Homeಮುಖಪುಟಸಾಮಾನ್ಯ ಲಸಿಕೆ ಪಡೆಯದ 30 ಲಕ್ಷ ಮಕ್ಕಳು ಭಾರತದಲ್ಲಿದ್ದಾರೆಂದ ವಿಶ್ವಸಂಸ್ಥೆ; ನಿರಾಕರಿಸಿದ ಸರ್ಕಾರ

ಸಾಮಾನ್ಯ ಲಸಿಕೆ ಪಡೆಯದ 30 ಲಕ್ಷ ಮಕ್ಕಳು ಭಾರತದಲ್ಲಿದ್ದಾರೆಂದ ವಿಶ್ವಸಂಸ್ಥೆ; ನಿರಾಕರಿಸಿದ ಸರ್ಕಾರ

- Advertisement -
- Advertisement -

ಸಾಮಾನ್ಯವಾಗಿ ಪಡೆಯುವ ರುಟೀನ್‌‌ ಲಸಿಕೆಯನ್ನು ಪಡೆಯದ 30 ಲಕ್ಷಕ್ಕೂ ಹೆಚ್ಚು ಮಕ್ಕಳು ಭಾರತಲ್ಲಿದ್ದಾರೆ ಎಂದು ವಿಶ್ವಸಂಸ್ಥೆಯ ಅಂಗ ಸಂಸ್ಥೆ ಯುನಿಸೆಫ್ ವರದಿ ನೀಡಿದೆ. ಇದು ವಿಶ್ವದಲ್ಲೇ ಅತೀ ಹೆಚ್ಚು ಎಂದು ವರದಿಯು ಉಲ್ಲೇಖಿಸಿದೆ. ಯುನಿಸೆಫ್‌ನ ವರದಿಯನ್ನು ನಿರಾಕರಿಸಿರುವ ಒಕ್ಕೂಟ ಸರ್ಕಾರ, ಯುನಿವರ್ಸಲ್ ಇಮ್ಯುನೈಸೇಶನ್ ಕಾರ್ಯಕ್ರಮದಡಿ ಮಕ್ಕಳಿಗೆ ಲಸಿಕೆಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದೆ.

ಕೊರೊನಾ ಪರಿಣಾಮಗಳನ್ನು ತಗ್ಗಿಸಲು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಅಭಿವೃದ್ಧಿ ಪಾಲುದಾರರೊಂದಿಗೆ ಒಕ್ಕೂಟ ಸರ್ಕಾರವು ಕೆಲಸ ಮಾಡುತ್ತಿದೆ ಎಂದು ತಿಳಿಸಿದೆ.

“ಕೊರೊನಾದಿಂದ ಉಂಟಾಗುವ ಅಡೆತಡೆಗಳಿಂದಾಗಿ ಲಕ್ಷಾಂತರ ಭಾರತೀಯ ಮಕ್ಕಳು ಸಾಮಾನ್ಯವಾಗಿ ಪಡೆಯುವ ಲಸಿಕೆಗಳನ್ನು ತಪ್ಪಿಸಿಕೊಂಡಿರಬಹುದು, ಇದು ಭವಿಷ್ಯದಲ್ಲಿ ಸಾಂಕ್ರಮಿಕಕ್ಕೆ ಎಡೆಮಾಡುವ ಮತ್ತು ಸಾವಿಗೀಡಾಗುವ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಆರೋಪಿಸಿ ಕೆಲವು ಮಾಧ್ಯಮಗಳು ವರದಿ ಮಾಡಿವೆ” ಎಂದು ಯಾರನ್ನೂ ಹೆಸರಿಸದೆ ಒಕ್ಕೂಟ ಸರ್ಕಾರದ ಆರೋಗ್ಯ ಸಚಿವಾಲಯ ಹೇಳಿದೆ.

ಇದನ್ನೂ ಓದಿ: ಮನೆಯಲ್ಲೇ ಲಸಿಕೆ ಪಡೆದ ಸಂಸದೆ ಪ್ರಜ್ಞಾ ಠಾಕೂರ್: ಖಂಡನೆ

“ಈ ವರದಿಗಳು ಸತ್ಯಗಳನ್ನು ಆಧರಿಸಿಲ್ಲ ಮತ್ತು ಇದು ನಿಜವಾದ ಚಿತ್ರಣವನ್ನು ಪ್ರತಿಬಿಂಬಿಸುವುದಿಲ್ಲ” ಎಂದು ಸಚಿವಾಲಯ ಹೇಳಿದೆ.

ಯುನಿಸೆಫ್ ತನ್ನ ವರದಿಯಲ್ಲಿ 2020 ರಲ್ಲಿ 30 ಲಕ್ಷಕ್ಕೂ ಹೆಚ್ಚು “ಶೂನ್ಯ ಡೋಸ್ ಪಡೆದ ಮಕ್ಕಳು” ಭಾರತದಲ್ಲಿ ವಾಸಿಸುತ್ತಿದ್ದರು ಎಂದು ಹೇಳಿದೆ.

