Homeಅಂತರಾಷ್ಟ್ರೀಯತಾನು ಕಾರ್ಯನಿರ್ವಹಿಸುತ್ತಿರುವ 82 ದೇಶಗಳ 34.5 ಕೋಟಿ ಜನರು ಹಸಿವಿನತ್ತ ಸಾಗುತ್ತಿದ್ದಾರೆ: ವಿಶ್ವಸಂಸ್ಥೆ ಎಚ್ಚರಿಕೆ

ತಾನು ಕಾರ್ಯನಿರ್ವಹಿಸುತ್ತಿರುವ 82 ದೇಶಗಳ 34.5 ಕೋಟಿ ಜನರು ಹಸಿವಿನತ್ತ ಸಾಗುತ್ತಿದ್ದಾರೆ: ವಿಶ್ವಸಂಸ್ಥೆ ಎಚ್ಚರಿಕೆ

- Advertisement -
- Advertisement -

ತಾನು ಕಾರ್ಯನಿರ್ವಹಿಸುತ್ತಿರುವ 82 ದೇಶಗಳ 34.5 ಕೋಟಿ ಜನರು ಹಸಿವಿನತ್ತ ಸಾಗುತ್ತಿದ್ದಾರೆ ಎಂದು ವಿಶ್ವಸಂಸ್ಥೆಯ ವಿಶ್ವ ಆಹಾರ ಕಾರ್ಯಕ್ರಮದ ಮುಖ್ಯಸ್ಥ ಡೇವಿಡ್ ಬೀಸ್ಲಿ ಗುರುವಾರ ಹೇಳಿದ್ದಾರೆ. ಈ ಬಿಕ್ಕಟ್ಟು “ಅಭೂತಪೂರ್ವ ಪ್ರಮಾಣದ ಜಾಗತಿಕ ತುರ್ತುಸ್ಥಿತಿ” ಎಂದು ಅವರು ಉಲ್ಲೇಖಿಸಿದ್ದಾರೆ.

“ಇದು ದಾಖಲೆಯ ಹೆಚ್ಚಳವಾಗಿದೆ. ಕೊರೊನಾ ಸಾಂಕ್ರಾಮಿಕ ರೋಗವು ಪ್ರಾರಂಭವಾಗುವ ಮೊದಲಿಗಿಂತ ಈಗ ಆಹಾರದ ಬಿಕ್ಕಟ್ಟು ತೀವ್ರವಾಗಿ ಹೆಚ್ಚಳವಾಗಿದ್ದು, ಆಹಾರ ಅಸುರಕ್ಷಿತ ಜನರ ಸಂಖ್ಯೆ 2.5 ಪಟ್ಟು ಹೆಚ್ಚಾಗಿ” ಎಂದು ಬೀಸ್ಲಿ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ 34.5 ಕೋಟಿ ಜನರಲ್ಲಿ 45 ದೇಶಗಳ ಐದು ಕೋಟಿ ಜನರು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು “ಕ್ಷಾಮದ ಬಾಗಿಲು ಬಡಿಯುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಮಾನವ ಚರಿತ್ರೆಯಲ್ಲಿ ಬಂಡವಾಳವಾದ ಹಸಿವು ಎಂಬ ಜಾತಿಗೆಟ್ಟ ಪ್ರತಿಮೆ

“ಹಸಿವಿನ ಅಲೆಯು ಈಗ ಹಸಿವಿನ ಸುನಾಮಿಯಾಗಿದೆ” ಎಂದು ಅವರು ಎಚ್ಚರಿಸಿದ್ದು, ಘರ್ಷಣೆಗಳ ಏರಿಕೆ, ಕೊರೊನಾ ವೈರಸ್ ಸಾಂಕ್ರಾಮಿಕ, ಹವಾಮಾನ ಬದಲಾವಣೆ, ಹೆಚ್ಚುತ್ತಿರುವ ಇಂಧನ ಬೆಲೆಗಳು ಮತ್ತು ಉಕ್ರೇನ್ ಮೇಲೆ ರಷ್ಯಾದ ಆಕ್ರಮಣವು ಹಸಿವಿನ ಅಂಕಿಅಂಶಗಳ ಹೆಚ್ಚಳದ ಹಿಂದಿನ ಕಾರಣಗಳಾಗಿವೆ ಎಂದು ಅವರು ಪಟ್ಟಿ ಮಾಡಿದ್ದಾರೆ.

