೇ. 18) ಮಂದಿ ಸಂಸದರು ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ವರದಿ ಹೇಳಿದೆ.

ಎಡಿಆರ್ ವಿಶ್ಲೇಷಣೆಯಲ್ಲಿ ವಿವಿಧ ರಾಜಕೀಯ ಪಕ್ಷಗಳಲ್ಲಿ ಎಷ್ಟು ಜನ ರಾಜ್ಯಸಭಾ ಸದಸ್ಯರ ಮೇಲೆ ಕ್ರಿಮಿನಲ್ ಪ್ರಕರಣಗಳಿವೆ ಎಂಬುವುದನ್ನು ತಿಳಿಸಿದೆ. ಅದರಂತೆ, ಬಿಜೆಪಿಯ 90 (ಶೇ.23), ಕಾಂಗ್ರೆಸ್‌ನ 28 (ಶೇ. 50) ಸದಸ್ಯರ ಮೇಲೆ ಕ್ರಿಮಿನಲ್ ಪ್ರಕರಣಗಳಿವೆ.

ಟಿಎಂಸಿಯ 13 ರಾಜ್ಯಸಭಾ ಸದಸ್ಯರ ಪೈಕಿ 5 (ಶೇ. 38), ಆರ್‌ಜೆಡಿಯ 6 ಸದಸ್ಯರಲ್ಲಿ 4 (ಶೇ. 67), ಸಿಪಿಐಎಂನ 5 ಸದಸ್ಯರಲ್ಲಿ 4 (ಶೇ.80), ಎಎಪಿಯ 10 ಸದಸ್ಯರ ಪೈಕಿ 3 (ಶೇ.10), ವೈಎಸ್‌ಆರ್‌ಸಿಪಿಯ 11 ಸದಸ್ಯರ ಪೈಕಿ 4 (ಶೇ.36) ಮತ್ತು ಡಿಎಂಕೆಯ 10 ಸದಸ್ಯರಲ್ಲಿ 2 (ಶೇ.20) ಮಂದಿ ಚುನಾವಣಾ ಅಫಿಡವಿಟ್‌ಗಳಲ್ಲಿ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ಇರುವುದಾಗಿ ಘೋಷಿಸಿದ್ದಾರೆ ಎಂದು ಎಡಿಆರ್‌ ವಿಶ್ಲೇಷಣೆ ತಿಳಿಸಿದೆ.

ಬಿಜೆಪಿಯ 90 ಸದಸ್ಯರ ಪೈಕಿ 10 (ಶೇ.11), ಕಾಂಗ್ರೆಸ್‌ನ 28 ಸದಸ್ಯರ ಪೈಕಿ 9 (ಶೇ.32), ಟಿಎಂಸಿಯ 13 ಸದಸ್ಯರ ಪೈಕಿ 3 (ಶೇ.23), ಆರ್‌ಜೆಡಿಯ 6 ಸದಸ್ಯರ ಪೈಕಿ 2 (ಶೇ.33) ಸಿಪಿಐಎಂನ 5 ಸದಸ್ಯರ ಪೈಕಿ 2 (ಶೇ. 40), ಎಎಪಿಯ 10 ಸದಸ್ಯರ ಪೈಕಿ 1 (ಶೇ.10), ವೈಎಸ್‌ಆರ್‌ಸಿಪಿಯ 11 ಸದಸ್ಯರ ಪೈಕಿ 3(ಶೇ.27) ಮತ್ತು ಡಿಎಂಕೆಯ 10 ಸದಸ್ಯರ ಪೈಕಿ ಒಬ್ಬರು (ಶೇ.10) ಅಫಿಡವಿಟ್‌ಗಳಲ್ಲಿ ತಮ್ಮ ವಿರುದ್ಧ ಗಂಭೀರ ಕ್ರಿಮಿನಲ್ ಮೊಕದ್ದಮೆಗಳು ಇರುವುದಾಗಿ ಘೋಷಿಸಿದ್ದಾರೆ ಎಂದು ವರದಿ ಹೇಳಿದೆ.

