Homeಕ್ರೀಡೆಕ್ರಿಕೆಟ್34ನೇ ಜನ್ಮದಿನ: ಮಾಗಿದ, ಸೌಹಾರ್ದತೆ ಪರ ವಾಲಿದ ವಿರಾಟ್ ಕೊಹ್ಲಿ

34ನೇ ಜನ್ಮದಿನ: ಮಾಗಿದ, ಸೌಹಾರ್ದತೆ ಪರ ವಾಲಿದ ವಿರಾಟ್ ಕೊಹ್ಲಿ

'ನಾವು ಶಮಿ ಅವರ ಬೆಂಬಲಕ್ಕೆ 200 ಪರ್ಸೆಂಟ್ ನಿಲ್ಲುತ್ತೇವೆ. ತಂಡದಲ್ಲಿನ ನಮ್ಮ ಸಹೋದರತ್ವವನ್ನು ಅಲುಗಾಡಿಸಲು ಸಾಧ್ಯವಿಲ್ಲ' ಎಂದು ಕೊಹ್ಲಿ ಘೋಷಿಸಿದ್ದರು.

- Advertisement -
- Advertisement -

ಇಂದು ಭಾರತ ಕ್ರಿಕೆಟ್ ತಂಡದ ನೆಚ್ಚಿನ ಆಟಗಾರ ವಿರಾಟ್ ಕೊಹ್ಲಿಯವರ 34 ನೇ ಜನ್ಮದಿನ. ಸದ್ಯ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅತ್ಯಧಿಕ ರನ್ (4 ಪಂದ್ಯಗಳಿಂದ 220 ರನ್, 3 ಅರ್ಧಶತಕ) ಗಳಿಸಿರುವ ಅವರು ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಅದರಿಂದಾಗಿಯೇ ಭಾರತ ತಂಡ ಪಾಕಿಸ್ತಾನ ಎದುರು ಮಾತ್ರವಲ್ಲದೆ ನೆದರ್ಲೆಂಡ್ಸ್ ಮತ್ತು ಬಾಂಗ್ಲಾದೇಶದ ಎದುರು ಕೂಡ ಗೆದ್ದು ಸೆಮಿಫೈನಲ್ ಕಡೆ ಮುಖ ಮಾಡಿದೆ. ಅಭಿಮಾನಿಗಳಿಂದ ಕಿಂಗ್ ಕೊಹ್ಲಿ ಎಂದು ಪ್ರೀತಿಯಿಂದ ಕರೆಸಿಕೊಳ್ಳುವ ವಿರಾಟ್ ತಮ್ಮ ಕ್ರಿಕೆಟ್ ಜೀವನದಲ್ಲಿ ಹತ್ತು ಹಲವು ದಾಖಲೆಗಳನ್ನು ಸೃಷ್ಟಿಸಿರುವ ಅವರು ಅನೇಕ ಏಳು-ಬೀಳುಗಳನ್ನು ಸಹ ಕಂಡಿದ್ದಾರೆ.

