Homeಮುಖಪುಟಟ್ವೀಟ್‌ಗಳ ನಿರ್ಬಂಧಕ್ಕೆ 2022ರಲ್ಲಿ ಕೇಂದ್ರದಿಂದ 3,417 ಆದೇಶ: ಆರ್‌ಟಿಐ ವರದಿ

ಟ್ವೀಟ್‌ಗಳ ನಿರ್ಬಂಧಕ್ಕೆ 2022ರಲ್ಲಿ ಕೇಂದ್ರದಿಂದ 3,417 ಆದೇಶ: ಆರ್‌ಟಿಐ ವರದಿ

- Advertisement -
- Advertisement -

ಕೇಂದ್ರ ಸರ್ಕಾರವು 2022ರಲ್ಲಿ ಟ್ವಿಟರ್‌ ಲಿಂಕ್‌ಗಳನ್ನು ನಿರ್ಬಂಧಿಸಲು 3,417 ಆದೇಶಗಳನ್ನು ಹೊರಡಿಸಿದೆ. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗ ಕೇವಲ ಕೇವಲ ಎಂಟು ಬಾರಿ ಆದೇಶಿಸಲಾಗಿತ್ತು ಎಂದು ಆರ್‌ಟಿಐ (ಮಾಹಿತಿ ಹಕ್ಕು ಕಾಯ್ದೆ) ಮಾಹಿತಿ ಬಹಿರಂಗಪಡಿಸಿದೆ.

ಮಾಹಿತಿ ಪಡೆದ ಆರ್‌ಟಿಐ ಕಾರ್ಯಕರ್ತ ವೆಂಕಟೇಶ್ ನಾಯಕ್, “ಈ ಪ್ರವೃತ್ತಿಯು ಅಂತಹ ವೇದಿಕೆಗಳ ದುರುಪಯೋಗದ ಹೆಚ್ಚಳವನ್ನು ಸೂಚಿಸುತ್ತದೆ ಅಥವಾ ಕೇಂದ್ರ ಸರ್ಕಾರದ ಚಿಂತನೆಗೆ ಹೊಂದಿಕೆಯಾಗದ ಅಭಿಪ್ರಾಯಗಳ ಸಂಬಂಧ ಸರ್ಕಾರದ ಕ್ರಮವನ್ನು ಸೂಚಿಸುತ್ತದೆ ಅಥವಾ ಎರಡನ್ನೂ ಸೂಚಿಸುತ್ತದೆ” ಎಂದಿದ್ದಾರೆ.

‘ಐಟಿ ನಿಯಮಗಳು 2021’ರ ಅಡಿಯಲ್ಲಿ ಸಾಮಾಜಿಕ ಮತ್ತು ಡಿಜಿಟಲ್ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ವಿಷಯಗಳನ್ನು ನಿರ್ಬಂಧಿಸಲು ನಿರ್ದೇಶನಗಳನ್ನು ನೀಡುವ ‘ಅಂತರ ಇಲಾಖಾ ಸಮಿತಿಯ ನಡಾವಳಿ’ಗಳನ್ನು ಪ್ರಕಟಿಸಬೇಕೆಂಬ ವಿನಂತಿಯನ್ನು ಐಟಿ ಸಚಿವಾಲಯದ ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿ (ಸಿಪಿಐಒ) ಈ ಹಿಂದೆ ತಿರಸ್ಕರಿಸಿದ್ದರು.

ಪರಿಶೀಲನಾ ಸಮಿತಿಯ ನಡಾವಳಿಗಳು ‘ಗೌಪ್ಯತೆ’ಯನ್ನು ಹೊಂದಿವೆ ಎಂದಿದ್ದ ಸಿಪಿಐಒ, ಆರ್‌ಟಿಐ ಕಾಯಿದೆ ಅಡಿಯಲ್ಲಿ ಮಾಹಿತಿ ಬಹಿರಂಗಪಡಿಸಲು ಹಿಂದೇಟು ಹಾಕಿದ್ದರು. ಆದಾಗ್ಯೂ, 40 ದಿನಗಳ ವಿಳಂಬದ ನಂತರ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಸಿಪಿಐಒ ಕೆಲವು ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ್ದಾರೆ. ನಿರ್ಬಂಧಿಸುವ ವಿನಂತಿ/ದೂರುಗಳನ್ನು ಪರಿಶೀಲಿಸಲು ಸಮಿತಿಯನ್ನು ನಿಯಮ 7ರ ಅಡಿಯಲ್ಲಿ ರಚಿಸಲಾಗಿದೆ ಎಂದಿದ್ದಾರೆ.

ನಿರ್ಬಂಧಿಸುವ ಆದೇಶಗಳಲ್ಲಿ ಹೆಚ್ಚಳ

ನಿರ್ಬಂಧಕ್ಕೆ ಸಂಬಂಧಪಟ್ಟ 1,385 ಆದೇಶಗಳನ್ನು 2017ರಲ್ಲಿ ಟ್ವಿಟರ್, ಇತರ ಸಾಮಾಜಿಕ ಮತ್ತು ಡಿಜಿಟಲ್ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಗೆ ಸಚಿವಾಲಯ ನೀಡಿದೆ. ಈ ಆದೇಶಗಳು ಕೋವಿಡ್ ಬಿಕ್ಕಟ್ಟು ಆರಂಭವಾದ 2020ರಲ್ಲಿ 9,849ಕ್ಕೆ ಏರಿಕೆಯಾಗಿದೆ ಎಂದು ಆರ್‌ಟಿಐ ಮಾಹಿತಿ ಹೇಳಿದೆ.

