Homeಮುಖಪುಟ20 ಲಕ್ಷ ಕೋಟಿ ಪ್ಯಾಕೇಜ್‌‌ ಘೋಷಿಸಿದರೂ 35% ಸಣ್ಣ ಉದ್ಯಮ ಸ್ಥಗಿತದತ್ತ: ಸಮೀಕ್ಷೆ

20 ಲಕ್ಷ ಕೋಟಿ ಪ್ಯಾಕೇಜ್‌‌ ಘೋಷಿಸಿದರೂ 35% ಸಣ್ಣ ಉದ್ಯಮ ಸ್ಥಗಿತದತ್ತ: ಸಮೀಕ್ಷೆ

ಸರ್ಕಾರ ಘೋಷಿಸಿದ ಹಣಕಾಸು ಪ್ಯಾಕೇಜ್‌ಗಳ ಪ್ರಯೋಜನಗಳು ಇನ್ನು ಎಂಎಸ್‌ಎಂಇಗಳ ಬಾಗಿಲನ್ನು ತಲುಪಿಲ್ಲ” ಎಂದು ಎಐಎಂಒ ಮಾಜಿ ಅಧ್ಯಕ್ಷ ರಘುನಾಥನ್ ಹೇಳಿದ್ದಾರೆ.

- Advertisement -
- Advertisement -

ಕೊರೊನಾ ಮತ್ತು ಎರಡು ತಿಂಗಳ ಲಾಕ್‌ಡೌನ್‌‌ ಮಧ್ಯೆ 35% ನಷ್ಟು ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಉದ್ಯಮ ಗಳು (ಎಂಎಸ್‌ಎಂಇ) ಹಾಗೂ 37% ಸ್ವಯಂ ಉದ್ಯೋಗಗಳು ತಮ್ಮ ವ್ಯವಹಾರಗಳನ್ನು ಸ್ಥಗಿತಗೊಳಿಸಲು ಮುಂದಾಗಿವೆ ಎಂದು ಅಖಿಲ ಭಾರತ ತಯಾರಕರ ಸಂಘ (ಎಐಎಂಒ) ಸಮೀಕ್ಷೆ ತಿಳಿಸಿದೆ.

ಮೇ 24 ಮತ್ತು ಮೇ 30 ರ ನಡುವೆ ಆನ್‌ಲೈನ್‌ನಲ್ಲಿ ಈ ಸಮೀಕ್ಷೆಯನ್ನು ನಡೆಸಲಾಗಿದ್ದು, ಇದರಲ್ಲಿ ಒಟ್ಟು 46,425 ಸ್ವಉದ್ಯೋಗಿಗಳು, ಎಂಎಸ್‌ಎಂಇ ಮಾಲೀಕರು, ಕಾರ್ಪೊರೇಟ್ ಉದ್ಯೋಗದಾತರು ಹಾಗೂ ಉದ್ಯೋಗಿಗಳು ಭಾಗವಹಿಸಿದ್ದರು. ವಿಶೇಷವೆಂದರೆ, ಕೇಂದ್ರ ಸರ್ಕಾರವು ‘ಆತ್ಮನಿರ್ಭರ ಭಾರತ್’ ಪ್ಯಾಕೇಜ್ ಎಂಬ 20 ಲಕ್ಷ ಕೋಟಿ ರೂ.ಗಳ ಹಣಕಾಸು ಪ್ಯಾಕೇಜ್ ಘೋಷಿಸಿದ ನಂತರ ಈ ಸಮೀಕ್ಷೆಯನ್ನು ನಡೆಸಲಾಗಿದೆ.

“ವ್ಯವಹಾರವನ್ನು ಮುಂದುವರೆಸುವ ಅನಿಶ್ಚಿತತೆಯು ಎಂಎಸ್ಎಂಇ ವಿಭಾಗದಲ್ಲಿ ಸುಮಾರು 11% ಇದ್ದರೆ ಸ್ವಯಂ ಉದ್ಯೋಗ ವಿಭಾಗದಲ್ಲಿ ಸುಮಾರು 17% ಆಗಿದೆ. ಅವರು ಇನ್ನೂ ಚೇತರಿಸಿಕೊಳ್ಳಲು ಅವಕಾಶವಿದೆ” ಎಂದು ಸಮೀಕ್ಷೆ ತಿಳಿಸಿದೆ.

