Homeಕ್ರೀಡೆಕ್ರಿಕೆಟ್34ನೇ ಜನ್ಮದಿನ: ಮಾಗಿದ, ಸೌಹಾರ್ದತೆ ಪರ ವಾಲಿದ ವಿರಾಟ್ ಕೊಹ್ಲಿ

34ನೇ ಜನ್ಮದಿನ: ಮಾಗಿದ, ಸೌಹಾರ್ದತೆ ಪರ ವಾಲಿದ ವಿರಾಟ್ ಕೊಹ್ಲಿ

'ನಾವು ಶಮಿ ಅವರ ಬೆಂಬಲಕ್ಕೆ 200 ಪರ್ಸೆಂಟ್ ನಿಲ್ಲುತ್ತೇವೆ. ತಂಡದಲ್ಲಿನ ನಮ್ಮ ಸಹೋದರತ್ವವನ್ನು ಅಲುಗಾಡಿಸಲು ಸಾಧ್ಯವಿಲ್ಲ' ಎಂದು ಕೊಹ್ಲಿ ಘೋಷಿಸಿದ್ದರು.

- Advertisement -
- Advertisement -

ಇಂದು ಭಾರತ ಕ್ರಿಕೆಟ್ ತಂಡದ ನೆಚ್ಚಿನ ಆಟಗಾರ ವಿರಾಟ್ ಕೊಹ್ಲಿಯವರ 34 ನೇ ಜನ್ಮದಿನ. ಸದ್ಯ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅತ್ಯಧಿಕ ರನ್ (4 ಪಂದ್ಯಗಳಿಂದ 220 ರನ್, 3 ಅರ್ಧಶತಕ) ಗಳಿಸಿರುವ ಅವರು ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಅದರಿಂದಾಗಿಯೇ ಭಾರತ ತಂಡ ಪಾಕಿಸ್ತಾನ ಎದುರು ಮಾತ್ರವಲ್ಲದೆ ನೆದರ್ಲೆಂಡ್ಸ್ ಮತ್ತು ಬಾಂಗ್ಲಾದೇಶದ ಎದುರು ಕೂಡ ಗೆದ್ದು ಸೆಮಿಫೈನಲ್ ಕಡೆ ಮುಖ ಮಾಡಿದೆ. ಅಭಿಮಾನಿಗಳಿಂದ ಕಿಂಗ್ ಕೊಹ್ಲಿ ಎಂದು ಪ್ರೀತಿಯಿಂದ ಕರೆಸಿಕೊಳ್ಳುವ ವಿರಾಟ್ ತಮ್ಮ ಕ್ರಿಕೆಟ್ ಜೀವನದಲ್ಲಿ ಹತ್ತು ಹಲವು ದಾಖಲೆಗಳನ್ನು ಸೃಷ್ಟಿಸಿರುವ ಅವರು ಅನೇಕ ಏಳು-ಬೀಳುಗಳನ್ನು ಸಹ ಕಂಡಿದ್ದಾರೆ.

