Homeಮುಖಪುಟ20 ಲಕ್ಷ ಕೋಟಿ ಪ್ಯಾಕೇಜ್‌‌ ಘೋಷಿಸಿದರೂ 35% ಸಣ್ಣ ಉದ್ಯಮ ಸ್ಥಗಿತದತ್ತ: ಸಮೀಕ್ಷೆ

20 ಲಕ್ಷ ಕೋಟಿ ಪ್ಯಾಕೇಜ್‌‌ ಘೋಷಿಸಿದರೂ 35% ಸಣ್ಣ ಉದ್ಯಮ ಸ್ಥಗಿತದತ್ತ: ಸಮೀಕ್ಷೆ

ಸರ್ಕಾರ ಘೋಷಿಸಿದ ಹಣಕಾಸು ಪ್ಯಾಕೇಜ್‌ಗಳ ಪ್ರಯೋಜನಗಳು ಇನ್ನು ಎಂಎಸ್‌ಎಂಇಗಳ ಬಾಗಿಲನ್ನು ತಲುಪಿಲ್ಲ” ಎಂದು ಎಐಎಂಒ ಮಾಜಿ ಅಧ್ಯಕ್ಷ ರಘುನಾಥನ್ ಹೇಳಿದ್ದಾರೆ.

- Advertisement -
- Advertisement -

ಕೊರೊನಾ ಮತ್ತು ಎರಡು ತಿಂಗಳ ಲಾಕ್‌ಡೌನ್‌‌ ಮಧ್ಯೆ 35% ನಷ್ಟು ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಉದ್ಯಮ ಗಳು (ಎಂಎಸ್‌ಎಂಇ) ಹಾಗೂ 37% ಸ್ವಯಂ ಉದ್ಯೋಗಗಳು ತಮ್ಮ ವ್ಯವಹಾರಗಳನ್ನು ಸ್ಥಗಿತಗೊಳಿಸಲು ಮುಂದಾಗಿವೆ ಎಂದು ಅಖಿಲ ಭಾರತ ತಯಾರಕರ ಸಂಘ (ಎಐಎಂಒ) ಸಮೀಕ್ಷೆ ತಿಳಿಸಿದೆ.

ಮೇ 24 ಮತ್ತು ಮೇ 30 ರ ನಡುವೆ ಆನ್‌ಲೈನ್‌ನಲ್ಲಿ ಈ ಸಮೀಕ್ಷೆಯನ್ನು ನಡೆಸಲಾಗಿದ್ದು, ಇದರಲ್ಲಿ ಒಟ್ಟು 46,425 ಸ್ವಉದ್ಯೋಗಿಗಳು, ಎಂಎಸ್‌ಎಂಇ ಮಾಲೀಕರು, ಕಾರ್ಪೊರೇಟ್ ಉದ್ಯೋಗದಾತರು ಹಾಗೂ ಉದ್ಯೋಗಿಗಳು ಭಾಗವಹಿಸಿದ್ದರು. ವಿಶೇಷವೆಂದರೆ, ಕೇಂದ್ರ ಸರ್ಕಾರವು ‘ಆತ್ಮನಿರ್ಭರ ಭಾರತ್’ ಪ್ಯಾಕೇಜ್ ಎಂಬ 20 ಲಕ್ಷ ಕೋಟಿ ರೂ.ಗಳ ಹಣಕಾಸು ಪ್ಯಾಕೇಜ್ ಘೋಷಿಸಿದ ನಂತರ ಈ ಸಮೀಕ್ಷೆಯನ್ನು ನಡೆಸಲಾಗಿದೆ.

“ವ್ಯವಹಾರವನ್ನು ಮುಂದುವರೆಸುವ ಅನಿಶ್ಚಿತತೆಯು ಎಂಎಸ್ಎಂಇ ವಿಭಾಗದಲ್ಲಿ ಸುಮಾರು 11% ಇದ್ದರೆ ಸ್ವಯಂ ಉದ್ಯೋಗ ವಿಭಾಗದಲ್ಲಿ ಸುಮಾರು 17% ಆಗಿದೆ. ಅವರು ಇನ್ನೂ ಚೇತರಿಸಿಕೊಳ್ಳಲು ಅವಕಾಶವಿದೆ” ಎಂದು ಸಮೀಕ್ಷೆ ತಿಳಿಸಿದೆ.

