Homeಕರ್ನಾಟಕಬಾಗಲಕೋಟೆ : ಇಳಕಲ್ ಬಳಿಯ ಇಟ್ಟಿಗೆ ಭಟ್ಟಿಯಿಂದ 34 ಜೀತದಾಳುಗಳ ರಕ್ಷಣೆ

ಬಾಗಲಕೋಟೆ : ಇಳಕಲ್ ಬಳಿಯ ಇಟ್ಟಿಗೆ ಭಟ್ಟಿಯಿಂದ 34 ಜೀತದಾಳುಗಳ ರಕ್ಷಣೆ

- Advertisement -
- Advertisement -

ಬಾಗಲಕೋಟೆ ಜಿಲ್ಲೆ ಇಳಕಲ್ ತಾಲೂಕಿನ ಸಂಕ್ಲಾಪೂರ ಗ್ರಾಮದ ಇಟ್ಟಿಗೆ ಗೂಡುಗಳಲ್ಲಿ ಜೀತಕ್ಕಿದ್ದ ಐವರು ಮಕ್ಕಳು ಸೇರಿದಂತೆ 34 ಮಂದಿ ಒಡಿಶಾ ಮೂಲದ ಕಾರ್ಮಿಕರನ್ನು ಮಂಗಳವಾರ (ಫೆ.10,2026) ರಕ್ಷಿಸಲಾಗಿದೆ.

ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ಗ್ರಾಮದಲ್ಲಿ ಕಾರ್ಮಿಕರನ್ನು ಜೀತಕ್ಕಿಡಲಾಗಿದೆ ಎಂಬ ಮಾಹಿತಿ ಪಡೆದ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಪೊಲೀಸರು ಮತ್ತು ಸರ್ಕಾರೇತರ ಸಂಸ್ಥೆ (ಎನ್‌ಜಿಒ) ಸ್ಪಂದನ ಅಸೋಸಿಯೇಷನ್‌ನ ಸದಸ್ಯರನ್ನು ಒಳಗೊಂಡ ತಂಡವು ಜಂಟಿ ಕಾರ್ಯಾಚರಣೆ ನಡೆಸಿ ಅವರನ್ನು ರಕ್ಷಣೆ ಮಾಡಿದೆ.

