Homeಕರ್ನಾಟಕಬಾಗಲಕೋಟೆ : ಇಳಕಲ್ ಬಳಿಯ ಇಟ್ಟಿಗೆ ಭಟ್ಟಿಯಿಂದ 34 ಜೀತದಾಳುಗಳ ರಕ್ಷಣೆ

ಬಾಗಲಕೋಟೆ : ಇಳಕಲ್ ಬಳಿಯ ಇಟ್ಟಿಗೆ ಭಟ್ಟಿಯಿಂದ 34 ಜೀತದಾಳುಗಳ ರಕ್ಷಣೆ

- Advertisement -
- Advertisement -

ಬಾಗಲಕೋಟೆ ಜಿಲ್ಲೆ ಇಳಕಲ್ ತಾಲೂಕಿನ ಸಂಕ್ಲಾಪೂರ ಗ್ರಾಮದ ಇಟ್ಟಿಗೆ ಗೂಡುಗಳಲ್ಲಿ ಜೀತಕ್ಕಿದ್ದ ಐವರು ಮಕ್ಕಳು ಸೇರಿದಂತೆ 34 ಮಂದಿ ಒಡಿಶಾ ಮೂಲದ ಕಾರ್ಮಿಕರನ್ನು ಮಂಗಳವಾರ (ಫೆ.10,2026) ರಕ್ಷಿಸಲಾಗಿದೆ.

ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ಗ್ರಾಮದಲ್ಲಿ ಕಾರ್ಮಿಕರನ್ನು ಜೀತಕ್ಕಿಡಲಾಗಿದೆ ಎಂಬ ಮಾಹಿತಿ ಪಡೆದ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಪೊಲೀಸರು ಮತ್ತು ಸರ್ಕಾರೇತರ ಸಂಸ್ಥೆ (ಎನ್‌ಜಿಒ) ಸ್ಪಂದನ ಅಸೋಸಿಯೇಷನ್‌ನ ಸದಸ್ಯರನ್ನು ಒಳಗೊಂಡ ತಂಡವು ಜಂಟಿ ಕಾರ್ಯಾಚರಣೆ ನಡೆಸಿ ಅವರನ್ನು ರಕ್ಷಣೆ ಮಾಡಿದೆ.