ಮೇ 13 ರಂದು ಹಣಕಾಸು ಪ್ಯಾಕೇಜ್ ಘೋಷಿಸುವಾಗ, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು ಮರು ವರ್ಗೀಕರಿಸಲು ಎಂಎಸ್‌ಎಂಇಗಳ ವ್ಯಾಖ್ಯಾನವನ್ನು ವಿಸ್ತರಿಸಲಾಗುವುದು ಎಂದು ಹೇಳಿದ್ದರು. ಪ್ಯಾಕೇಜ್ ಅಡಿಯಲ್ಲಿ ಸುಮಾರು 3.5 ಲಕ್ಷ ಕೋಟಿ ರೂ.ಗಳನ್ನು ಬ್ಯಾಂಕುಗಳು ಮತ್ತು ಇತರ ಹಣಕಾಸು ಸಂಸ್ಥೆಗಳಿಂದ ಪಡೆದ ಸಾಲವಾಗಿ ಎಂಎಸ್‌ಎಂಇ ವಲಯಕ್ಕೆ ವಿಸ್ತರಿಸಲಾಯಿತು.

ಸಮೀಕ್ಷೆಯ ಇತರ ಸಂಶೋಧನೆಗಳ ಪೈಕಿ, 32% ಎಂಎಸ್‌ಎಂಇಗಳು ಮತ್ತು 26% ಕಾರ್ಪೊರೇಟ್‌ಗಳು ಕೊರೊನಾ ಪ್ರಭಾವದಿಂದ ಚೇತರಿಸಿಕೊಳ್ಳಲು ಆರು ತಿಂಗಳು ಬೇಕಾಗುತ್ತದೆ ಎಂದು ಹೇಳಿದ್ದಾರೆ. ಆದರೆ, 46% ಕಾರ್ಪೊರೇಟ್‌ಗಳು ಮತ್ತು 27% ಸ್ವಯಂ ಉದ್ಯೋಗಿಗಳು ಮೂರು ತಿಂಗಳೊಳಗೆ ಚೇತರಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.

ಸಮೀಕ್ಷೆಯ ಫಲಿತಾಂಶಗಳು: 

“ಕಾರ್ಪೊರೇಟ್ ವಲಯದಿಂದ ಪ್ರತಿಕ್ರಿಯಿಸಿದವರಲ್ಲಿ, ಕೊರೊನಾದಿಂದಾಗಿ ವ್ಯವಹಾರದ ಮೇಲೆ ಪರಿಣಾಮ ಬೀರಿದೆ ಎಂದು ಸೂಚಿಸಿದ 46% ಜನರು, ಇದರಿಂದ ಚೇತರಿಸಿಕೊಳ್ಳಲು ಮೂರು ತಿಂಗಳುಗಳು ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ. 26% ಜನರು ಆರು ತಿಂಗಳ ಅವಧಿಯಲ್ಲಿ ವರ್ಷದ ಅಂತ್ಯದ ವೇಳೆಗೆ ಸರಿಯಾಗುತ್ತದೆ ಎಂದು ಭಾವಿಸಿದ್ದಾರೆ. ಈ ವಲಯವು ಭಾರಿ ಮುಚ್ಚುವಿಕೆಗಳನ್ನು ನೋಡುವುದಿಲ್ಲವಾದರೂ,  ಅನೇಕ ಜನರು ಉದ್ಯೋಗ ಕಳೆದುಕೊಳ್ಳುವುದು, ಕೆಲಸದ ಪ್ರಮಾಣವನ್ನು ಕಡಿಮೆ ಮಾಡುವುದು ಇತ್ಯಾದಿ ಆಗುತ್ತದೆ” ಎಂದು ಎಐಎಂಒ ಗೌರವ ಪ್ರಧಾನ ಕಾರ್ಯದರ್ಶಿ ಕೆನ್ನಿ ರಾಮಾನಂದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಂಎಸ್‌ಎಂಇ ವಲಯವು ಕೃಷಿಯ ನಂತರ ದೇಶದ ಅತಿದೊಡ್ಡ ಉದ್ಯೋಗ ಸೃಷ್ಟಿಸುವ ವಲಯವಾಗಿದೆ.

ಅಗತ್ಯ ಸೇವಾ ಪೂರೈಕೆದಾರರ ವ್ಯವಹಾರಗಳಲ್ಲಿ, ಕೊರೊನಾದಿಂದ ಯಾವುದೇ ಪರಿಣಾಮ ಬೀಳಲಿಲ್ಲ ಎಂದು ಸಮೀಕ್ಷೆ ಹೇಳುತ್ತದೆ.

