Homeಕರ್ನಾಟಕಗೃಹ ಇಲಾಖೆಯಲ್ಲಿ ಮಹಿಳೆಯರಿಗೆ 33% ಮೀಸಲಾತಿ: ಕರ್ನಾಟಕ ಆಡಳಿತ ಸುಧಾರಣಾ ಸಮಿತಿ ಶಿಫಾರಸ್ಸು

ಗೃಹ ಇಲಾಖೆಯಲ್ಲಿ ಮಹಿಳೆಯರಿಗೆ 33% ಮೀಸಲಾತಿ: ಕರ್ನಾಟಕ ಆಡಳಿತ ಸುಧಾರಣಾ ಸಮಿತಿ ಶಿಫಾರಸ್ಸು

- Advertisement -
- Advertisement -

ಗೃಹ ಇಲಾಖೆಯಲ್ಲಿ ಕಾನ್‌ಸ್ಟೆಬಲ್ ಮತ್ತು ಗೆಜೆಟೆಡ್‌ಯೇತರ ಸಿಬ್ಬಂದಿ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡಬೇಕು ಎಂದು ಮಾಜಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ್ ಭಾಸ್ಕರ್ ನೇತೃತ್ವದ ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ಶಿಫಾರಸು ಮಾಡಿದೆ.

ಆಯೋಗವು ತನ್ನ ಎರಡನೇ ಮತ್ತು ಮೂರನೇ ವರದಿಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿದ್ದು, 2020ರ ವೇಳೆಗೆ ಕರ್ನಾಟಕದಲ್ಲಿ ಗೆಜೆಟೆಡ್ ಅಲ್ಲದ ಪೊಲೀಸ್ ಸಿಬ್ಬಂದಿಯಲ್ಲಿ ಮಹಿಳಾ ಪ್ರಾತಿನಿಧ್ಯವು ಕೇವಲ 8.3% ಇದೆ ಎಂದು ಆಯೋಗ ಕಳವಳ ವ್ಯಕ್ತಪಡಿಸಿದೆ.

ರಾಜ್ಯ ಸರ್ಕಾರವು ಕಾನ್‌ಸ್ಟೆಬಲ್‌ಗಳು ಮತ್ತು ಇತರ ಹುದ್ದೆಗಳ ನೇಮಕಾತಿಯಲ್ಲಿ ಮಹಿಳೆಯರಿಗೆ 25% ಮೀಸಲಾತಿಯನ್ನು ಕಡ್ಡಾಯಗೊಳಿಸಿದೆ. ಅಲ್ಲದೆ, 2015 ರಲ್ಲಿ ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಪೊಲೀಸ್ ಪಡೆಗಳಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ಹೆಚ್ಚಿಸಲು ಮಹಿಳೆಯರಿಗೆ 33% ರಷ್ಟು ಹುದ್ದೆಗಳನ್ನು ಮೀಸಲಿಡುವಂತೆ ಸಲಹೆ ನೀಡಿತ್ತು.

ನೇಮಕಾತಿಯಲ್ಲಿ ಹೆಚ್ಚಿನ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳಲ್ಲಿ ಗಣಕೀಕೃತ ಕೌನ್ಸೆಲಿಂಗ್ ಮೂಲಕ ಗ್ರೂಪ್-ಸಿ ಮತ್ತು ಗ್ರೂಪ್-ಡಿ ನೌಕರರ ವರ್ಗಾವಣೆಗೆ ನಿಯಮಗಳನ್ನೂ ಸಹ ಆಯೋಗ ಶಿಫಾರಸು ಮಾಡಿದೆ.

ಎಲ್ಲಾ ಇಲಾಖೆಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಸೂಕ್ತ ಪ್ರಾತಿನಿಧ್ಯವನ್ನು ಖಾತ್ರಿಪಡಿಸದೆ ಹೊರಗುತ್ತಿಗೆ ಸಿಬ್ಬಂದಿಯನ್ನು ನಿಯೋಜಿಸುತ್ತಿವೆ. ಹೀಗಾಗಿ, ಸರ್ಕಾರದ ವಿವಿಧ ಇಲಾಖೆಗಳಿಗೆ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಹೊರಗುತ್ತಿಗೆ ನೀಡಿದಾಗ ಎಸ್ಸಿ ಮತ್ತು ಎಸ್ಟಿಗಳಿಗೆ ಸೂಕ್ತ ಪ್ರಾತಿನಿಧ್ಯವನ್ನು ನೀಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಬಹುದು ಎಂದೂ ಕೂಡ ಆಯೋಗ ಹೇಳಿದೆ.

