Homeಮುಖಪುಟಸಾಮಾನ್ಯ ಲಸಿಕೆ ಪಡೆಯದ 30 ಲಕ್ಷ ಮಕ್ಕಳು ಭಾರತದಲ್ಲಿದ್ದಾರೆಂದ ವಿಶ್ವಸಂಸ್ಥೆ; ನಿರಾಕರಿಸಿದ ಸರ್ಕಾರ

ಸಾಮಾನ್ಯ ಲಸಿಕೆ ಪಡೆಯದ 30 ಲಕ್ಷ ಮಕ್ಕಳು ಭಾರತದಲ್ಲಿದ್ದಾರೆಂದ ವಿಶ್ವಸಂಸ್ಥೆ; ನಿರಾಕರಿಸಿದ ಸರ್ಕಾರ

- Advertisement -
- Advertisement -

ಸಾಮಾನ್ಯವಾಗಿ ಪಡೆಯುವ ರುಟೀನ್‌‌ ಲಸಿಕೆಯನ್ನು ಪಡೆಯದ 30 ಲಕ್ಷಕ್ಕೂ ಹೆಚ್ಚು ಮಕ್ಕಳು ಭಾರತಲ್ಲಿದ್ದಾರೆ ಎಂದು ವಿಶ್ವಸಂಸ್ಥೆಯ ಅಂಗ ಸಂಸ್ಥೆ ಯುನಿಸೆಫ್ ವರದಿ ನೀಡಿದೆ. ಇದು ವಿಶ್ವದಲ್ಲೇ ಅತೀ ಹೆಚ್ಚು ಎಂದು ವರದಿಯು ಉಲ್ಲೇಖಿಸಿದೆ. ಯುನಿಸೆಫ್‌ನ ವರದಿಯನ್ನು ನಿರಾಕರಿಸಿರುವ ಒಕ್ಕೂಟ ಸರ್ಕಾರ, ಯುನಿವರ್ಸಲ್ ಇಮ್ಯುನೈಸೇಶನ್ ಕಾರ್ಯಕ್ರಮದಡಿ ಮಕ್ಕಳಿಗೆ ಲಸಿಕೆಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದೆ.

ಕೊರೊನಾ ಪರಿಣಾಮಗಳನ್ನು ತಗ್ಗಿಸಲು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಅಭಿವೃದ್ಧಿ ಪಾಲುದಾರರೊಂದಿಗೆ ಒಕ್ಕೂಟ ಸರ್ಕಾರವು ಕೆಲಸ ಮಾಡುತ್ತಿದೆ ಎಂದು ತಿಳಿಸಿದೆ.

“ಕೊರೊನಾದಿಂದ ಉಂಟಾಗುವ ಅಡೆತಡೆಗಳಿಂದಾಗಿ ಲಕ್ಷಾಂತರ ಭಾರತೀಯ ಮಕ್ಕಳು ಸಾಮಾನ್ಯವಾಗಿ ಪಡೆಯುವ ಲಸಿಕೆಗಳನ್ನು ತಪ್ಪಿಸಿಕೊಂಡಿರಬಹುದು, ಇದು ಭವಿಷ್ಯದಲ್ಲಿ ಸಾಂಕ್ರಮಿಕಕ್ಕೆ ಎಡೆಮಾಡುವ ಮತ್ತು ಸಾವಿಗೀಡಾಗುವ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಆರೋಪಿಸಿ ಕೆಲವು ಮಾಧ್ಯಮಗಳು ವರದಿ ಮಾಡಿವೆ” ಎಂದು ಯಾರನ್ನೂ ಹೆಸರಿಸದೆ ಒಕ್ಕೂಟ ಸರ್ಕಾರದ ಆರೋಗ್ಯ ಸಚಿವಾಲಯ ಹೇಳಿದೆ.

ಇದನ್ನೂ ಓದಿ: ಮನೆಯಲ್ಲೇ ಲಸಿಕೆ ಪಡೆದ ಸಂಸದೆ ಪ್ರಜ್ಞಾ ಠಾಕೂರ್: ಖಂಡನೆ

“ಈ ವರದಿಗಳು ಸತ್ಯಗಳನ್ನು ಆಧರಿಸಿಲ್ಲ ಮತ್ತು ಇದು ನಿಜವಾದ ಚಿತ್ರಣವನ್ನು ಪ್ರತಿಬಿಂಬಿಸುವುದಿಲ್ಲ” ಎಂದು ಸಚಿವಾಲಯ ಹೇಳಿದೆ.

ಯುನಿಸೆಫ್ ತನ್ನ ವರದಿಯಲ್ಲಿ 2020 ರಲ್ಲಿ 30 ಲಕ್ಷಕ್ಕೂ ಹೆಚ್ಚು “ಶೂನ್ಯ ಡೋಸ್ ಪಡೆದ ಮಕ್ಕಳು” ಭಾರತದಲ್ಲಿ ವಾಸಿಸುತ್ತಿದ್ದರು ಎಂದು ಹೇಳಿದೆ.

