Homeಮುಖಪುಟಟ್ವೀಟ್‌ಗಳ ನಿರ್ಬಂಧಕ್ಕೆ 2022ರಲ್ಲಿ ಕೇಂದ್ರದಿಂದ 3,417 ಆದೇಶ: ಆರ್‌ಟಿಐ ವರದಿ

ಟ್ವೀಟ್‌ಗಳ ನಿರ್ಬಂಧಕ್ಕೆ 2022ರಲ್ಲಿ ಕೇಂದ್ರದಿಂದ 3,417 ಆದೇಶ: ಆರ್‌ಟಿಐ ವರದಿ

- Advertisement -
- Advertisement -

ಕೇಂದ್ರ ಸರ್ಕಾರವು 2022ರಲ್ಲಿ ಟ್ವಿಟರ್‌ ಲಿಂಕ್‌ಗಳನ್ನು ನಿರ್ಬಂಧಿಸಲು 3,417 ಆದೇಶಗಳನ್ನು ಹೊರಡಿಸಿದೆ. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗ ಕೇವಲ ಕೇವಲ ಎಂಟು ಬಾರಿ ಆದೇಶಿಸಲಾಗಿತ್ತು ಎಂದು ಆರ್‌ಟಿಐ (ಮಾಹಿತಿ ಹಕ್ಕು ಕಾಯ್ದೆ) ಮಾಹಿತಿ ಬಹಿರಂಗಪಡಿಸಿದೆ.

ಮಾಹಿತಿ ಪಡೆದ ಆರ್‌ಟಿಐ ಕಾರ್ಯಕರ್ತ ವೆಂಕಟೇಶ್ ನಾಯಕ್, “ಈ ಪ್ರವೃತ್ತಿಯು ಅಂತಹ ವೇದಿಕೆಗಳ ದುರುಪಯೋಗದ ಹೆಚ್ಚಳವನ್ನು ಸೂಚಿಸುತ್ತದೆ ಅಥವಾ ಕೇಂದ್ರ ಸರ್ಕಾರದ ಚಿಂತನೆಗೆ ಹೊಂದಿಕೆಯಾಗದ ಅಭಿಪ್ರಾಯಗಳ ಸಂಬಂಧ ಸರ್ಕಾರದ ಕ್ರಮವನ್ನು ಸೂಚಿಸುತ್ತದೆ ಅಥವಾ ಎರಡನ್ನೂ ಸೂಚಿಸುತ್ತದೆ” ಎಂದಿದ್ದಾರೆ.

‘ಐಟಿ ನಿಯಮಗಳು 2021’ರ ಅಡಿಯಲ್ಲಿ ಸಾಮಾಜಿಕ ಮತ್ತು ಡಿಜಿಟಲ್ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ವಿಷಯಗಳನ್ನು ನಿರ್ಬಂಧಿಸಲು ನಿರ್ದೇಶನಗಳನ್ನು ನೀಡುವ ‘ಅಂತರ ಇಲಾಖಾ ಸಮಿತಿಯ ನಡಾವಳಿ’ಗಳನ್ನು ಪ್ರಕಟಿಸಬೇಕೆಂಬ ವಿನಂತಿಯನ್ನು ಐಟಿ ಸಚಿವಾಲಯದ ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿ (ಸಿಪಿಐಒ) ಈ ಹಿಂದೆ ತಿರಸ್ಕರಿಸಿದ್ದರು.

ಪರಿಶೀಲನಾ ಸಮಿತಿಯ ನಡಾವಳಿಗಳು ‘ಗೌಪ್ಯತೆ’ಯನ್ನು ಹೊಂದಿವೆ ಎಂದಿದ್ದ ಸಿಪಿಐಒ, ಆರ್‌ಟಿಐ ಕಾಯಿದೆ ಅಡಿಯಲ್ಲಿ ಮಾಹಿತಿ ಬಹಿರಂಗಪಡಿಸಲು ಹಿಂದೇಟು ಹಾಕಿದ್ದರು. ಆದಾಗ್ಯೂ, 40 ದಿನಗಳ ವಿಳಂಬದ ನಂತರ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಸಿಪಿಐಒ ಕೆಲವು ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ್ದಾರೆ. ನಿರ್ಬಂಧಿಸುವ ವಿನಂತಿ/ದೂರುಗಳನ್ನು ಪರಿಶೀಲಿಸಲು ಸಮಿತಿಯನ್ನು ನಿಯಮ 7ರ ಅಡಿಯಲ್ಲಿ ರಚಿಸಲಾಗಿದೆ ಎಂದಿದ್ದಾರೆ.

ನಿರ್ಬಂಧಿಸುವ ಆದೇಶಗಳಲ್ಲಿ ಹೆಚ್ಚಳ

ನಿರ್ಬಂಧಕ್ಕೆ ಸಂಬಂಧಪಟ್ಟ 1,385 ಆದೇಶಗಳನ್ನು 2017ರಲ್ಲಿ ಟ್ವಿಟರ್, ಇತರ ಸಾಮಾಜಿಕ ಮತ್ತು ಡಿಜಿಟಲ್ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಗೆ ಸಚಿವಾಲಯ ನೀಡಿದೆ. ಈ ಆದೇಶಗಳು ಕೋವಿಡ್ ಬಿಕ್ಕಟ್ಟು ಆರಂಭವಾದ 2020ರಲ್ಲಿ 9,849ಕ್ಕೆ ಏರಿಕೆಯಾಗಿದೆ ಎಂದು ಆರ್‌ಟಿಐ ಮಾಹಿತಿ ಹೇಳಿದೆ.