ಪೊಲೀಸ್ ಇಲಾಖೆಯು 32 ಕ್ಕೂ ಹೆಚ್ಚು ನಾಗರಿಕ ಸೇವೆಗಳನ್ನು ಒದಗಿಸುತ್ತದೆ. ಆದರೆ, ನಾಗರಿಕರು ಸಾಮಾನ್ಯವಾಗಿ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಲು ಹಿಂಜರಿಯುತ್ತಾರೆ. ಹೀಗಾಗಿ ಸಾರ್ವಜನಿಕರು ಮತ್ತು ಪೊಲೀಸರನ್ನು ಹತ್ತಿರ ತರುವ ಸಲುವಾಗಿ, ಎಲ್ಲಾ ಪೊಲೀಸ್ ಠಾಣೆಗಳಲ್ಲಿ ನಾಗರಿಕ ಸೇವಾ ಸಹಾಯ ಕೇಂದ್ರಗಳನ್ನು ಸ್ಥಾಪಿಸಬಹುದು ಮತ್ತು ಅದನ್ನು ಸಾಂಸ್ಥಿಕಗೊಳಿಸಲು ಪೊಲೀಸ್ ಕೈಪಿಡಿಯಲ್ಲಿ ನಿಬಂಧನೆಯನ್ನು ಸೇರಿಸಬಹುದು ಎಂದು ಆಯೋಗ ಹೇಳಿದೆ.

BDA ಮತ್ತು BMRDA, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯನ್ನು ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಏಜೆನ್ಸಿಯಂದಿಗೆ ಮತ್ತು ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯನ್ನು ಇಂಧನ ಇಲಾಖೆಯೊಂದಿಗೆ ವಿಲೀನಗೊಳಿಸಬೇಕು ಎಂದು ಆಯೋಗವು ಶಿಫಾರಸು ಮಾಡಿದೆ.

ಆಯೋಗದ ಮೊದಲ ವರದಿಯನ್ನು ಹಲವು ಶಿಫಾರಸ್ಸುಗಳೊಂದಿಗೆ ಜುಲೈ 2021 ರಲ್ಲಿ ಕಂದಾಯ, ಸಾರಿಗೆ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗಳಿಗೆ ಸಲ್ಲಿಸಲಾಗಿತ್ತು. ಈ ಬಾರಿ ಗೃಹ, ಇಂಧನ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಸಮಾಜ ಕಲ್ಯಾಣ, ಎಸ್ಟಿ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಿಗೆ ವರದಿ ಮತ್ತು ಶಿಫಾರಸ್ಸುಗಳನ್ನು ಸಲ್ಲಿಸಲಾಗಿದೆ.

ಪ್ರಮುಖ ಶಿಫಾರಸುಗಳು

• ರಾಜ್ಯ ಸರ್ಕಾರವು ಸೆಕ್ರೆಟರಿಯೇಟ್‌ನಲ್ಲಿ ಯಾವುದೇ ಕಡತವು (ಫೈಲ್) ಮೂರು ಅಥವಾ ನಾಲ್ಕು ಹಂತಗಳಿಗಿಂತ ಹೆಚ್ಚಿರಬಾರದು ಎಂದು ನಿರ್ಧರಿಸಬಹುದು. ಸದ್ಯ ಐದರಿಂದ 10 ಹಂತಗಳಲ್ಲಿ ಕಡತಗಳು ಸಾಗುತ್ತಿವೆ.

• ರಾಜ್ಯ ನಾಗರಿಕ ಸೇವೆಗಳ ವಿತರಣೆಗಾಗಿ ಸರ್ಕಾರವು ಅಂಚೆ ಕಚೇರಿಗಳನ್ನು ಬಳಸಿಕೊಳ್ಳಬಹುದು.

• ಬಿಡಿಎ, ಕೆಎಚ್ಬಿ ಮತ್ತು ಕೆಐಎಡಿಬಿಯಂತಹ ಸಂಸ್ಥೆಗಳು ಗ್ರಾಮ ಪಂಚಾಯಿತಿಗಳ ಮಿತಿಯಲ್ಲಿಯೂ ಮಂಜೂರು ಮಾಡಿದ ನಿವೇಶನಗಳಿಗೆ ಖಾತಾ ನೀಡುತ್ತಿವೆ. ಇದರೊಂದಿಗೆ ಅವು ಗ್ರಾಮ ಪಂಚಾಯಿತಿಗಳನ್ನು ಆಸ್ತಿ ತೆರಿಗೆಯಿಂದ ವಂಚಿತಗೊಳಿಸುತ್ತಿವೆ. ಚಾಯಿತಿಗಳು ಆಸ್ತಿ ತೆರಿಗೆ ಸಂಗ್ರಹಿಸಬೇಕು.

• ಬಿಬಿಎಂಪಿಯಲ್ಲಿ ವಲಯ ಆಯುಕ್ತರು ಮತ್ತು ನಗರ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿಗಳನ್ನು ರಚಿಸಬಹುದು.


ಇದನ್ನೂ ಓದಿ; ವಿಧಾನಸಭಾ ಕ್ಷೇತ್ರಗಳ ಸಮೀಕ್ಷೆ: ಎಚ್.ಡಿ ಕುಮಾರಸ್ವಾಮಿ ಮತ್ತು ಯೋಗೇಶ್ವರ್ ನಡುವೆ ಪ್ರತಿಷ್ಠೆಯ ಕಣ ಚನ್ನಪಟ್ಟಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...