ನಾಯಕ್ ಅವರು ಈ ವಿಷಯದ ಕುರಿತು ತಿಳಿಯಲು ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ, ಲೋಕಸಭೆ ಮತ್ತು ರಾಜ್ಯಸಭಾ ಕಾರ್ಯದರ್ಶಿಗಳಿಗೆ ಅನೇಕ ಆರ್‌ಟಿಐ ಅರ್ಜಿಗಳನ್ನು ಸಲ್ಲಿಸಿದ್ದರು.

“2021ರಲ್ಲಿ ಟ್ವಿಟರ್ ಲಿಂಕ್‌‌ಗಳನ್ನು ನಿರ್ಬಂಧಿಸಲು 2,851 ಪ್ರಕರಣಗಳಲ್ಲಿ ಆದೇಶಗಳನ್ನು ಮತ್ತು 1,122 ಪ್ರಕರಣಗಳಲ್ಲಿ ಜೂನ್ 2022 ರವರೆಗೆ ಆದೇಶಗಳನ್ನು ನೀಡಲಾಗಿದೆ. ರಾಜ್ಯಸಭೆಯಲ್ಲಿ 2022ರ ಜುಲೈನಲ್ಲಿ ಅಂಕಿ ಅಂಶಗಳನ್ನೂ ನೀಡಲಾಗಿತ್ತು” ಎಂದು ನಾಯಕ್ ಹೇಳಿದ್ದಾರೆ.

ಮಾರ್ಚ್ 25, 2022 ರಂದು ರಾಜ್ಯಸಭೆಯಲ್ಲಿ ಮಂಡಿಸಲಾದ ಮಾಹಿತಿಯ ಪ್ರಕಾರ, 2021ರಲ್ಲಿ ಒಟ್ಟು 6,096 ಯುಆರ್‌ಎಲ್‌ಗಳನ್ನು (ಟ್ವಿಟರ್ ಮತ್ತು ಇತರ) ನಿರ್ಬಂಧಿಸಲು ನಿರ್ದೇಶಿಸಲಾಗಿದೆ ಎಂದು ಸಚಿವಾಲಯ ಹೇಳಿದೆ.

ಇದನ್ನೂ ಓದಿರಿ: ಬಿಬಿಸಿ ಸಾಕ್ಷ್ಯಾಚಿತ್ರ: ಭಾಗ ಎರಡರಲ್ಲಿ ಪ್ರಧಾನಿ ಮೋದಿ ಕುರಿತು ಹೇಳಿರುವುದೇನು?

ನಿಯಮ 7ರ ಅಡಿಯಲ್ಲಿ ರಚಿಸಲಾದ ಸಮಿತಿಯು ಜನವರಿ 1, 2021 ಮತ್ತು ಡಿಸೆಂಬರ್ 31, 2022ರ ನಡುವೆ,  ಒಟ್ಟು 6,268 ಟ್ವಿಟರ್ ಲಿಂಕ್‌ಗಳನ್ನು ನಿರ್ಬಂಧಿಸುವ ಆದೇಶಗಳನ್ನು ನೀಡಿದೆ ಎಂದು ಆರ್‌ಟಿಐ ವರದಿ ತಿಳಿಸಿದೆ.

2021ರಲ್ಲಿ ಸಂಸತ್ತಿನಲ್ಲಿ ಮಂಡಿಸಲಾದ ಮಾಹಿತಿಯ ಪ್ರಕಾರ, 2,851 ಟ್ವಿಟರ್ ಲಿಂಕ್‌ಗಳನ್ನು ನಿರ್ಬಂಧಿಸಲು ನಿರ್ದೇಶಿಸಲಾಗಿದೆ ಎಂದು ನಾಯಕ್ ಹೇಳಿದ್ದಾರೆ. ಆದ್ದರಿಂದ 2022 ರಲ್ಲಿ, ನಿರ್ಬಂಧಿಸಲಾದ ಟ್ವಿಟರ್‌ ಲಿಂಕ್‌ಗಳ ಸಂಖ್ಯೆ 3,417 ಆಗಿರುತ್ತದೆ (ಅಂದರೆ, 6,268 ಮೈನಸ್ 2,851). ಇದು 2021ರ ಅಂಕಿಅಂಶಗಳಿಗಿಂತ 19.85% ಹೆಚ್ಚಳವಾಗಿದೆ.

2021ರಲ್ಲಿ ಒಟ್ಟು 6,096 ಲಿಂಕ್‌ಗಳನ್ನು ಮತ್ತು 2022ರಲ್ಲಿ 6,775 ಲಿಂಕ್‌ಗಳನ್ನು ನಿರ್ಬಂಧಿಸಲಾಗಿದೆ ಎಂದು ವರದಿ ಹೇಳಿದೆ. ನಾಯಕ್ ಅವರ ವಿಶ್ಲೇಷಣೆಯ ಪ್ರಕಾರ 2021ರಲ್ಲಿ, ಟ್ವಿಟರ್ ಹೊರತುಪಡಿಸಿ ಇತರ ವೇದಿಕೆಗಳಲ್ಲಿ 3,245 ಪ್ರಕರಣಗಳಲ್ಲಿ ನಿರ್ಬಂಧಿಸಲಾಗಿದೆ (ಅಂದರೆ, 6,096 ಮೈನಸ್ 2,851). 2022ರಲ್ಲಿ, ಈ ಅಂಕಿ ಅಂಶವು 3,358 ಆಗಿತ್ತು (ಅಂದರೆ, 6,775 ಮೈನಸ್ 3,417). 2021ರಿಂದ ನಿರ್ಬಂಧಿಸುವ ಆದೇಶಗಳ ಸಂಖ್ಯೆಯಲ್ಲಿ 3.48% ಹೆಚ್ಚಳವಾಗಿದೆ.

(ವರದಿ ಕೃಪೆ: ದಿ ವೈರ್‌)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...