Homeಮುಖಪುಟ20 ಲಕ್ಷ ಕೋಟಿ ಪ್ಯಾಕೇಜ್‌‌ ಘೋಷಿಸಿದರೂ 35% ಸಣ್ಣ ಉದ್ಯಮ ಸ್ಥಗಿತದತ್ತ: ಸಮೀಕ್ಷೆ

20 ಲಕ್ಷ ಕೋಟಿ ಪ್ಯಾಕೇಜ್‌‌ ಘೋಷಿಸಿದರೂ 35% ಸಣ್ಣ ಉದ್ಯಮ ಸ್ಥಗಿತದತ್ತ: ಸಮೀಕ್ಷೆ

ಸರ್ಕಾರ ಘೋಷಿಸಿದ ಹಣಕಾಸು ಪ್ಯಾಕೇಜ್‌ಗಳ ಪ್ರಯೋಜನಗಳು ಇನ್ನು ಎಂಎಸ್‌ಎಂಇಗಳ ಬಾಗಿಲನ್ನು ತಲುಪಿಲ್ಲ” ಎಂದು ಎಐಎಂಒ ಮಾಜಿ ಅಧ್ಯಕ್ಷ ರಘುನಾಥನ್ ಹೇಳಿದ್ದಾರೆ.

- Advertisement -
- Advertisement -

ಕೊರೊನಾ ಮತ್ತು ಎರಡು ತಿಂಗಳ ಲಾಕ್‌ಡೌನ್‌‌ ಮಧ್ಯೆ 35% ನಷ್ಟು ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಉದ್ಯಮ ಗಳು (ಎಂಎಸ್‌ಎಂಇ) ಹಾಗೂ 37% ಸ್ವಯಂ ಉದ್ಯೋಗಗಳು ತಮ್ಮ ವ್ಯವಹಾರಗಳನ್ನು ಸ್ಥಗಿತಗೊಳಿಸಲು ಮುಂದಾಗಿವೆ ಎಂದು ಅಖಿಲ ಭಾರತ ತಯಾರಕರ ಸಂಘ (ಎಐಎಂಒ) ಸಮೀಕ್ಷೆ ತಿಳಿಸಿದೆ.

ಮೇ 24 ಮತ್ತು ಮೇ 30 ರ ನಡುವೆ ಆನ್‌ಲೈನ್‌ನಲ್ಲಿ ಈ ಸಮೀಕ್ಷೆಯನ್ನು ನಡೆಸಲಾಗಿದ್ದು, ಇದರಲ್ಲಿ ಒಟ್ಟು 46,425 ಸ್ವಉದ್ಯೋಗಿಗಳು, ಎಂಎಸ್‌ಎಂಇ ಮಾಲೀಕರು, ಕಾರ್ಪೊರೇಟ್ ಉದ್ಯೋಗದಾತರು ಹಾಗೂ ಉದ್ಯೋಗಿಗಳು ಭಾಗವಹಿಸಿದ್ದರು. ವಿಶೇಷವೆಂದರೆ, ಕೇಂದ್ರ ಸರ್ಕಾರವು ‘ಆತ್ಮನಿರ್ಭರ ಭಾರತ್’ ಪ್ಯಾಕೇಜ್ ಎಂಬ 20 ಲಕ್ಷ ಕೋಟಿ ರೂ.ಗಳ ಹಣಕಾಸು ಪ್ಯಾಕೇಜ್ ಘೋಷಿಸಿದ ನಂತರ ಈ ಸಮೀಕ್ಷೆಯನ್ನು ನಡೆಸಲಾಗಿದೆ.

“ವ್ಯವಹಾರವನ್ನು ಮುಂದುವರೆಸುವ ಅನಿಶ್ಚಿತತೆಯು ಎಂಎಸ್ಎಂಇ ವಿಭಾಗದಲ್ಲಿ ಸುಮಾರು 11% ಇದ್ದರೆ ಸ್ವಯಂ ಉದ್ಯೋಗ ವಿಭಾಗದಲ್ಲಿ ಸುಮಾರು 17% ಆಗಿದೆ. ಅವರು ಇನ್ನೂ ಚೇತರಿಸಿಕೊಳ್ಳಲು ಅವಕಾಶವಿದೆ” ಎಂದು ಸಮೀಕ್ಷೆ ತಿಳಿಸಿದೆ.

