Homeಕರ್ನಾಟಕಗೃಹ ಇಲಾಖೆಯಲ್ಲಿ ಮಹಿಳೆಯರಿಗೆ 33% ಮೀಸಲಾತಿ: ಕರ್ನಾಟಕ ಆಡಳಿತ ಸುಧಾರಣಾ ಸಮಿತಿ ಶಿಫಾರಸ್ಸು

ಗೃಹ ಇಲಾಖೆಯಲ್ಲಿ ಮಹಿಳೆಯರಿಗೆ 33% ಮೀಸಲಾತಿ: ಕರ್ನಾಟಕ ಆಡಳಿತ ಸುಧಾರಣಾ ಸಮಿತಿ ಶಿಫಾರಸ್ಸು

- Advertisement -
- Advertisement -

ಗೃಹ ಇಲಾಖೆಯಲ್ಲಿ ಕಾನ್‌ಸ್ಟೆಬಲ್ ಮತ್ತು ಗೆಜೆಟೆಡ್‌ಯೇತರ ಸಿಬ್ಬಂದಿ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡಬೇಕು ಎಂದು ಮಾಜಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ್ ಭಾಸ್ಕರ್ ನೇತೃತ್ವದ ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ಶಿಫಾರಸು ಮಾಡಿದೆ.

ಆಯೋಗವು ತನ್ನ ಎರಡನೇ ಮತ್ತು ಮೂರನೇ ವರದಿಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿದ್ದು, 2020ರ ವೇಳೆಗೆ ಕರ್ನಾಟಕದಲ್ಲಿ ಗೆಜೆಟೆಡ್ ಅಲ್ಲದ ಪೊಲೀಸ್ ಸಿಬ್ಬಂದಿಯಲ್ಲಿ ಮಹಿಳಾ ಪ್ರಾತಿನಿಧ್ಯವು ಕೇವಲ 8.3% ಇದೆ ಎಂದು ಆಯೋಗ ಕಳವಳ ವ್ಯಕ್ತಪಡಿಸಿದೆ.

ರಾಜ್ಯ ಸರ್ಕಾರವು ಕಾನ್‌ಸ್ಟೆಬಲ್‌ಗಳು ಮತ್ತು ಇತರ ಹುದ್ದೆಗಳ ನೇಮಕಾತಿಯಲ್ಲಿ ಮಹಿಳೆಯರಿಗೆ 25% ಮೀಸಲಾತಿಯನ್ನು ಕಡ್ಡಾಯಗೊಳಿಸಿದೆ. ಅಲ್ಲದೆ, 2015 ರಲ್ಲಿ ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಪೊಲೀಸ್ ಪಡೆಗಳಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ಹೆಚ್ಚಿಸಲು ಮಹಿಳೆಯರಿಗೆ 33% ರಷ್ಟು ಹುದ್ದೆಗಳನ್ನು ಮೀಸಲಿಡುವಂತೆ ಸಲಹೆ ನೀಡಿತ್ತು.

ನೇಮಕಾತಿಯಲ್ಲಿ ಹೆಚ್ಚಿನ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳಲ್ಲಿ ಗಣಕೀಕೃತ ಕೌನ್ಸೆಲಿಂಗ್ ಮೂಲಕ ಗ್ರೂಪ್-ಸಿ ಮತ್ತು ಗ್ರೂಪ್-ಡಿ ನೌಕರರ ವರ್ಗಾವಣೆಗೆ ನಿಯಮಗಳನ್ನೂ ಸಹ ಆಯೋಗ ಶಿಫಾರಸು ಮಾಡಿದೆ.

ಎಲ್ಲಾ ಇಲಾಖೆಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಸೂಕ್ತ ಪ್ರಾತಿನಿಧ್ಯವನ್ನು ಖಾತ್ರಿಪಡಿಸದೆ ಹೊರಗುತ್ತಿಗೆ ಸಿಬ್ಬಂದಿಯನ್ನು ನಿಯೋಜಿಸುತ್ತಿವೆ. ಹೀಗಾಗಿ, ಸರ್ಕಾರದ ವಿವಿಧ ಇಲಾಖೆಗಳಿಗೆ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಹೊರಗುತ್ತಿಗೆ ನೀಡಿದಾಗ ಎಸ್ಸಿ ಮತ್ತು ಎಸ್ಟಿಗಳಿಗೆ ಸೂಕ್ತ ಪ್ರಾತಿನಿಧ್ಯವನ್ನು ನೀಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಬಹುದು ಎಂದೂ ಕೂಡ ಆಯೋಗ ಹೇಳಿದೆ.