ಮೇ 13 ರಂದು ಹಣಕಾಸು ಪ್ಯಾಕೇಜ್ ಘೋಷಿಸುವಾಗ, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು ಮರು ವರ್ಗೀಕರಿಸಲು ಎಂಎಸ್‌ಎಂಇಗಳ ವ್ಯಾಖ್ಯಾನವನ್ನು ವಿಸ್ತರಿಸಲಾಗುವುದು ಎಂದು ಹೇಳಿದ್ದರು. ಪ್ಯಾಕೇಜ್ ಅಡಿಯಲ್ಲಿ ಸುಮಾರು 3.5 ಲಕ್ಷ ಕೋಟಿ ರೂ.ಗಳನ್ನು ಬ್ಯಾಂಕುಗಳು ಮತ್ತು ಇತರ ಹಣಕಾಸು ಸಂಸ್ಥೆಗಳಿಂದ ಪಡೆದ ಸಾಲವಾಗಿ ಎಂಎಸ್‌ಎಂಇ ವಲಯಕ್ಕೆ ವಿಸ್ತರಿಸಲಾಯಿತು.

ಸಮೀಕ್ಷೆಯ ಇತರ ಸಂಶೋಧನೆಗಳ ಪೈಕಿ, 32% ಎಂಎಸ್‌ಎಂಇಗಳು ಮತ್ತು 26% ಕಾರ್ಪೊರೇಟ್‌ಗಳು ಕೊರೊನಾ ಪ್ರಭಾವದಿಂದ ಚೇತರಿಸಿಕೊಳ್ಳಲು ಆರು ತಿಂಗಳು ಬೇಕಾಗುತ್ತದೆ ಎಂದು ಹೇಳಿದ್ದಾರೆ. ಆದರೆ, 46% ಕಾರ್ಪೊರೇಟ್‌ಗಳು ಮತ್ತು 27% ಸ್ವಯಂ ಉದ್ಯೋಗಿಗಳು ಮೂರು ತಿಂಗಳೊಳಗೆ ಚೇತರಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.

ಸಮೀಕ್ಷೆಯ ಫಲಿತಾಂಶಗಳು: 

“ಕಾರ್ಪೊರೇಟ್ ವಲಯದಿಂದ ಪ್ರತಿಕ್ರಿಯಿಸಿದವರಲ್ಲಿ, ಕೊರೊನಾದಿಂದಾಗಿ ವ್ಯವಹಾರದ ಮೇಲೆ ಪರಿಣಾಮ ಬೀರಿದೆ ಎಂದು ಸೂಚಿಸಿದ 46% ಜನರು, ಇದರಿಂದ ಚೇತರಿಸಿಕೊಳ್ಳಲು ಮೂರು ತಿಂಗಳುಗಳು ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ. 26% ಜನರು ಆರು ತಿಂಗಳ ಅವಧಿಯಲ್ಲಿ ವರ್ಷದ ಅಂತ್ಯದ ವೇಳೆಗೆ ಸರಿಯಾಗುತ್ತದೆ ಎಂದು ಭಾವಿಸಿದ್ದಾರೆ. ಈ ವಲಯವು ಭಾರಿ ಮುಚ್ಚುವಿಕೆಗಳನ್ನು ನೋಡುವುದಿಲ್ಲವಾದರೂ,  ಅನೇಕ ಜನರು ಉದ್ಯೋಗ ಕಳೆದುಕೊಳ್ಳುವುದು, ಕೆಲಸದ ಪ್ರಮಾಣವನ್ನು ಕಡಿಮೆ ಮಾಡುವುದು ಇತ್ಯಾದಿ ಆಗುತ್ತದೆ” ಎಂದು ಎಐಎಂಒ ಗೌರವ ಪ್ರಧಾನ ಕಾರ್ಯದರ್ಶಿ ಕೆನ್ನಿ ರಾಮಾನಂದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಂಎಸ್‌ಎಂಇ ವಲಯವು ಕೃಷಿಯ ನಂತರ ದೇಶದ ಅತಿದೊಡ್ಡ ಉದ್ಯೋಗ ಸೃಷ್ಟಿಸುವ ವಲಯವಾಗಿದೆ.

ಅಗತ್ಯ ಸೇವಾ ಪೂರೈಕೆದಾರರ ವ್ಯವಹಾರಗಳಲ್ಲಿ, ಕೊರೊನಾದಿಂದ ಯಾವುದೇ ಪರಿಣಾಮ ಬೀಳಲಿಲ್ಲ ಎಂದು ಸಮೀಕ್ಷೆ ಹೇಳುತ್ತದೆ.

