Homeಮುಖಪುಟ20 ಲಕ್ಷ ಕೋಟಿ ಪ್ಯಾಕೇಜ್‌‌ ಘೋಷಿಸಿದರೂ 35% ಸಣ್ಣ ಉದ್ಯಮ ಸ್ಥಗಿತದತ್ತ: ಸಮೀಕ್ಷೆ

20 ಲಕ್ಷ ಕೋಟಿ ಪ್ಯಾಕೇಜ್‌‌ ಘೋಷಿಸಿದರೂ 35% ಸಣ್ಣ ಉದ್ಯಮ ಸ್ಥಗಿತದತ್ತ: ಸಮೀಕ್ಷೆ

ಸರ್ಕಾರ ಘೋಷಿಸಿದ ಹಣಕಾಸು ಪ್ಯಾಕೇಜ್‌ಗಳ ಪ್ರಯೋಜನಗಳು ಇನ್ನು ಎಂಎಸ್‌ಎಂಇಗಳ ಬಾಗಿಲನ್ನು ತಲುಪಿಲ್ಲ” ಎಂದು ಎಐಎಂಒ ಮಾಜಿ ಅಧ್ಯಕ್ಷ ರಘುನಾಥನ್ ಹೇಳಿದ್ದಾರೆ.

- Advertisement -
- Advertisement -

ಕೊರೊನಾ ಮತ್ತು ಎರಡು ತಿಂಗಳ ಲಾಕ್‌ಡೌನ್‌‌ ಮಧ್ಯೆ 35% ನಷ್ಟು ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಉದ್ಯಮ ಗಳು (ಎಂಎಸ್‌ಎಂಇ) ಹಾಗೂ 37% ಸ್ವಯಂ ಉದ್ಯೋಗಗಳು ತಮ್ಮ ವ್ಯವಹಾರಗಳನ್ನು ಸ್ಥಗಿತಗೊಳಿಸಲು ಮುಂದಾಗಿವೆ ಎಂದು ಅಖಿಲ ಭಾರತ ತಯಾರಕರ ಸಂಘ (ಎಐಎಂಒ) ಸಮೀಕ್ಷೆ ತಿಳಿಸಿದೆ.

ಮೇ 24 ಮತ್ತು ಮೇ 30 ರ ನಡುವೆ ಆನ್‌ಲೈನ್‌ನಲ್ಲಿ ಈ ಸಮೀಕ್ಷೆಯನ್ನು ನಡೆಸಲಾಗಿದ್ದು, ಇದರಲ್ಲಿ ಒಟ್ಟು 46,425 ಸ್ವಉದ್ಯೋಗಿಗಳು, ಎಂಎಸ್‌ಎಂಇ ಮಾಲೀಕರು, ಕಾರ್ಪೊರೇಟ್ ಉದ್ಯೋಗದಾತರು ಹಾಗೂ ಉದ್ಯೋಗಿಗಳು ಭಾಗವಹಿಸಿದ್ದರು. ವಿಶೇಷವೆಂದರೆ, ಕೇಂದ್ರ ಸರ್ಕಾರವು ‘ಆತ್ಮನಿರ್ಭರ ಭಾರತ್’ ಪ್ಯಾಕೇಜ್ ಎಂಬ 20 ಲಕ್ಷ ಕೋಟಿ ರೂ.ಗಳ ಹಣಕಾಸು ಪ್ಯಾಕೇಜ್ ಘೋಷಿಸಿದ ನಂತರ ಈ ಸಮೀಕ್ಷೆಯನ್ನು ನಡೆಸಲಾಗಿದೆ.

“ವ್ಯವಹಾರವನ್ನು ಮುಂದುವರೆಸುವ ಅನಿಶ್ಚಿತತೆಯು ಎಂಎಸ್ಎಂಇ ವಿಭಾಗದಲ್ಲಿ ಸುಮಾರು 11% ಇದ್ದರೆ ಸ್ವಯಂ ಉದ್ಯೋಗ ವಿಭಾಗದಲ್ಲಿ ಸುಮಾರು 17% ಆಗಿದೆ. ಅವರು ಇನ್ನೂ ಚೇತರಿಸಿಕೊಳ್ಳಲು ಅವಕಾಶವಿದೆ” ಎಂದು ಸಮೀಕ್ಷೆ ತಿಳಿಸಿದೆ.

