Homeಮುಖಪುಟಸಾಮಾನ್ಯ ಲಸಿಕೆ ಪಡೆಯದ 30 ಲಕ್ಷ ಮಕ್ಕಳು ಭಾರತದಲ್ಲಿದ್ದಾರೆಂದ ವಿಶ್ವಸಂಸ್ಥೆ; ನಿರಾಕರಿಸಿದ ಸರ್ಕಾರ

ಸಾಮಾನ್ಯ ಲಸಿಕೆ ಪಡೆಯದ 30 ಲಕ್ಷ ಮಕ್ಕಳು ಭಾರತದಲ್ಲಿದ್ದಾರೆಂದ ವಿಶ್ವಸಂಸ್ಥೆ; ನಿರಾಕರಿಸಿದ ಸರ್ಕಾರ

- Advertisement -
- Advertisement -

ಸಾಮಾನ್ಯವಾಗಿ ಪಡೆಯುವ ರುಟೀನ್‌‌ ಲಸಿಕೆಯನ್ನು ಪಡೆಯದ 30 ಲಕ್ಷಕ್ಕೂ ಹೆಚ್ಚು ಮಕ್ಕಳು ಭಾರತಲ್ಲಿದ್ದಾರೆ ಎಂದು ವಿಶ್ವಸಂಸ್ಥೆಯ ಅಂಗ ಸಂಸ್ಥೆ ಯುನಿಸೆಫ್ ವರದಿ ನೀಡಿದೆ. ಇದು ವಿಶ್ವದಲ್ಲೇ ಅತೀ ಹೆಚ್ಚು ಎಂದು ವರದಿಯು ಉಲ್ಲೇಖಿಸಿದೆ. ಯುನಿಸೆಫ್‌ನ ವರದಿಯನ್ನು ನಿರಾಕರಿಸಿರುವ ಒಕ್ಕೂಟ ಸರ್ಕಾರ, ಯುನಿವರ್ಸಲ್ ಇಮ್ಯುನೈಸೇಶನ್ ಕಾರ್ಯಕ್ರಮದಡಿ ಮಕ್ಕಳಿಗೆ ಲಸಿಕೆಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದೆ.

ಕೊರೊನಾ ಪರಿಣಾಮಗಳನ್ನು ತಗ್ಗಿಸಲು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಅಭಿವೃದ್ಧಿ ಪಾಲುದಾರರೊಂದಿಗೆ ಒಕ್ಕೂಟ ಸರ್ಕಾರವು ಕೆಲಸ ಮಾಡುತ್ತಿದೆ ಎಂದು ತಿಳಿಸಿದೆ.

“ಕೊರೊನಾದಿಂದ ಉಂಟಾಗುವ ಅಡೆತಡೆಗಳಿಂದಾಗಿ ಲಕ್ಷಾಂತರ ಭಾರತೀಯ ಮಕ್ಕಳು ಸಾಮಾನ್ಯವಾಗಿ ಪಡೆಯುವ ಲಸಿಕೆಗಳನ್ನು ತಪ್ಪಿಸಿಕೊಂಡಿರಬಹುದು, ಇದು ಭವಿಷ್ಯದಲ್ಲಿ ಸಾಂಕ್ರಮಿಕಕ್ಕೆ ಎಡೆಮಾಡುವ ಮತ್ತು ಸಾವಿಗೀಡಾಗುವ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಆರೋಪಿಸಿ ಕೆಲವು ಮಾಧ್ಯಮಗಳು ವರದಿ ಮಾಡಿವೆ” ಎಂದು ಯಾರನ್ನೂ ಹೆಸರಿಸದೆ ಒಕ್ಕೂಟ ಸರ್ಕಾರದ ಆರೋಗ್ಯ ಸಚಿವಾಲಯ ಹೇಳಿದೆ.

ಇದನ್ನೂ ಓದಿ: ಮನೆಯಲ್ಲೇ ಲಸಿಕೆ ಪಡೆದ ಸಂಸದೆ ಪ್ರಜ್ಞಾ ಠಾಕೂರ್: ಖಂಡನೆ

“ಈ ವರದಿಗಳು ಸತ್ಯಗಳನ್ನು ಆಧರಿಸಿಲ್ಲ ಮತ್ತು ಇದು ನಿಜವಾದ ಚಿತ್ರಣವನ್ನು ಪ್ರತಿಬಿಂಬಿಸುವುದಿಲ್ಲ” ಎಂದು ಸಚಿವಾಲಯ ಹೇಳಿದೆ.

ಯುನಿಸೆಫ್ ತನ್ನ ವರದಿಯಲ್ಲಿ 2020 ರಲ್ಲಿ 30 ಲಕ್ಷಕ್ಕೂ ಹೆಚ್ಚು “ಶೂನ್ಯ ಡೋಸ್ ಪಡೆದ ಮಕ್ಕಳು” ಭಾರತದಲ್ಲಿ ವಾಸಿಸುತ್ತಿದ್ದರು ಎಂದು ಹೇಳಿದೆ.