ರಕ್ಷಿಸಲ್ಪಟ್ಟ 34 ಜನರು ಒಂಬತ್ತು ಕುಟುಂಬಗಳಿಗೆ ಸೇರಿದವರು. ಒಡಿಶಾದ ಮಧ್ಯವರ್ತಿಯೊಬ್ಬರು ಪ್ರತಿ ಕುಟುಂಬಕ್ಕೆ 20,000 ರಿಂದ 30,000 ರೂ. ಮುಂಗಡ ಹಣದ ಭರವಸೆ ನೀಡುವ ಮೂಲಕ ಅವರನ್ನು ಕೆಲಸಕ್ಕೆ ಕರೆದುಕೊಂಡು ಬಂದಿದ್ದರು. ಮೊದಲು ಆಂಧ್ರ ಪ್ರದೇಶದ ವಿಜಯವಾಡದಲ್ಲಿ ಕೆಲಸ ಕೊಡಿಸುವುದಾಗಿ ಹೇಳಲಾಗಿತ್ತು. ಅಲ್ಲಿಗೆ ಬಸ್‌ ಮೂಲಕ ಕರೆದೊಯ್ಯಲಾಗಿತ್ತು. ವಿಜಯವಾಡದಿಂದ ರೈಲಿನ ಮೂಲಕ ಬಾಗಲಕೋಟೆಗೆ ಕರೆ ತರಲಾಗಿತ್ತು. ಈ ವಿಚಾರ ಕಾರ್ಮಿಕರಿಗೆ ಗೊತ್ತೇ ಇರಲಿಲ್ಲ. ಬಾಗಲಕೋಟೆಯಲ್ಲಿ ಕೆಲಸ ಪ್ರಾರಂಭಿಸಿ ಎರಡು ವಾರಗಳ ಬಳಿಕವಷ್ಟೇ ಸ್ಥಳೀಯರ ಮೂಲಕ ತಾವು ಕರ್ನಾಟಕದಲ್ಲಿದ್ದೇವೆ ಎಂಬ ವಿಷಯ ಕಾರ್ಮಿಕರಿಗೆ ಗೊತ್ತಾಗಿದೆ ಎಂದು ಸ್ಪಂದನ ಅಸೋಸಿಯೇಷನ್‌ನ ನಿರ್ದೇಶಕಿ ಸುಶೀಲಾ ಹೇಳಿರುವುದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಕಾರ್ಮಿಕರು ಒಮ್ಮೆ ಕೆಲಸಕ್ಕೆ ಹೋದರೆ 16 ಗಂಟೆಗೂ ಅಧಿಕ ಸಮಯ ಕೆಲಸ ಮಾಡುತ್ತಿದ್ದರು. ಬೆಳಿಗ್ಗೆ 5 ಗಂಟೆಗೆ ಕೆಲಸ ಪ್ರಾರಂಭಿಸಿದರೆ, ರಾತ್ರಿ 9-10 ಗಂಟೆಯವರೆಗೆ ಕನಿಷ್ಠ ವಿರಾಮಗಳೊಂದಿಗೆ ದುಡಿಯುತ್ತಿದ್ದರು. ಕೆಲಸಕ್ಕೆ ಕರೆದುಕೊಂಡು ಬಂದ ಮಧ್ಯವರ್ತಿ 20,000 ರಿಂದ 30,000 ರೂ.ಗಳವರೆಗೆ ಹಣ ಭರವಸೆ ನೀಡಿದ್ದ, ಆದರೆ ಕುಟುಂಬಗಳಿಗೆ ಒಟ್ಟು 8,000 ರೂ.ಗಳು ಮಾತ್ರ ಸಿಕ್ಕಿತ್ತು. ಪ್ರತಿ ಕುಟುಂಬವು ವಾರಕ್ಕೆ ಸುಮಾರು 800 ರೂ.ಗಳನ್ನು ಗಳಿಸುತ್ತಿತ್ತು, ಅದರಿಂದ ಅವರು ದಿನಸಿ ಸಾಮಗ್ರಿಗಳನ್ನು ಖರೀದಿಸುತ್ತಿದ್ದರು. ಇಟ್ಟಿಗ ಗೂಡು ಮಾಲೀಕ ಪ್ರತಿ ಕುಟುಂಬದಿಂದ ಒಬ್ಬ ಸದಸ್ಯರಿಗೆ ವಾರಕ್ಕೊಮ್ಮೆ ಮಾರುಕಟ್ಟೆಗೆ ಭೇಟಿ ನೀಡಲು ಮಾತ್ರ ಅವಕಾಶ ನೀಡುತ್ತಿದ್ದರು. ಶೋಷಣೆಗೆ ಒಳಗಾದಾಗ ಕಾರ್ಮಿಕರು ಅವರಿಗೆ ಭರವಸೆ ನೀಡಿದ್ದ ವೇತನವನ್ನು ಎಂದಿಗೂ ಪಡೆದಿರಲಿಲ್ಲ ಎಂಬುವುದಾಗಿ ಸುಶೀಲಾ ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಕಾರ್ಮಿಕರು ನೀರು ಅಥವಾ ನೈರ್ಮಲ್ಯ ಸೌಲಭ್ಯಗಳಿಲ್ಲದೆ ಸಣ್ಣ ಇಟ್ಟಿಗೆ ಗುಡಿಸಲುಗಳಲ್ಲಿ ಅಥವಾ ತಾತ್ಕಾಲಿಕ ಟಾರ್ಪಲ್ ಶೆಡ್‌ಗಳಲ್ಲಿ ವಾಸಿಸುತ್ತಿದ್ದರು. ಅವರು ಕಟ್ಟಿಗೆ ಬಳಸಿ ಅಡುಗೆ ಮಾಡುತ್ತಿದ್ದರು. ಅವರು ಹೊರಗೆ ಹೋದಾಗಲೆಲ್ಲಾ ಗೂಡು ಮಾಲೀಕರು ಅವರನ್ನು ಗಮನಿಸುತ್ತಿದ್ದರು. ಗೂಡು ಮಾಲೀಕ ಮತ್ತು ಅವರ ಇಬ್ಬರು ಪುತ್ರರು ಕಾರ್ಮಿಕರ ಮೇಲೆ ದೈಹಿಕ ದೌರ್ಜನ್ಯ ಎಸಗುತ್ತಿದ್ದರು. ಮೌಖಿಕವಾಗಿ ನಿಂದಿಸುತ್ತಿದ್ದರು. ಈ ಬಗ್ಗೆ ಪ್ರಶ್ನಿಸಿದರೆ ಕಾರ್ಮಿಕರನ್ನು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಿದ್ದರು. 13 ರಿಂದ 16 ವರ್ಷದೊಳಗಿನ ಮಕ್ಕಳು ಕೂಡ ಗೂಡುಗಳಲ್ಲಿ ಕೆಲಸ ಮಾಡುತ್ತಿದ್ದರು. ಅವರಿಗೆ ಶಾಲೆಗೆ ಹೋಗಲು ಸಾಧ್ಯವಾಗುತ್ತಿರಲಿಲ್ಲ ಎಂದು ವರದಿ ವಿವರಿಸಿದೆ.