ಮೇ 13 ರಂದು ಹಣಕಾಸು ಪ್ಯಾಕೇಜ್ ಘೋಷಿಸುವಾಗ, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು ಮರು ವರ್ಗೀಕರಿಸಲು ಎಂಎಸ್‌ಎಂಇಗಳ ವ್ಯಾಖ್ಯಾನವನ್ನು ವಿಸ್ತರಿಸಲಾಗುವುದು ಎಂದು ಹೇಳಿದ್ದರು. ಪ್ಯಾಕೇಜ್ ಅಡಿಯಲ್ಲಿ ಸುಮಾರು 3.5 ಲಕ್ಷ ಕೋಟಿ ರೂ.ಗಳನ್ನು ಬ್ಯಾಂಕುಗಳು ಮತ್ತು ಇತರ ಹಣಕಾಸು ಸಂಸ್ಥೆಗಳಿಂದ ಪಡೆದ ಸಾಲವಾಗಿ ಎಂಎಸ್‌ಎಂಇ ವಲಯಕ್ಕೆ ವಿಸ್ತರಿಸಲಾಯಿತು.

ಸಮೀಕ್ಷೆಯ ಇತರ ಸಂಶೋಧನೆಗಳ ಪೈಕಿ, 32% ಎಂಎಸ್‌ಎಂಇಗಳು ಮತ್ತು 26% ಕಾರ್ಪೊರೇಟ್‌ಗಳು ಕೊರೊನಾ ಪ್ರಭಾವದಿಂದ ಚೇತರಿಸಿಕೊಳ್ಳಲು ಆರು ತಿಂಗಳು ಬೇಕಾಗುತ್ತದೆ ಎಂದು ಹೇಳಿದ್ದಾರೆ. ಆದರೆ, 46% ಕಾರ್ಪೊರೇಟ್‌ಗಳು ಮತ್ತು 27% ಸ್ವಯಂ ಉದ್ಯೋಗಿಗಳು ಮೂರು ತಿಂಗಳೊಳಗೆ ಚೇತರಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.

ಸಮೀಕ್ಷೆಯ ಫಲಿತಾಂಶಗಳು: 

“ಕಾರ್ಪೊರೇಟ್ ವಲಯದಿಂದ ಪ್ರತಿಕ್ರಿಯಿಸಿದವರಲ್ಲಿ, ಕೊರೊನಾದಿಂದಾಗಿ ವ್ಯವಹಾರದ ಮೇಲೆ ಪರಿಣಾಮ ಬೀರಿದೆ ಎಂದು ಸೂಚಿಸಿದ 46% ಜನರು, ಇದರಿಂದ ಚೇತರಿಸಿಕೊಳ್ಳಲು ಮೂರು ತಿಂಗಳುಗಳು ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ. 26% ಜನರು ಆರು ತಿಂಗಳ ಅವಧಿಯಲ್ಲಿ ವರ್ಷದ ಅಂತ್ಯದ ವೇಳೆಗೆ ಸರಿಯಾಗುತ್ತದೆ ಎಂದು ಭಾವಿಸಿದ್ದಾರೆ. ಈ ವಲಯವು ಭಾರಿ ಮುಚ್ಚುವಿಕೆಗಳನ್ನು ನೋಡುವುದಿಲ್ಲವಾದರೂ,  ಅನೇಕ ಜನರು ಉದ್ಯೋಗ ಕಳೆದುಕೊಳ್ಳುವುದು, ಕೆಲಸದ ಪ್ರಮಾಣವನ್ನು ಕಡಿಮೆ ಮಾಡುವುದು ಇತ್ಯಾದಿ ಆಗುತ್ತದೆ” ಎಂದು ಎಐಎಂಒ ಗೌರವ ಪ್ರಧಾನ ಕಾರ್ಯದರ್ಶಿ ಕೆನ್ನಿ ರಾಮಾನಂದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಂಎಸ್‌ಎಂಇ ವಲಯವು ಕೃಷಿಯ ನಂತರ ದೇಶದ ಅತಿದೊಡ್ಡ ಉದ್ಯೋಗ ಸೃಷ್ಟಿಸುವ ವಲಯವಾಗಿದೆ.

ಅಗತ್ಯ ಸೇವಾ ಪೂರೈಕೆದಾರರ ವ್ಯವಹಾರಗಳಲ್ಲಿ, ಕೊರೊನಾದಿಂದ ಯಾವುದೇ ಪರಿಣಾಮ ಬೀಳಲಿಲ್ಲ ಎಂದು ಸಮೀಕ್ಷೆ ಹೇಳುತ್ತದೆ.

