Homeಕರೋನಾ ತಲ್ಲಣ35 ಲಕ್ಷ ಕೊರೊನಾ! ಪ್ರಕರಣಗಳು: ಜಾಗತಿಕವಾಗಿ ಹೊಸ ದಾಖಲೆ ನಿರ್ಮಿಸಿದ ಭಾರತ

35 ಲಕ್ಷ ಕೊರೊನಾ! ಪ್ರಕರಣಗಳು: ಜಾಗತಿಕವಾಗಿ ಹೊಸ ದಾಖಲೆ ನಿರ್ಮಿಸಿದ ಭಾರತ

- Advertisement -
- Advertisement -

ಕಳೆದ 24 ಗಂಟೆಗಳಲ್ಲಿ 78,761 ಹೊಸ ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಭಾರತದ ಒಟ್ಟು ಪ್ರಕರಣಗಳ ಸಂಖ್ಯೆ 35 ಲಕ್ಷ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು ಬೆಳಿಗ್ಗೆ ತಿಳಿಸಿದೆ.

ಈ ಸಾಂಕ್ರಾಮಿಕ ರೋಗದ ಪ್ರಾರಂಭದಿಂದ ಹಿಡಿದು ಇಲ್ಲಿಯವರೆಗೆ, ಒಂದು ದಿನದಲ್ಲಿ ಇಷ್ಟು ಅತಿ ಹೆಚ್ಚು ಪ್ರಕರಣಗಳನ್ನು ಜಗತ್ತಿನ ಯಾವ ದೇಶವೂ ದಾಖಲಿಸಿರಲಿಲ್ಲ.

ಎಎಫ್‌ಪಿ ಲೆಕ್ಕಾಚಾರದ ಪ್ರಕಾರ, ಈ ಹಿಂದೆ, ಜುಲೈ 17 ರಂದು 77,638 ದೈನಂದಿನ ಪ್ರಕರಣಗಳ ದಾಖಲೆಯೊಂದಿಗೆ ಅಮೇರಿಕಾ ಈ ದಾಖಲೆಯನ್ನು ನಿರ್ಮಿಸಿತ್ತು.

ಕಳೆದ 24 ಗಂಟೆಗಳಲ್ಲಿ, ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದಂತೆ 948 ಸಾವುಗಳು ಸಂಭವಿಸಿದ್ದು, ಒಟ್ಟು ಸಾವುಗಳ ಸಂಖ್ಯೆ 63,498 ಕ್ಕೆ ಏರಿದೆ. ಈವರೆಗೆ ಸುಮಾರು 27 ಲಕ್ಷ ಜನರು ಚೇತರಿಸಿಕೊಂಡಿದ್ದಾರೆ. ಇಂದಿನವರೆಗೆ ಚೇತರಿಕೆ ದರ ಶೇಕಡಾ 76.6 ರಷ್ಟಿದೆ.

ಇದನ್ನೂ ಓದಿ: ಕೊರೊನಾ ಸರಣಿ-1: ಒಮ್ಮೆ ಕೊರೊನಾ ಬಂದವರಿಗೆ ಮತ್ತೆ ಬರುವುದಿಲ್ಲವಾ? – ಡಾ.ವಾಸು ಎಚ್‌.ವಿ

ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಕುರಿತ ಪ್ರಮುಖ ಅಂಶಗಳು:

  • ಕೊರೊನಾ ಸಾಂಕ್ರಾಮಿಕ ರೋಗದಿಂದ ಬಳಲುತ್ತಿರುವ ರಾಷ್ಟ್ರಗಳ ಪೈಕಿ, ಅಮೇರಿಕಾ ಮತ್ತು ಬ್ರೆಜಿಲ್ ನಂತರದಲ್ಲಿ, ಭಾರತವು ಮೂರನೇ ಅತಿ ಹೆಚ್ಚು ಹಾನಿಗೊಳಗಾದ ದೇಶವಾಗಿದೆ. ಆಗಸ್ಟ್ 4 ರಿಂದ ದೇಶದಲ್ಲಿ ಅತಿ ಹೆಚ್ಚು ಏಕದಿನ ಪ್ರಕರಣಗಳು ದಾಖಲಾಗಿದೆ.
  • 35 ಲಕ್ಷ ಪ್ರಕರಣಗಳನ್ನು ದಾಟಲು ಭಾರತಕ್ಕೆ 213 ದಿನಗಳು ಬೇಕಾಯಿತು. ಕಳೆದ ಒಂದು ವಾರದಲ್ಲಿ ದೇಶವು 5 ಲಕ್ಷ ಪ್ರಕರಣಗಳನ್ನು ದಾಖಲಿಸಿದೆ.
  • ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು ಮತ್ತು ಉತ್ತರ ಪ್ರದೇಶಗಳಲ್ಲಿ ಅತಿ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿವೆ. ಸರ್ಕಾರದ ಅಂಕಿಅಂಶಗಳ ಪ್ರಕಾರ ಈ ಐದು ರಾಜ್ಯಗಳಲ್ಲಿ ಅತಿ ಹೆಚ್ಚು ಸಾವುಗಳು ದಾಖಲಾಗಿವೆ.
  • ಸೆಪ್ಟೆಂಬರ್ 7 ರಿಂದ ಮೆಟ್ರೊ ಸೇವೆಗಳನ್ನು ಪುನರಾರಂಭಿಸಲು ಸರ್ಕಾರವು ನಾಲ್ಕನೇ ಹಂತದ ಅನ್‌ಲಾಕ್ ಮಾರ್ಗಸೂಚಿಗಳನ್ನು ಶನಿವಾರ ಪ್ರಕಟಿಸಿದೆ. ಕಂಟೈನ್‌ಮೆಂಟ್ ವಲಯಗಳ ಹೊರಗೆ ಲಾಕ್‌ಡೌನ್‌ಗಳನ್ನು ವಿಧಿಸಲಾಗುವುದಿಲ್ಲ ಎಂದು ರಾಜ್ಯಗಳಿಗೆ ತಿಳಿಸಲಾಗಿದೆ.
  • ಸೆಪ್ಟೆಂಬರ್ 21 ರಿಂದ ಹೊಸ ನಿಯಮಗಳ ಭಾಗವಾಗಿ ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಕ್ರೀಡೆ, ಧಾರ್ಮಿಕ ಮತ್ತು ಇತರ ಕಾರ್ಯಕ್ರಮಗಳನ್ನು 100 ಜನರ ಮಿತಿಯೊಂದಿಗೆ ಅನುಮತಿಸಲಾಗುವುದು. ಶಾಲೆಗಳು, ಕಾಲೇಜುಗಳು, ಈಜುಕೊಳಗಳು ಮತ್ತು ಒಳಾಂಗಣ ಚಿತ್ರಮಂದಿರಗಳಿಗೆ ನಿರ್ಭಂದ. ಅನ್ಲಾಕ್ 4 ಎಂದು ಕರೆಯಲ್ಪಡುವ ಈ ಹಂತವು ಸೆಪ್ಟೆಂಬರ್ 30 ರವರೆಗೆ ಜಾರಿಯಲ್ಲಿರುತ್ತದೆ.
  • ರೋಗದ ಹರಡುವಿಕೆಯ ಸೂಚಕವಾಗಿರುವ ಭಾರತದ ಸಕಾರಾತ್ಮಕ ದರವು ಇಂದು ಬೆಳಿಗ್ಗೆ ಶೇಕಡಾ 7.46 ರಷ್ಟಿದೆ; ಸಾವಿನ ಪ್ರಮಾಣವು ಶೇಕಡಾ 1.79 ರಷ್ಟಿದೆ.
  • ಸುಮಾರು 130 ಕೋಟಿ ಜನಸಂಖ್ಯೆ ಹೊಂದಿರುವ ಭಾರತ, ಇದುವರೆಗೆ 4.14 ಕೋಟಿ ಮಾದರಿಗಳನ್ನು ಪರೀಕ್ಷಿಸಿದೆ; ನಿನ್ನೆಯಿಂದ ಇಲ್ಲಿಯವರೆಗೆ 10.55 ಲಕ್ಷ ಮಾದರಿಗಳನ್ನು ಪರೀಕ್ಷಿಸಲಾಗಿದೆ.
  • ಕಳೆದ ನಾಲ್ಕು ದಿನಗಳಿಂದ ದೇಶವು 75,000 ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸುತ್ತಿದೆ. ಇದು ಗುರುವಾರ 77,266 ಪ್ರಕರಣಗಳೊಂದಿಗೆ ಅತಿದೊಡ್ಡ ಏಕದಿನ ಏರಿಕೆಯನ್ನು ದಾಖಲಿಸಿದೆ.
  • ಭಾರತದ ಕೊರೊನಾ ವೈರಸ್ ಪ್ರಕರಣಗಳು ಮತ್ತು ಸಾವುಗಳು, ಜಾಗತಿಕ ಸರಾಸರಿಗೆ ಹೋಲಿಸಿದರೆ (ಪ್ರತಿ ದಶಲಕ್ಷ ಜನಸಂಖ್ಯೆಗೆ) ಅತ್ಯಂತ ಕಡಿಮೆ ಎಂದು ಕೊರೊನಾ ಕುರಿತು ಉನ್ನತ ಮಟ್ಟದ ಮಂತ್ರಿಗಳ ಗುಂಪಿಗೆ (GoM) ಶನಿವಾರ ಸುದ್ದಿ ಸಂಸ್ಥೆ ಪಿಟಿಐ ತಿಳಿಸಲಾಗಿದೆ ಎಂದು ಎನ್ ಡಿ ಟಿ ವಿ ವರದಿ ಮಾಡಿದೆ.
  • ವಿಶ್ವಾದ್ಯಂತ, ಇದುವರೆಗೆ 25 ದಶಲಕ್ಷಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. 8 ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಕೊರೊನಾ ವಿಚಾರದಲ್ಲಿ ತಬ್ಲೀಘಿಗಳನ್ನು ’ಬಲಿಪಶು’ ಮಾಡಲಾಗಿದೆ: ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...