Homeಮುಖಪುಟಟ್ವೀಟ್‌ಗಳ ನಿರ್ಬಂಧಕ್ಕೆ 2022ರಲ್ಲಿ ಕೇಂದ್ರದಿಂದ 3,417 ಆದೇಶ: ಆರ್‌ಟಿಐ ವರದಿ

ಟ್ವೀಟ್‌ಗಳ ನಿರ್ಬಂಧಕ್ಕೆ 2022ರಲ್ಲಿ ಕೇಂದ್ರದಿಂದ 3,417 ಆದೇಶ: ಆರ್‌ಟಿಐ ವರದಿ

- Advertisement -
- Advertisement -

ಕೇಂದ್ರ ಸರ್ಕಾರವು 2022ರಲ್ಲಿ ಟ್ವಿಟರ್‌ ಲಿಂಕ್‌ಗಳನ್ನು ನಿರ್ಬಂಧಿಸಲು 3,417 ಆದೇಶಗಳನ್ನು ಹೊರಡಿಸಿದೆ. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗ ಕೇವಲ ಕೇವಲ ಎಂಟು ಬಾರಿ ಆದೇಶಿಸಲಾಗಿತ್ತು ಎಂದು ಆರ್‌ಟಿಐ (ಮಾಹಿತಿ ಹಕ್ಕು ಕಾಯ್ದೆ) ಮಾಹಿತಿ ಬಹಿರಂಗಪಡಿಸಿದೆ.

ಮಾಹಿತಿ ಪಡೆದ ಆರ್‌ಟಿಐ ಕಾರ್ಯಕರ್ತ ವೆಂಕಟೇಶ್ ನಾಯಕ್, “ಈ ಪ್ರವೃತ್ತಿಯು ಅಂತಹ ವೇದಿಕೆಗಳ ದುರುಪಯೋಗದ ಹೆಚ್ಚಳವನ್ನು ಸೂಚಿಸುತ್ತದೆ ಅಥವಾ ಕೇಂದ್ರ ಸರ್ಕಾರದ ಚಿಂತನೆಗೆ ಹೊಂದಿಕೆಯಾಗದ ಅಭಿಪ್ರಾಯಗಳ ಸಂಬಂಧ ಸರ್ಕಾರದ ಕ್ರಮವನ್ನು ಸೂಚಿಸುತ್ತದೆ ಅಥವಾ ಎರಡನ್ನೂ ಸೂಚಿಸುತ್ತದೆ” ಎಂದಿದ್ದಾರೆ.

‘ಐಟಿ ನಿಯಮಗಳು 2021’ರ ಅಡಿಯಲ್ಲಿ ಸಾಮಾಜಿಕ ಮತ್ತು ಡಿಜಿಟಲ್ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ವಿಷಯಗಳನ್ನು ನಿರ್ಬಂಧಿಸಲು ನಿರ್ದೇಶನಗಳನ್ನು ನೀಡುವ ‘ಅಂತರ ಇಲಾಖಾ ಸಮಿತಿಯ ನಡಾವಳಿ’ಗಳನ್ನು ಪ್ರಕಟಿಸಬೇಕೆಂಬ ವಿನಂತಿಯನ್ನು ಐಟಿ ಸಚಿವಾಲಯದ ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿ (ಸಿಪಿಐಒ) ಈ ಹಿಂದೆ ತಿರಸ್ಕರಿಸಿದ್ದರು.

ಪರಿಶೀಲನಾ ಸಮಿತಿಯ ನಡಾವಳಿಗಳು ‘ಗೌಪ್ಯತೆ’ಯನ್ನು ಹೊಂದಿವೆ ಎಂದಿದ್ದ ಸಿಪಿಐಒ, ಆರ್‌ಟಿಐ ಕಾಯಿದೆ ಅಡಿಯಲ್ಲಿ ಮಾಹಿತಿ ಬಹಿರಂಗಪಡಿಸಲು ಹಿಂದೇಟು ಹಾಕಿದ್ದರು. ಆದಾಗ್ಯೂ, 40 ದಿನಗಳ ವಿಳಂಬದ ನಂತರ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಸಿಪಿಐಒ ಕೆಲವು ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ್ದಾರೆ. ನಿರ್ಬಂಧಿಸುವ ವಿನಂತಿ/ದೂರುಗಳನ್ನು ಪರಿಶೀಲಿಸಲು ಸಮಿತಿಯನ್ನು ನಿಯಮ 7ರ ಅಡಿಯಲ್ಲಿ ರಚಿಸಲಾಗಿದೆ ಎಂದಿದ್ದಾರೆ.

ನಿರ್ಬಂಧಿಸುವ ಆದೇಶಗಳಲ್ಲಿ ಹೆಚ್ಚಳ

ನಿರ್ಬಂಧಕ್ಕೆ ಸಂಬಂಧಪಟ್ಟ 1,385 ಆದೇಶಗಳನ್ನು 2017ರಲ್ಲಿ ಟ್ವಿಟರ್, ಇತರ ಸಾಮಾಜಿಕ ಮತ್ತು ಡಿಜಿಟಲ್ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಗೆ ಸಚಿವಾಲಯ ನೀಡಿದೆ. ಈ ಆದೇಶಗಳು ಕೋವಿಡ್ ಬಿಕ್ಕಟ್ಟು ಆರಂಭವಾದ 2020ರಲ್ಲಿ 9,849ಕ್ಕೆ ಏರಿಕೆಯಾಗಿದೆ ಎಂದು ಆರ್‌ಟಿಐ ಮಾಹಿತಿ ಹೇಳಿದೆ.