ರಕ್ಷಿಸಲ್ಪಟ್ಟ 34 ಜನರು ಒಂಬತ್ತು ಕುಟುಂಬಗಳಿಗೆ ಸೇರಿದವರು. ಒಡಿಶಾದ ಮಧ್ಯವರ್ತಿಯೊಬ್ಬರು ಪ್ರತಿ ಕುಟುಂಬಕ್ಕೆ 20,000 ರಿಂದ 30,000 ರೂ. ಮುಂಗಡ ಹಣದ ಭರವಸೆ ನೀಡುವ ಮೂಲಕ ಅವರನ್ನು ಕೆಲಸಕ್ಕೆ ಕರೆದುಕೊಂಡು ಬಂದಿದ್ದರು. ಮೊದಲು ಆಂಧ್ರ ಪ್ರದೇಶದ ವಿಜಯವಾಡದಲ್ಲಿ ಕೆಲಸ ಕೊಡಿಸುವುದಾಗಿ ಹೇಳಲಾಗಿತ್ತು. ಅಲ್ಲಿಗೆ ಬಸ್‌ ಮೂಲಕ ಕರೆದೊಯ್ಯಲಾಗಿತ್ತು. ವಿಜಯವಾಡದಿಂದ ರೈಲಿನ ಮೂಲಕ ಬಾಗಲಕೋಟೆಗೆ ಕರೆ ತರಲಾಗಿತ್ತು. ಈ ವಿಚಾರ ಕಾರ್ಮಿಕರಿಗೆ ಗೊತ್ತೇ ಇರಲಿಲ್ಲ. ಬಾಗಲಕೋಟೆಯಲ್ಲಿ ಕೆಲಸ ಪ್ರಾರಂಭಿಸಿ ಎರಡು ವಾರಗಳ ಬಳಿಕವಷ್ಟೇ ಸ್ಥಳೀಯರ ಮೂಲಕ ತಾವು ಕರ್ನಾಟಕದಲ್ಲಿದ್ದೇವೆ ಎಂಬ ವಿಷಯ ಕಾರ್ಮಿಕರಿಗೆ ಗೊತ್ತಾಗಿದೆ ಎಂದು ಸ್ಪಂದನ ಅಸೋಸಿಯೇಷನ್‌ನ ನಿರ್ದೇಶಕಿ ಸುಶೀಲಾ ಹೇಳಿರುವುದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಕಾರ್ಮಿಕರು ಒಮ್ಮೆ ಕೆಲಸಕ್ಕೆ ಹೋದರೆ 16 ಗಂಟೆಗೂ ಅಧಿಕ ಸಮಯ ಕೆಲಸ ಮಾಡುತ್ತಿದ್ದರು. ಬೆಳಿಗ್ಗೆ 5 ಗಂಟೆಗೆ ಕೆಲಸ ಪ್ರಾರಂಭಿಸಿದರೆ, ರಾತ್ರಿ 9-10 ಗಂಟೆಯವರೆಗೆ ಕನಿಷ್ಠ ವಿರಾಮಗಳೊಂದಿಗೆ ದುಡಿಯುತ್ತಿದ್ದರು. ಕೆಲಸಕ್ಕೆ ಕರೆದುಕೊಂಡು ಬಂದ ಮಧ್ಯವರ್ತಿ 20,000 ರಿಂದ 30,000 ರೂ.ಗಳವರೆಗೆ ಹಣ ಭರವಸೆ ನೀಡಿದ್ದ, ಆದರೆ ಕುಟುಂಬಗಳಿಗೆ ಒಟ್ಟು 8,000 ರೂ.ಗಳು ಮಾತ್ರ ಸಿಕ್ಕಿತ್ತು. ಪ್ರತಿ ಕುಟುಂಬವು ವಾರಕ್ಕೆ ಸುಮಾರು 800 ರೂ.ಗಳನ್ನು ಗಳಿಸುತ್ತಿತ್ತು, ಅದರಿಂದ ಅವರು ದಿನಸಿ ಸಾಮಗ್ರಿಗಳನ್ನು ಖರೀದಿಸುತ್ತಿದ್ದರು. ಇಟ್ಟಿಗ ಗೂಡು ಮಾಲೀಕ ಪ್ರತಿ ಕುಟುಂಬದಿಂದ ಒಬ್ಬ ಸದಸ್ಯರಿಗೆ ವಾರಕ್ಕೊಮ್ಮೆ ಮಾರುಕಟ್ಟೆಗೆ ಭೇಟಿ ನೀಡಲು ಮಾತ್ರ ಅವಕಾಶ ನೀಡುತ್ತಿದ್ದರು. ಶೋಷಣೆಗೆ ಒಳಗಾದಾಗ ಕಾರ್ಮಿಕರು ಅವರಿಗೆ ಭರವಸೆ ನೀಡಿದ್ದ ವೇತನವನ್ನು ಎಂದಿಗೂ ಪಡೆದಿರಲಿಲ್ಲ ಎಂಬುವುದಾಗಿ ಸುಶೀಲಾ ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಕಾರ್ಮಿಕರು ನೀರು ಅಥವಾ ನೈರ್ಮಲ್ಯ ಸೌಲಭ್ಯಗಳಿಲ್ಲದೆ ಸಣ್ಣ ಇಟ್ಟಿಗೆ ಗುಡಿಸಲುಗಳಲ್ಲಿ ಅಥವಾ ತಾತ್ಕಾಲಿಕ ಟಾರ್ಪಲ್ ಶೆಡ್‌ಗಳಲ್ಲಿ ವಾಸಿಸುತ್ತಿದ್ದರು. ಅವರು ಕಟ್ಟಿಗೆ ಬಳಸಿ ಅಡುಗೆ ಮಾಡುತ್ತಿದ್ದರು. ಅವರು ಹೊರಗೆ ಹೋದಾಗಲೆಲ್ಲಾ ಗೂಡು ಮಾಲೀಕರು ಅವರನ್ನು ಗಮನಿಸುತ್ತಿದ್ದರು. ಗೂಡು ಮಾಲೀಕ ಮತ್ತು ಅವರ ಇಬ್ಬರು ಪುತ್ರರು ಕಾರ್ಮಿಕರ ಮೇಲೆ ದೈಹಿಕ ದೌರ್ಜನ್ಯ ಎಸಗುತ್ತಿದ್ದರು. ಮೌಖಿಕವಾಗಿ ನಿಂದಿಸುತ್ತಿದ್ದರು. ಈ ಬಗ್ಗೆ ಪ್ರಶ್ನಿಸಿದರೆ ಕಾರ್ಮಿಕರನ್ನು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಿದ್ದರು. 13 ರಿಂದ 16 ವರ್ಷದೊಳಗಿನ ಮಕ್ಕಳು ಕೂಡ ಗೂಡುಗಳಲ್ಲಿ ಕೆಲಸ ಮಾಡುತ್ತಿದ್ದರು. ಅವರಿಗೆ ಶಾಲೆಗೆ ಹೋಗಲು ಸಾಧ್ಯವಾಗುತ್ತಿರಲಿಲ್ಲ ಎಂದು ವರದಿ ವಿವರಿಸಿದೆ.