ಮೇ 13 ರಂದು ಹಣಕಾಸು ಪ್ಯಾಕೇಜ್ ಘೋಷಿಸುವಾಗ, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು ಮರು ವರ್ಗೀಕರಿಸಲು ಎಂಎಸ್‌ಎಂಇಗಳ ವ್ಯಾಖ್ಯಾನವನ್ನು ವಿಸ್ತರಿಸಲಾಗುವುದು ಎಂದು ಹೇಳಿದ್ದರು. ಪ್ಯಾಕೇಜ್ ಅಡಿಯಲ್ಲಿ ಸುಮಾರು 3.5 ಲಕ್ಷ ಕೋಟಿ ರೂ.ಗಳನ್ನು ಬ್ಯಾಂಕುಗಳು ಮತ್ತು ಇತರ ಹಣಕಾಸು ಸಂಸ್ಥೆಗಳಿಂದ ಪಡೆದ ಸಾಲವಾಗಿ ಎಂಎಸ್‌ಎಂಇ ವಲಯಕ್ಕೆ ವಿಸ್ತರಿಸಲಾಯಿತು.

ಸಮೀಕ್ಷೆಯ ಇತರ ಸಂಶೋಧನೆಗಳ ಪೈಕಿ, 32% ಎಂಎಸ್‌ಎಂಇಗಳು ಮತ್ತು 26% ಕಾರ್ಪೊರೇಟ್‌ಗಳು ಕೊರೊನಾ ಪ್ರಭಾವದಿಂದ ಚೇತರಿಸಿಕೊಳ್ಳಲು ಆರು ತಿಂಗಳು ಬೇಕಾಗುತ್ತದೆ ಎಂದು ಹೇಳಿದ್ದಾರೆ. ಆದರೆ, 46% ಕಾರ್ಪೊರೇಟ್‌ಗಳು ಮತ್ತು 27% ಸ್ವಯಂ ಉದ್ಯೋಗಿಗಳು ಮೂರು ತಿಂಗಳೊಳಗೆ ಚೇತರಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.

ಸಮೀಕ್ಷೆಯ ಫಲಿತಾಂಶಗಳು: 

“ಕಾರ್ಪೊರೇಟ್ ವಲಯದಿಂದ ಪ್ರತಿಕ್ರಿಯಿಸಿದವರಲ್ಲಿ, ಕೊರೊನಾದಿಂದಾಗಿ ವ್ಯವಹಾರದ ಮೇಲೆ ಪರಿಣಾಮ ಬೀರಿದೆ ಎಂದು ಸೂಚಿಸಿದ 46% ಜನರು, ಇದರಿಂದ ಚೇತರಿಸಿಕೊಳ್ಳಲು ಮೂರು ತಿಂಗಳುಗಳು ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ. 26% ಜನರು ಆರು ತಿಂಗಳ ಅವಧಿಯಲ್ಲಿ ವರ್ಷದ ಅಂತ್ಯದ ವೇಳೆಗೆ ಸರಿಯಾಗುತ್ತದೆ ಎಂದು ಭಾವಿಸಿದ್ದಾರೆ. ಈ ವಲಯವು ಭಾರಿ ಮುಚ್ಚುವಿಕೆಗಳನ್ನು ನೋಡುವುದಿಲ್ಲವಾದರೂ,  ಅನೇಕ ಜನರು ಉದ್ಯೋಗ ಕಳೆದುಕೊಳ್ಳುವುದು, ಕೆಲಸದ ಪ್ರಮಾಣವನ್ನು ಕಡಿಮೆ ಮಾಡುವುದು ಇತ್ಯಾದಿ ಆಗುತ್ತದೆ” ಎಂದು ಎಐಎಂಒ ಗೌರವ ಪ್ರಧಾನ ಕಾರ್ಯದರ್ಶಿ ಕೆನ್ನಿ ರಾಮಾನಂದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಂಎಸ್‌ಎಂಇ ವಲಯವು ಕೃಷಿಯ ನಂತರ ದೇಶದ ಅತಿದೊಡ್ಡ ಉದ್ಯೋಗ ಸೃಷ್ಟಿಸುವ ವಲಯವಾಗಿದೆ.

ಅಗತ್ಯ ಸೇವಾ ಪೂರೈಕೆದಾರರ ವ್ಯವಹಾರಗಳಲ್ಲಿ, ಕೊರೊನಾದಿಂದ ಯಾವುದೇ ಪರಿಣಾಮ ಬೀಳಲಿಲ್ಲ ಎಂದು ಸಮೀಕ್ಷೆ ಹೇಳುತ್ತದೆ.