ಆರಂಭಿಕ ವರ್ಷಗಳಲ್ಲಿ ತುಂಬಾ ಆಕ್ರಮಣಕಾರಿ ವ್ಯಕ್ತಿತ್ವ ಮೈಗೂಡಿಸಿಕೊಂಡಿದ್ದ ಕೊಹ್ಲಿ ಈಗ ಮಾಗಿದ್ದಾರೆ. ಕ್ರೀಡೆಯ ನಿಜವಾದ ಉದ್ದೇಶವಾದ ಸೌಹಾರ್ದತೆ ಮತ್ತು ಬೆಸುಗೆ ಸಾಧಿಸುವ ನಿಟ್ಟಿನಲ್ಲಿ ಅವರು ಹೆಜ್ಜೆಯಿಟ್ಟಿರುವುದು ಸಕರಾತ್ಮಕವಾಗಿದೆ. ಭಾರತದಲ್ಲಿ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಕ್ರೀಡೆಯಾದ ಕ್ರಿಕೆಟ್ ದೇಶ-ದೇಶಗಳ ನಡುವೆ ಬೆಸುಗೆಗೆ-ಬಾಂಧವ್ಯಕ್ಕೆ ಬಳಕೆಯಾಗಬೇಕಿತ್ತು. ಆದರೆ ದುರಾದೃಷ್ಟವವೆಂಬಂತೆ ದ್ವೇ‍ಷಕ್ಕೆ ಬಳಕೆಯಾಗುವ ಸಾಧನವಾಗಿ ಬಿಟ್ಟಿತ್ತು. ಭಾರತ-ಪಾಕಿಸ್ತಾನ ನಡುವಿನ ಪಂದ್ಯವನ್ನು ಎರಡೂ ದೇಶದ ಮಾಧ್ಯಮಗಳು ಯುದ್ದ-ಕದನವೆಂಬಂತೆ ಬಿಂಬಿಸುತ್ತಿದ್ದವು. ಮೈದಾನದಲ್ಲಿ ಕೆಲ ಆಟಗಾರರು ಸಹ ಅದಕ್ಕೆ ಪುಷ್ಟಿ ಕೊಡುವಂತೆ ವರ್ತಿಸುತ್ತಿದ್ದರು. ಆದರೆ ವಿರಾಟ್ ಕೊಹ್ಲಿ ಅದಕ್ಕೆ ತಿಲಾಂಜಲಿ ಇಡುವತ್ತ ಮುಖ ಮಾಡಿರುವುದು ಆಶಾದಾಯಕವಾಗಿ ಗೋಚರಿಸುತ್ತಿದೆ.

2021ರ ಟಿ20 ವಿಶ್ವಕಪ್‌ನ ಭಾರತ-ಪಾಕಿಸ್ತಾನದ ಎದುರಿನ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಪಾಕಿಸ್ತಾನ ತಂಡ 10 ವಿಕೆಟ್‌ಗಳ ಗೆಲುವು ಸಾಧಿಸಿತು. ಆ ಮೂಲಕ ಮೊದಲ ಬಾರಿಗೆ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ತಂಡವನ್ನು ಮಣಿಸಿದ ಸಾಧನೆಗೈದಿತು. ಪಾಕಿಸ್ತಾನದ ನಾಯಕ ಬಾಬರ್ ಅಜಂ ಮತ್ತು ಮೊಹಮ್ಮದ್ ರಿಜ್ವಾನ್ ವಿರಾಟ್ ಕೊಹ್ಲಿಯ ದೊಡ್ಡ ಅಭಿಮಾನಿಗಳು. ಅವರಿಬ್ಬರೂ ಅದ್ಭುತ ಬ್ಯಾಟಿಂಗ್‌ ಪ್ರದರ್ಶನದಿಂದ ಕೊಹ್ಲಿ ನಾಯಕತ್ವದ ಎದುರೆ ಜಯ ಪಡೆದಿದ್ದರು. ಆ ಸಂದರ್ಭದಲ್ಲಿ ಅದೇ ಕೊಹ್ಲಿ ಅವರಿಬ್ಬರನ್ನು ಅಪ್ಪಿ ಅಭಿನಂದಿಸಿದರು. ಅವರ ಬೆನ್ನು ತಟ್ಟಿ ಮಾತನಾಡಿದರು. ಇದರಿಂದ ಅವರಿಬ್ಬರೂ ಎಷ್ಟು ಖುಷಿಗೊಂಡಿರಬೇಕು ಅಲ್ಲವೇ? ಆ ಸಂದರ್ಭದ ಸುಂದರ ಚಿತ್ರಗಳನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಟ್ವಿಟರ್‌ನಲ್ಲಿ ಪ್ರಕಟಿಸಿ “Spirit of Cricket” ಎಂದು ಬರೆದು ಸಂಭ್ರಮಿಸಿತ್ತು!

