Homeಕರ್ನಾಟಕಗೃಹ ಇಲಾಖೆಯಲ್ಲಿ ಮಹಿಳೆಯರಿಗೆ 33% ಮೀಸಲಾತಿ: ಕರ್ನಾಟಕ ಆಡಳಿತ ಸುಧಾರಣಾ ಸಮಿತಿ ಶಿಫಾರಸ್ಸು

ಗೃಹ ಇಲಾಖೆಯಲ್ಲಿ ಮಹಿಳೆಯರಿಗೆ 33% ಮೀಸಲಾತಿ: ಕರ್ನಾಟಕ ಆಡಳಿತ ಸುಧಾರಣಾ ಸಮಿತಿ ಶಿಫಾರಸ್ಸು

- Advertisement -
- Advertisement -

ಗೃಹ ಇಲಾಖೆಯಲ್ಲಿ ಕಾನ್‌ಸ್ಟೆಬಲ್ ಮತ್ತು ಗೆಜೆಟೆಡ್‌ಯೇತರ ಸಿಬ್ಬಂದಿ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡಬೇಕು ಎಂದು ಮಾಜಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ್ ಭಾಸ್ಕರ್ ನೇತೃತ್ವದ ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ಶಿಫಾರಸು ಮಾಡಿದೆ.

ಆಯೋಗವು ತನ್ನ ಎರಡನೇ ಮತ್ತು ಮೂರನೇ ವರದಿಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿದ್ದು, 2020ರ ವೇಳೆಗೆ ಕರ್ನಾಟಕದಲ್ಲಿ ಗೆಜೆಟೆಡ್ ಅಲ್ಲದ ಪೊಲೀಸ್ ಸಿಬ್ಬಂದಿಯಲ್ಲಿ ಮಹಿಳಾ ಪ್ರಾತಿನಿಧ್ಯವು ಕೇವಲ 8.3% ಇದೆ ಎಂದು ಆಯೋಗ ಕಳವಳ ವ್ಯಕ್ತಪಡಿಸಿದೆ.

ರಾಜ್ಯ ಸರ್ಕಾರವು ಕಾನ್‌ಸ್ಟೆಬಲ್‌ಗಳು ಮತ್ತು ಇತರ ಹುದ್ದೆಗಳ ನೇಮಕಾತಿಯಲ್ಲಿ ಮಹಿಳೆಯರಿಗೆ 25% ಮೀಸಲಾತಿಯನ್ನು ಕಡ್ಡಾಯಗೊಳಿಸಿದೆ. ಅಲ್ಲದೆ, 2015 ರಲ್ಲಿ ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಪೊಲೀಸ್ ಪಡೆಗಳಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ಹೆಚ್ಚಿಸಲು ಮಹಿಳೆಯರಿಗೆ 33% ರಷ್ಟು ಹುದ್ದೆಗಳನ್ನು ಮೀಸಲಿಡುವಂತೆ ಸಲಹೆ ನೀಡಿತ್ತು.

ನೇಮಕಾತಿಯಲ್ಲಿ ಹೆಚ್ಚಿನ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳಲ್ಲಿ ಗಣಕೀಕೃತ ಕೌನ್ಸೆಲಿಂಗ್ ಮೂಲಕ ಗ್ರೂಪ್-ಸಿ ಮತ್ತು ಗ್ರೂಪ್-ಡಿ ನೌಕರರ ವರ್ಗಾವಣೆಗೆ ನಿಯಮಗಳನ್ನೂ ಸಹ ಆಯೋಗ ಶಿಫಾರಸು ಮಾಡಿದೆ.

ಎಲ್ಲಾ ಇಲಾಖೆಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಸೂಕ್ತ ಪ್ರಾತಿನಿಧ್ಯವನ್ನು ಖಾತ್ರಿಪಡಿಸದೆ ಹೊರಗುತ್ತಿಗೆ ಸಿಬ್ಬಂದಿಯನ್ನು ನಿಯೋಜಿಸುತ್ತಿವೆ. ಹೀಗಾಗಿ, ಸರ್ಕಾರದ ವಿವಿಧ ಇಲಾಖೆಗಳಿಗೆ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಹೊರಗುತ್ತಿಗೆ ನೀಡಿದಾಗ ಎಸ್ಸಿ ಮತ್ತು ಎಸ್ಟಿಗಳಿಗೆ ಸೂಕ್ತ ಪ್ರಾತಿನಿಧ್ಯವನ್ನು ನೀಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಬಹುದು ಎಂದೂ ಕೂಡ ಆಯೋಗ ಹೇಳಿದೆ.