“ದಕ್ಷಿಣ ಏಷ್ಯಾದ ಸುಮಾರು 44 ಲಕ್ಷ ಮಕ್ಕಳು ಕಳೆದ ಹತ್ತು ವರ್ಷಗಳಲ್ಲಿ 2020 ವರೆಗೆ ಯಾವುದೇ ಸಾಮಾನ್ಯ ರುಟೀನ್‌ ವ್ಯಾಕ್ಸಿನೇಷನ್ ಪಡೆಯುವಲ್ಲಿ ವಿಫಲರಾಗಿದ್ದಾರೆ. ಇದರಲ್ಲಿ 30 ಲಕ್ಷಕ್ಕಿಂತಲೂ ಹೆಚ್ಚು ಮಕ್ಕಳು ಭಾರತದಲ್ಲಿ ವಾಸಿಸುತ್ತಿದ್ದರು” ಎಂದು ಯುನಿಸೆಫ್ ತನ್ನ ಹೇಳಿಕೆಯನ್ನು ತಿಳಿಸಿದೆ.

ಈ ವರದಿಯ ಬೆನ್ನಿಗೆ ಒಕ್ಕೂಟ ಸರ್ಕಾರವು, ಸಾಂಕ್ರಾಮಿಕ ರೋಗ ಹರಡಿದಾಗಿನಿಂದ, ಯುನಿವರ್ಸಲ್ ಇಮ್ಯುನೈಸೇಶನ್ ಪ್ರೋಗ್ರಾಂ (ಯುಐಪಿ) ಅಡಿಯಲ್ಲಿ ರೋಗನಿರೋಧಕ ಸೇರಿದಂತೆ ಅಗತ್ಯ ಸೇವೆಗಳನ್ನು ನಿರ್ವಹಿಸುವತ್ತ ಸಚಿವಾಲಯ ಗಮನಹರಿಸಿದೆ ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ದೆಹಲಿ ಸೇರಿ 4 ರಾಜ್ಯಗಳಲ್ಲಿ ಲಸಿಕೆ ಕೊರತೆ: ವ್ಯಾಕ್ಸಿನೇಷನ್‌‌ ಕೇಂದ್ರಗಳಿಗೆ ಬಾಗಿಲು

“ಸಚಿವಾಲಯವು ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಅಭಿವೃದ್ಧಿ ಪಾಲುದಾರರೊಂದಿಗೆ ಕೊರೊನಾ ಋಣಾತ್ಮಕ ಪರಿಣಾಮಗಳನ್ನು ತಗ್ಗಿಸಲು ಮತ್ತು ಯುಐಪಿ ಅಡಿಯಲ್ಲಿ ಮಕ್ಕಳ ಜೀವ ಉಳಿಸುವ ಲಸಿಕೆಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು, ತುರ್ತು ಕ್ರಮಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡಿದೆ” ಎಂದು ಸಚಿವಾಲಯ ತಿಳಿಸಿದೆ.

ಇದಲ್ಲದೆ, ಸರ್ಕಾರ ಮತ್ತು ಸಾರ್ವಜನಿಕ ಆರೋಗ್ಯ ಕಾರ್ಯಪಡೆಯ ಬದ್ಧತೆಯ ಪರಿಣಾಮವಾಗಿ, ದೇಶವು 2021 ರ ಮೊದಲ ತ್ರೈಮಾಸಿಕದಲ್ಲಿ (ಜನವರಿ-ಮಾರ್ಚ್) 99% ರಷ್ಟು ‘ಡಿಟಿಪಿ3’ ನೀಡಿದೆ. ಇದು ಇಲ್ಲಿಯವರೆಗೆ ನೀಡಲಾದ ಅತ್ಯಂತ ಹೆಚ್ಚಿನ ‘ಡಿಟಿಪಿ3’ ಆಗಿದೆ ಎಂದು ಅದು ಹೇಳಿದೆ.

ವಿಶೇಷವಾಗಿ ಕೊರೊನಾ ಸಾಂಕ್ರಾಮಿಕ ರೋಗದಿಂದ ಭಾರತ ತೀವ್ರವಾಗಿ ಹಾನಿಗೊಳಗಾಗಿದ್ದು, ವಿಶ್ವದಾದ್ಯಂತ ಅತಿ ಹೆಚ್ಚು 35 ಲಕ್ಷ ಅಸುರಕ್ಷಿತ ಮಕ್ಕಳನ್ನು ಹೊಂದಿದೆ ಯುನಿಸೆಫ್ ಗುರುವಾರ ಹೇಳಿತ್ತು. ಇದು 2019 ಕ್ಕೆ ಹೋಲಿಸಿದರೆ 14 ಲಕ್ಷದಷ್ಟು ಹೆಚ್ಚಾಗಿದೆ, ಈ ಹಿಂದೆ 21 ಲಕ್ಷ ಅಸುರಕ್ಷಿತ ಮಕ್ಕಳು ಭಾರತದಲ್ಲಿ ವಾಸಿಸುತ್ತಿದ್ದರು.

ಅಸುರಕ್ಷಿತ ಮಕ್ಕಳೆಂದರೆ ಲಸಿಕೆ ಪಡೆಯದ ಅಥವಾ ಅಪೂರ್ಣ ಲಸಿಕೆ ಪಡೆದ ಮಕ್ಕಳು ಎಂದರ್ಥ.

ಇದನ್ನೂ ಓದಿ: ಬ್ರೆಜಿಲ್‌: ಲಸಿಕೆ ಖರೀದಿ ಹಗರಣ – ಅಧ್ಯಕ್ಷ ಬೊಲ್ಸನಾರೊ ವಿರುದ್ಧ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...