ಸಾಮಾಜಿಕ ಜಾಲತಾಣಗಳ ಮೂಲಕ ಈ ಬಗ್ಗೆ ಮಾಹಿತಿ ಪಡೆದ ಸ್ಪಂದನ ಅಸೋಸಿಯೇಷನ್, ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿತ್ತು. ಆದರೆ, ದೂರು ದಾಖಲಿಸುವಾಗ ನಮಗೆ ಅಡೆತಡೆಗಳು ಎದುರಾಯಿತು. ಎಫ್‌ಐಆರ್ ದಾಖಲಿಸಲೂ ಕೂಡ ತುಂಬಾ ಸಮಸ್ಯೆ ಆಯಿತು. ನಮ್ಮ ತಂಡದ ಸದಸ್ಯರು ಮತ್ತು ಕಾರ್ಮಿಕರ ರಕ್ಷಣೆಗಾಗಿ ನಾವು ಎಸ್ಪಿಗೆ ಕರೆ ಮಾಡಿದೆವು. ನಂತರ ಅವರು ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ರಾಜಕೀಯ ಸಂಪರ್ಕ ಹೊಂದಿರುವ ಕೆಲವು ವ್ಯಕ್ತಿಗಳು ಪೊಲೀಸ್ ಠಾಣೆಗೆ ಬಂದು ಕಾರ್ಯಾಚರಣೆ ಮುಂದುವರಿಸದಂತೆ ಒತ್ತಡ ಹೇರಿದ ಪ್ರಸಂಗವೂ ನಡೆದಿದೆ ಎಂದು ಸುಶೀಲಾ ಹೇಳಿರುವುದಾಗಿ ವರದಿ ತಿಳಿಸಿದೆ.

ಎಫ್‌ಐಆರ್ ದಾಖಲಿಸಿದ್ದರೂ, ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಮಧ್ಯವರ್ತಿ ಅಥವಾ ಮಾಲೀಕರನ್ನು ಬಂಧಿಸಲಾಗಿದೆಯೇ ಎಂದು ಕೇಳಿದಾಗ, ಸುಶೀಲಾ, “ನನ್ನ ಪ್ರಕಾರ ಕನಿಷ್ಠ ಮಾಲೀಕರನ್ನೂ ಬಂಧಿಸಿಲ್ಲ. ಏಕೆಂದರೆ ಈ ಪ್ರಕರಣದಲ್ಲಿ ಶಿಕ್ಷೆ ಎರಡು ವರ್ಷಗಳ ಜೈಲಾಗಿದೆ. ಆದ್ದರಿಂದ ಅವರನ್ನು ಬಂಧಿಸದೇ ಇರಬಹುದು. ಅನೇಕ ಸಂದರ್ಭಗಳಲ್ಲಿ ನಾವು ಇದನ್ನು ನೋಡಿದ್ದೇವೆ” ಎಂದು ಸುಶೀಲಾ ಹೇಳಿದ್ದಾರೆ.

ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ, ಗೂಡು ಮಾಲೀಕ ಸ್ಥಳದಿಂದ ತಪ್ಪಿಸಿಕೊಂಡಿದ್ದಾರೆ. ಈ ವೇಳೆ ಅವರು ಕಾರ್ಮಿಕರ ಆಧಾರ್ ಕಾರ್ಡ್‌ಗಳನ್ನು ತಮ್ಮೊಂದಿಗೆ ತೆಗೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಪ್ರಕರಣವನ್ನು ಬಲಪಡಿಸಲು ಸ್ಪಂದನ ಸಂಸ್ಥೆ ಎಫ್‌ಐಆರ್‌ಗೆ ಮಾನವ ಕಳ್ಳಸಾಗಣೆ ಆರೋಪಗಳನ್ನು ಸೇರಿಸಲು ಒತ್ತಾಯಿಸಲು ಯೋಜಿಸುತ್ತಿದೆ ಎಂದು ಸುಶೀಲಾ ತಿಳಿಸಿದ್ದಾರೆ. ಪ್ರಸ್ತುತ, ಪೊಲೀಸರು ಬಾಲ ಕಾರ್ಮಿಕ ಪದ್ಧತಿ (ನಿರ್ಮೂಲನೆ) ಕಾಯ್ದೆ, 1976 ರ ಸೆಕ್ಷನ್ 16, 17 ಮತ್ತು 18 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಜಿಲ್ಲಾಡಳಿತವು ಎಲ್ಲಾ 34 ಕಾರ್ಮಿಕರಿಗೆ ಬಿಡುಗಡೆ ಪ್ರಮಾಣಪತ್ರಗಳನ್ನು ನೀಡಿದೆ ಮತ್ತು ಪ್ರತಿ ವ್ಯಕ್ತಿಗೆ 30,000 ರೂ.ಗಳ ತಕ್ಷಣದ ಪರಿಹಾರದ ವ್ಯವಸ್ಥೆ ಮಾಡಿದೆ. ಅಧಿಕಾರಿಗಳು ಮೊದಲು ಕಾರ್ಮಿಕರನ್ನು ಸರ್ಕಾರಿ ಹಾಸ್ಟೆಲ್‌ನಲ್ಲಿ ಇರಿಸಿದ್ದರು. ನಂತರ ಕಾರ್ಮಿಕ, ಕಂದಾಯ ಮತ್ತು ಪೊಲೀಸ್ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಮೂವರು ಸದಸ್ಯರ ತಂಡದ ಮೂಲಕ ಒಡಿಶಾದ ಅವರ ಹಳ್ಳಿಗಳಿಗೆ ಕಳುಹಿಸಿಕೊಟ್ಟಿದ್ದಾರೆ.

ಇದರೊಂದಿಗೆ, ಡಿಸೆಂಬರ್ 2025 ರಿಂದ ಬಾಗಲಕೋಟೆ ಜಿಲ್ಲೆಯಲ್ಲಿ ಮೂರು ಇಟ್ಟಿಗೆ ಗೂಡುಗಳು ಮತ್ತು ಒಂದು ಕಬ್ಬಿನ ತೋಟದಿಂದ ಒಟ್ಟು 99 ಜನರನ್ನು ಜೀತಪದ್ಧತಿಯಿಂದ ಅಧಿಕಾರಿಗಳು ಮುಕ್ತಗೊಳಿಸಿದಂತೆ ಆಗಿದೆ.