ವಿಶ್ವಸಂಸ್ಥೆಯ ಹ್ಯುಮಾನಿಟೇರಿಯನ್ ಅಫೇರ್ಸ್ ಮುಖ್ಯಸ್ಥ ಮಾರ್ಟಿನ್ ಗ್ರಿಫಿತ್ಸ್ ಅವರು, “ಸೊಮಾಲಿಯಾದಲ್ಲಿ ಎರಡು ಲಕ್ಷ ನಿವಾಸಿಗಳು ಕ್ಷಾಮದ ಅಪಾಯದಲ್ಲಿದ್ದು, ನವೆಂಬರ್ ವೇಳೆಗೆ ಈ ಸಂಖ್ಯೆಯು ಮೂರು ಲಕ್ಷವನ್ನು ತಲುಪುವ ನಿರೀಕ್ಷೆಯಿದೆ. ಅಲ್ಲದೆ, ಇನ್ನೂ ಲಕ್ಷಾಂತರ ಜನರು ಹಸಿವಿನ ಅಂಚಿನಲ್ಲಿದ್ದಾರೆ” ಎಂದು ಅವರು ಹೇಳಿದ್ದಾರೆ.

ವಿಶ್ವಸಂಸ್ಥೆಯ ಪ್ರಕಾರ, ಯೆಮೆನ್‌ನಲ್ಲಿ ಏಳು ವರ್ಷಗಳಿಗಿಂತಲೂ ಹೆಚ್ಚು ಕಾಲದಿಂದ ನಡೆಯುತ್ತಿರುವ ಸಶಸ್ತ್ರ ಸಂಘರ್ಷವು ಸುಮಾರು 1.9 ಕೋಟಿ ನಿವಾಸಿಗಳನ್ನು ತೀವ್ರ ಆಹಾರ ಅಭದ್ರತೆಗೆ ದೂಡಿದೆ. ನೈಜೀರಿಯಾದ ಸಂಘರ್ಷ ಪೀಡಿತ ರಾಜ್ಯಗಳಲ್ಲಿ ಸುಮಾರು 41 ಲಕ್ಷ ನಿವಾಸಿಗಳು ತೀವ್ರ ಮಟ್ಟದ ತೀವ್ರ ಆಹಾರ ಅಭದ್ರತೆಯನ್ನು ಎದುರಿಸುತ್ತಿದ್ದಾರೆ.

ಇದನ್ನೂ ಓದಿ: ಹಿಂದುತ್ವ ಮತ್ತು ಕಾರ್ಪೋರೇಟ್‌ ಮೈತ್ರಿಯಿಂದಾಗಿ ದೇಶದಲ್ಲಿ ನಿರುದ್ಯೋಗ, ಹಸಿವು, ಬಡತನ ಹೆಚ್ಚುತ್ತಿದೆ: ಸಿಪಿಐ(ಎಂ) ಪಾಲಿಟ್‌‌ಬ್ಯೂರೊ ಸದಸ್ಯ ಪ್ರಕಾಶ್‌ ಕಾರಟ್‌‌

“ಒಬ್ಬ ವ್ಯಕ್ತಿಯು ಸಾಕಷ್ಟು ಆಹಾರವನ್ನು ಸೇವಿಸಲು ಸಾಧ್ಯವಾಗದಿದ್ದಾಗ ಮತ್ತು ಅದು ಅವರ ಜೀವನ ಅಥವಾ ಜೀವನೋಪಾಯಕ್ಕೆ ತಕ್ಷಣದ ಅಪಾಯವನ್ನುಂಟುಮಾಡುತ್ತದೆ ಎಂದಾದರೆ ಅದನ್ನು ತೀವ್ರವಾದ ಆಹಾರ ಅಭದ್ರತೆ” ಎಂದು ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯ ವ್ಯಾಖ್ಯಾನವಾಗಿದೆ.

“ಘರ್ಷಣೆ ನಡೆಯುವ ಅತ್ಯಂತ ವಿಪರೀತ ಸಂದರ್ಭಗಳಲ್ಲಿ, ನಾಗರಿಕರು ಬದುಕಲು ಅವಲಂಬಿಸಿರುವ ವಾಣಿಜ್ಯ ಸರಬರಾಜು ಮತ್ತು ಅಗತ್ಯ ಸೇವೆಗಳಿಗೆ ಪ್ರವೇಶವನ್ನು ಹೋರಾಟ ನಡೆಸುತ್ತಿರುವವರು ಉದ್ದೇಶಪೂರ್ವಕವಾಗಿ ಕಡಿತಗೊಳಿಸುತ್ತಾರೆ. ಹಸಿವನ್ನು ಯುದ್ಧದ ತಂತ್ರವಾಗಿ ಬಳಸಲಾಗುತ್ತದೆ” ಎಂದು ವಿಶ್ವಸಂಸ್ಥೆಯ ಹ್ಯುಮಾನಿಟೇರಿಯನ್ ಅಫೇರ್ಸ್ ಮುಖ್ಯಸ್ಥ ಮಾರ್ಟಿನ್ ಗ್ರಿಫಿತ್ಸ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...