Homeಮುಖಪುಟಸಾಮಾನ್ಯ ಲಸಿಕೆ ಪಡೆಯದ 30 ಲಕ್ಷ ಮಕ್ಕಳು ಭಾರತದಲ್ಲಿದ್ದಾರೆಂದ ವಿಶ್ವಸಂಸ್ಥೆ; ನಿರಾಕರಿಸಿದ ಸರ್ಕಾರ

ಸಾಮಾನ್ಯ ಲಸಿಕೆ ಪಡೆಯದ 30 ಲಕ್ಷ ಮಕ್ಕಳು ಭಾರತದಲ್ಲಿದ್ದಾರೆಂದ ವಿಶ್ವಸಂಸ್ಥೆ; ನಿರಾಕರಿಸಿದ ಸರ್ಕಾರ

- Advertisement -
- Advertisement -

ಸಾಮಾನ್ಯವಾಗಿ ಪಡೆಯುವ ರುಟೀನ್‌‌ ಲಸಿಕೆಯನ್ನು ಪಡೆಯದ 30 ಲಕ್ಷಕ್ಕೂ ಹೆಚ್ಚು ಮಕ್ಕಳು ಭಾರತಲ್ಲಿದ್ದಾರೆ ಎಂದು ವಿಶ್ವಸಂಸ್ಥೆಯ ಅಂಗ ಸಂಸ್ಥೆ ಯುನಿಸೆಫ್ ವರದಿ ನೀಡಿದೆ. ಇದು ವಿಶ್ವದಲ್ಲೇ ಅತೀ ಹೆಚ್ಚು ಎಂದು ವರದಿಯು ಉಲ್ಲೇಖಿಸಿದೆ. ಯುನಿಸೆಫ್‌ನ ವರದಿಯನ್ನು ನಿರಾಕರಿಸಿರುವ ಒಕ್ಕೂಟ ಸರ್ಕಾರ, ಯುನಿವರ್ಸಲ್ ಇಮ್ಯುನೈಸೇಶನ್ ಕಾರ್ಯಕ್ರಮದಡಿ ಮಕ್ಕಳಿಗೆ ಲಸಿಕೆಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದೆ.

ಕೊರೊನಾ ಪರಿಣಾಮಗಳನ್ನು ತಗ್ಗಿಸಲು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಅಭಿವೃದ್ಧಿ ಪಾಲುದಾರರೊಂದಿಗೆ ಒಕ್ಕೂಟ ಸರ್ಕಾರವು ಕೆಲಸ ಮಾಡುತ್ತಿದೆ ಎಂದು ತಿಳಿಸಿದೆ.

“ಕೊರೊನಾದಿಂದ ಉಂಟಾಗುವ ಅಡೆತಡೆಗಳಿಂದಾಗಿ ಲಕ್ಷಾಂತರ ಭಾರತೀಯ ಮಕ್ಕಳು ಸಾಮಾನ್ಯವಾಗಿ ಪಡೆಯುವ ಲಸಿಕೆಗಳನ್ನು ತಪ್ಪಿಸಿಕೊಂಡಿರಬಹುದು, ಇದು ಭವಿಷ್ಯದಲ್ಲಿ ಸಾಂಕ್ರಮಿಕಕ್ಕೆ ಎಡೆಮಾಡುವ ಮತ್ತು ಸಾವಿಗೀಡಾಗುವ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಆರೋಪಿಸಿ ಕೆಲವು ಮಾಧ್ಯಮಗಳು ವರದಿ ಮಾಡಿವೆ” ಎಂದು ಯಾರನ್ನೂ ಹೆಸರಿಸದೆ ಒಕ್ಕೂಟ ಸರ್ಕಾರದ ಆರೋಗ್ಯ ಸಚಿವಾಲಯ ಹೇಳಿದೆ.

ಇದನ್ನೂ ಓದಿ: ಮನೆಯಲ್ಲೇ ಲಸಿಕೆ ಪಡೆದ ಸಂಸದೆ ಪ್ರಜ್ಞಾ ಠಾಕೂರ್: ಖಂಡನೆ

“ಈ ವರದಿಗಳು ಸತ್ಯಗಳನ್ನು ಆಧರಿಸಿಲ್ಲ ಮತ್ತು ಇದು ನಿಜವಾದ ಚಿತ್ರಣವನ್ನು ಪ್ರತಿಬಿಂಬಿಸುವುದಿಲ್ಲ” ಎಂದು ಸಚಿವಾಲಯ ಹೇಳಿದೆ.

ಯುನಿಸೆಫ್ ತನ್ನ ವರದಿಯಲ್ಲಿ 2020 ರಲ್ಲಿ 30 ಲಕ್ಷಕ್ಕೂ ಹೆಚ್ಚು “ಶೂನ್ಯ ಡೋಸ್ ಪಡೆದ ಮಕ್ಕಳು” ಭಾರತದಲ್ಲಿ ವಾಸಿಸುತ್ತಿದ್ದರು ಎಂದು ಹೇಳಿದೆ.