ಸೋತದ್ದು ಒಂದು ಪಂದ್ಯ ಮಾತ್ರ. ಆದರೆ ಗೆದ್ದದ್ದು ಸಹಸ್ರಾರು ಹೃದಯಗಳು. ವೆಲ್ ಡನ್ ವಿರಾಟ್ ಕೊಹ್ಲಿ ಎಂದು ಹಲವಾರು ಅಭಿಮಾನಿಗಳು ಅಂದು ಉದ್ಘಾರ ತೆಗೆದಿದ್ದರು.

ಆದರೆ ಕೆಲವು ಮತಾಂಧರು ಆ ಪಂದ್ಯ ಸೋಲಲು ಮೊಹಮ್ಮದ್ ಶಮಿ ಕಾರಣ ಎಂದು ತಗಾದೆ ತೆಗೆದು ಅವರನ್ನು ನಿಂದಿಸಿದ್ದರು. ಇನ್ಸ್ಟಾಗ್ರಾಮ್ ನಲ್ಲಿ ಮೊಹಮ್ಮದ್ ಶಮಿಯನ್ನು ಟ್ರೋಲ್ ಮಾಡಿ ನಿಂದಿಸಿದ್ದರು. ಅದಕ್ಕೆ ಶಮಿ ಮುಸ್ಲಿಂ ಧರ್ಮಿಯರಾಗಿದ್ದೇ ಏಕೈಕ ಕಾರಣವಾಗಿತ್ತು. ಆ ಸಂದರ್ಭದಲ್ಲಿ ತಂಡದ ನಾಯಕರಾಗಿದ್ದ ಕೊಹ್ಲಿ ಬೆಷರತ್ ಆಗಿ ಶಮಿ ಪರ ನಿಂತರು. ಎಲ್ಲರಿಗೂ ತಮ್ಮ ಅಭಿಪ್ರಾಯ ಹೇಳುವ ಹಕ್ಕಿದೆ. ಆದರೆ ಕೆಲವರು ಧರ್ಮದ ಆಧಾರದಲ್ಲಿ ತಾರತಮ್ಯ ಮಾಡುವುದನ್ನು ನಾನು ಎಂದಿಗೂ ಊಹಿಸಿರಲಿಲ್ಲ” ಎಂದು ಕೊಹ್ಲಿ ಬೇಸರ ವ್ಯಕ್ತಪಡಿಸಿದ್ದರು. ಅಲ್ಲದೆ ‘ನಾವು ಶಮಿ ಅವರ ಬೆಂಬಲಕ್ಕೆ 200 ಪರ್ಸೆಂಟ್ ನಿಲ್ಲುತ್ತೇವೆ. ತಂಡದಲ್ಲಿನ ನಮ್ಮ ಸಹೋದರತ್ವವನ್ನು ಅಲುಗಾಡಿಸಲು ಸಾಧ್ಯವಿಲ್ಲ’ ಎಂದು ಕೊಹ್ಲಿ ಘೋಷಿಸಿದ್ದರು.