ಆರಂಭಿಕ ವರ್ಷಗಳಲ್ಲಿ ತುಂಬಾ ಆಕ್ರಮಣಕಾರಿ ವ್ಯಕ್ತಿತ್ವ ಮೈಗೂಡಿಸಿಕೊಂಡಿದ್ದ ಕೊಹ್ಲಿ ಈಗ ಮಾಗಿದ್ದಾರೆ. ಕ್ರೀಡೆಯ ನಿಜವಾದ ಉದ್ದೇಶವಾದ ಸೌಹಾರ್ದತೆ ಮತ್ತು ಬೆಸುಗೆ ಸಾಧಿಸುವ ನಿಟ್ಟಿನಲ್ಲಿ ಅವರು ಹೆಜ್ಜೆಯಿಟ್ಟಿರುವುದು ಸಕರಾತ್ಮಕವಾಗಿದೆ. ಭಾರತದಲ್ಲಿ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಕ್ರೀಡೆಯಾದ ಕ್ರಿಕೆಟ್ ದೇಶ-ದೇಶಗಳ ನಡುವೆ ಬೆಸುಗೆಗೆ-ಬಾಂಧವ್ಯಕ್ಕೆ ಬಳಕೆಯಾಗಬೇಕಿತ್ತು. ಆದರೆ ದುರಾದೃಷ್ಟವವೆಂಬಂತೆ ದ್ವೇ‍ಷಕ್ಕೆ ಬಳಕೆಯಾಗುವ ಸಾಧನವಾಗಿ ಬಿಟ್ಟಿತ್ತು. ಭಾರತ-ಪಾಕಿಸ್ತಾನ ನಡುವಿನ ಪಂದ್ಯವನ್ನು ಎರಡೂ ದೇಶದ ಮಾಧ್ಯಮಗಳು ಯುದ್ದ-ಕದನವೆಂಬಂತೆ ಬಿಂಬಿಸುತ್ತಿದ್ದವು. ಮೈದಾನದಲ್ಲಿ ಕೆಲ ಆಟಗಾರರು ಸಹ ಅದಕ್ಕೆ ಪುಷ್ಟಿ ಕೊಡುವಂತೆ ವರ್ತಿಸುತ್ತಿದ್ದರು. ಆದರೆ ವಿರಾಟ್ ಕೊಹ್ಲಿ ಅದಕ್ಕೆ ತಿಲಾಂಜಲಿ ಇಡುವತ್ತ ಮುಖ ಮಾಡಿರುವುದು ಆಶಾದಾಯಕವಾಗಿ ಗೋಚರಿಸುತ್ತಿದೆ.

2021ರ ಟಿ20 ವಿಶ್ವಕಪ್‌ನ ಭಾರತ-ಪಾಕಿಸ್ತಾನದ ಎದುರಿನ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಪಾಕಿಸ್ತಾನ ತಂಡ 10 ವಿಕೆಟ್‌ಗಳ ಗೆಲುವು ಸಾಧಿಸಿತು. ಆ ಮೂಲಕ ಮೊದಲ ಬಾರಿಗೆ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ತಂಡವನ್ನು ಮಣಿಸಿದ ಸಾಧನೆಗೈದಿತು. ಪಾಕಿಸ್ತಾನದ ನಾಯಕ ಬಾಬರ್ ಅಜಂ ಮತ್ತು ಮೊಹಮ್ಮದ್ ರಿಜ್ವಾನ್ ವಿರಾಟ್ ಕೊಹ್ಲಿಯ ದೊಡ್ಡ ಅಭಿಮಾನಿಗಳು. ಅವರಿಬ್ಬರೂ ಅದ್ಭುತ ಬ್ಯಾಟಿಂಗ್‌ ಪ್ರದರ್ಶನದಿಂದ ಕೊಹ್ಲಿ ನಾಯಕತ್ವದ ಎದುರೆ ಜಯ ಪಡೆದಿದ್ದರು. ಆ ಸಂದರ್ಭದಲ್ಲಿ ಅದೇ ಕೊಹ್ಲಿ ಅವರಿಬ್ಬರನ್ನು ಅಪ್ಪಿ ಅಭಿನಂದಿಸಿದರು. ಅವರ ಬೆನ್ನು ತಟ್ಟಿ ಮಾತನಾಡಿದರು. ಇದರಿಂದ ಅವರಿಬ್ಬರೂ ಎಷ್ಟು ಖುಷಿಗೊಂಡಿರಬೇಕು ಅಲ್ಲವೇ? ಆ ಸಂದರ್ಭದ ಸುಂದರ ಚಿತ್ರಗಳನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಟ್ವಿಟರ್‌ನಲ್ಲಿ ಪ್ರಕಟಿಸಿ “Spirit of Cricket” ಎಂದು ಬರೆದು ಸಂಭ್ರಮಿಸಿತ್ತು!