ರಾಜ್ಯವಾರು ಸಂಸದರ ವಿಶ್ಲೇಷಣೆ ನೋಡುವುದಾದರೆ, ಮಹಾರಾಷ್ಟ್ರದ 18 ಸಂಸದರಲ್ಲಿ 11 (ಶೇ.61), ಬಿಹಾರದ 16 ಸಂಸದರಲ್ಲಿ 8 (ಶೇ.50), ಉತ್ತರ ಪ್ರದೇಶದ 31 ಸಂಸದರಲ್ಲಿ 9 (ಶೇ.29), ತಮಿಳುನಾಡಿನ 18 ಸಂಸದರ ಪೈಕಿ 6 (ಶೇ.33), ಕೇರಳದ 9 ಸಂಸದರ ಪೈಕಿ 6 (ಶೇ.67) ಮತ್ತು ಪಶ್ಚಿಮ ಬಂಗಾಳದ 16 ಸಂಸದರ ಪೈಕಿ 7(ಶೇ.44) ಮಂದಿ ಅಫಿಡವಿಟ್‌ಗಳಲ್ಲಿ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ಇರುವುದಾಗಿ ಘೋಷಿಸಿದ್ದಾರೆ.

ವಿಶ್ಲೇಷಣೆಯು 233 ರಾಜ್ಯಸಭಾ ಸದಸ್ಯರ ಪೈಕಿ 225 ಮಂದಿಯನ್ನು ಒಳಗೊಂಡಿದೆ. ಮಹಾರಾಷ್ಟ್ರದಿಂದ ಒಂದು ಸ್ಥಾನ ಖಾಲಿಯಾಗಿದೆ, ಜಮ್ಮು ಕಾಶ್ಮೀರದ ನಾಲ್ವರನ್ನು ವಿಶ್ಲೇಷಣೆಗೆ ಒಳಪಡಿಸಿಲ್ಲ. ಕರ್ನಾಟಕ, ಪುದುಚ್ಚೇರಿ ಮತ್ತು ಅಸ್ಸಾಂನ ತಲಾ ಒಬ್ಬ ಸಂಸದರ ಅಫಿಡವಿಟ್‌ಗಳ ಅಲಭ್ಯತೆಯಿಂದಾಗಿ ವಿಶ್ಲೇಷಣೆ ಮಾಡಿಲ್ಲ ಎಂದು ಎಡಿಆರ್ ಹೇಳಿದೆ.

ಕ್ರಿಮಿನಲ್ ಪ್ರಕರಣಗಳ ಜೊತೆಗೆ ರಾಜ್ಯಸಭಾ ಸದಸ್ಯರ ಆಸ್ತಿ ಮೌಲ್ಯವನ್ನೂ ವಿಶ್ಲೇಷಿಸಲಾಗಿದೆ. ಪ್ರತಿ ಸಂಸದರ ಸರಾಸರಿ ಆಸ್ತಿ ಮೌಲ್ಯ ₹87.12 ಕೋಟಿಗಳಷ್ಟಿದೆ ಎಂದು ತಿಳಿದು ಬಂದಿದೆ. ದತ್ತಾಂಶಗಳನ್ನು ಮತ್ತಷ್ಟು ವಿಭಜಿಸಿ ವಿಶ್ಲೇಷಿಸಿದಾಗ ವಿವಿಧ ರಾಜಕೀಯ ಪಕ್ಷಗಳ ಸದಸ್ಯರ ಆಸ್ತಿ ಮೌಲ್ಯಗಳ ನಡುವೆ ಗಮನಾರ್ಹ ವ್ಯತ್ಯಾಸಗಳು ಕಂಡು ಬಂದಿವೆ.

ಪ್ರಮುಖ ಪಕ್ಷಗಳ ಪೈಕಿ, ಬಿಜೆಪಿಯ 90 ಸದಸ್ಯರಲ್ಲಿ 9 (ಶೇ.10), ಕಾಂಗ್ರೆಸ್‌ನ 28 ಸದಸ್ಯರಲ್ಲಿ 4 (ಶೇ.14), ವೈಎಸ್‌ಆರ್‌ಸಿಪಿಯ 11 ಸದಸ್ಯರಲ್ಲಿ 5 (ಶೇ.45), ಎಎಪಿಯ 10 ಸದಸ್ಯರಲ್ಲಿ 2 (ಶೇ.20) ಟಿಆರ್‌ಎಸ್‌ನ 4 ಸದಸ್ಯರಲ್ಲಿ 3 (ಶೇ.75) ಮತ್ತು ಆರ್‌ಜೆಡಿಯ 6 ಸದಸ್ಯರಲ್ಲಿ 2 (ಶೇ.33) ಮಂದಿ ₹100 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಹೊಂದಿದ್ದಾರೆ.

