Homeಮುಖಪುಟಸಾಮಾನ್ಯ ಲಸಿಕೆ ಪಡೆಯದ 30 ಲಕ್ಷ ಮಕ್ಕಳು ಭಾರತದಲ್ಲಿದ್ದಾರೆಂದ ವಿಶ್ವಸಂಸ್ಥೆ; ನಿರಾಕರಿಸಿದ ಸರ್ಕಾರ

ಸಾಮಾನ್ಯ ಲಸಿಕೆ ಪಡೆಯದ 30 ಲಕ್ಷ ಮಕ್ಕಳು ಭಾರತದಲ್ಲಿದ್ದಾರೆಂದ ವಿಶ್ವಸಂಸ್ಥೆ; ನಿರಾಕರಿಸಿದ ಸರ್ಕಾರ

- Advertisement -
- Advertisement -

ಸಾಮಾನ್ಯವಾಗಿ ಪಡೆಯುವ ರುಟೀನ್‌‌ ಲಸಿಕೆಯನ್ನು ಪಡೆಯದ 30 ಲಕ್ಷಕ್ಕೂ ಹೆಚ್ಚು ಮಕ್ಕಳು ಭಾರತಲ್ಲಿದ್ದಾರೆ ಎಂದು ವಿಶ್ವಸಂಸ್ಥೆಯ ಅಂಗ ಸಂಸ್ಥೆ ಯುನಿಸೆಫ್ ವರದಿ ನೀಡಿದೆ. ಇದು ವಿಶ್ವದಲ್ಲೇ ಅತೀ ಹೆಚ್ಚು ಎಂದು ವರದಿಯು ಉಲ್ಲೇಖಿಸಿದೆ. ಯುನಿಸೆಫ್‌ನ ವರದಿಯನ್ನು ನಿರಾಕರಿಸಿರುವ ಒಕ್ಕೂಟ ಸರ್ಕಾರ, ಯುನಿವರ್ಸಲ್ ಇಮ್ಯುನೈಸೇಶನ್ ಕಾರ್ಯಕ್ರಮದಡಿ ಮಕ್ಕಳಿಗೆ ಲಸಿಕೆಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದೆ.

ಕೊರೊನಾ ಪರಿಣಾಮಗಳನ್ನು ತಗ್ಗಿಸಲು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಅಭಿವೃದ್ಧಿ ಪಾಲುದಾರರೊಂದಿಗೆ ಒಕ್ಕೂಟ ಸರ್ಕಾರವು ಕೆಲಸ ಮಾಡುತ್ತಿದೆ ಎಂದು ತಿಳಿಸಿದೆ.

“ಕೊರೊನಾದಿಂದ ಉಂಟಾಗುವ ಅಡೆತಡೆಗಳಿಂದಾಗಿ ಲಕ್ಷಾಂತರ ಭಾರತೀಯ ಮಕ್ಕಳು ಸಾಮಾನ್ಯವಾಗಿ ಪಡೆಯುವ ಲಸಿಕೆಗಳನ್ನು ತಪ್ಪಿಸಿಕೊಂಡಿರಬಹುದು, ಇದು ಭವಿಷ್ಯದಲ್ಲಿ ಸಾಂಕ್ರಮಿಕಕ್ಕೆ ಎಡೆಮಾಡುವ ಮತ್ತು ಸಾವಿಗೀಡಾಗುವ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಆರೋಪಿಸಿ ಕೆಲವು ಮಾಧ್ಯಮಗಳು ವರದಿ ಮಾಡಿವೆ” ಎಂದು ಯಾರನ್ನೂ ಹೆಸರಿಸದೆ ಒಕ್ಕೂಟ ಸರ್ಕಾರದ ಆರೋಗ್ಯ ಸಚಿವಾಲಯ ಹೇಳಿದೆ.

ಇದನ್ನೂ ಓದಿ: ಮನೆಯಲ್ಲೇ ಲಸಿಕೆ ಪಡೆದ ಸಂಸದೆ ಪ್ರಜ್ಞಾ ಠಾಕೂರ್: ಖಂಡನೆ

“ಈ ವರದಿಗಳು ಸತ್ಯಗಳನ್ನು ಆಧರಿಸಿಲ್ಲ ಮತ್ತು ಇದು ನಿಜವಾದ ಚಿತ್ರಣವನ್ನು ಪ್ರತಿಬಿಂಬಿಸುವುದಿಲ್ಲ” ಎಂದು ಸಚಿವಾಲಯ ಹೇಳಿದೆ.

ಯುನಿಸೆಫ್ ತನ್ನ ವರದಿಯಲ್ಲಿ 2020 ರಲ್ಲಿ 30 ಲಕ್ಷಕ್ಕೂ ಹೆಚ್ಚು “ಶೂನ್ಯ ಡೋಸ್ ಪಡೆದ ಮಕ್ಕಳು” ಭಾರತದಲ್ಲಿ ವಾಸಿಸುತ್ತಿದ್ದರು ಎಂದು ಹೇಳಿದೆ.

