Homeಮುಖಪುಟಟ್ವೀಟ್‌ಗಳ ನಿರ್ಬಂಧಕ್ಕೆ 2022ರಲ್ಲಿ ಕೇಂದ್ರದಿಂದ 3,417 ಆದೇಶ: ಆರ್‌ಟಿಐ ವರದಿ

ಟ್ವೀಟ್‌ಗಳ ನಿರ್ಬಂಧಕ್ಕೆ 2022ರಲ್ಲಿ ಕೇಂದ್ರದಿಂದ 3,417 ಆದೇಶ: ಆರ್‌ಟಿಐ ವರದಿ

- Advertisement -
- Advertisement -

ಕೇಂದ್ರ ಸರ್ಕಾರವು 2022ರಲ್ಲಿ ಟ್ವಿಟರ್‌ ಲಿಂಕ್‌ಗಳನ್ನು ನಿರ್ಬಂಧಿಸಲು 3,417 ಆದೇಶಗಳನ್ನು ಹೊರಡಿಸಿದೆ. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗ ಕೇವಲ ಕೇವಲ ಎಂಟು ಬಾರಿ ಆದೇಶಿಸಲಾಗಿತ್ತು ಎಂದು ಆರ್‌ಟಿಐ (ಮಾಹಿತಿ ಹಕ್ಕು ಕಾಯ್ದೆ) ಮಾಹಿತಿ ಬಹಿರಂಗಪಡಿಸಿದೆ.

ಮಾಹಿತಿ ಪಡೆದ ಆರ್‌ಟಿಐ ಕಾರ್ಯಕರ್ತ ವೆಂಕಟೇಶ್ ನಾಯಕ್, “ಈ ಪ್ರವೃತ್ತಿಯು ಅಂತಹ ವೇದಿಕೆಗಳ ದುರುಪಯೋಗದ ಹೆಚ್ಚಳವನ್ನು ಸೂಚಿಸುತ್ತದೆ ಅಥವಾ ಕೇಂದ್ರ ಸರ್ಕಾರದ ಚಿಂತನೆಗೆ ಹೊಂದಿಕೆಯಾಗದ ಅಭಿಪ್ರಾಯಗಳ ಸಂಬಂಧ ಸರ್ಕಾರದ ಕ್ರಮವನ್ನು ಸೂಚಿಸುತ್ತದೆ ಅಥವಾ ಎರಡನ್ನೂ ಸೂಚಿಸುತ್ತದೆ” ಎಂದಿದ್ದಾರೆ.

‘ಐಟಿ ನಿಯಮಗಳು 2021’ರ ಅಡಿಯಲ್ಲಿ ಸಾಮಾಜಿಕ ಮತ್ತು ಡಿಜಿಟಲ್ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ವಿಷಯಗಳನ್ನು ನಿರ್ಬಂಧಿಸಲು ನಿರ್ದೇಶನಗಳನ್ನು ನೀಡುವ ‘ಅಂತರ ಇಲಾಖಾ ಸಮಿತಿಯ ನಡಾವಳಿ’ಗಳನ್ನು ಪ್ರಕಟಿಸಬೇಕೆಂಬ ವಿನಂತಿಯನ್ನು ಐಟಿ ಸಚಿವಾಲಯದ ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿ (ಸಿಪಿಐಒ) ಈ ಹಿಂದೆ ತಿರಸ್ಕರಿಸಿದ್ದರು.

ಪರಿಶೀಲನಾ ಸಮಿತಿಯ ನಡಾವಳಿಗಳು ‘ಗೌಪ್ಯತೆ’ಯನ್ನು ಹೊಂದಿವೆ ಎಂದಿದ್ದ ಸಿಪಿಐಒ, ಆರ್‌ಟಿಐ ಕಾಯಿದೆ ಅಡಿಯಲ್ಲಿ ಮಾಹಿತಿ ಬಹಿರಂಗಪಡಿಸಲು ಹಿಂದೇಟು ಹಾಕಿದ್ದರು. ಆದಾಗ್ಯೂ, 40 ದಿನಗಳ ವಿಳಂಬದ ನಂತರ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಸಿಪಿಐಒ ಕೆಲವು ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ್ದಾರೆ. ನಿರ್ಬಂಧಿಸುವ ವಿನಂತಿ/ದೂರುಗಳನ್ನು ಪರಿಶೀಲಿಸಲು ಸಮಿತಿಯನ್ನು ನಿಯಮ 7ರ ಅಡಿಯಲ್ಲಿ ರಚಿಸಲಾಗಿದೆ ಎಂದಿದ್ದಾರೆ.

ನಿರ್ಬಂಧಿಸುವ ಆದೇಶಗಳಲ್ಲಿ ಹೆಚ್ಚಳ

ನಿರ್ಬಂಧಕ್ಕೆ ಸಂಬಂಧಪಟ್ಟ 1,385 ಆದೇಶಗಳನ್ನು 2017ರಲ್ಲಿ ಟ್ವಿಟರ್, ಇತರ ಸಾಮಾಜಿಕ ಮತ್ತು ಡಿಜಿಟಲ್ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಗೆ ಸಚಿವಾಲಯ ನೀಡಿದೆ. ಈ ಆದೇಶಗಳು ಕೋವಿಡ್ ಬಿಕ್ಕಟ್ಟು ಆರಂಭವಾದ 2020ರಲ್ಲಿ 9,849ಕ್ಕೆ ಏರಿಕೆಯಾಗಿದೆ ಎಂದು ಆರ್‌ಟಿಐ ಮಾಹಿತಿ ಹೇಳಿದೆ.