ಸಂಗ್ರಹಿಸಿದ ದತ್ತಾಂಶಗಳ ಬಗ್ಗೆ ಎಐಎಂಒ ಹೆಚ್ಚಿನ ಫಲಿತಾಂಶಗಳನ್ನು ಈ ವಾರ ಬಿಡುಗಡೆ ಮಾಡಲಿದೆ ಎಂದು ಎಐಎಂಒ ಮಾಜಿ ಅಧ್ಯಕ್ಷ ಕೆ ಇ ರಘುನಾಥನ್ ತಿಳಿಸಿದ್ದಾರೆಂದು ನ್ಯೂಸ್ ಕ್ಲಿಕ್ ವರದಿ ಮಾಡಿದೆ.

“ಎಐಎಂಒ ಭಾರತದಲ್ಲಿನ ಎಂಎಸ್‌ಎಂಇಗಳ ಹೃದಯ ಬಡಿತವನ್ನು ತೋರಿಸುತ್ತಿದೆ. ಎಂಎಸ್‌ಎಂಇಗಳ ಅಗತ್ಯಗಳನ್ನು ಬೆಳಕಿಗೆ ತಂದಿದ್ದಕ್ಕಾಗಿ ನಾವು ಹಣಕಾಸು ಸಚಿವೆ ಮತ್ತು ಪ್ರಧಾನ ಮಂತ್ರಿಗಳನ್ನು ಶ್ಲಾಘಿಸುತ್ತೇವೆ.  ಭಾರತದಾದ್ಯಂತದ ವಿವಿಧ ಎಂಎಸ್‌ಎಂಇ ಸಂಘಗಳ ಸದಸ್ಯರು ಮತ್ತು ಕೈಗಾರಿಕೋದ್ಯಮಿಗಳೊಂದಿಗೆ ಮಾತನಾಡಿದ್ದೇವೆ. ಸರ್ಕಾರ ಘೋಷಿಸಿದ ಹಣಕಾಸು ಪ್ಯಾಕೇಜ್‌ಗಳ ಪ್ರಯೋಜನಗಳು ಇನ್ನು ಎಂಎಸ್‌ಎಂಇಗಳ ಬಾಗಿಲನ್ನು ತಲುಪಿಲ್ಲ” ಎಂದು ರಘುನಾಥನ್ ಹೇಳಿದ್ದಾರೆ.

ಈ ಸಮೀಕ್ಷೆಯು ಇದುವರೆಗಿನ ಅತಿದೊಡ್ಡ ಉದ್ಯಮ ಸಮೀಕ್ಷೆಯಾಗಿದೆ ಎಂದು ಎಐಎಂಒ ಹೇಳಿದೆ. ಸಾಮಾಜಿಕ ತಂತ್ರಜ್ಞಾನ ಉದ್ಯಮ ಮತ್ತು ಫೆಡರೇಶನ್ ಆಫ್ ಇಂಡಿಯಾ ಇಂಡಸ್ಟ್ರಿ, ಡಿಜಿಟಲ್ ಫಾರ್ ಎಂಪವರ್‌ಮೆಂಟ್ (ಡಿ 4 ಇ), ಅಸೋಸಿಯೇಷನ್ ​​ಆಫ್ ಇಂಡಿಯನ್ ಇಂಡಸ್ಟ್ರಿ, ಸಿಮೆಂಟ್ ತಯಾರಕರ ಕಲ್ಯಾಣ ಸಂಘ, ಭಾರತೀಯ ಮಹಿಳಾ ಉದ್ಯಮಿಗಳ ಒಕ್ಕೂಟ, ಭಾರತೀಯ ಮಹಿಳಾ ಉದ್ಯಮಿಗಳ ಫಡರೇಶನ್, ಫಸ್ಟ್ ವಲ್ಡ್ ಕಮ್ಯೂನಿಟಿ, ಚೇಂಬರ್ ಆಫ್ ಸ್ಮಾಲ್ ಇಂಡಸ್ಟ್ರಿ ಅಸೋಸಿಯೇಷನ್, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಒಕ್ಕೂಟ ಮತ್ತು ಲಕ್ನೋದ ಅಮೌಸಿ ಇಂಡಸ್ಟ್ರೀಸ್ ಅಸೋಸಿಯೇಷನ್ ಸೇರಿದಂದತೆ ಮುಂತಾದ ಸಂಘಟನೆಗಳ ಸಹಯೋಗದೊಂದಿಗೆ ಈ ಸಮೀಕ್ಷೆಯು ನಡೆದಿತ್ತು.


ಓದಿ: ಕೊರೊನ ಸಮಯದಲ್ಲಿ ಮೃತರಾದ ಪತ್ರಕರ್ತರಿಗೆ 50 ಲಕ್ಷ ಪರಿಹಾರ ನೀಡಿ: ಕರ್ನಾಟಕ ಹೈಕೋರ್ಟ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...