ಪೊಲೀಸ್ ಇಲಾಖೆಯು 32 ಕ್ಕೂ ಹೆಚ್ಚು ನಾಗರಿಕ ಸೇವೆಗಳನ್ನು ಒದಗಿಸುತ್ತದೆ. ಆದರೆ, ನಾಗರಿಕರು ಸಾಮಾನ್ಯವಾಗಿ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಲು ಹಿಂಜರಿಯುತ್ತಾರೆ. ಹೀಗಾಗಿ ಸಾರ್ವಜನಿಕರು ಮತ್ತು ಪೊಲೀಸರನ್ನು ಹತ್ತಿರ ತರುವ ಸಲುವಾಗಿ, ಎಲ್ಲಾ ಪೊಲೀಸ್ ಠಾಣೆಗಳಲ್ಲಿ ನಾಗರಿಕ ಸೇವಾ ಸಹಾಯ ಕೇಂದ್ರಗಳನ್ನು ಸ್ಥಾಪಿಸಬಹುದು ಮತ್ತು ಅದನ್ನು ಸಾಂಸ್ಥಿಕಗೊಳಿಸಲು ಪೊಲೀಸ್ ಕೈಪಿಡಿಯಲ್ಲಿ ನಿಬಂಧನೆಯನ್ನು ಸೇರಿಸಬಹುದು ಎಂದು ಆಯೋಗ ಹೇಳಿದೆ.

BDA ಮತ್ತು BMRDA, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯನ್ನು ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಏಜೆನ್ಸಿಯಂದಿಗೆ ಮತ್ತು ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯನ್ನು ಇಂಧನ ಇಲಾಖೆಯೊಂದಿಗೆ ವಿಲೀನಗೊಳಿಸಬೇಕು ಎಂದು ಆಯೋಗವು ಶಿಫಾರಸು ಮಾಡಿದೆ.

ಆಯೋಗದ ಮೊದಲ ವರದಿಯನ್ನು ಹಲವು ಶಿಫಾರಸ್ಸುಗಳೊಂದಿಗೆ ಜುಲೈ 2021 ರಲ್ಲಿ ಕಂದಾಯ, ಸಾರಿಗೆ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗಳಿಗೆ ಸಲ್ಲಿಸಲಾಗಿತ್ತು. ಈ ಬಾರಿ ಗೃಹ, ಇಂಧನ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಸಮಾಜ ಕಲ್ಯಾಣ, ಎಸ್ಟಿ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಿಗೆ ವರದಿ ಮತ್ತು ಶಿಫಾರಸ್ಸುಗಳನ್ನು ಸಲ್ಲಿಸಲಾಗಿದೆ.

ಪ್ರಮುಖ ಶಿಫಾರಸುಗಳು

• ರಾಜ್ಯ ಸರ್ಕಾರವು ಸೆಕ್ರೆಟರಿಯೇಟ್‌ನಲ್ಲಿ ಯಾವುದೇ ಕಡತವು (ಫೈಲ್) ಮೂರು ಅಥವಾ ನಾಲ್ಕು ಹಂತಗಳಿಗಿಂತ ಹೆಚ್ಚಿರಬಾರದು ಎಂದು ನಿರ್ಧರಿಸಬಹುದು. ಸದ್ಯ ಐದರಿಂದ 10 ಹಂತಗಳಲ್ಲಿ ಕಡತಗಳು ಸಾಗುತ್ತಿವೆ.

• ರಾಜ್ಯ ನಾಗರಿಕ ಸೇವೆಗಳ ವಿತರಣೆಗಾಗಿ ಸರ್ಕಾರವು ಅಂಚೆ ಕಚೇರಿಗಳನ್ನು ಬಳಸಿಕೊಳ್ಳಬಹುದು.

• ಬಿಡಿಎ, ಕೆಎಚ್ಬಿ ಮತ್ತು ಕೆಐಎಡಿಬಿಯಂತಹ ಸಂಸ್ಥೆಗಳು ಗ್ರಾಮ ಪಂಚಾಯಿತಿಗಳ ಮಿತಿಯಲ್ಲಿಯೂ ಮಂಜೂರು ಮಾಡಿದ ನಿವೇಶನಗಳಿಗೆ ಖಾತಾ ನೀಡುತ್ತಿವೆ. ಇದರೊಂದಿಗೆ ಅವು ಗ್ರಾಮ ಪಂಚಾಯಿತಿಗಳನ್ನು ಆಸ್ತಿ ತೆರಿಗೆಯಿಂದ ವಂಚಿತಗೊಳಿಸುತ್ತಿವೆ. ಚಾಯಿತಿಗಳು ಆಸ್ತಿ ತೆರಿಗೆ ಸಂಗ್ರಹಿಸಬೇಕು.

• ಬಿಬಿಎಂಪಿಯಲ್ಲಿ ವಲಯ ಆಯುಕ್ತರು ಮತ್ತು ನಗರ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿಗಳನ್ನು ರಚಿಸಬಹುದು.


ಇದನ್ನೂ ಓದಿ; ವಿಧಾನಸಭಾ ಕ್ಷೇತ್ರಗಳ ಸಮೀಕ್ಷೆ: ಎಚ್.ಡಿ ಕುಮಾರಸ್ವಾಮಿ ಮತ್ತು ಯೋಗೇಶ್ವರ್ ನಡುವೆ ಪ್ರತಿಷ್ಠೆಯ ಕಣ ಚನ್ನಪಟ್ಟಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...