“ದಕ್ಷಿಣ ಏಷ್ಯಾದ ಸುಮಾರು 44 ಲಕ್ಷ ಮಕ್ಕಳು ಕಳೆದ ಹತ್ತು ವರ್ಷಗಳಲ್ಲಿ 2020 ವರೆಗೆ ಯಾವುದೇ ಸಾಮಾನ್ಯ ರುಟೀನ್‌ ವ್ಯಾಕ್ಸಿನೇಷನ್ ಪಡೆಯುವಲ್ಲಿ ವಿಫಲರಾಗಿದ್ದಾರೆ. ಇದರಲ್ಲಿ 30 ಲಕ್ಷಕ್ಕಿಂತಲೂ ಹೆಚ್ಚು ಮಕ್ಕಳು ಭಾರತದಲ್ಲಿ ವಾಸಿಸುತ್ತಿದ್ದರು” ಎಂದು ಯುನಿಸೆಫ್ ತನ್ನ ಹೇಳಿಕೆಯನ್ನು ತಿಳಿಸಿದೆ.

ಈ ವರದಿಯ ಬೆನ್ನಿಗೆ ಒಕ್ಕೂಟ ಸರ್ಕಾರವು, ಸಾಂಕ್ರಾಮಿಕ ರೋಗ ಹರಡಿದಾಗಿನಿಂದ, ಯುನಿವರ್ಸಲ್ ಇಮ್ಯುನೈಸೇಶನ್ ಪ್ರೋಗ್ರಾಂ (ಯುಐಪಿ) ಅಡಿಯಲ್ಲಿ ರೋಗನಿರೋಧಕ ಸೇರಿದಂತೆ ಅಗತ್ಯ ಸೇವೆಗಳನ್ನು ನಿರ್ವಹಿಸುವತ್ತ ಸಚಿವಾಲಯ ಗಮನಹರಿಸಿದೆ ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ದೆಹಲಿ ಸೇರಿ 4 ರಾಜ್ಯಗಳಲ್ಲಿ ಲಸಿಕೆ ಕೊರತೆ: ವ್ಯಾಕ್ಸಿನೇಷನ್‌‌ ಕೇಂದ್ರಗಳಿಗೆ ಬಾಗಿಲು

“ಸಚಿವಾಲಯವು ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಅಭಿವೃದ್ಧಿ ಪಾಲುದಾರರೊಂದಿಗೆ ಕೊರೊನಾ ಋಣಾತ್ಮಕ ಪರಿಣಾಮಗಳನ್ನು ತಗ್ಗಿಸಲು ಮತ್ತು ಯುಐಪಿ ಅಡಿಯಲ್ಲಿ ಮಕ್ಕಳ ಜೀವ ಉಳಿಸುವ ಲಸಿಕೆಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು, ತುರ್ತು ಕ್ರಮಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡಿದೆ” ಎಂದು ಸಚಿವಾಲಯ ತಿಳಿಸಿದೆ.

ಇದಲ್ಲದೆ, ಸರ್ಕಾರ ಮತ್ತು ಸಾರ್ವಜನಿಕ ಆರೋಗ್ಯ ಕಾರ್ಯಪಡೆಯ ಬದ್ಧತೆಯ ಪರಿಣಾಮವಾಗಿ, ದೇಶವು 2021 ರ ಮೊದಲ ತ್ರೈಮಾಸಿಕದಲ್ಲಿ (ಜನವರಿ-ಮಾರ್ಚ್) 99% ರಷ್ಟು ‘ಡಿಟಿಪಿ3’ ನೀಡಿದೆ. ಇದು ಇಲ್ಲಿಯವರೆಗೆ ನೀಡಲಾದ ಅತ್ಯಂತ ಹೆಚ್ಚಿನ ‘ಡಿಟಿಪಿ3’ ಆಗಿದೆ ಎಂದು ಅದು ಹೇಳಿದೆ.

ವಿಶೇಷವಾಗಿ ಕೊರೊನಾ ಸಾಂಕ್ರಾಮಿಕ ರೋಗದಿಂದ ಭಾರತ ತೀವ್ರವಾಗಿ ಹಾನಿಗೊಳಗಾಗಿದ್ದು, ವಿಶ್ವದಾದ್ಯಂತ ಅತಿ ಹೆಚ್ಚು 35 ಲಕ್ಷ ಅಸುರಕ್ಷಿತ ಮಕ್ಕಳನ್ನು ಹೊಂದಿದೆ ಯುನಿಸೆಫ್ ಗುರುವಾರ ಹೇಳಿತ್ತು. ಇದು 2019 ಕ್ಕೆ ಹೋಲಿಸಿದರೆ 14 ಲಕ್ಷದಷ್ಟು ಹೆಚ್ಚಾಗಿದೆ, ಈ ಹಿಂದೆ 21 ಲಕ್ಷ ಅಸುರಕ್ಷಿತ ಮಕ್ಕಳು ಭಾರತದಲ್ಲಿ ವಾಸಿಸುತ್ತಿದ್ದರು.