ಸಂಗ್ರಹಿಸಿದ ದತ್ತಾಂಶಗಳ ಬಗ್ಗೆ ಎಐಎಂಒ ಹೆಚ್ಚಿನ ಫಲಿತಾಂಶಗಳನ್ನು ಈ ವಾರ ಬಿಡುಗಡೆ ಮಾಡಲಿದೆ ಎಂದು ಎಐಎಂಒ ಮಾಜಿ ಅಧ್ಯಕ್ಷ ಕೆ ಇ ರಘುನಾಥನ್ ತಿಳಿಸಿದ್ದಾರೆಂದು ನ್ಯೂಸ್ ಕ್ಲಿಕ್ ವರದಿ ಮಾಡಿದೆ.

“ಎಐಎಂಒ ಭಾರತದಲ್ಲಿನ ಎಂಎಸ್‌ಎಂಇಗಳ ಹೃದಯ ಬಡಿತವನ್ನು ತೋರಿಸುತ್ತಿದೆ. ಎಂಎಸ್‌ಎಂಇಗಳ ಅಗತ್ಯಗಳನ್ನು ಬೆಳಕಿಗೆ ತಂದಿದ್ದಕ್ಕಾಗಿ ನಾವು ಹಣಕಾಸು ಸಚಿವೆ ಮತ್ತು ಪ್ರಧಾನ ಮಂತ್ರಿಗಳನ್ನು ಶ್ಲಾಘಿಸುತ್ತೇವೆ.  ಭಾರತದಾದ್ಯಂತದ ವಿವಿಧ ಎಂಎಸ್‌ಎಂಇ ಸಂಘಗಳ ಸದಸ್ಯರು ಮತ್ತು ಕೈಗಾರಿಕೋದ್ಯಮಿಗಳೊಂದಿಗೆ ಮಾತನಾಡಿದ್ದೇವೆ. ಸರ್ಕಾರ ಘೋಷಿಸಿದ ಹಣಕಾಸು ಪ್ಯಾಕೇಜ್‌ಗಳ ಪ್ರಯೋಜನಗಳು ಇನ್ನು ಎಂಎಸ್‌ಎಂಇಗಳ ಬಾಗಿಲನ್ನು ತಲುಪಿಲ್ಲ” ಎಂದು ರಘುನಾಥನ್ ಹೇಳಿದ್ದಾರೆ.

ಈ ಸಮೀಕ್ಷೆಯು ಇದುವರೆಗಿನ ಅತಿದೊಡ್ಡ ಉದ್ಯಮ ಸಮೀಕ್ಷೆಯಾಗಿದೆ ಎಂದು ಎಐಎಂಒ ಹೇಳಿದೆ. ಸಾಮಾಜಿಕ ತಂತ್ರಜ್ಞಾನ ಉದ್ಯಮ ಮತ್ತು ಫೆಡರೇಶನ್ ಆಫ್ ಇಂಡಿಯಾ ಇಂಡಸ್ಟ್ರಿ, ಡಿಜಿಟಲ್ ಫಾರ್ ಎಂಪವರ್‌ಮೆಂಟ್ (ಡಿ 4 ಇ), ಅಸೋಸಿಯೇಷನ್ ​​ಆಫ್ ಇಂಡಿಯನ್ ಇಂಡಸ್ಟ್ರಿ, ಸಿಮೆಂಟ್ ತಯಾರಕರ ಕಲ್ಯಾಣ ಸಂಘ, ಭಾರತೀಯ ಮಹಿಳಾ ಉದ್ಯಮಿಗಳ ಒಕ್ಕೂಟ, ಭಾರತೀಯ ಮಹಿಳಾ ಉದ್ಯಮಿಗಳ ಫಡರೇಶನ್, ಫಸ್ಟ್ ವಲ್ಡ್ ಕಮ್ಯೂನಿಟಿ, ಚೇಂಬರ್ ಆಫ್ ಸ್ಮಾಲ್ ಇಂಡಸ್ಟ್ರಿ ಅಸೋಸಿಯೇಷನ್, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಒಕ್ಕೂಟ ಮತ್ತು ಲಕ್ನೋದ ಅಮೌಸಿ ಇಂಡಸ್ಟ್ರೀಸ್ ಅಸೋಸಿಯೇಷನ್ ಸೇರಿದಂದತೆ ಮುಂತಾದ ಸಂಘಟನೆಗಳ ಸಹಯೋಗದೊಂದಿಗೆ ಈ ಸಮೀಕ್ಷೆಯು ನಡೆದಿತ್ತು.


ಓದಿ: ಕೊರೊನ ಸಮಯದಲ್ಲಿ ಮೃತರಾದ ಪತ್ರಕರ್ತರಿಗೆ 50 ಲಕ್ಷ ಪರಿಹಾರ ನೀಡಿ: ಕರ್ನಾಟಕ ಹೈಕೋರ್ಟ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...