“ದಕ್ಷಿಣ ಏಷ್ಯಾದ ಸುಮಾರು 44 ಲಕ್ಷ ಮಕ್ಕಳು ಕಳೆದ ಹತ್ತು ವರ್ಷಗಳಲ್ಲಿ 2020 ವರೆಗೆ ಯಾವುದೇ ಸಾಮಾನ್ಯ ರುಟೀನ್‌ ವ್ಯಾಕ್ಸಿನೇಷನ್ ಪಡೆಯುವಲ್ಲಿ ವಿಫಲರಾಗಿದ್ದಾರೆ. ಇದರಲ್ಲಿ 30 ಲಕ್ಷಕ್ಕಿಂತಲೂ ಹೆಚ್ಚು ಮಕ್ಕಳು ಭಾರತದಲ್ಲಿ ವಾಸಿಸುತ್ತಿದ್ದರು” ಎಂದು ಯುನಿಸೆಫ್ ತನ್ನ ಹೇಳಿಕೆಯನ್ನು ತಿಳಿಸಿದೆ.

ಈ ವರದಿಯ ಬೆನ್ನಿಗೆ ಒಕ್ಕೂಟ ಸರ್ಕಾರವು, ಸಾಂಕ್ರಾಮಿಕ ರೋಗ ಹರಡಿದಾಗಿನಿಂದ, ಯುನಿವರ್ಸಲ್ ಇಮ್ಯುನೈಸೇಶನ್ ಪ್ರೋಗ್ರಾಂ (ಯುಐಪಿ) ಅಡಿಯಲ್ಲಿ ರೋಗನಿರೋಧಕ ಸೇರಿದಂತೆ ಅಗತ್ಯ ಸೇವೆಗಳನ್ನು ನಿರ್ವಹಿಸುವತ್ತ ಸಚಿವಾಲಯ ಗಮನಹರಿಸಿದೆ ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ದೆಹಲಿ ಸೇರಿ 4 ರಾಜ್ಯಗಳಲ್ಲಿ ಲಸಿಕೆ ಕೊರತೆ: ವ್ಯಾಕ್ಸಿನೇಷನ್‌‌ ಕೇಂದ್ರಗಳಿಗೆ ಬಾಗಿಲು

“ಸಚಿವಾಲಯವು ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಅಭಿವೃದ್ಧಿ ಪಾಲುದಾರರೊಂದಿಗೆ ಕೊರೊನಾ ಋಣಾತ್ಮಕ ಪರಿಣಾಮಗಳನ್ನು ತಗ್ಗಿಸಲು ಮತ್ತು ಯುಐಪಿ ಅಡಿಯಲ್ಲಿ ಮಕ್ಕಳ ಜೀವ ಉಳಿಸುವ ಲಸಿಕೆಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು, ತುರ್ತು ಕ್ರಮಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡಿದೆ” ಎಂದು ಸಚಿವಾಲಯ ತಿಳಿಸಿದೆ.

ಇದಲ್ಲದೆ, ಸರ್ಕಾರ ಮತ್ತು ಸಾರ್ವಜನಿಕ ಆರೋಗ್ಯ ಕಾರ್ಯಪಡೆಯ ಬದ್ಧತೆಯ ಪರಿಣಾಮವಾಗಿ, ದೇಶವು 2021 ರ ಮೊದಲ ತ್ರೈಮಾಸಿಕದಲ್ಲಿ (ಜನವರಿ-ಮಾರ್ಚ್) 99% ರಷ್ಟು ‘ಡಿಟಿಪಿ3’ ನೀಡಿದೆ. ಇದು ಇಲ್ಲಿಯವರೆಗೆ ನೀಡಲಾದ ಅತ್ಯಂತ ಹೆಚ್ಚಿನ ‘ಡಿಟಿಪಿ3’ ಆಗಿದೆ ಎಂದು ಅದು ಹೇಳಿದೆ.

ವಿಶೇಷವಾಗಿ ಕೊರೊನಾ ಸಾಂಕ್ರಾಮಿಕ ರೋಗದಿಂದ ಭಾರತ ತೀವ್ರವಾಗಿ ಹಾನಿಗೊಳಗಾಗಿದ್ದು, ವಿಶ್ವದಾದ್ಯಂತ ಅತಿ ಹೆಚ್ಚು 35 ಲಕ್ಷ ಅಸುರಕ್ಷಿತ ಮಕ್ಕಳನ್ನು ಹೊಂದಿದೆ ಯುನಿಸೆಫ್ ಗುರುವಾರ ಹೇಳಿತ್ತು. ಇದು 2019 ಕ್ಕೆ ಹೋಲಿಸಿದರೆ 14 ಲಕ್ಷದಷ್ಟು ಹೆಚ್ಚಾಗಿದೆ, ಈ ಹಿಂದೆ 21 ಲಕ್ಷ ಅಸುರಕ್ಷಿತ ಮಕ್ಕಳು ಭಾರತದಲ್ಲಿ ವಾಸಿಸುತ್ತಿದ್ದರು.

ಅಸುರಕ್ಷಿತ ಮಕ್ಕಳೆಂದರೆ ಲಸಿಕೆ ಪಡೆಯದ ಅಥವಾ ಅಪೂರ್ಣ ಲಸಿಕೆ ಪಡೆದ ಮಕ್ಕಳು ಎಂದರ್ಥ.

ಇದನ್ನೂ ಓದಿ: ಬ್ರೆಜಿಲ್‌: ಲಸಿಕೆ ಖರೀದಿ ಹಗರಣ – ಅಧ್ಯಕ್ಷ ಬೊಲ್ಸನಾರೊ ವಿರುದ್ಧ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...