Homeಮುಖಪುಟಸಾಮಾನ್ಯ ಲಸಿಕೆ ಪಡೆಯದ 30 ಲಕ್ಷ ಮಕ್ಕಳು ಭಾರತದಲ್ಲಿದ್ದಾರೆಂದ ವಿಶ್ವಸಂಸ್ಥೆ; ನಿರಾಕರಿಸಿದ ಸರ್ಕಾರ

ಸಾಮಾನ್ಯ ಲಸಿಕೆ ಪಡೆಯದ 30 ಲಕ್ಷ ಮಕ್ಕಳು ಭಾರತದಲ್ಲಿದ್ದಾರೆಂದ ವಿಶ್ವಸಂಸ್ಥೆ; ನಿರಾಕರಿಸಿದ ಸರ್ಕಾರ

- Advertisement -
- Advertisement -

ಸಾಮಾನ್ಯವಾಗಿ ಪಡೆಯುವ ರುಟೀನ್‌‌ ಲಸಿಕೆಯನ್ನು ಪಡೆಯದ 30 ಲಕ್ಷಕ್ಕೂ ಹೆಚ್ಚು ಮಕ್ಕಳು ಭಾರತಲ್ಲಿದ್ದಾರೆ ಎಂದು ವಿಶ್ವಸಂಸ್ಥೆಯ ಅಂಗ ಸಂಸ್ಥೆ ಯುನಿಸೆಫ್ ವರದಿ ನೀಡಿದೆ. ಇದು ವಿಶ್ವದಲ್ಲೇ ಅತೀ ಹೆಚ್ಚು ಎಂದು ವರದಿಯು ಉಲ್ಲೇಖಿಸಿದೆ. ಯುನಿಸೆಫ್‌ನ ವರದಿಯನ್ನು ನಿರಾಕರಿಸಿರುವ ಒಕ್ಕೂಟ ಸರ್ಕಾರ, ಯುನಿವರ್ಸಲ್ ಇಮ್ಯುನೈಸೇಶನ್ ಕಾರ್ಯಕ್ರಮದಡಿ ಮಕ್ಕಳಿಗೆ ಲಸಿಕೆಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದೆ.

ಕೊರೊನಾ ಪರಿಣಾಮಗಳನ್ನು ತಗ್ಗಿಸಲು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಅಭಿವೃದ್ಧಿ ಪಾಲುದಾರರೊಂದಿಗೆ ಒಕ್ಕೂಟ ಸರ್ಕಾರವು ಕೆಲಸ ಮಾಡುತ್ತಿದೆ ಎಂದು ತಿಳಿಸಿದೆ.

“ಕೊರೊನಾದಿಂದ ಉಂಟಾಗುವ ಅಡೆತಡೆಗಳಿಂದಾಗಿ ಲಕ್ಷಾಂತರ ಭಾರತೀಯ ಮಕ್ಕಳು ಸಾಮಾನ್ಯವಾಗಿ ಪಡೆಯುವ ಲಸಿಕೆಗಳನ್ನು ತಪ್ಪಿಸಿಕೊಂಡಿರಬಹುದು, ಇದು ಭವಿಷ್ಯದಲ್ಲಿ ಸಾಂಕ್ರಮಿಕಕ್ಕೆ ಎಡೆಮಾಡುವ ಮತ್ತು ಸಾವಿಗೀಡಾಗುವ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಆರೋಪಿಸಿ ಕೆಲವು ಮಾಧ್ಯಮಗಳು ವರದಿ ಮಾಡಿವೆ” ಎಂದು ಯಾರನ್ನೂ ಹೆಸರಿಸದೆ ಒಕ್ಕೂಟ ಸರ್ಕಾರದ ಆರೋಗ್ಯ ಸಚಿವಾಲಯ ಹೇಳಿದೆ.

ಇದನ್ನೂ ಓದಿ: ಮನೆಯಲ್ಲೇ ಲಸಿಕೆ ಪಡೆದ ಸಂಸದೆ ಪ್ರಜ್ಞಾ ಠಾಕೂರ್: ಖಂಡನೆ

“ಈ ವರದಿಗಳು ಸತ್ಯಗಳನ್ನು ಆಧರಿಸಿಲ್ಲ ಮತ್ತು ಇದು ನಿಜವಾದ ಚಿತ್ರಣವನ್ನು ಪ್ರತಿಬಿಂಬಿಸುವುದಿಲ್ಲ” ಎಂದು ಸಚಿವಾಲಯ ಹೇಳಿದೆ.

ಯುನಿಸೆಫ್ ತನ್ನ ವರದಿಯಲ್ಲಿ 2020 ರಲ್ಲಿ 30 ಲಕ್ಷಕ್ಕೂ ಹೆಚ್ಚು “ಶೂನ್ಯ ಡೋಸ್ ಪಡೆದ ಮಕ್ಕಳು” ಭಾರತದಲ್ಲಿ ವಾಸಿಸುತ್ತಿದ್ದರು ಎಂದು ಹೇಳಿದೆ.