ನಾಯಕ್ ಅವರು ಈ ವಿಷಯದ ಕುರಿತು ತಿಳಿಯಲು ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ, ಲೋಕಸಭೆ ಮತ್ತು ರಾಜ್ಯಸಭಾ ಕಾರ್ಯದರ್ಶಿಗಳಿಗೆ ಅನೇಕ ಆರ್‌ಟಿಐ ಅರ್ಜಿಗಳನ್ನು ಸಲ್ಲಿಸಿದ್ದರು.

“2021ರಲ್ಲಿ ಟ್ವಿಟರ್ ಲಿಂಕ್‌‌ಗಳನ್ನು ನಿರ್ಬಂಧಿಸಲು 2,851 ಪ್ರಕರಣಗಳಲ್ಲಿ ಆದೇಶಗಳನ್ನು ಮತ್ತು 1,122 ಪ್ರಕರಣಗಳಲ್ಲಿ ಜೂನ್ 2022 ರವರೆಗೆ ಆದೇಶಗಳನ್ನು ನೀಡಲಾಗಿದೆ. ರಾಜ್ಯಸಭೆಯಲ್ಲಿ 2022ರ ಜುಲೈನಲ್ಲಿ ಅಂಕಿ ಅಂಶಗಳನ್ನೂ ನೀಡಲಾಗಿತ್ತು” ಎಂದು ನಾಯಕ್ ಹೇಳಿದ್ದಾರೆ.

ಮಾರ್ಚ್ 25, 2022 ರಂದು ರಾಜ್ಯಸಭೆಯಲ್ಲಿ ಮಂಡಿಸಲಾದ ಮಾಹಿತಿಯ ಪ್ರಕಾರ, 2021ರಲ್ಲಿ ಒಟ್ಟು 6,096 ಯುಆರ್‌ಎಲ್‌ಗಳನ್ನು (ಟ್ವಿಟರ್ ಮತ್ತು ಇತರ) ನಿರ್ಬಂಧಿಸಲು ನಿರ್ದೇಶಿಸಲಾಗಿದೆ ಎಂದು ಸಚಿವಾಲಯ ಹೇಳಿದೆ.

ಇದನ್ನೂ ಓದಿರಿ: ಬಿಬಿಸಿ ಸಾಕ್ಷ್ಯಾಚಿತ್ರ: ಭಾಗ ಎರಡರಲ್ಲಿ ಪ್ರಧಾನಿ ಮೋದಿ ಕುರಿತು ಹೇಳಿರುವುದೇನು?

ನಿಯಮ 7ರ ಅಡಿಯಲ್ಲಿ ರಚಿಸಲಾದ ಸಮಿತಿಯು ಜನವರಿ 1, 2021 ಮತ್ತು ಡಿಸೆಂಬರ್ 31, 2022ರ ನಡುವೆ,  ಒಟ್ಟು 6,268 ಟ್ವಿಟರ್ ಲಿಂಕ್‌ಗಳನ್ನು ನಿರ್ಬಂಧಿಸುವ ಆದೇಶಗಳನ್ನು ನೀಡಿದೆ ಎಂದು ಆರ್‌ಟಿಐ ವರದಿ ತಿಳಿಸಿದೆ.

2021ರಲ್ಲಿ ಸಂಸತ್ತಿನಲ್ಲಿ ಮಂಡಿಸಲಾದ ಮಾಹಿತಿಯ ಪ್ರಕಾರ, 2,851 ಟ್ವಿಟರ್ ಲಿಂಕ್‌ಗಳನ್ನು ನಿರ್ಬಂಧಿಸಲು ನಿರ್ದೇಶಿಸಲಾಗಿದೆ ಎಂದು ನಾಯಕ್ ಹೇಳಿದ್ದಾರೆ. ಆದ್ದರಿಂದ 2022 ರಲ್ಲಿ, ನಿರ್ಬಂಧಿಸಲಾದ ಟ್ವಿಟರ್‌ ಲಿಂಕ್‌ಗಳ ಸಂಖ್ಯೆ 3,417 ಆಗಿರುತ್ತದೆ (ಅಂದರೆ, 6,268 ಮೈನಸ್ 2,851). ಇದು 2021ರ ಅಂಕಿಅಂಶಗಳಿಗಿಂತ 19.85% ಹೆಚ್ಚಳವಾಗಿದೆ.

2021ರಲ್ಲಿ ಒಟ್ಟು 6,096 ಲಿಂಕ್‌ಗಳನ್ನು ಮತ್ತು 2022ರಲ್ಲಿ 6,775 ಲಿಂಕ್‌ಗಳನ್ನು ನಿರ್ಬಂಧಿಸಲಾಗಿದೆ ಎಂದು ವರದಿ ಹೇಳಿದೆ. ನಾಯಕ್ ಅವರ ವಿಶ್ಲೇಷಣೆಯ ಪ್ರಕಾರ 2021ರಲ್ಲಿ, ಟ್ವಿಟರ್ ಹೊರತುಪಡಿಸಿ ಇತರ ವೇದಿಕೆಗಳಲ್ಲಿ 3,245 ಪ್ರಕರಣಗಳಲ್ಲಿ ನಿರ್ಬಂಧಿಸಲಾಗಿದೆ (ಅಂದರೆ, 6,096 ಮೈನಸ್ 2,851). 2022ರಲ್ಲಿ, ಈ ಅಂಕಿ ಅಂಶವು 3,358 ಆಗಿತ್ತು (ಅಂದರೆ, 6,775 ಮೈನಸ್ 3,417). 2021ರಿಂದ ನಿರ್ಬಂಧಿಸುವ ಆದೇಶಗಳ ಸಂಖ್ಯೆಯಲ್ಲಿ 3.48% ಹೆಚ್ಚಳವಾಗಿದೆ.

(ವರದಿ ಕೃಪೆ: ದಿ ವೈರ್‌)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...