ಸಂಗ್ರಹಿಸಿದ ದತ್ತಾಂಶಗಳ ಬಗ್ಗೆ ಎಐಎಂಒ ಹೆಚ್ಚಿನ ಫಲಿತಾಂಶಗಳನ್ನು ಈ ವಾರ ಬಿಡುಗಡೆ ಮಾಡಲಿದೆ ಎಂದು ಎಐಎಂಒ ಮಾಜಿ ಅಧ್ಯಕ್ಷ ಕೆ ಇ ರಘುನಾಥನ್ ತಿಳಿಸಿದ್ದಾರೆಂದು ನ್ಯೂಸ್ ಕ್ಲಿಕ್ ವರದಿ ಮಾಡಿದೆ.

“ಎಐಎಂಒ ಭಾರತದಲ್ಲಿನ ಎಂಎಸ್‌ಎಂಇಗಳ ಹೃದಯ ಬಡಿತವನ್ನು ತೋರಿಸುತ್ತಿದೆ. ಎಂಎಸ್‌ಎಂಇಗಳ ಅಗತ್ಯಗಳನ್ನು ಬೆಳಕಿಗೆ ತಂದಿದ್ದಕ್ಕಾಗಿ ನಾವು ಹಣಕಾಸು ಸಚಿವೆ ಮತ್ತು ಪ್ರಧಾನ ಮಂತ್ರಿಗಳನ್ನು ಶ್ಲಾಘಿಸುತ್ತೇವೆ.  ಭಾರತದಾದ್ಯಂತದ ವಿವಿಧ ಎಂಎಸ್‌ಎಂಇ ಸಂಘಗಳ ಸದಸ್ಯರು ಮತ್ತು ಕೈಗಾರಿಕೋದ್ಯಮಿಗಳೊಂದಿಗೆ ಮಾತನಾಡಿದ್ದೇವೆ. ಸರ್ಕಾರ ಘೋಷಿಸಿದ ಹಣಕಾಸು ಪ್ಯಾಕೇಜ್‌ಗಳ ಪ್ರಯೋಜನಗಳು ಇನ್ನು ಎಂಎಸ್‌ಎಂಇಗಳ ಬಾಗಿಲನ್ನು ತಲುಪಿಲ್ಲ” ಎಂದು ರಘುನಾಥನ್ ಹೇಳಿದ್ದಾರೆ.

ಈ ಸಮೀಕ್ಷೆಯು ಇದುವರೆಗಿನ ಅತಿದೊಡ್ಡ ಉದ್ಯಮ ಸಮೀಕ್ಷೆಯಾಗಿದೆ ಎಂದು ಎಐಎಂಒ ಹೇಳಿದೆ. ಸಾಮಾಜಿಕ ತಂತ್ರಜ್ಞಾನ ಉದ್ಯಮ ಮತ್ತು ಫೆಡರೇಶನ್ ಆಫ್ ಇಂಡಿಯಾ ಇಂಡಸ್ಟ್ರಿ, ಡಿಜಿಟಲ್ ಫಾರ್ ಎಂಪವರ್‌ಮೆಂಟ್ (ಡಿ 4 ಇ), ಅಸೋಸಿಯೇಷನ್ ​​ಆಫ್ ಇಂಡಿಯನ್ ಇಂಡಸ್ಟ್ರಿ, ಸಿಮೆಂಟ್ ತಯಾರಕರ ಕಲ್ಯಾಣ ಸಂಘ, ಭಾರತೀಯ ಮಹಿಳಾ ಉದ್ಯಮಿಗಳ ಒಕ್ಕೂಟ, ಭಾರತೀಯ ಮಹಿಳಾ ಉದ್ಯಮಿಗಳ ಫಡರೇಶನ್, ಫಸ್ಟ್ ವಲ್ಡ್ ಕಮ್ಯೂನಿಟಿ, ಚೇಂಬರ್ ಆಫ್ ಸ್ಮಾಲ್ ಇಂಡಸ್ಟ್ರಿ ಅಸೋಸಿಯೇಷನ್, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಒಕ್ಕೂಟ ಮತ್ತು ಲಕ್ನೋದ ಅಮೌಸಿ ಇಂಡಸ್ಟ್ರೀಸ್ ಅಸೋಸಿಯೇಷನ್ ಸೇರಿದಂದತೆ ಮುಂತಾದ ಸಂಘಟನೆಗಳ ಸಹಯೋಗದೊಂದಿಗೆ ಈ ಸಮೀಕ್ಷೆಯು ನಡೆದಿತ್ತು.


ಓದಿ: ಕೊರೊನ ಸಮಯದಲ್ಲಿ ಮೃತರಾದ ಪತ್ರಕರ್ತರಿಗೆ 50 ಲಕ್ಷ ಪರಿಹಾರ ನೀಡಿ: ಕರ್ನಾಟಕ ಹೈಕೋರ್ಟ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...