ನಾವು ಒಳ್ಳೆಯ ಉದ್ದೇಶಕ್ಕಾಗಿ ಮೈದಾನದಲ್ಲಿ ಆಡುತ್ತಿದ್ದೇವೆಯೇ ಹೊರತು ಸಾಮಾಜಿಕ ಮಾಧ್ಯಮಗಳಲ್ಲಿನ ಬೆನ್ನುಮೂಳೆಯಿಲ್ಲದ ಜನರ ಗುಂಪಿನಂತಲ್ಲ. ಅವರಿಗೆ ಕೇವಲ ಒಬ್ಬ ವ್ಯಕ್ತಿಯನ್ನು ಸಹ ನೇರವಾಗಿ ಎದುರಿಸಲು ಸಾಧ್ಯವಿಲ್ಲ. ಅವರು ತಮ್ಮ ಗುರುತನ್ನು ಮರೆಮಾಚಿ ಸಾಮಾಜಿಕ ಮಾಧ್ಯಮಗಳಲ್ಲಿ ಗೇಲಿ ಮಾಡುತ್ತಾರೆ. ಇದು ಕೆಲವರಿಗೆ ಮನರಂಜನೆಯ ಮೂಲವಾಗಿರುವುದು ದುರದೃಷ್ಟಕರ ಮತ್ತು ದುಃಖದ ವಿಷಯವಾಗಿದೆ. ಇದು ಅಕ್ಷರಶಃ ಒಬ್ಬ ಮನುಷ್ಯ ಅತಿ ಕೆಳಮಟ್ಟದ ಕೃತ್ಯವಾಗಿದೆ. ಜನರು ತಮ್ಮ ಹತಾಶೆಯನ್ನು ಹೊರಹಾಕುತ್ತಾರೆ. ಏಕೆಂದರೆ ಮೊಹಮ್ಮದ್ ಶಮಿ ಭಾರತದ ಹಲವು ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ ಎಂಬ ತಿಳುವಳಿಕೆ ಅವರಿಗಿಲ್ಲ. ಶಮಿಯವರ ಪ್ರಾಮಾಣಿಕತೆ, ದೇಶದ ಬಗೆಗಿನ ಬದ್ಧತೆಯನ್ನು ಅರ್ಥಮಾಡಿಕೊಳ್ಳದ ಜನರೊಂದಿಗೆ ಒಂದು ನಿಮಿಷವನ್ನು ಸಹ ವ್ಯರ್ಥಮಾಡಲು ನಾನು ಬಯಸುವುದಿಲ್ಲ ಎಂದು ಕೊಹ್ಲಿ ಹೇಳಿದ್ದರು.

ಇದನ್ನೂ ಓದಿ: ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆ

ಕೊಹ್ಲಿ ಶಮಿ ಪರ ನಿಂತಿದ್ದಕ್ಕೆ ಕೆಲ ವಿಕೃತರು ಅವರ ಪುಟ್ಟ ಮಗಳ ಮೇಲೂ ಅತ್ಯಾಚಾರದ ಬೆದರಿಕೆಯಾಕಿದ್ದರು. ಆದರೂ ಕೊಹಲ್ಲಿ ಬಗ್ಗಲಿಲ್ಲ. ಬದಲಿಗೆ ಭಾರತದ ಬೌಲರ್ ಅರ್ಶದೀಪ್ ಸಿಂಗ್ ವಿರುದ್ಧ ಟ್ರೋಲಿಗರು ದಾಳಿ ನಡೆಸಿದಾಗ ಕೊಹ್ಲಿ ಅವರ ಪರ ನಿಂತರು. ಏಷ್ಯಾಕಪ್ ಕ್ರಿಕೆಟ್‌ನ ಸೂಪರ್ 4 ಹಂತದ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡವವಿನ ಪಂದ್ಯದಲ್ಲಿ ಪಾಕ್ ಆಟಗಾರ ಆಸಿಫ್ ಅಲಿ ನೀಡಿದ ಕ್ಯಾಚ್ ಅನ್ನು ಅರ್ಶದೀಪ್ ಸಿಂಗ್ ಕೈ ಚೆಲ್ಲಿದರು. ಅಷ್ಟಕ್ಕೆ ಕೆಲ ಮತಾಂಧರು ಅವರನ್ನು ಖಾಲಿಸ್ತಾನಿ ಭಯೋತ್ಪಾದಕ, ಪಾಕಿಸ್ತಾನಕ್ಕೆ ಹೋಗು ಎಂದೆಲ್ಲ ನಿಂದಿಸಿದ್ದರು.