ಸಂಗ್ರಹಿಸಿದ ದತ್ತಾಂಶಗಳ ಬಗ್ಗೆ ಎಐಎಂಒ ಹೆಚ್ಚಿನ ಫಲಿತಾಂಶಗಳನ್ನು ಈ ವಾರ ಬಿಡುಗಡೆ ಮಾಡಲಿದೆ ಎಂದು ಎಐಎಂಒ ಮಾಜಿ ಅಧ್ಯಕ್ಷ ಕೆ ಇ ರಘುನಾಥನ್ ತಿಳಿಸಿದ್ದಾರೆಂದು ನ್ಯೂಸ್ ಕ್ಲಿಕ್ ವರದಿ ಮಾಡಿದೆ.

“ಎಐಎಂಒ ಭಾರತದಲ್ಲಿನ ಎಂಎಸ್‌ಎಂಇಗಳ ಹೃದಯ ಬಡಿತವನ್ನು ತೋರಿಸುತ್ತಿದೆ. ಎಂಎಸ್‌ಎಂಇಗಳ ಅಗತ್ಯಗಳನ್ನು ಬೆಳಕಿಗೆ ತಂದಿದ್ದಕ್ಕಾಗಿ ನಾವು ಹಣಕಾಸು ಸಚಿವೆ ಮತ್ತು ಪ್ರಧಾನ ಮಂತ್ರಿಗಳನ್ನು ಶ್ಲಾಘಿಸುತ್ತೇವೆ.  ಭಾರತದಾದ್ಯಂತದ ವಿವಿಧ ಎಂಎಸ್‌ಎಂಇ ಸಂಘಗಳ ಸದಸ್ಯರು ಮತ್ತು ಕೈಗಾರಿಕೋದ್ಯಮಿಗಳೊಂದಿಗೆ ಮಾತನಾಡಿದ್ದೇವೆ. ಸರ್ಕಾರ ಘೋಷಿಸಿದ ಹಣಕಾಸು ಪ್ಯಾಕೇಜ್‌ಗಳ ಪ್ರಯೋಜನಗಳು ಇನ್ನು ಎಂಎಸ್‌ಎಂಇಗಳ ಬಾಗಿಲನ್ನು ತಲುಪಿಲ್ಲ” ಎಂದು ರಘುನಾಥನ್ ಹೇಳಿದ್ದಾರೆ.

ಈ ಸಮೀಕ್ಷೆಯು ಇದುವರೆಗಿನ ಅತಿದೊಡ್ಡ ಉದ್ಯಮ ಸಮೀಕ್ಷೆಯಾಗಿದೆ ಎಂದು ಎಐಎಂಒ ಹೇಳಿದೆ. ಸಾಮಾಜಿಕ ತಂತ್ರಜ್ಞಾನ ಉದ್ಯಮ ಮತ್ತು ಫೆಡರೇಶನ್ ಆಫ್ ಇಂಡಿಯಾ ಇಂಡಸ್ಟ್ರಿ, ಡಿಜಿಟಲ್ ಫಾರ್ ಎಂಪವರ್‌ಮೆಂಟ್ (ಡಿ 4 ಇ), ಅಸೋಸಿಯೇಷನ್ ​​ಆಫ್ ಇಂಡಿಯನ್ ಇಂಡಸ್ಟ್ರಿ, ಸಿಮೆಂಟ್ ತಯಾರಕರ ಕಲ್ಯಾಣ ಸಂಘ, ಭಾರತೀಯ ಮಹಿಳಾ ಉದ್ಯಮಿಗಳ ಒಕ್ಕೂಟ, ಭಾರತೀಯ ಮಹಿಳಾ ಉದ್ಯಮಿಗಳ ಫಡರೇಶನ್, ಫಸ್ಟ್ ವಲ್ಡ್ ಕಮ್ಯೂನಿಟಿ, ಚೇಂಬರ್ ಆಫ್ ಸ್ಮಾಲ್ ಇಂಡಸ್ಟ್ರಿ ಅಸೋಸಿಯೇಷನ್, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಒಕ್ಕೂಟ ಮತ್ತು ಲಕ್ನೋದ ಅಮೌಸಿ ಇಂಡಸ್ಟ್ರೀಸ್ ಅಸೋಸಿಯೇಷನ್ ಸೇರಿದಂದತೆ ಮುಂತಾದ ಸಂಘಟನೆಗಳ ಸಹಯೋಗದೊಂದಿಗೆ ಈ ಸಮೀಕ್ಷೆಯು ನಡೆದಿತ್ತು.


ಓದಿ: ಕೊರೊನ ಸಮಯದಲ್ಲಿ ಮೃತರಾದ ಪತ್ರಕರ್ತರಿಗೆ 50 ಲಕ್ಷ ಪರಿಹಾರ ನೀಡಿ: ಕರ್ನಾಟಕ ಹೈಕೋರ್ಟ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...