“ದಕ್ಷಿಣ ಏಷ್ಯಾದ ಸುಮಾರು 44 ಲಕ್ಷ ಮಕ್ಕಳು ಕಳೆದ ಹತ್ತು ವರ್ಷಗಳಲ್ಲಿ 2020 ವರೆಗೆ ಯಾವುದೇ ಸಾಮಾನ್ಯ ರುಟೀನ್‌ ವ್ಯಾಕ್ಸಿನೇಷನ್ ಪಡೆಯುವಲ್ಲಿ ವಿಫಲರಾಗಿದ್ದಾರೆ. ಇದರಲ್ಲಿ 30 ಲಕ್ಷಕ್ಕಿಂತಲೂ ಹೆಚ್ಚು ಮಕ್ಕಳು ಭಾರತದಲ್ಲಿ ವಾಸಿಸುತ್ತಿದ್ದರು” ಎಂದು ಯುನಿಸೆಫ್ ತನ್ನ ಹೇಳಿಕೆಯನ್ನು ತಿಳಿಸಿದೆ.

ಈ ವರದಿಯ ಬೆನ್ನಿಗೆ ಒಕ್ಕೂಟ ಸರ್ಕಾರವು, ಸಾಂಕ್ರಾಮಿಕ ರೋಗ ಹರಡಿದಾಗಿನಿಂದ, ಯುನಿವರ್ಸಲ್ ಇಮ್ಯುನೈಸೇಶನ್ ಪ್ರೋಗ್ರಾಂ (ಯುಐಪಿ) ಅಡಿಯಲ್ಲಿ ರೋಗನಿರೋಧಕ ಸೇರಿದಂತೆ ಅಗತ್ಯ ಸೇವೆಗಳನ್ನು ನಿರ್ವಹಿಸುವತ್ತ ಸಚಿವಾಲಯ ಗಮನಹರಿಸಿದೆ ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ದೆಹಲಿ ಸೇರಿ 4 ರಾಜ್ಯಗಳಲ್ಲಿ ಲಸಿಕೆ ಕೊರತೆ: ವ್ಯಾಕ್ಸಿನೇಷನ್‌‌ ಕೇಂದ್ರಗಳಿಗೆ ಬಾಗಿಲು

“ಸಚಿವಾಲಯವು ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಅಭಿವೃದ್ಧಿ ಪಾಲುದಾರರೊಂದಿಗೆ ಕೊರೊನಾ ಋಣಾತ್ಮಕ ಪರಿಣಾಮಗಳನ್ನು ತಗ್ಗಿಸಲು ಮತ್ತು ಯುಐಪಿ ಅಡಿಯಲ್ಲಿ ಮಕ್ಕಳ ಜೀವ ಉಳಿಸುವ ಲಸಿಕೆಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು, ತುರ್ತು ಕ್ರಮಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡಿದೆ” ಎಂದು ಸಚಿವಾಲಯ ತಿಳಿಸಿದೆ.

ಇದಲ್ಲದೆ, ಸರ್ಕಾರ ಮತ್ತು ಸಾರ್ವಜನಿಕ ಆರೋಗ್ಯ ಕಾರ್ಯಪಡೆಯ ಬದ್ಧತೆಯ ಪರಿಣಾಮವಾಗಿ, ದೇಶವು 2021 ರ ಮೊದಲ ತ್ರೈಮಾಸಿಕದಲ್ಲಿ (ಜನವರಿ-ಮಾರ್ಚ್) 99% ರಷ್ಟು ‘ಡಿಟಿಪಿ3’ ನೀಡಿದೆ. ಇದು ಇಲ್ಲಿಯವರೆಗೆ ನೀಡಲಾದ ಅತ್ಯಂತ ಹೆಚ್ಚಿನ ‘ಡಿಟಿಪಿ3’ ಆಗಿದೆ ಎಂದು ಅದು ಹೇಳಿದೆ.

ವಿಶೇಷವಾಗಿ ಕೊರೊನಾ ಸಾಂಕ್ರಾಮಿಕ ರೋಗದಿಂದ ಭಾರತ ತೀವ್ರವಾಗಿ ಹಾನಿಗೊಳಗಾಗಿದ್ದು, ವಿಶ್ವದಾದ್ಯಂತ ಅತಿ ಹೆಚ್ಚು 35 ಲಕ್ಷ ಅಸುರಕ್ಷಿತ ಮಕ್ಕಳನ್ನು ಹೊಂದಿದೆ ಯುನಿಸೆಫ್ ಗುರುವಾರ ಹೇಳಿತ್ತು. ಇದು 2019 ಕ್ಕೆ ಹೋಲಿಸಿದರೆ 14 ಲಕ್ಷದಷ್ಟು ಹೆಚ್ಚಾಗಿದೆ, ಈ ಹಿಂದೆ 21 ಲಕ್ಷ ಅಸುರಕ್ಷಿತ ಮಕ್ಕಳು ಭಾರತದಲ್ಲಿ ವಾಸಿಸುತ್ತಿದ್ದರು.

ಅಸುರಕ್ಷಿತ ಮಕ್ಕಳೆಂದರೆ ಲಸಿಕೆ ಪಡೆಯದ ಅಥವಾ ಅಪೂರ್ಣ ಲಸಿಕೆ ಪಡೆದ ಮಕ್ಕಳು ಎಂದರ್ಥ.

ಇದನ್ನೂ ಓದಿ: ಬ್ರೆಜಿಲ್‌: ಲಸಿಕೆ ಖರೀದಿ ಹಗರಣ – ಅಧ್ಯಕ್ಷ ಬೊಲ್ಸನಾರೊ ವಿರುದ್ಧ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...