ನಾಯಕ್ ಅವರು ಈ ವಿಷಯದ ಕುರಿತು ತಿಳಿಯಲು ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ, ಲೋಕಸಭೆ ಮತ್ತು ರಾಜ್ಯಸಭಾ ಕಾರ್ಯದರ್ಶಿಗಳಿಗೆ ಅನೇಕ ಆರ್‌ಟಿಐ ಅರ್ಜಿಗಳನ್ನು ಸಲ್ಲಿಸಿದ್ದರು.

“2021ರಲ್ಲಿ ಟ್ವಿಟರ್ ಲಿಂಕ್‌‌ಗಳನ್ನು ನಿರ್ಬಂಧಿಸಲು 2,851 ಪ್ರಕರಣಗಳಲ್ಲಿ ಆದೇಶಗಳನ್ನು ಮತ್ತು 1,122 ಪ್ರಕರಣಗಳಲ್ಲಿ ಜೂನ್ 2022 ರವರೆಗೆ ಆದೇಶಗಳನ್ನು ನೀಡಲಾಗಿದೆ. ರಾಜ್ಯಸಭೆಯಲ್ಲಿ 2022ರ ಜುಲೈನಲ್ಲಿ ಅಂಕಿ ಅಂಶಗಳನ್ನೂ ನೀಡಲಾಗಿತ್ತು” ಎಂದು ನಾಯಕ್ ಹೇಳಿದ್ದಾರೆ.

ಮಾರ್ಚ್ 25, 2022 ರಂದು ರಾಜ್ಯಸಭೆಯಲ್ಲಿ ಮಂಡಿಸಲಾದ ಮಾಹಿತಿಯ ಪ್ರಕಾರ, 2021ರಲ್ಲಿ ಒಟ್ಟು 6,096 ಯುಆರ್‌ಎಲ್‌ಗಳನ್ನು (ಟ್ವಿಟರ್ ಮತ್ತು ಇತರ) ನಿರ್ಬಂಧಿಸಲು ನಿರ್ದೇಶಿಸಲಾಗಿದೆ ಎಂದು ಸಚಿವಾಲಯ ಹೇಳಿದೆ.

ಇದನ್ನೂ ಓದಿರಿ: ಬಿಬಿಸಿ ಸಾಕ್ಷ್ಯಾಚಿತ್ರ: ಭಾಗ ಎರಡರಲ್ಲಿ ಪ್ರಧಾನಿ ಮೋದಿ ಕುರಿತು ಹೇಳಿರುವುದೇನು?

ನಿಯಮ 7ರ ಅಡಿಯಲ್ಲಿ ರಚಿಸಲಾದ ಸಮಿತಿಯು ಜನವರಿ 1, 2021 ಮತ್ತು ಡಿಸೆಂಬರ್ 31, 2022ರ ನಡುವೆ,  ಒಟ್ಟು 6,268 ಟ್ವಿಟರ್ ಲಿಂಕ್‌ಗಳನ್ನು ನಿರ್ಬಂಧಿಸುವ ಆದೇಶಗಳನ್ನು ನೀಡಿದೆ ಎಂದು ಆರ್‌ಟಿಐ ವರದಿ ತಿಳಿಸಿದೆ.

2021ರಲ್ಲಿ ಸಂಸತ್ತಿನಲ್ಲಿ ಮಂಡಿಸಲಾದ ಮಾಹಿತಿಯ ಪ್ರಕಾರ, 2,851 ಟ್ವಿಟರ್ ಲಿಂಕ್‌ಗಳನ್ನು ನಿರ್ಬಂಧಿಸಲು ನಿರ್ದೇಶಿಸಲಾಗಿದೆ ಎಂದು ನಾಯಕ್ ಹೇಳಿದ್ದಾರೆ. ಆದ್ದರಿಂದ 2022 ರಲ್ಲಿ, ನಿರ್ಬಂಧಿಸಲಾದ ಟ್ವಿಟರ್‌ ಲಿಂಕ್‌ಗಳ ಸಂಖ್ಯೆ 3,417 ಆಗಿರುತ್ತದೆ (ಅಂದರೆ, 6,268 ಮೈನಸ್ 2,851). ಇದು 2021ರ ಅಂಕಿಅಂಶಗಳಿಗಿಂತ 19.85% ಹೆಚ್ಚಳವಾಗಿದೆ.

2021ರಲ್ಲಿ ಒಟ್ಟು 6,096 ಲಿಂಕ್‌ಗಳನ್ನು ಮತ್ತು 2022ರಲ್ಲಿ 6,775 ಲಿಂಕ್‌ಗಳನ್ನು ನಿರ್ಬಂಧಿಸಲಾಗಿದೆ ಎಂದು ವರದಿ ಹೇಳಿದೆ. ನಾಯಕ್ ಅವರ ವಿಶ್ಲೇಷಣೆಯ ಪ್ರಕಾರ 2021ರಲ್ಲಿ, ಟ್ವಿಟರ್ ಹೊರತುಪಡಿಸಿ ಇತರ ವೇದಿಕೆಗಳಲ್ಲಿ 3,245 ಪ್ರಕರಣಗಳಲ್ಲಿ ನಿರ್ಬಂಧಿಸಲಾಗಿದೆ (ಅಂದರೆ, 6,096 ಮೈನಸ್ 2,851). 2022ರಲ್ಲಿ, ಈ ಅಂಕಿ ಅಂಶವು 3,358 ಆಗಿತ್ತು (ಅಂದರೆ, 6,775 ಮೈನಸ್ 3,417). 2021ರಿಂದ ನಿರ್ಬಂಧಿಸುವ ಆದೇಶಗಳ ಸಂಖ್ಯೆಯಲ್ಲಿ 3.48% ಹೆಚ್ಚಳವಾಗಿದೆ.

(ವರದಿ ಕೃಪೆ: ದಿ ವೈರ್‌)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...