“ದಕ್ಷಿಣ ಏಷ್ಯಾದ ಸುಮಾರು 44 ಲಕ್ಷ ಮಕ್ಕಳು ಕಳೆದ ಹತ್ತು ವರ್ಷಗಳಲ್ಲಿ 2020 ವರೆಗೆ ಯಾವುದೇ ಸಾಮಾನ್ಯ ರುಟೀನ್‌ ವ್ಯಾಕ್ಸಿನೇಷನ್ ಪಡೆಯುವಲ್ಲಿ ವಿಫಲರಾಗಿದ್ದಾರೆ. ಇದರಲ್ಲಿ 30 ಲಕ್ಷಕ್ಕಿಂತಲೂ ಹೆಚ್ಚು ಮಕ್ಕಳು ಭಾರತದಲ್ಲಿ ವಾಸಿಸುತ್ತಿದ್ದರು” ಎಂದು ಯುನಿಸೆಫ್ ತನ್ನ ಹೇಳಿಕೆಯನ್ನು ತಿಳಿಸಿದೆ.

ಈ ವರದಿಯ ಬೆನ್ನಿಗೆ ಒಕ್ಕೂಟ ಸರ್ಕಾರವು, ಸಾಂಕ್ರಾಮಿಕ ರೋಗ ಹರಡಿದಾಗಿನಿಂದ, ಯುನಿವರ್ಸಲ್ ಇಮ್ಯುನೈಸೇಶನ್ ಪ್ರೋಗ್ರಾಂ (ಯುಐಪಿ) ಅಡಿಯಲ್ಲಿ ರೋಗನಿರೋಧಕ ಸೇರಿದಂತೆ ಅಗತ್ಯ ಸೇವೆಗಳನ್ನು ನಿರ್ವಹಿಸುವತ್ತ ಸಚಿವಾಲಯ ಗಮನಹರಿಸಿದೆ ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ದೆಹಲಿ ಸೇರಿ 4 ರಾಜ್ಯಗಳಲ್ಲಿ ಲಸಿಕೆ ಕೊರತೆ: ವ್ಯಾಕ್ಸಿನೇಷನ್‌‌ ಕೇಂದ್ರಗಳಿಗೆ ಬಾಗಿಲು

“ಸಚಿವಾಲಯವು ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಅಭಿವೃದ್ಧಿ ಪಾಲುದಾರರೊಂದಿಗೆ ಕೊರೊನಾ ಋಣಾತ್ಮಕ ಪರಿಣಾಮಗಳನ್ನು ತಗ್ಗಿಸಲು ಮತ್ತು ಯುಐಪಿ ಅಡಿಯಲ್ಲಿ ಮಕ್ಕಳ ಜೀವ ಉಳಿಸುವ ಲಸಿಕೆಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು, ತುರ್ತು ಕ್ರಮಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡಿದೆ” ಎಂದು ಸಚಿವಾಲಯ ತಿಳಿಸಿದೆ.

ಇದಲ್ಲದೆ, ಸರ್ಕಾರ ಮತ್ತು ಸಾರ್ವಜನಿಕ ಆರೋಗ್ಯ ಕಾರ್ಯಪಡೆಯ ಬದ್ಧತೆಯ ಪರಿಣಾಮವಾಗಿ, ದೇಶವು 2021 ರ ಮೊದಲ ತ್ರೈಮಾಸಿಕದಲ್ಲಿ (ಜನವರಿ-ಮಾರ್ಚ್) 99% ರಷ್ಟು ‘ಡಿಟಿಪಿ3’ ನೀಡಿದೆ. ಇದು ಇಲ್ಲಿಯವರೆಗೆ ನೀಡಲಾದ ಅತ್ಯಂತ ಹೆಚ್ಚಿನ ‘ಡಿಟಿಪಿ3’ ಆಗಿದೆ ಎಂದು ಅದು ಹೇಳಿದೆ.

ವಿಶೇಷವಾಗಿ ಕೊರೊನಾ ಸಾಂಕ್ರಾಮಿಕ ರೋಗದಿಂದ ಭಾರತ ತೀವ್ರವಾಗಿ ಹಾನಿಗೊಳಗಾಗಿದ್ದು, ವಿಶ್ವದಾದ್ಯಂತ ಅತಿ ಹೆಚ್ಚು 35 ಲಕ್ಷ ಅಸುರಕ್ಷಿತ ಮಕ್ಕಳನ್ನು ಹೊಂದಿದೆ ಯುನಿಸೆಫ್ ಗುರುವಾರ ಹೇಳಿತ್ತು. ಇದು 2019 ಕ್ಕೆ ಹೋಲಿಸಿದರೆ 14 ಲಕ್ಷದಷ್ಟು ಹೆಚ್ಚಾಗಿದೆ, ಈ ಹಿಂದೆ 21 ಲಕ್ಷ ಅಸುರಕ್ಷಿತ ಮಕ್ಕಳು ಭಾರತದಲ್ಲಿ ವಾಸಿಸುತ್ತಿದ್ದರು.

ಅಸುರಕ್ಷಿತ ಮಕ್ಕಳೆಂದರೆ ಲಸಿಕೆ ಪಡೆಯದ ಅಥವಾ ಅಪೂರ್ಣ ಲಸಿಕೆ ಪಡೆದ ಮಕ್ಕಳು ಎಂದರ್ಥ.

ಇದನ್ನೂ ಓದಿ: ಬ್ರೆಜಿಲ್‌: ಲಸಿಕೆ ಖರೀದಿ ಹಗರಣ – ಅಧ್ಯಕ್ಷ ಬೊಲ್ಸನಾರೊ ವಿರುದ್ಧ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...