ಬಾಗಲಕೋಟೆಯಲ್ಲಿ ಇಂತಹ ಪ್ರಕರಣಗಳು ಮರುಕಳಿಸುವುದಕ್ಕೆ ಇಟ್ಟಿಗೆ ಗೂಡುಗಳು ಮತ್ತು ಕಬ್ಬು ಕಟಾವುಗಳಲ್ಲಿ ಕಾರ್ಮಿಕರ ಬೇಡಿಕೆಯೇ ಕಾರಣ ಎಂದು ಸುಶೀಲಾ ಹೇಳಿದ್ದಾರೆ. ಕಾನೂನು ಸರಿಯಾಗಿ ಅನುಷ್ಠಾನ ಆಗದಿರುವುದನ್ನು ಅವರು ಎತ್ತಿ ತೋರಿಸಿದ್ದಾರೆ.

Courtesy : thenewsminute.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಟಿಎಂಸಿ ಬೆಂಬಲ

ಮಾರ್ಚ್ 9 ರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾದಾಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಮಂಡಿಸಲಾಗುವ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲ ನೀಡಲಿದೆ ಎಂದು ಪಕ್ಷದ ನಾಯಕರು...

ಹೊಸ ರಾಜ್ಯಪಾಲ ರವಿ ಬಿಜೆಪಿ ಕೇಡರ್, ಆದರೆ ಬಂಗಾಳ ಟಫ್ ಟರ್ಫ್ : ಮಮತಾ ಬ್ಯಾನರ್ಜಿ

ನೂತನ ರಾಜ್ಯಪಾಲ ಆರ್.ಎನ್ ರವಿ ಅವರನ್ನು 'ಬಿಜೆಪಿ ಕೇಡರ್' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಲೇವಡಿ ಮಾಡಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸಚಿವಾಲಯ 'ನಬನ್ನಾ' ಮತ್ತು ರಾಜ್ಯಪಾಲರ ನಿವಾಸ...

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು...

ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ 'ದೇಶದ್ರೋಹಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕೇರಳದ ಕಣ್ಣೂರಿನ ಶ್ರೀಕಂಡಪುರಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಶನಿವಾರ (ಮಾ.7) ವರದಿ...

ಕೋಲ್ಕತ್ತಾ| ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮುಂದುವರೆಸಿದ ಮಮತಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಸತತ ಎರಡನೇ ದಿನವಾದ ಶನಿವಾರವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ, ಅವರು ಅಹೋರಾತ್ರಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ "ಬಂಗಾಳದ ಮತದಾರರ...

ಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ ಆಮ್ನೆಸ್ಟಿ

2025ರ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆದ ಹಿಂಸಾತ್ಮಕ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ನಾಲ್ವರು ಪ್ರಮುಖ ಹೋರಾಟಗಾರರನ್ನು ಇಂಡೋನೇಷ್ಯಾದ ಕೇಂದ್ರ ಜಕಾರ್ತಾ ಜಿಲ್ಲಾ ನ್ಯಾಯಾಲಯವು ಶುಕ್ರವಾರ (ಮಾ.6) ಖುಲಾಸೆಗೊಳಿಸಿದೆ. ದೇಶದಲ್ಲಿ ನಾಗರಿಕ ಸ್ವಾತಂತ್ರ್ಯಕ್ಕೆ...

‘ಆಕ್ರಮಣ ಮಾಡುವ ಉದ್ದೇಶವಿಲ್ಲ..’; ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷರು

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ನೆರೆಯ ರಾಷ್ಟ್ರಗಳಿಗೆ ಶನಿವಾರ ಕ್ಷಮೆಯಾಚಿಸಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ದಾಳಿಗಳಿಗೆ ಟೆಹ್ರಾನ್ ಇತರ ರಾಷ್ಟ್ರಗಳನ್ನು ಆಕ್ರಮಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಇರಾನ್ ಸಾರ್ವಜನಿಕರನ್ನು...

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...