ಸಾಮಾಜಿಕ ಜಾಲತಾಣಗಳ ಮೂಲಕ ಈ ಬಗ್ಗೆ ಮಾಹಿತಿ ಪಡೆದ ಸ್ಪಂದನ ಅಸೋಸಿಯೇಷನ್, ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿತ್ತು. ಆದರೆ, ದೂರು ದಾಖಲಿಸುವಾಗ ನಮಗೆ ಅಡೆತಡೆಗಳು ಎದುರಾಯಿತು. ಎಫ್‌ಐಆರ್ ದಾಖಲಿಸಲೂ ಕೂಡ ತುಂಬಾ ಸಮಸ್ಯೆ ಆಯಿತು. ನಮ್ಮ ತಂಡದ ಸದಸ್ಯರು ಮತ್ತು ಕಾರ್ಮಿಕರ ರಕ್ಷಣೆಗಾಗಿ ನಾವು ಎಸ್ಪಿಗೆ ಕರೆ ಮಾಡಿದೆವು. ನಂತರ ಅವರು ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ರಾಜಕೀಯ ಸಂಪರ್ಕ ಹೊಂದಿರುವ ಕೆಲವು ವ್ಯಕ್ತಿಗಳು ಪೊಲೀಸ್ ಠಾಣೆಗೆ ಬಂದು ಕಾರ್ಯಾಚರಣೆ ಮುಂದುವರಿಸದಂತೆ ಒತ್ತಡ ಹೇರಿದ ಪ್ರಸಂಗವೂ ನಡೆದಿದೆ ಎಂದು ಸುಶೀಲಾ ಹೇಳಿರುವುದಾಗಿ ವರದಿ ತಿಳಿಸಿದೆ.

ಎಫ್‌ಐಆರ್ ದಾಖಲಿಸಿದ್ದರೂ, ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಮಧ್ಯವರ್ತಿ ಅಥವಾ ಮಾಲೀಕರನ್ನು ಬಂಧಿಸಲಾಗಿದೆಯೇ ಎಂದು ಕೇಳಿದಾಗ, ಸುಶೀಲಾ, “ನನ್ನ ಪ್ರಕಾರ ಕನಿಷ್ಠ ಮಾಲೀಕರನ್ನೂ ಬಂಧಿಸಿಲ್ಲ. ಏಕೆಂದರೆ ಈ ಪ್ರಕರಣದಲ್ಲಿ ಶಿಕ್ಷೆ ಎರಡು ವರ್ಷಗಳ ಜೈಲಾಗಿದೆ. ಆದ್ದರಿಂದ ಅವರನ್ನು ಬಂಧಿಸದೇ ಇರಬಹುದು. ಅನೇಕ ಸಂದರ್ಭಗಳಲ್ಲಿ ನಾವು ಇದನ್ನು ನೋಡಿದ್ದೇವೆ” ಎಂದು ಸುಶೀಲಾ ಹೇಳಿದ್ದಾರೆ.

ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ, ಗೂಡು ಮಾಲೀಕ ಸ್ಥಳದಿಂದ ತಪ್ಪಿಸಿಕೊಂಡಿದ್ದಾರೆ. ಈ ವೇಳೆ ಅವರು ಕಾರ್ಮಿಕರ ಆಧಾರ್ ಕಾರ್ಡ್‌ಗಳನ್ನು ತಮ್ಮೊಂದಿಗೆ ತೆಗೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಪ್ರಕರಣವನ್ನು ಬಲಪಡಿಸಲು ಸ್ಪಂದನ ಸಂಸ್ಥೆ ಎಫ್‌ಐಆರ್‌ಗೆ ಮಾನವ ಕಳ್ಳಸಾಗಣೆ ಆರೋಪಗಳನ್ನು ಸೇರಿಸಲು ಒತ್ತಾಯಿಸಲು ಯೋಜಿಸುತ್ತಿದೆ ಎಂದು ಸುಶೀಲಾ ತಿಳಿಸಿದ್ದಾರೆ. ಪ್ರಸ್ತುತ, ಪೊಲೀಸರು ಬಾಲ ಕಾರ್ಮಿಕ ಪದ್ಧತಿ (ನಿರ್ಮೂಲನೆ) ಕಾಯ್ದೆ, 1976 ರ ಸೆಕ್ಷನ್ 16, 17 ಮತ್ತು 18 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಜಿಲ್ಲಾಡಳಿತವು ಎಲ್ಲಾ 34 ಕಾರ್ಮಿಕರಿಗೆ ಬಿಡುಗಡೆ ಪ್ರಮಾಣಪತ್ರಗಳನ್ನು ನೀಡಿದೆ ಮತ್ತು ಪ್ರತಿ ವ್ಯಕ್ತಿಗೆ 30,000 ರೂ.ಗಳ ತಕ್ಷಣದ ಪರಿಹಾರದ ವ್ಯವಸ್ಥೆ ಮಾಡಿದೆ. ಅಧಿಕಾರಿಗಳು ಮೊದಲು ಕಾರ್ಮಿಕರನ್ನು ಸರ್ಕಾರಿ ಹಾಸ್ಟೆಲ್‌ನಲ್ಲಿ ಇರಿಸಿದ್ದರು. ನಂತರ ಕಾರ್ಮಿಕ, ಕಂದಾಯ ಮತ್ತು ಪೊಲೀಸ್ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಮೂವರು ಸದಸ್ಯರ ತಂಡದ ಮೂಲಕ ಒಡಿಶಾದ ಅವರ ಹಳ್ಳಿಗಳಿಗೆ ಕಳುಹಿಸಿಕೊಟ್ಟಿದ್ದಾರೆ.

ಇದರೊಂದಿಗೆ, ಡಿಸೆಂಬರ್ 2025 ರಿಂದ ಬಾಗಲಕೋಟೆ ಜಿಲ್ಲೆಯಲ್ಲಿ ಮೂರು ಇಟ್ಟಿಗೆ ಗೂಡುಗಳು ಮತ್ತು ಒಂದು ಕಬ್ಬಿನ ತೋಟದಿಂದ ಒಟ್ಟು 99 ಜನರನ್ನು ಜೀತಪದ್ಧತಿಯಿಂದ ಅಧಿಕಾರಿಗಳು ಮುಕ್ತಗೊಳಿಸಿದಂತೆ ಆಗಿದೆ.

ಬಾಗಲಕೋಟೆಯಲ್ಲಿ ಇಂತಹ ಪ್ರಕರಣಗಳು ಮರುಕಳಿಸುವುದಕ್ಕೆ ಇಟ್ಟಿಗೆ ಗೂಡುಗಳು ಮತ್ತು ಕಬ್ಬು ಕಟಾವುಗಳಲ್ಲಿ ಕಾರ್ಮಿಕರ ಬೇಡಿಕೆಯೇ ಕಾರಣ ಎಂದು ಸುಶೀಲಾ ಹೇಳಿದ್ದಾರೆ. ಕಾನೂನು ಸರಿಯಾಗಿ ಅನುಷ್ಠಾನ ಆಗದಿರುವುದನ್ನು ಅವರು ಎತ್ತಿ ತೋರಿಸಿದ್ದಾರೆ.

Courtesy : thenewsminute.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...