Homeಮುಖಪುಟ20 ಲಕ್ಷ ಕೋಟಿ ಪ್ಯಾಕೇಜ್‌‌ ಘೋಷಿಸಿದರೂ 35% ಸಣ್ಣ ಉದ್ಯಮ ಸ್ಥಗಿತದತ್ತ: ಸಮೀಕ್ಷೆ

20 ಲಕ್ಷ ಕೋಟಿ ಪ್ಯಾಕೇಜ್‌‌ ಘೋಷಿಸಿದರೂ 35% ಸಣ್ಣ ಉದ್ಯಮ ಸ್ಥಗಿತದತ್ತ: ಸಮೀಕ್ಷೆ

ಸರ್ಕಾರ ಘೋಷಿಸಿದ ಹಣಕಾಸು ಪ್ಯಾಕೇಜ್‌ಗಳ ಪ್ರಯೋಜನಗಳು ಇನ್ನು ಎಂಎಸ್‌ಎಂಇಗಳ ಬಾಗಿಲನ್ನು ತಲುಪಿಲ್ಲ” ಎಂದು ಎಐಎಂಒ ಮಾಜಿ ಅಧ್ಯಕ್ಷ ರಘುನಾಥನ್ ಹೇಳಿದ್ದಾರೆ.

- Advertisement -
- Advertisement -

ಕೊರೊನಾ ಮತ್ತು ಎರಡು ತಿಂಗಳ ಲಾಕ್‌ಡೌನ್‌‌ ಮಧ್ಯೆ 35% ನಷ್ಟು ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಉದ್ಯಮ ಗಳು (ಎಂಎಸ್‌ಎಂಇ) ಹಾಗೂ 37% ಸ್ವಯಂ ಉದ್ಯೋಗಗಳು ತಮ್ಮ ವ್ಯವಹಾರಗಳನ್ನು ಸ್ಥಗಿತಗೊಳಿಸಲು ಮುಂದಾಗಿವೆ ಎಂದು ಅಖಿಲ ಭಾರತ ತಯಾರಕರ ಸಂಘ (ಎಐಎಂಒ) ಸಮೀಕ್ಷೆ ತಿಳಿಸಿದೆ.

ಮೇ 24 ಮತ್ತು ಮೇ 30 ರ ನಡುವೆ ಆನ್‌ಲೈನ್‌ನಲ್ಲಿ ಈ ಸಮೀಕ್ಷೆಯನ್ನು ನಡೆಸಲಾಗಿದ್ದು, ಇದರಲ್ಲಿ ಒಟ್ಟು 46,425 ಸ್ವಉದ್ಯೋಗಿಗಳು, ಎಂಎಸ್‌ಎಂಇ ಮಾಲೀಕರು, ಕಾರ್ಪೊರೇಟ್ ಉದ್ಯೋಗದಾತರು ಹಾಗೂ ಉದ್ಯೋಗಿಗಳು ಭಾಗವಹಿಸಿದ್ದರು. ವಿಶೇಷವೆಂದರೆ, ಕೇಂದ್ರ ಸರ್ಕಾರವು ‘ಆತ್ಮನಿರ್ಭರ ಭಾರತ್’ ಪ್ಯಾಕೇಜ್ ಎಂಬ 20 ಲಕ್ಷ ಕೋಟಿ ರೂ.ಗಳ ಹಣಕಾಸು ಪ್ಯಾಕೇಜ್ ಘೋಷಿಸಿದ ನಂತರ ಈ ಸಮೀಕ್ಷೆಯನ್ನು ನಡೆಸಲಾಗಿದೆ.

“ವ್ಯವಹಾರವನ್ನು ಮುಂದುವರೆಸುವ ಅನಿಶ್ಚಿತತೆಯು ಎಂಎಸ್ಎಂಇ ವಿಭಾಗದಲ್ಲಿ ಸುಮಾರು 11% ಇದ್ದರೆ ಸ್ವಯಂ ಉದ್ಯೋಗ ವಿಭಾಗದಲ್ಲಿ ಸುಮಾರು 17% ಆಗಿದೆ. ಅವರು ಇನ್ನೂ ಚೇತರಿಸಿಕೊಳ್ಳಲು ಅವಕಾಶವಿದೆ” ಎಂದು ಸಮೀಕ್ಷೆ ತಿಳಿಸಿದೆ.