ಸೋತದ್ದು ಒಂದು ಪಂದ್ಯ ಮಾತ್ರ. ಆದರೆ ಗೆದ್ದದ್ದು ಸಹಸ್ರಾರು ಹೃದಯಗಳು. ವೆಲ್ ಡನ್ ವಿರಾಟ್ ಕೊಹ್ಲಿ ಎಂದು ಹಲವಾರು ಅಭಿಮಾನಿಗಳು ಅಂದು ಉದ್ಘಾರ ತೆಗೆದಿದ್ದರು.

ಆದರೆ ಕೆಲವು ಮತಾಂಧರು ಆ ಪಂದ್ಯ ಸೋಲಲು ಮೊಹಮ್ಮದ್ ಶಮಿ ಕಾರಣ ಎಂದು ತಗಾದೆ ತೆಗೆದು ಅವರನ್ನು ನಿಂದಿಸಿದ್ದರು. ಇನ್ಸ್ಟಾಗ್ರಾಮ್ ನಲ್ಲಿ ಮೊಹಮ್ಮದ್ ಶಮಿಯನ್ನು ಟ್ರೋಲ್ ಮಾಡಿ ನಿಂದಿಸಿದ್ದರು. ಅದಕ್ಕೆ ಶಮಿ ಮುಸ್ಲಿಂ ಧರ್ಮಿಯರಾಗಿದ್ದೇ ಏಕೈಕ ಕಾರಣವಾಗಿತ್ತು. ಆ ಸಂದರ್ಭದಲ್ಲಿ ತಂಡದ ನಾಯಕರಾಗಿದ್ದ ಕೊಹ್ಲಿ ಬೆಷರತ್ ಆಗಿ ಶಮಿ ಪರ ನಿಂತರು. ಎಲ್ಲರಿಗೂ ತಮ್ಮ ಅಭಿಪ್ರಾಯ ಹೇಳುವ ಹಕ್ಕಿದೆ. ಆದರೆ ಕೆಲವರು ಧರ್ಮದ ಆಧಾರದಲ್ಲಿ ತಾರತಮ್ಯ ಮಾಡುವುದನ್ನು ನಾನು ಎಂದಿಗೂ ಊಹಿಸಿರಲಿಲ್ಲ” ಎಂದು ಕೊಹ್ಲಿ ಬೇಸರ ವ್ಯಕ್ತಪಡಿಸಿದ್ದರು. ಅಲ್ಲದೆ ‘ನಾವು ಶಮಿ ಅವರ ಬೆಂಬಲಕ್ಕೆ 200 ಪರ್ಸೆಂಟ್ ನಿಲ್ಲುತ್ತೇವೆ. ತಂಡದಲ್ಲಿನ ನಮ್ಮ ಸಹೋದರತ್ವವನ್ನು ಅಲುಗಾಡಿಸಲು ಸಾಧ್ಯವಿಲ್ಲ’ ಎಂದು ಕೊಹ್ಲಿ ಘೋಷಿಸಿದ್ದರು.