ಅಸುರಕ್ಷಿತ ಮಕ್ಕಳೆಂದರೆ ಲಸಿಕೆ ಪಡೆಯದ ಅಥವಾ ಅಪೂರ್ಣ ಲಸಿಕೆ ಪಡೆದ ಮಕ್ಕಳು ಎಂದರ್ಥ.

ಇದನ್ನೂ ಓದಿ: ಬ್ರೆಜಿಲ್‌: ಲಸಿಕೆ ಖರೀದಿ ಹಗರಣ – ಅಧ್ಯಕ್ಷ ಬೊಲ್ಸನಾರೊ ವಿರುದ್ಧ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪರಿಶಿಷ್ಟ ಜಾತಿ ಪಟ್ಟಿಗೆ ಜಮ್ಮು-ಕಾಶ್ಮೀರದ ವಾಲ್ಮೀಕಿ ಸಮುದಾಯ: ಒಕ್ಕೂಟ ಸರ್ಕಾರ

ಜಮ್ಮು ಮತ್ತು ಕಾಶ್ಮೀರದ ವಾಲ್ಮೀಕಿ ಸಮುದಾಯವನ್ನು ಈಗ ಅಧಿಕೃತವಾಗಿ ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಲಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಬುಧವಾರ ಸಂಸತ್ತಿಗೆ ತಿಳಿಸಿದೆ. ಇತ್ತೀಚಿನ ವರ್ಷಗಳಲ್ಲಿ ಪ್ರಕ್ರಿಯೆಗೊಳಿಸಲಾದ...

ತಿರುಪತಿ ದೇಣಿಗೆ ಕಳ್ಳತನ ಪ್ರಕರಣ: ಕಾನೂನು ಕ್ರಮ ತೆಗೆದುಕೊಳ್ಳವಂತೆ ‘ಸಿಐಡಿ-ಎಸಿಬಿ’ಗೆ ಹೈಕೋರ್ಟ್ ನಿರ್ದೇಶನ

ತಿರುಮಲ ತಿರುಪತಿ ದೇವಸ್ಥಾನದ ಪರಕಮಣಿ (ದೇಣಿಗೆ ಪೆಟ್ಟಿಗೆ) ಕಳ್ಳತನ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಂಧ್ರಪ್ರದೇಶ ಹೈಕೋರ್ಟ್ ರಾಜ್ಯದ ಅಪರಾಧ ತನಿಖಾ ಇಲಾಖೆ (ಸಿಐಡಿ) ಮತ್ತು ಭ್ರಷ್ಟಾಚಾರ ನಿಗ್ರಹ ದಳ...

ದಲಿತರ ಮನೆಯಲ್ಲಿ ಊಟ ಮಾಡಿದ ಆರ್‌ಎಸ್‌ಎಸ್‌ ಕಾರ್ಯಕರ್ತನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಗ್ರಾಮೀಣ ಭಾರತದ ಕೆಲವು ಭಾಗಗಳಲ್ಲಿ ಜಾತಿ ಪೂರ್ವಾಗ್ರಹಗಳು ಎಷ್ಟು ಆಳವಾಗಿ ಉಳಿದಿವೆ ಎಂಬುದನ್ನು ನೆನಪಿಸುವ ರೀತಿಯಲ್ಲಿ, ಮಧ್ಯಪ್ರದೇಶದ ರೈಸೇನ್ ಜಿಲ್ಲೆಯ ಹಳ್ಳಿಯೊಂದರಿಂದ ಸಾಮಾಜಿಕ ಬಹಿಷ್ಕಾರ ಮತ್ತು ಅಸ್ಪೃಶ್ಯತೆಯ ಪ್ರಕರಣ ಬೆಳಕಿಗೆ ಬಂದಿದೆ. ಆರ್‌ಎಸ್‌ಎಸ್...

ಅಸ್ಸಾಮಿ ಗಾಯಕನ ಬಂಧನ ಬಗ್ಗೆ ಟೈಮ್ಸ್ ನೌ ನವಭಾರತ್‌ ಪೂರ್ವಾಗ್ರಹ ಪೀಡಿತ ವರದಿ : ವಾರದೊಳಗೆ ತೆಗೆದು ಹಾಕಲು ಎನ್‌ಬಿಡಿಎಸ್‌ಎ ಆದೇಶ

ಸೆಪ್ಟೆಂಬರ್ 2024ರಲ್ಲಿ ಅಸ್ಸಾಮಿ ಗಾಯಕ ಅಲ್ತಾಫ್ ಹುಸೇನ್ ಬಂಧನದ ಬಗ್ಗೆ ಪ್ರಸಾರವಾದ ಕಾರ್ಯಕ್ರಮದ ಭಾಗಗಳನ್ನು ತೆಗೆದುಹಾಕುವಂತೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರವು (ಎನ್‌ಬಿಡಿಎಸ್‌ಎ) ಟೈಮ್ಸ್ ನೌ ನವಭಾರತ್‌ಗೆ ನಿರ್ದೇಶನ ನೀಡಿದೆ. ಡಿಸೆಂಬರ್...

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...

ಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ...