Homeಕರೋನಾ ತಲ್ಲಣ35 ಲಕ್ಷ ಕೊರೊನಾ! ಪ್ರಕರಣಗಳು: ಜಾಗತಿಕವಾಗಿ ಹೊಸ ದಾಖಲೆ ನಿರ್ಮಿಸಿದ ಭಾರತ

35 ಲಕ್ಷ ಕೊರೊನಾ! ಪ್ರಕರಣಗಳು: ಜಾಗತಿಕವಾಗಿ ಹೊಸ ದಾಖಲೆ ನಿರ್ಮಿಸಿದ ಭಾರತ

- Advertisement -
- Advertisement -

ಕಳೆದ 24 ಗಂಟೆಗಳಲ್ಲಿ 78,761 ಹೊಸ ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಭಾರತದ ಒಟ್ಟು ಪ್ರಕರಣಗಳ ಸಂಖ್ಯೆ 35 ಲಕ್ಷ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು ಬೆಳಿಗ್ಗೆ ತಿಳಿಸಿದೆ.

ಈ ಸಾಂಕ್ರಾಮಿಕ ರೋಗದ ಪ್ರಾರಂಭದಿಂದ ಹಿಡಿದು ಇಲ್ಲಿಯವರೆಗೆ, ಒಂದು ದಿನದಲ್ಲಿ ಇಷ್ಟು ಅತಿ ಹೆಚ್ಚು ಪ್ರಕರಣಗಳನ್ನು ಜಗತ್ತಿನ ಯಾವ ದೇಶವೂ ದಾಖಲಿಸಿರಲಿಲ್ಲ.

ಎಎಫ್‌ಪಿ ಲೆಕ್ಕಾಚಾರದ ಪ್ರಕಾರ, ಈ ಹಿಂದೆ, ಜುಲೈ 17 ರಂದು 77,638 ದೈನಂದಿನ ಪ್ರಕರಣಗಳ ದಾಖಲೆಯೊಂದಿಗೆ ಅಮೇರಿಕಾ ಈ ದಾಖಲೆಯನ್ನು ನಿರ್ಮಿಸಿತ್ತು.

ಕಳೆದ 24 ಗಂಟೆಗಳಲ್ಲಿ, ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದಂತೆ 948 ಸಾವುಗಳು ಸಂಭವಿಸಿದ್ದು, ಒಟ್ಟು ಸಾವುಗಳ ಸಂಖ್ಯೆ 63,498 ಕ್ಕೆ ಏರಿದೆ. ಈವರೆಗೆ ಸುಮಾರು 27 ಲಕ್ಷ ಜನರು ಚೇತರಿಸಿಕೊಂಡಿದ್ದಾರೆ. ಇಂದಿನವರೆಗೆ ಚೇತರಿಕೆ ದರ ಶೇಕಡಾ 76.6 ರಷ್ಟಿದೆ.

ಇದನ್ನೂ ಓದಿ: ಕೊರೊನಾ ಸರಣಿ-1: ಒಮ್ಮೆ ಕೊರೊನಾ ಬಂದವರಿಗೆ ಮತ್ತೆ ಬರುವುದಿಲ್ಲವಾ? – ಡಾ.ವಾಸು ಎಚ್‌.ವಿ

ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಕುರಿತ ಪ್ರಮುಖ ಅಂಶಗಳು:

  • ಕೊರೊನಾ ಸಾಂಕ್ರಾಮಿಕ ರೋಗದಿಂದ ಬಳಲುತ್ತಿರುವ ರಾಷ್ಟ್ರಗಳ ಪೈಕಿ, ಅಮೇರಿಕಾ ಮತ್ತು ಬ್ರೆಜಿಲ್ ನಂತರದಲ್ಲಿ, ಭಾರತವು ಮೂರನೇ ಅತಿ ಹೆಚ್ಚು ಹಾನಿಗೊಳಗಾದ ದೇಶವಾಗಿದೆ. ಆಗಸ್ಟ್ 4 ರಿಂದ ದೇಶದಲ್ಲಿ ಅತಿ ಹೆಚ್ಚು ಏಕದಿನ ಪ್ರಕರಣಗಳು ದಾಖಲಾಗಿದೆ.
  • 35 ಲಕ್ಷ ಪ್ರಕರಣಗಳನ್ನು ದಾಟಲು ಭಾರತಕ್ಕೆ 213 ದಿನಗಳು ಬೇಕಾಯಿತು. ಕಳೆದ ಒಂದು ವಾರದಲ್ಲಿ ದೇಶವು 5 ಲಕ್ಷ ಪ್ರಕರಣಗಳನ್ನು ದಾಖಲಿಸಿದೆ.
  • ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು ಮತ್ತು ಉತ್ತರ ಪ್ರದೇಶಗಳಲ್ಲಿ ಅತಿ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿವೆ. ಸರ್ಕಾರದ ಅಂಕಿಅಂಶಗಳ ಪ್ರಕಾರ ಈ ಐದು ರಾಜ್ಯಗಳಲ್ಲಿ ಅತಿ ಹೆಚ್ಚು ಸಾವುಗಳು ದಾಖಲಾಗಿವೆ.
  • ಸೆಪ್ಟೆಂಬರ್ 7 ರಿಂದ ಮೆಟ್ರೊ ಸೇವೆಗಳನ್ನು ಪುನರಾರಂಭಿಸಲು ಸರ್ಕಾರವು ನಾಲ್ಕನೇ ಹಂತದ ಅನ್‌ಲಾಕ್ ಮಾರ್ಗಸೂಚಿಗಳನ್ನು ಶನಿವಾರ ಪ್ರಕಟಿಸಿದೆ. ಕಂಟೈನ್‌ಮೆಂಟ್ ವಲಯಗಳ ಹೊರಗೆ ಲಾಕ್‌ಡೌನ್‌ಗಳನ್ನು ವಿಧಿಸಲಾಗುವುದಿಲ್ಲ ಎಂದು ರಾಜ್ಯಗಳಿಗೆ ತಿಳಿಸಲಾಗಿದೆ.
  • ಸೆಪ್ಟೆಂಬರ್ 21 ರಿಂದ ಹೊಸ ನಿಯಮಗಳ ಭಾಗವಾಗಿ ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಕ್ರೀಡೆ, ಧಾರ್ಮಿಕ ಮತ್ತು ಇತರ ಕಾರ್ಯಕ್ರಮಗಳನ್ನು 100 ಜನರ ಮಿತಿಯೊಂದಿಗೆ ಅನುಮತಿಸಲಾಗುವುದು. ಶಾಲೆಗಳು, ಕಾಲೇಜುಗಳು, ಈಜುಕೊಳಗಳು ಮತ್ತು ಒಳಾಂಗಣ ಚಿತ್ರಮಂದಿರಗಳಿಗೆ ನಿರ್ಭಂದ. ಅನ್ಲಾಕ್ 4 ಎಂದು ಕರೆಯಲ್ಪಡುವ ಈ ಹಂತವು ಸೆಪ್ಟೆಂಬರ್ 30 ರವರೆಗೆ ಜಾರಿಯಲ್ಲಿರುತ್ತದೆ.
  • ರೋಗದ ಹರಡುವಿಕೆಯ ಸೂಚಕವಾಗಿರುವ ಭಾರತದ ಸಕಾರಾತ್ಮಕ ದರವು ಇಂದು ಬೆಳಿಗ್ಗೆ ಶೇಕಡಾ 7.46 ರಷ್ಟಿದೆ; ಸಾವಿನ ಪ್ರಮಾಣವು ಶೇಕಡಾ 1.79 ರಷ್ಟಿದೆ.
  • ಸುಮಾರು 130 ಕೋಟಿ ಜನಸಂಖ್ಯೆ ಹೊಂದಿರುವ ಭಾರತ, ಇದುವರೆಗೆ 4.14 ಕೋಟಿ ಮಾದರಿಗಳನ್ನು ಪರೀಕ್ಷಿಸಿದೆ; ನಿನ್ನೆಯಿಂದ ಇಲ್ಲಿಯವರೆಗೆ 10.55 ಲಕ್ಷ ಮಾದರಿಗಳನ್ನು ಪರೀಕ್ಷಿಸಲಾಗಿದೆ.
  • ಕಳೆದ ನಾಲ್ಕು ದಿನಗಳಿಂದ ದೇಶವು 75,000 ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸುತ್ತಿದೆ. ಇದು ಗುರುವಾರ 77,266 ಪ್ರಕರಣಗಳೊಂದಿಗೆ ಅತಿದೊಡ್ಡ ಏಕದಿನ ಏರಿಕೆಯನ್ನು ದಾಖಲಿಸಿದೆ.
  • ಭಾರತದ ಕೊರೊನಾ ವೈರಸ್ ಪ್ರಕರಣಗಳು ಮತ್ತು ಸಾವುಗಳು, ಜಾಗತಿಕ ಸರಾಸರಿಗೆ ಹೋಲಿಸಿದರೆ (ಪ್ರತಿ ದಶಲಕ್ಷ ಜನಸಂಖ್ಯೆಗೆ) ಅತ್ಯಂತ ಕಡಿಮೆ ಎಂದು ಕೊರೊನಾ ಕುರಿತು ಉನ್ನತ ಮಟ್ಟದ ಮಂತ್ರಿಗಳ ಗುಂಪಿಗೆ (GoM) ಶನಿವಾರ ಸುದ್ದಿ ಸಂಸ್ಥೆ ಪಿಟಿಐ ತಿಳಿಸಲಾಗಿದೆ ಎಂದು ಎನ್ ಡಿ ಟಿ ವಿ ವರದಿ ಮಾಡಿದೆ.
  • ವಿಶ್ವಾದ್ಯಂತ, ಇದುವರೆಗೆ 25 ದಶಲಕ್ಷಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. 8 ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಕೊರೊನಾ ವಿಚಾರದಲ್ಲಿ ತಬ್ಲೀಘಿಗಳನ್ನು ’ಬಲಿಪಶು’ ಮಾಡಲಾಗಿದೆ: ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...