ಪೊಲೀಸ್ ಇಲಾಖೆಯು 32 ಕ್ಕೂ ಹೆಚ್ಚು ನಾಗರಿಕ ಸೇವೆಗಳನ್ನು ಒದಗಿಸುತ್ತದೆ. ಆದರೆ, ನಾಗರಿಕರು ಸಾಮಾನ್ಯವಾಗಿ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಲು ಹಿಂಜರಿಯುತ್ತಾರೆ. ಹೀಗಾಗಿ ಸಾರ್ವಜನಿಕರು ಮತ್ತು ಪೊಲೀಸರನ್ನು ಹತ್ತಿರ ತರುವ ಸಲುವಾಗಿ, ಎಲ್ಲಾ ಪೊಲೀಸ್ ಠಾಣೆಗಳಲ್ಲಿ ನಾಗರಿಕ ಸೇವಾ ಸಹಾಯ ಕೇಂದ್ರಗಳನ್ನು ಸ್ಥಾಪಿಸಬಹುದು ಮತ್ತು ಅದನ್ನು ಸಾಂಸ್ಥಿಕಗೊಳಿಸಲು ಪೊಲೀಸ್ ಕೈಪಿಡಿಯಲ್ಲಿ ನಿಬಂಧನೆಯನ್ನು ಸೇರಿಸಬಹುದು ಎಂದು ಆಯೋಗ ಹೇಳಿದೆ.

BDA ಮತ್ತು BMRDA, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯನ್ನು ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಏಜೆನ್ಸಿಯಂದಿಗೆ ಮತ್ತು ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯನ್ನು ಇಂಧನ ಇಲಾಖೆಯೊಂದಿಗೆ ವಿಲೀನಗೊಳಿಸಬೇಕು ಎಂದು ಆಯೋಗವು ಶಿಫಾರಸು ಮಾಡಿದೆ.

ಆಯೋಗದ ಮೊದಲ ವರದಿಯನ್ನು ಹಲವು ಶಿಫಾರಸ್ಸುಗಳೊಂದಿಗೆ ಜುಲೈ 2021 ರಲ್ಲಿ ಕಂದಾಯ, ಸಾರಿಗೆ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗಳಿಗೆ ಸಲ್ಲಿಸಲಾಗಿತ್ತು. ಈ ಬಾರಿ ಗೃಹ, ಇಂಧನ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಸಮಾಜ ಕಲ್ಯಾಣ, ಎಸ್ಟಿ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಿಗೆ ವರದಿ ಮತ್ತು ಶಿಫಾರಸ್ಸುಗಳನ್ನು ಸಲ್ಲಿಸಲಾಗಿದೆ.

ಪ್ರಮುಖ ಶಿಫಾರಸುಗಳು

• ರಾಜ್ಯ ಸರ್ಕಾರವು ಸೆಕ್ರೆಟರಿಯೇಟ್‌ನಲ್ಲಿ ಯಾವುದೇ ಕಡತವು (ಫೈಲ್) ಮೂರು ಅಥವಾ ನಾಲ್ಕು ಹಂತಗಳಿಗಿಂತ ಹೆಚ್ಚಿರಬಾರದು ಎಂದು ನಿರ್ಧರಿಸಬಹುದು. ಸದ್ಯ ಐದರಿಂದ 10 ಹಂತಗಳಲ್ಲಿ ಕಡತಗಳು ಸಾಗುತ್ತಿವೆ.

• ರಾಜ್ಯ ನಾಗರಿಕ ಸೇವೆಗಳ ವಿತರಣೆಗಾಗಿ ಸರ್ಕಾರವು ಅಂಚೆ ಕಚೇರಿಗಳನ್ನು ಬಳಸಿಕೊಳ್ಳಬಹುದು.

• ಬಿಡಿಎ, ಕೆಎಚ್ಬಿ ಮತ್ತು ಕೆಐಎಡಿಬಿಯಂತಹ ಸಂಸ್ಥೆಗಳು ಗ್ರಾಮ ಪಂಚಾಯಿತಿಗಳ ಮಿತಿಯಲ್ಲಿಯೂ ಮಂಜೂರು ಮಾಡಿದ ನಿವೇಶನಗಳಿಗೆ ಖಾತಾ ನೀಡುತ್ತಿವೆ. ಇದರೊಂದಿಗೆ ಅವು ಗ್ರಾಮ ಪಂಚಾಯಿತಿಗಳನ್ನು ಆಸ್ತಿ ತೆರಿಗೆಯಿಂದ ವಂಚಿತಗೊಳಿಸುತ್ತಿವೆ. ಚಾಯಿತಿಗಳು ಆಸ್ತಿ ತೆರಿಗೆ ಸಂಗ್ರಹಿಸಬೇಕು.

• ಬಿಬಿಎಂಪಿಯಲ್ಲಿ ವಲಯ ಆಯುಕ್ತರು ಮತ್ತು ನಗರ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿಗಳನ್ನು ರಚಿಸಬಹುದು.


ಇದನ್ನೂ ಓದಿ; ವಿಧಾನಸಭಾ ಕ್ಷೇತ್ರಗಳ ಸಮೀಕ್ಷೆ: ಎಚ್.ಡಿ ಕುಮಾರಸ್ವಾಮಿ ಮತ್ತು ಯೋಗೇಶ್ವರ್ ನಡುವೆ ಪ್ರತಿಷ್ಠೆಯ ಕಣ ಚನ್ನಪಟ್ಟಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...