“ದಕ್ಷಿಣ ಏಷ್ಯಾದ ಸುಮಾರು 44 ಲಕ್ಷ ಮಕ್ಕಳು ಕಳೆದ ಹತ್ತು ವರ್ಷಗಳಲ್ಲಿ 2020 ವರೆಗೆ ಯಾವುದೇ ಸಾಮಾನ್ಯ ರುಟೀನ್‌ ವ್ಯಾಕ್ಸಿನೇಷನ್ ಪಡೆಯುವಲ್ಲಿ ವಿಫಲರಾಗಿದ್ದಾರೆ. ಇದರಲ್ಲಿ 30 ಲಕ್ಷಕ್ಕಿಂತಲೂ ಹೆಚ್ಚು ಮಕ್ಕಳು ಭಾರತದಲ್ಲಿ ವಾಸಿಸುತ್ತಿದ್ದರು” ಎಂದು ಯುನಿಸೆಫ್ ತನ್ನ ಹೇಳಿಕೆಯನ್ನು ತಿಳಿಸಿದೆ.

ಈ ವರದಿಯ ಬೆನ್ನಿಗೆ ಒಕ್ಕೂಟ ಸರ್ಕಾರವು, ಸಾಂಕ್ರಾಮಿಕ ರೋಗ ಹರಡಿದಾಗಿನಿಂದ, ಯುನಿವರ್ಸಲ್ ಇಮ್ಯುನೈಸೇಶನ್ ಪ್ರೋಗ್ರಾಂ (ಯುಐಪಿ) ಅಡಿಯಲ್ಲಿ ರೋಗನಿರೋಧಕ ಸೇರಿದಂತೆ ಅಗತ್ಯ ಸೇವೆಗಳನ್ನು ನಿರ್ವಹಿಸುವತ್ತ ಸಚಿವಾಲಯ ಗಮನಹರಿಸಿದೆ ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ದೆಹಲಿ ಸೇರಿ 4 ರಾಜ್ಯಗಳಲ್ಲಿ ಲಸಿಕೆ ಕೊರತೆ: ವ್ಯಾಕ್ಸಿನೇಷನ್‌‌ ಕೇಂದ್ರಗಳಿಗೆ ಬಾಗಿಲು

“ಸಚಿವಾಲಯವು ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಅಭಿವೃದ್ಧಿ ಪಾಲುದಾರರೊಂದಿಗೆ ಕೊರೊನಾ ಋಣಾತ್ಮಕ ಪರಿಣಾಮಗಳನ್ನು ತಗ್ಗಿಸಲು ಮತ್ತು ಯುಐಪಿ ಅಡಿಯಲ್ಲಿ ಮಕ್ಕಳ ಜೀವ ಉಳಿಸುವ ಲಸಿಕೆಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು, ತುರ್ತು ಕ್ರಮಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡಿದೆ” ಎಂದು ಸಚಿವಾಲಯ ತಿಳಿಸಿದೆ.

ಇದಲ್ಲದೆ, ಸರ್ಕಾರ ಮತ್ತು ಸಾರ್ವಜನಿಕ ಆರೋಗ್ಯ ಕಾರ್ಯಪಡೆಯ ಬದ್ಧತೆಯ ಪರಿಣಾಮವಾಗಿ, ದೇಶವು 2021 ರ ಮೊದಲ ತ್ರೈಮಾಸಿಕದಲ್ಲಿ (ಜನವರಿ-ಮಾರ್ಚ್) 99% ರಷ್ಟು ‘ಡಿಟಿಪಿ3’ ನೀಡಿದೆ. ಇದು ಇಲ್ಲಿಯವರೆಗೆ ನೀಡಲಾದ ಅತ್ಯಂತ ಹೆಚ್ಚಿನ ‘ಡಿಟಿಪಿ3’ ಆಗಿದೆ ಎಂದು ಅದು ಹೇಳಿದೆ.

ವಿಶೇಷವಾಗಿ ಕೊರೊನಾ ಸಾಂಕ್ರಾಮಿಕ ರೋಗದಿಂದ ಭಾರತ ತೀವ್ರವಾಗಿ ಹಾನಿಗೊಳಗಾಗಿದ್ದು, ವಿಶ್ವದಾದ್ಯಂತ ಅತಿ ಹೆಚ್ಚು 35 ಲಕ್ಷ ಅಸುರಕ್ಷಿತ ಮಕ್ಕಳನ್ನು ಹೊಂದಿದೆ ಯುನಿಸೆಫ್ ಗುರುವಾರ ಹೇಳಿತ್ತು. ಇದು 2019 ಕ್ಕೆ ಹೋಲಿಸಿದರೆ 14 ಲಕ್ಷದಷ್ಟು ಹೆಚ್ಚಾಗಿದೆ, ಈ ಹಿಂದೆ 21 ಲಕ್ಷ ಅಸುರಕ್ಷಿತ ಮಕ್ಕಳು ಭಾರತದಲ್ಲಿ ವಾಸಿಸುತ್ತಿದ್ದರು.

ಅಸುರಕ್ಷಿತ ಮಕ್ಕಳೆಂದರೆ ಲಸಿಕೆ ಪಡೆಯದ ಅಥವಾ ಅಪೂರ್ಣ ಲಸಿಕೆ ಪಡೆದ ಮಕ್ಕಳು ಎಂದರ್ಥ.

ಇದನ್ನೂ ಓದಿ: ಬ್ರೆಜಿಲ್‌: ಲಸಿಕೆ ಖರೀದಿ ಹಗರಣ – ಅಧ್ಯಕ್ಷ ಬೊಲ್ಸನಾರೊ ವಿರುದ್ಧ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...