ನಾವು ಒಳ್ಳೆಯ ಉದ್ದೇಶಕ್ಕಾಗಿ ಮೈದಾನದಲ್ಲಿ ಆಡುತ್ತಿದ್ದೇವೆಯೇ ಹೊರತು ಸಾಮಾಜಿಕ ಮಾಧ್ಯಮಗಳಲ್ಲಿನ ಬೆನ್ನುಮೂಳೆಯಿಲ್ಲದ ಜನರ ಗುಂಪಿನಂತಲ್ಲ. ಅವರಿಗೆ ಕೇವಲ ಒಬ್ಬ ವ್ಯಕ್ತಿಯನ್ನು ಸಹ ನೇರವಾಗಿ ಎದುರಿಸಲು ಸಾಧ್ಯವಿಲ್ಲ. ಅವರು ತಮ್ಮ ಗುರುತನ್ನು ಮರೆಮಾಚಿ ಸಾಮಾಜಿಕ ಮಾಧ್ಯಮಗಳಲ್ಲಿ ಗೇಲಿ ಮಾಡುತ್ತಾರೆ. ಇದು ಕೆಲವರಿಗೆ ಮನರಂಜನೆಯ ಮೂಲವಾಗಿರುವುದು ದುರದೃಷ್ಟಕರ ಮತ್ತು ದುಃಖದ ವಿಷಯವಾಗಿದೆ. ಇದು ಅಕ್ಷರಶಃ ಒಬ್ಬ ಮನುಷ್ಯ ಅತಿ ಕೆಳಮಟ್ಟದ ಕೃತ್ಯವಾಗಿದೆ. ಜನರು ತಮ್ಮ ಹತಾಶೆಯನ್ನು ಹೊರಹಾಕುತ್ತಾರೆ. ಏಕೆಂದರೆ ಮೊಹಮ್ಮದ್ ಶಮಿ ಭಾರತದ ಹಲವು ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ ಎಂಬ ತಿಳುವಳಿಕೆ ಅವರಿಗಿಲ್ಲ. ಶಮಿಯವರ ಪ್ರಾಮಾಣಿಕತೆ, ದೇಶದ ಬಗೆಗಿನ ಬದ್ಧತೆಯನ್ನು ಅರ್ಥಮಾಡಿಕೊಳ್ಳದ ಜನರೊಂದಿಗೆ ಒಂದು ನಿಮಿಷವನ್ನು ಸಹ ವ್ಯರ್ಥಮಾಡಲು ನಾನು ಬಯಸುವುದಿಲ್ಲ ಎಂದು ಕೊಹ್ಲಿ ಹೇಳಿದ್ದರು.

ಇದನ್ನೂ ಓದಿ: ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆ

ಕೊಹ್ಲಿ ಶಮಿ ಪರ ನಿಂತಿದ್ದಕ್ಕೆ ಕೆಲ ವಿಕೃತರು ಅವರ ಪುಟ್ಟ ಮಗಳ ಮೇಲೂ ಅತ್ಯಾಚಾರದ ಬೆದರಿಕೆಯಾಕಿದ್ದರು. ಆದರೂ ಕೊಹಲ್ಲಿ ಬಗ್ಗಲಿಲ್ಲ. ಬದಲಿಗೆ ಭಾರತದ ಬೌಲರ್ ಅರ್ಶದೀಪ್ ಸಿಂಗ್ ವಿರುದ್ಧ ಟ್ರೋಲಿಗರು ದಾಳಿ ನಡೆಸಿದಾಗ ಕೊಹ್ಲಿ ಅವರ ಪರ ನಿಂತರು. ಏಷ್ಯಾಕಪ್ ಕ್ರಿಕೆಟ್‌ನ ಸೂಪರ್ 4 ಹಂತದ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡವವಿನ ಪಂದ್ಯದಲ್ಲಿ ಪಾಕ್ ಆಟಗಾರ ಆಸಿಫ್ ಅಲಿ ನೀಡಿದ ಕ್ಯಾಚ್ ಅನ್ನು ಅರ್ಶದೀಪ್ ಸಿಂಗ್ ಕೈ ಚೆಲ್ಲಿದರು. ಅಷ್ಟಕ್ಕೆ ಕೆಲ ಮತಾಂಧರು ಅವರನ್ನು ಖಾಲಿಸ್ತಾನಿ ಭಯೋತ್ಪಾದಕ, ಪಾಕಿಸ್ತಾನಕ್ಕೆ ಹೋಗು ಎಂದೆಲ್ಲ ನಿಂದಿಸಿದ್ದರು.