ಆಗ ಮಾತನಾಡಿದ ವಿರಾಟ್ ಕೊಹ್ಲಿ, “ಎಲ್ಲರೂ ತಪ್ಪು ಮಾಡುತ್ತಾರೆ. ತುಂಬಾ ಒತ್ತಡ ಸನ್ನಿವೇ‍ಷವಿದ್ದಾಗ ತಪ್ಪುಗಳಾಗುವುದು ಸಹಜ. ನನಗಿನ್ನೂ ನೆನಪಿದೆ, ನನ್ನ ಮೊದಲ ಪಂದ್ಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನದ ಎದುರಾಗಿತ್ತು. ಆದರೆ ಅಂದು ಶಾಹಿದ್ ಅಫ್ರಿದಿ ಎದುರು ನಾನು ಕೆಟ್ಟ ಹೊಡೆತ ಹೊಡೆದು ಔಟ್ ಆದೆ. ಅಂದು ರಾತ್ರಿ ನಾನು ನಿದ್ರೆ ಮಾಡಲಿಲ್ಲ ಮತ್ತು ನನ್ನ ಕ್ರಿಕೆಟ್ ಜೀವನ ಮುಗಿಯಿತು ಎಂದುಕೊಂಡೆ. ಆದರೆ ಹಾಗಾಗಲಿಲ್ಲ. ಭಾರತ ತಂಡದಲ್ಲಿ ಹಿರಿಯ ಆಟಗಾರರಿದ್ದಾರೆ. ಒಳ್ಳೆಯ ತಂಡಸ್ಪೂರ್ತಿಯಿದೆ. ಉತ್ತಮ ನಾಯಕ ಮತ್ತು ಕೋಚ್ ಇದ್ದಾರೆ. ಆಟಗಾರರು ತಮ್ಮ ತಪ್ಪುಗಳಿಂದ ಪಾಠ ಕಲಿಯುತ್ತಾರೆ. ತಪ್ಪನ್ನು ಒಪ್ಪಿಕೊಂಡು ಯಾಕಾಯಿತು ಎಂದು ವಿಶ್ಲೇಷಿಸಿ ಮತ್ತೆ ಅಂಥದ್ದೆ ಒತ್ತಡದ ಸಂದರ್ಭಗಳನ್ನು ನಿಭಾಯಿಸುತ್ತಾರೆ” ಎನ್ನುವ ಮೂಲಕ ಅರ್ಶದೀಪ್‌ರನ್ನು ಬೆಂಬಲಿಸಿದ್ದರು.

ಈ ವರ್ಷದ ಟಿ20 ಕ್ರಿಕೆಟ್‌ನಲ್ಲಿಯೂ ಸಹ ಕೊಹ್ಲಿ ಮಿಂಚುತ್ತಿದ್ದಾರೆ. ಎಲ್ಲಾ ದೇಶದ ಆಟಗಾರರ ಜೊತೆಗೆ ಪ್ರೀತಿಯಿಂದ ಬೆರೆಯುತ್ತಿದ್ದಾರೆ. ಮಾನವೀಯತೆ ಪರ ತುಡಿಯುತ್ತಿದ್ದಾರೆ. ಹಾಗಂತ ಕೊಹ್ಲಿ ಟೀಕೆಗೆ ಹೊರತಾದವರಲ್ಲ. ಇತ್ತೀಚೆಗೆ ಬಾಂಗ್ಲಾದೇಶದ ಎದುರು ನಕಲಿ ಫೀಲ್ಡಿಂಗ್ ಆರೋಪ ಅವರ ಮೇಲಿದೆ. ರೈತ ಹೋರಾಟದ ವಿರುದ್ಧ ಟ್ವೀಟ್ ಮಾಡಿದ ಸೆಲೆಬ್ರೆಟಿಗಳಲ್ಲಿ ಅವರು ಸಹ ಒಬ್ಬರಾಗಿದ್ದರು. ಆದರೆ ಧರ್ಮದ ವಿಷಯದಲ್ಲಿ ಅವರು ತೆಗೆದುಕೊಂಡ ನಿಲುವುಗಳು ಅವರ 34ನೇ ಜನ್ಮದಿನದಂದು ಸ್ಮರಿಸುವಂತೆ ಮಾಡಿವೆ. ಮುಂದಕ್ಕೂ ಅವರು ಸೌಹಾರ್ದತೆಗೆ ಸಾಕ್ಷಿಯಾಗಲಿ ಎಂದು ಆಶಿಸೋಣ.

ಇದನ್ನೂ ಓದಿ: ಕ್ರಿಕೆಟ್ ಜಗತ್ತು ಕಂಡ ಕೆಚ್ಚೆದೆಯ ನಾಯಕ ಕೊಹ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...