Homeಅಂತರಾಷ್ಟ್ರೀಯತಾನು ಕಾರ್ಯನಿರ್ವಹಿಸುತ್ತಿರುವ 82 ದೇಶಗಳ 34.5 ಕೋಟಿ ಜನರು ಹಸಿವಿನತ್ತ ಸಾಗುತ್ತಿದ್ದಾರೆ: ವಿಶ್ವಸಂಸ್ಥೆ ಎಚ್ಚರಿಕೆ

ತಾನು ಕಾರ್ಯನಿರ್ವಹಿಸುತ್ತಿರುವ 82 ದೇಶಗಳ 34.5 ಕೋಟಿ ಜನರು ಹಸಿವಿನತ್ತ ಸಾಗುತ್ತಿದ್ದಾರೆ: ವಿಶ್ವಸಂಸ್ಥೆ ಎಚ್ಚರಿಕೆ

- Advertisement -
- Advertisement -

ತಾನು ಕಾರ್ಯನಿರ್ವಹಿಸುತ್ತಿರುವ 82 ದೇಶಗಳ 34.5 ಕೋಟಿ ಜನರು ಹಸಿವಿನತ್ತ ಸಾಗುತ್ತಿದ್ದಾರೆ ಎಂದು ವಿಶ್ವಸಂಸ್ಥೆಯ ವಿಶ್ವ ಆಹಾರ ಕಾರ್ಯಕ್ರಮದ ಮುಖ್ಯಸ್ಥ ಡೇವಿಡ್ ಬೀಸ್ಲಿ ಗುರುವಾರ ಹೇಳಿದ್ದಾರೆ. ಈ ಬಿಕ್ಕಟ್ಟು “ಅಭೂತಪೂರ್ವ ಪ್ರಮಾಣದ ಜಾಗತಿಕ ತುರ್ತುಸ್ಥಿತಿ” ಎಂದು ಅವರು ಉಲ್ಲೇಖಿಸಿದ್ದಾರೆ.

“ಇದು ದಾಖಲೆಯ ಹೆಚ್ಚಳವಾಗಿದೆ. ಕೊರೊನಾ ಸಾಂಕ್ರಾಮಿಕ ರೋಗವು ಪ್ರಾರಂಭವಾಗುವ ಮೊದಲಿಗಿಂತ ಈಗ ಆಹಾರದ ಬಿಕ್ಕಟ್ಟು ತೀವ್ರವಾಗಿ ಹೆಚ್ಚಳವಾಗಿದ್ದು, ಆಹಾರ ಅಸುರಕ್ಷಿತ ಜನರ ಸಂಖ್ಯೆ 2.5 ಪಟ್ಟು ಹೆಚ್ಚಾಗಿ” ಎಂದು ಬೀಸ್ಲಿ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ 34.5 ಕೋಟಿ ಜನರಲ್ಲಿ 45 ದೇಶಗಳ ಐದು ಕೋಟಿ ಜನರು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು “ಕ್ಷಾಮದ ಬಾಗಿಲು ಬಡಿಯುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಮಾನವ ಚರಿತ್ರೆಯಲ್ಲಿ ಬಂಡವಾಳವಾದ ಹಸಿವು ಎಂಬ ಜಾತಿಗೆಟ್ಟ ಪ್ರತಿಮೆ

“ಹಸಿವಿನ ಅಲೆಯು ಈಗ ಹಸಿವಿನ ಸುನಾಮಿಯಾಗಿದೆ” ಎಂದು ಅವರು ಎಚ್ಚರಿಸಿದ್ದು, ಘರ್ಷಣೆಗಳ ಏರಿಕೆ, ಕೊರೊನಾ ವೈರಸ್ ಸಾಂಕ್ರಾಮಿಕ, ಹವಾಮಾನ ಬದಲಾವಣೆ, ಹೆಚ್ಚುತ್ತಿರುವ ಇಂಧನ ಬೆಲೆಗಳು ಮತ್ತು ಉಕ್ರೇನ್ ಮೇಲೆ ರಷ್ಯಾದ ಆಕ್ರಮಣವು ಹಸಿವಿನ ಅಂಕಿಅಂಶಗಳ ಹೆಚ್ಚಳದ ಹಿಂದಿನ ಕಾರಣಗಳಾಗಿವೆ ಎಂದು ಅವರು ಪಟ್ಟಿ ಮಾಡಿದ್ದಾರೆ.

ವಿಶ್ವಸಂಸ್ಥೆಯ ಹ್ಯುಮಾನಿಟೇರಿಯನ್ ಅಫೇರ್ಸ್ ಮುಖ್ಯಸ್ಥ ಮಾರ್ಟಿನ್ ಗ್ರಿಫಿತ್ಸ್ ಅವರು, “ಸೊಮಾಲಿಯಾದಲ್ಲಿ ಎರಡು ಲಕ್ಷ ನಿವಾಸಿಗಳು ಕ್ಷಾಮದ ಅಪಾಯದಲ್ಲಿದ್ದು, ನವೆಂಬರ್ ವೇಳೆಗೆ ಈ ಸಂಖ್ಯೆಯು ಮೂರು ಲಕ್ಷವನ್ನು ತಲುಪುವ ನಿರೀಕ್ಷೆಯಿದೆ. ಅಲ್ಲದೆ, ಇನ್ನೂ ಲಕ್ಷಾಂತರ ಜನರು ಹಸಿವಿನ ಅಂಚಿನಲ್ಲಿದ್ದಾರೆ” ಎಂದು ಅವರು ಹೇಳಿದ್ದಾರೆ.

ವಿಶ್ವಸಂಸ್ಥೆಯ ಪ್ರಕಾರ, ಯೆಮೆನ್‌ನಲ್ಲಿ ಏಳು ವರ್ಷಗಳಿಗಿಂತಲೂ ಹೆಚ್ಚು ಕಾಲದಿಂದ ನಡೆಯುತ್ತಿರುವ ಸಶಸ್ತ್ರ ಸಂಘರ್ಷವು ಸುಮಾರು 1.9 ಕೋಟಿ ನಿವಾಸಿಗಳನ್ನು ತೀವ್ರ ಆಹಾರ ಅಭದ್ರತೆಗೆ ದೂಡಿದೆ. ನೈಜೀರಿಯಾದ ಸಂಘರ್ಷ ಪೀಡಿತ ರಾಜ್ಯಗಳಲ್ಲಿ ಸುಮಾರು 41 ಲಕ್ಷ ನಿವಾಸಿಗಳು ತೀವ್ರ ಮಟ್ಟದ ತೀವ್ರ ಆಹಾರ ಅಭದ್ರತೆಯನ್ನು ಎದುರಿಸುತ್ತಿದ್ದಾರೆ.

ಇದನ್ನೂ ಓದಿ: ಹಿಂದುತ್ವ ಮತ್ತು ಕಾರ್ಪೋರೇಟ್‌ ಮೈತ್ರಿಯಿಂದಾಗಿ ದೇಶದಲ್ಲಿ ನಿರುದ್ಯೋಗ, ಹಸಿವು, ಬಡತನ ಹೆಚ್ಚುತ್ತಿದೆ: ಸಿಪಿಐ(ಎಂ) ಪಾಲಿಟ್‌‌ಬ್ಯೂರೊ ಸದಸ್ಯ ಪ್ರಕಾಶ್‌ ಕಾರಟ್‌‌

“ಒಬ್ಬ ವ್ಯಕ್ತಿಯು ಸಾಕಷ್ಟು ಆಹಾರವನ್ನು ಸೇವಿಸಲು ಸಾಧ್ಯವಾಗದಿದ್ದಾಗ ಮತ್ತು ಅದು ಅವರ ಜೀವನ ಅಥವಾ ಜೀವನೋಪಾಯಕ್ಕೆ ತಕ್ಷಣದ ಅಪಾಯವನ್ನುಂಟುಮಾಡುತ್ತದೆ ಎಂದಾದರೆ ಅದನ್ನು ತೀವ್ರವಾದ ಆಹಾರ ಅಭದ್ರತೆ” ಎಂದು ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯ ವ್ಯಾಖ್ಯಾನವಾಗಿದೆ.

“ಘರ್ಷಣೆ ನಡೆಯುವ ಅತ್ಯಂತ ವಿಪರೀತ ಸಂದರ್ಭಗಳಲ್ಲಿ, ನಾಗರಿಕರು ಬದುಕಲು ಅವಲಂಬಿಸಿರುವ ವಾಣಿಜ್ಯ ಸರಬರಾಜು ಮತ್ತು ಅಗತ್ಯ ಸೇವೆಗಳಿಗೆ ಪ್ರವೇಶವನ್ನು ಹೋರಾಟ ನಡೆಸುತ್ತಿರುವವರು ಉದ್ದೇಶಪೂರ್ವಕವಾಗಿ ಕಡಿತಗೊಳಿಸುತ್ತಾರೆ. ಹಸಿವನ್ನು ಯುದ್ಧದ ತಂತ್ರವಾಗಿ ಬಳಸಲಾಗುತ್ತದೆ” ಎಂದು ವಿಶ್ವಸಂಸ್ಥೆಯ ಹ್ಯುಮಾನಿಟೇರಿಯನ್ ಅಫೇರ್ಸ್ ಮುಖ್ಯಸ್ಥ ಮಾರ್ಟಿನ್ ಗ್ರಿಫಿತ್ಸ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...