ಪ್ರಮುಖ ಪಕ್ಷಗಳ ಸಂಸದರ ಸರಾಸರಿ ಆಸ್ತಿ ಮೌಲ್ಯ ಹೀಗಿದೆ : ಬಿಜೆಪಿ ಸದಸ್ಯರ ಸರಾಸರಿ ಆಸ್ತಿ ಮೌಲ್ಯ ₹37.34 ಕೋಟಿ, ಕಾಂಗ್ರೆಸ್ ಸದಸ್ಯರ ಸರಾಸರಿ ಆಸ್ತಿ ಮೌಲ್ಯ ₹40.70 ಕೋಟಿ, ಟಿಎಂಸಿ ಸದಸ್ಯರ ಸರಾಸರಿ ಆಸ್ತಿ ಮೌಲ್ಯ ₹10.25 ಕೋಟಿ, ವೈಎಸ್‌ಆರ್‌ಸಿಪಿ ಸದಸ್ಯರ ಸರಾಸರಿ ಆಸ್ತಿ ಮೌಲ್ಯ ₹357.68 ಕೋಟಿ, ಟಿಆರ್‌ಎಸ್ ಸದಸ್ಯರ ಸರಾಸರಿ ಆಸ್ತಿ ಮೌಲ್ಯ ₹1,383.74 ಕೋಟಿ, ಡಿಎಂಕೆ ಸದಸ್ಯರ ಸರಾಸರಿ ಆಸ್ತಿ ಮೌಲ್ಯ ₹6.37 ಕೋಟಿ ಮತ್ತು ಎಎಪಿ ಸದಸ್ಯರ ಸರಾಸರಿ ಆಸ್ತಿ ಮೌಲ್ಯ ₹114.81 ಕೋಟಿಯಾಗಿದೆ. ಇದಲ್ಲದೆ, ವಿಶ್ಲೇಷಿಸಲಾದ ರಾಜ್ಯಸಭೆಯ ಹಾಲಿ ಸದಸ್ಯರ ಒಟ್ಟು ಆಸ್ತಿ ಮೌಲ್ಯ ₹19,602 ಕೋಟಿಗಳಷ್ಟಿದೆ

ಪಕ್ಷವಾರು ವಿಂಗಡಿಸಿದಾಗ ವಿಶ್ಲೇಷಿಸಿದ ಸಂಸದರ ಒಟ್ಟು ಆಸ್ತಿ ಮೌಲ್ಯ ಹೀಗಿದೆ : ಬಿಜೆಪಿ ಸದಸ್ಯರ ಒಟ್ಟು ಆಸ್ತಿ ಮೌಲ್ಯ ₹3,360 ಕೋಟಿ, ಕಾಂಗ್ರೆಸ್ ಸದಸ್ಯರ ಒಟ್ಟು ಆಸ್ತಿ ಮೌಲ್ಯ ₹1,139 ಕೋಟಿ, ವೈಎಸ್‌ಆರ್‌ಸಿಪಿ ಸದಸ್ಯರ ಒಟ್ಟು ಆಸ್ತಿ ಮೌಲ್ಯ ₹3,934 ಕೋಟಿ, ಬಿಆರ್‌ಎಸ್ ಸದಸ್ಯರ ಒಟ್ಟು ಆಸ್ತಿ ಮೌಲ್ಯ ₹5,534 ಕೋಟಿ ಆಸ್ತಿ ಮತ್ತು ಎಎಪಿ ಸದಸ್ಯರ ಒಟ್ಟು ಆಸ್ತಿ ಮೌಲ್ಯ ₹ 1,148 ಕೋಟಿ.

ಇದನ್ನೂ ಓದಿ : ಬಿಜೆಪಿಯ ಚುನಾವಣಾ ಬಾಂಡ್‌ ವಂಚನೆ ಪ್ರಕರಣ: ದೂರು ಹಿಂಪಡೆದ ಜಡ್ಜ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...