Homeಮುಖಪುಟಟ್ವೀಟ್‌ಗಳ ನಿರ್ಬಂಧಕ್ಕೆ 2022ರಲ್ಲಿ ಕೇಂದ್ರದಿಂದ 3,417 ಆದೇಶ: ಆರ್‌ಟಿಐ ವರದಿ

ಟ್ವೀಟ್‌ಗಳ ನಿರ್ಬಂಧಕ್ಕೆ 2022ರಲ್ಲಿ ಕೇಂದ್ರದಿಂದ 3,417 ಆದೇಶ: ಆರ್‌ಟಿಐ ವರದಿ

- Advertisement -
- Advertisement -

ಕೇಂದ್ರ ಸರ್ಕಾರವು 2022ರಲ್ಲಿ ಟ್ವಿಟರ್‌ ಲಿಂಕ್‌ಗಳನ್ನು ನಿರ್ಬಂಧಿಸಲು 3,417 ಆದೇಶಗಳನ್ನು ಹೊರಡಿಸಿದೆ. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗ ಕೇವಲ ಕೇವಲ ಎಂಟು ಬಾರಿ ಆದೇಶಿಸಲಾಗಿತ್ತು ಎಂದು ಆರ್‌ಟಿಐ (ಮಾಹಿತಿ ಹಕ್ಕು ಕಾಯ್ದೆ) ಮಾಹಿತಿ ಬಹಿರಂಗಪಡಿಸಿದೆ.

ಮಾಹಿತಿ ಪಡೆದ ಆರ್‌ಟಿಐ ಕಾರ್ಯಕರ್ತ ವೆಂಕಟೇಶ್ ನಾಯಕ್, “ಈ ಪ್ರವೃತ್ತಿಯು ಅಂತಹ ವೇದಿಕೆಗಳ ದುರುಪಯೋಗದ ಹೆಚ್ಚಳವನ್ನು ಸೂಚಿಸುತ್ತದೆ ಅಥವಾ ಕೇಂದ್ರ ಸರ್ಕಾರದ ಚಿಂತನೆಗೆ ಹೊಂದಿಕೆಯಾಗದ ಅಭಿಪ್ರಾಯಗಳ ಸಂಬಂಧ ಸರ್ಕಾರದ ಕ್ರಮವನ್ನು ಸೂಚಿಸುತ್ತದೆ ಅಥವಾ ಎರಡನ್ನೂ ಸೂಚಿಸುತ್ತದೆ” ಎಂದಿದ್ದಾರೆ.

‘ಐಟಿ ನಿಯಮಗಳು 2021’ರ ಅಡಿಯಲ್ಲಿ ಸಾಮಾಜಿಕ ಮತ್ತು ಡಿಜಿಟಲ್ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ವಿಷಯಗಳನ್ನು ನಿರ್ಬಂಧಿಸಲು ನಿರ್ದೇಶನಗಳನ್ನು ನೀಡುವ ‘ಅಂತರ ಇಲಾಖಾ ಸಮಿತಿಯ ನಡಾವಳಿ’ಗಳನ್ನು ಪ್ರಕಟಿಸಬೇಕೆಂಬ ವಿನಂತಿಯನ್ನು ಐಟಿ ಸಚಿವಾಲಯದ ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿ (ಸಿಪಿಐಒ) ಈ ಹಿಂದೆ ತಿರಸ್ಕರಿಸಿದ್ದರು.

ಪರಿಶೀಲನಾ ಸಮಿತಿಯ ನಡಾವಳಿಗಳು ‘ಗೌಪ್ಯತೆ’ಯನ್ನು ಹೊಂದಿವೆ ಎಂದಿದ್ದ ಸಿಪಿಐಒ, ಆರ್‌ಟಿಐ ಕಾಯಿದೆ ಅಡಿಯಲ್ಲಿ ಮಾಹಿತಿ ಬಹಿರಂಗಪಡಿಸಲು ಹಿಂದೇಟು ಹಾಕಿದ್ದರು. ಆದಾಗ್ಯೂ, 40 ದಿನಗಳ ವಿಳಂಬದ ನಂತರ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಸಿಪಿಐಒ ಕೆಲವು ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ್ದಾರೆ. ನಿರ್ಬಂಧಿಸುವ ವಿನಂತಿ/ದೂರುಗಳನ್ನು ಪರಿಶೀಲಿಸಲು ಸಮಿತಿಯನ್ನು ನಿಯಮ 7ರ ಅಡಿಯಲ್ಲಿ ರಚಿಸಲಾಗಿದೆ ಎಂದಿದ್ದಾರೆ.

ನಿರ್ಬಂಧಿಸುವ ಆದೇಶಗಳಲ್ಲಿ ಹೆಚ್ಚಳ

ನಿರ್ಬಂಧಕ್ಕೆ ಸಂಬಂಧಪಟ್ಟ 1,385 ಆದೇಶಗಳನ್ನು 2017ರಲ್ಲಿ ಟ್ವಿಟರ್, ಇತರ ಸಾಮಾಜಿಕ ಮತ್ತು ಡಿಜಿಟಲ್ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಗೆ ಸಚಿವಾಲಯ ನೀಡಿದೆ. ಈ ಆದೇಶಗಳು ಕೋವಿಡ್ ಬಿಕ್ಕಟ್ಟು ಆರಂಭವಾದ 2020ರಲ್ಲಿ 9,849ಕ್ಕೆ ಏರಿಕೆಯಾಗಿದೆ ಎಂದು ಆರ್‌ಟಿಐ ಮಾಹಿತಿ ಹೇಳಿದೆ.