ನಾಯಕ್ ಅವರು ಈ ವಿಷಯದ ಕುರಿತು ತಿಳಿಯಲು ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ, ಲೋಕಸಭೆ ಮತ್ತು ರಾಜ್ಯಸಭಾ ಕಾರ್ಯದರ್ಶಿಗಳಿಗೆ ಅನೇಕ ಆರ್‌ಟಿಐ ಅರ್ಜಿಗಳನ್ನು ಸಲ್ಲಿಸಿದ್ದರು.

“2021ರಲ್ಲಿ ಟ್ವಿಟರ್ ಲಿಂಕ್‌‌ಗಳನ್ನು ನಿರ್ಬಂಧಿಸಲು 2,851 ಪ್ರಕರಣಗಳಲ್ಲಿ ಆದೇಶಗಳನ್ನು ಮತ್ತು 1,122 ಪ್ರಕರಣಗಳಲ್ಲಿ ಜೂನ್ 2022 ರವರೆಗೆ ಆದೇಶಗಳನ್ನು ನೀಡಲಾಗಿದೆ. ರಾಜ್ಯಸಭೆಯಲ್ಲಿ 2022ರ ಜುಲೈನಲ್ಲಿ ಅಂಕಿ ಅಂಶಗಳನ್ನೂ ನೀಡಲಾಗಿತ್ತು” ಎಂದು ನಾಯಕ್ ಹೇಳಿದ್ದಾರೆ.

ಮಾರ್ಚ್ 25, 2022 ರಂದು ರಾಜ್ಯಸಭೆಯಲ್ಲಿ ಮಂಡಿಸಲಾದ ಮಾಹಿತಿಯ ಪ್ರಕಾರ, 2021ರಲ್ಲಿ ಒಟ್ಟು 6,096 ಯುಆರ್‌ಎಲ್‌ಗಳನ್ನು (ಟ್ವಿಟರ್ ಮತ್ತು ಇತರ) ನಿರ್ಬಂಧಿಸಲು ನಿರ್ದೇಶಿಸಲಾಗಿದೆ ಎಂದು ಸಚಿವಾಲಯ ಹೇಳಿದೆ.

ಇದನ್ನೂ ಓದಿರಿ: ಬಿಬಿಸಿ ಸಾಕ್ಷ್ಯಾಚಿತ್ರ: ಭಾಗ ಎರಡರಲ್ಲಿ ಪ್ರಧಾನಿ ಮೋದಿ ಕುರಿತು ಹೇಳಿರುವುದೇನು?

ನಿಯಮ 7ರ ಅಡಿಯಲ್ಲಿ ರಚಿಸಲಾದ ಸಮಿತಿಯು ಜನವರಿ 1, 2021 ಮತ್ತು ಡಿಸೆಂಬರ್ 31, 2022ರ ನಡುವೆ,  ಒಟ್ಟು 6,268 ಟ್ವಿಟರ್ ಲಿಂಕ್‌ಗಳನ್ನು ನಿರ್ಬಂಧಿಸುವ ಆದೇಶಗಳನ್ನು ನೀಡಿದೆ ಎಂದು ಆರ್‌ಟಿಐ ವರದಿ ತಿಳಿಸಿದೆ.

2021ರಲ್ಲಿ ಸಂಸತ್ತಿನಲ್ಲಿ ಮಂಡಿಸಲಾದ ಮಾಹಿತಿಯ ಪ್ರಕಾರ, 2,851 ಟ್ವಿಟರ್ ಲಿಂಕ್‌ಗಳನ್ನು ನಿರ್ಬಂಧಿಸಲು ನಿರ್ದೇಶಿಸಲಾಗಿದೆ ಎಂದು ನಾಯಕ್ ಹೇಳಿದ್ದಾರೆ. ಆದ್ದರಿಂದ 2022 ರಲ್ಲಿ, ನಿರ್ಬಂಧಿಸಲಾದ ಟ್ವಿಟರ್‌ ಲಿಂಕ್‌ಗಳ ಸಂಖ್ಯೆ 3,417 ಆಗಿರುತ್ತದೆ (ಅಂದರೆ, 6,268 ಮೈನಸ್ 2,851). ಇದು 2021ರ ಅಂಕಿಅಂಶಗಳಿಗಿಂತ 19.85% ಹೆಚ್ಚಳವಾಗಿದೆ.

2021ರಲ್ಲಿ ಒಟ್ಟು 6,096 ಲಿಂಕ್‌ಗಳನ್ನು ಮತ್ತು 2022ರಲ್ಲಿ 6,775 ಲಿಂಕ್‌ಗಳನ್ನು ನಿರ್ಬಂಧಿಸಲಾಗಿದೆ ಎಂದು ವರದಿ ಹೇಳಿದೆ. ನಾಯಕ್ ಅವರ ವಿಶ್ಲೇಷಣೆಯ ಪ್ರಕಾರ 2021ರಲ್ಲಿ, ಟ್ವಿಟರ್ ಹೊರತುಪಡಿಸಿ ಇತರ ವೇದಿಕೆಗಳಲ್ಲಿ 3,245 ಪ್ರಕರಣಗಳಲ್ಲಿ ನಿರ್ಬಂಧಿಸಲಾಗಿದೆ (ಅಂದರೆ, 6,096 ಮೈನಸ್ 2,851). 2022ರಲ್ಲಿ, ಈ ಅಂಕಿ ಅಂಶವು 3,358 ಆಗಿತ್ತು (ಅಂದರೆ, 6,775 ಮೈನಸ್ 3,417). 2021ರಿಂದ ನಿರ್ಬಂಧಿಸುವ ಆದೇಶಗಳ ಸಂಖ್ಯೆಯಲ್ಲಿ 3.48% ಹೆಚ್ಚಳವಾಗಿದೆ.

(ವರದಿ ಕೃಪೆ: ದಿ ವೈರ್‌)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...