ಆಗ ಮಾತನಾಡಿದ ವಿರಾಟ್ ಕೊಹ್ಲಿ, “ಎಲ್ಲರೂ ತಪ್ಪು ಮಾಡುತ್ತಾರೆ. ತುಂಬಾ ಒತ್ತಡ ಸನ್ನಿವೇ‍ಷವಿದ್ದಾಗ ತಪ್ಪುಗಳಾಗುವುದು ಸಹಜ. ನನಗಿನ್ನೂ ನೆನಪಿದೆ, ನನ್ನ ಮೊದಲ ಪಂದ್ಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನದ ಎದುರಾಗಿತ್ತು. ಆದರೆ ಅಂದು ಶಾಹಿದ್ ಅಫ್ರಿದಿ ಎದುರು ನಾನು ಕೆಟ್ಟ ಹೊಡೆತ ಹೊಡೆದು ಔಟ್ ಆದೆ. ಅಂದು ರಾತ್ರಿ ನಾನು ನಿದ್ರೆ ಮಾಡಲಿಲ್ಲ ಮತ್ತು ನನ್ನ ಕ್ರಿಕೆಟ್ ಜೀವನ ಮುಗಿಯಿತು ಎಂದುಕೊಂಡೆ. ಆದರೆ ಹಾಗಾಗಲಿಲ್ಲ. ಭಾರತ ತಂಡದಲ್ಲಿ ಹಿರಿಯ ಆಟಗಾರರಿದ್ದಾರೆ. ಒಳ್ಳೆಯ ತಂಡಸ್ಪೂರ್ತಿಯಿದೆ. ಉತ್ತಮ ನಾಯಕ ಮತ್ತು ಕೋಚ್ ಇದ್ದಾರೆ. ಆಟಗಾರರು ತಮ್ಮ ತಪ್ಪುಗಳಿಂದ ಪಾಠ ಕಲಿಯುತ್ತಾರೆ. ತಪ್ಪನ್ನು ಒಪ್ಪಿಕೊಂಡು ಯಾಕಾಯಿತು ಎಂದು ವಿಶ್ಲೇಷಿಸಿ ಮತ್ತೆ ಅಂಥದ್ದೆ ಒತ್ತಡದ ಸಂದರ್ಭಗಳನ್ನು ನಿಭಾಯಿಸುತ್ತಾರೆ” ಎನ್ನುವ ಮೂಲಕ ಅರ್ಶದೀಪ್‌ರನ್ನು ಬೆಂಬಲಿಸಿದ್ದರು.

ಈ ವರ್ಷದ ಟಿ20 ಕ್ರಿಕೆಟ್‌ನಲ್ಲಿಯೂ ಸಹ ಕೊಹ್ಲಿ ಮಿಂಚುತ್ತಿದ್ದಾರೆ. ಎಲ್ಲಾ ದೇಶದ ಆಟಗಾರರ ಜೊತೆಗೆ ಪ್ರೀತಿಯಿಂದ ಬೆರೆಯುತ್ತಿದ್ದಾರೆ. ಮಾನವೀಯತೆ ಪರ ತುಡಿಯುತ್ತಿದ್ದಾರೆ. ಹಾಗಂತ ಕೊಹ್ಲಿ ಟೀಕೆಗೆ ಹೊರತಾದವರಲ್ಲ. ಇತ್ತೀಚೆಗೆ ಬಾಂಗ್ಲಾದೇಶದ ಎದುರು ನಕಲಿ ಫೀಲ್ಡಿಂಗ್ ಆರೋಪ ಅವರ ಮೇಲಿದೆ. ರೈತ ಹೋರಾಟದ ವಿರುದ್ಧ ಟ್ವೀಟ್ ಮಾಡಿದ ಸೆಲೆಬ್ರೆಟಿಗಳಲ್ಲಿ ಅವರು ಸಹ ಒಬ್ಬರಾಗಿದ್ದರು. ಆದರೆ ಧರ್ಮದ ವಿಷಯದಲ್ಲಿ ಅವರು ತೆಗೆದುಕೊಂಡ ನಿಲುವುಗಳು ಅವರ 34ನೇ ಜನ್ಮದಿನದಂದು ಸ್ಮರಿಸುವಂತೆ ಮಾಡಿವೆ. ಮುಂದಕ್ಕೂ ಅವರು ಸೌಹಾರ್ದತೆಗೆ ಸಾಕ್ಷಿಯಾಗಲಿ ಎಂದು ಆಶಿಸೋಣ.

ಇದನ್ನೂ ಓದಿ: ಕ್ರಿಕೆಟ್ ಜಗತ್ತು ಕಂಡ ಕೆಚ್ಚೆದೆಯ ನಾಯಕ ಕೊಹ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...