ನಾಯಕ್ ಅವರು ಈ ವಿಷಯದ ಕುರಿತು ತಿಳಿಯಲು ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ, ಲೋಕಸಭೆ ಮತ್ತು ರಾಜ್ಯಸಭಾ ಕಾರ್ಯದರ್ಶಿಗಳಿಗೆ ಅನೇಕ ಆರ್‌ಟಿಐ ಅರ್ಜಿಗಳನ್ನು ಸಲ್ಲಿಸಿದ್ದರು.

“2021ರಲ್ಲಿ ಟ್ವಿಟರ್ ಲಿಂಕ್‌‌ಗಳನ್ನು ನಿರ್ಬಂಧಿಸಲು 2,851 ಪ್ರಕರಣಗಳಲ್ಲಿ ಆದೇಶಗಳನ್ನು ಮತ್ತು 1,122 ಪ್ರಕರಣಗಳಲ್ಲಿ ಜೂನ್ 2022 ರವರೆಗೆ ಆದೇಶಗಳನ್ನು ನೀಡಲಾಗಿದೆ. ರಾಜ್ಯಸಭೆಯಲ್ಲಿ 2022ರ ಜುಲೈನಲ್ಲಿ ಅಂಕಿ ಅಂಶಗಳನ್ನೂ ನೀಡಲಾಗಿತ್ತು” ಎಂದು ನಾಯಕ್ ಹೇಳಿದ್ದಾರೆ.

ಮಾರ್ಚ್ 25, 2022 ರಂದು ರಾಜ್ಯಸಭೆಯಲ್ಲಿ ಮಂಡಿಸಲಾದ ಮಾಹಿತಿಯ ಪ್ರಕಾರ, 2021ರಲ್ಲಿ ಒಟ್ಟು 6,096 ಯುಆರ್‌ಎಲ್‌ಗಳನ್ನು (ಟ್ವಿಟರ್ ಮತ್ತು ಇತರ) ನಿರ್ಬಂಧಿಸಲು ನಿರ್ದೇಶಿಸಲಾಗಿದೆ ಎಂದು ಸಚಿವಾಲಯ ಹೇಳಿದೆ.

ಇದನ್ನೂ ಓದಿರಿ: ಬಿಬಿಸಿ ಸಾಕ್ಷ್ಯಾಚಿತ್ರ: ಭಾಗ ಎರಡರಲ್ಲಿ ಪ್ರಧಾನಿ ಮೋದಿ ಕುರಿತು ಹೇಳಿರುವುದೇನು?

ನಿಯಮ 7ರ ಅಡಿಯಲ್ಲಿ ರಚಿಸಲಾದ ಸಮಿತಿಯು ಜನವರಿ 1, 2021 ಮತ್ತು ಡಿಸೆಂಬರ್ 31, 2022ರ ನಡುವೆ,  ಒಟ್ಟು 6,268 ಟ್ವಿಟರ್ ಲಿಂಕ್‌ಗಳನ್ನು ನಿರ್ಬಂಧಿಸುವ ಆದೇಶಗಳನ್ನು ನೀಡಿದೆ ಎಂದು ಆರ್‌ಟಿಐ ವರದಿ ತಿಳಿಸಿದೆ.

2021ರಲ್ಲಿ ಸಂಸತ್ತಿನಲ್ಲಿ ಮಂಡಿಸಲಾದ ಮಾಹಿತಿಯ ಪ್ರಕಾರ, 2,851 ಟ್ವಿಟರ್ ಲಿಂಕ್‌ಗಳನ್ನು ನಿರ್ಬಂಧಿಸಲು ನಿರ್ದೇಶಿಸಲಾಗಿದೆ ಎಂದು ನಾಯಕ್ ಹೇಳಿದ್ದಾರೆ. ಆದ್ದರಿಂದ 2022 ರಲ್ಲಿ, ನಿರ್ಬಂಧಿಸಲಾದ ಟ್ವಿಟರ್‌ ಲಿಂಕ್‌ಗಳ ಸಂಖ್ಯೆ 3,417 ಆಗಿರುತ್ತದೆ (ಅಂದರೆ, 6,268 ಮೈನಸ್ 2,851). ಇದು 2021ರ ಅಂಕಿಅಂಶಗಳಿಗಿಂತ 19.85% ಹೆಚ್ಚಳವಾಗಿದೆ.

2021ರಲ್ಲಿ ಒಟ್ಟು 6,096 ಲಿಂಕ್‌ಗಳನ್ನು ಮತ್ತು 2022ರಲ್ಲಿ 6,775 ಲಿಂಕ್‌ಗಳನ್ನು ನಿರ್ಬಂಧಿಸಲಾಗಿದೆ ಎಂದು ವರದಿ ಹೇಳಿದೆ. ನಾಯಕ್ ಅವರ ವಿಶ್ಲೇಷಣೆಯ ಪ್ರಕಾರ 2021ರಲ್ಲಿ, ಟ್ವಿಟರ್ ಹೊರತುಪಡಿಸಿ ಇತರ ವೇದಿಕೆಗಳಲ್ಲಿ 3,245 ಪ್ರಕರಣಗಳಲ್ಲಿ ನಿರ್ಬಂಧಿಸಲಾಗಿದೆ (ಅಂದರೆ, 6,096 ಮೈನಸ್ 2,851). 2022ರಲ್ಲಿ, ಈ ಅಂಕಿ ಅಂಶವು 3,358 ಆಗಿತ್ತು (ಅಂದರೆ, 6,775 ಮೈನಸ್ 3,417). 2021ರಿಂದ ನಿರ್ಬಂಧಿಸುವ ಆದೇಶಗಳ ಸಂಖ್ಯೆಯಲ್ಲಿ 3.48% ಹೆಚ್ಚಳವಾಗಿದೆ.

(ವರದಿ ಕೃಪೆ: ದಿ ವೈರ್‌)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...