ಮೇ 13 ರಂದು ಹಣಕಾಸು ಪ್ಯಾಕೇಜ್ ಘೋಷಿಸುವಾಗ, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು ಮರು ವರ್ಗೀಕರಿಸಲು ಎಂಎಸ್‌ಎಂಇಗಳ ವ್ಯಾಖ್ಯಾನವನ್ನು ವಿಸ್ತರಿಸಲಾಗುವುದು ಎಂದು ಹೇಳಿದ್ದರು. ಪ್ಯಾಕೇಜ್ ಅಡಿಯಲ್ಲಿ ಸುಮಾರು 3.5 ಲಕ್ಷ ಕೋಟಿ ರೂ.ಗಳನ್ನು ಬ್ಯಾಂಕುಗಳು ಮತ್ತು ಇತರ ಹಣಕಾಸು ಸಂಸ್ಥೆಗಳಿಂದ ಪಡೆದ ಸಾಲವಾಗಿ ಎಂಎಸ್‌ಎಂಇ ವಲಯಕ್ಕೆ ವಿಸ್ತರಿಸಲಾಯಿತು.

ಸಮೀಕ್ಷೆಯ ಇತರ ಸಂಶೋಧನೆಗಳ ಪೈಕಿ, 32% ಎಂಎಸ್‌ಎಂಇಗಳು ಮತ್ತು 26% ಕಾರ್ಪೊರೇಟ್‌ಗಳು ಕೊರೊನಾ ಪ್ರಭಾವದಿಂದ ಚೇತರಿಸಿಕೊಳ್ಳಲು ಆರು ತಿಂಗಳು ಬೇಕಾಗುತ್ತದೆ ಎಂದು ಹೇಳಿದ್ದಾರೆ. ಆದರೆ, 46% ಕಾರ್ಪೊರೇಟ್‌ಗಳು ಮತ್ತು 27% ಸ್ವಯಂ ಉದ್ಯೋಗಿಗಳು ಮೂರು ತಿಂಗಳೊಳಗೆ ಚೇತರಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.

ಸಮೀಕ್ಷೆಯ ಫಲಿತಾಂಶಗಳು: 

“ಕಾರ್ಪೊರೇಟ್ ವಲಯದಿಂದ ಪ್ರತಿಕ್ರಿಯಿಸಿದವರಲ್ಲಿ, ಕೊರೊನಾದಿಂದಾಗಿ ವ್ಯವಹಾರದ ಮೇಲೆ ಪರಿಣಾಮ ಬೀರಿದೆ ಎಂದು ಸೂಚಿಸಿದ 46% ಜನರು, ಇದರಿಂದ ಚೇತರಿಸಿಕೊಳ್ಳಲು ಮೂರು ತಿಂಗಳುಗಳು ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ. 26% ಜನರು ಆರು ತಿಂಗಳ ಅವಧಿಯಲ್ಲಿ ವರ್ಷದ ಅಂತ್ಯದ ವೇಳೆಗೆ ಸರಿಯಾಗುತ್ತದೆ ಎಂದು ಭಾವಿಸಿದ್ದಾರೆ. ಈ ವಲಯವು ಭಾರಿ ಮುಚ್ಚುವಿಕೆಗಳನ್ನು ನೋಡುವುದಿಲ್ಲವಾದರೂ,  ಅನೇಕ ಜನರು ಉದ್ಯೋಗ ಕಳೆದುಕೊಳ್ಳುವುದು, ಕೆಲಸದ ಪ್ರಮಾಣವನ್ನು ಕಡಿಮೆ ಮಾಡುವುದು ಇತ್ಯಾದಿ ಆಗುತ್ತದೆ” ಎಂದು ಎಐಎಂಒ ಗೌರವ ಪ್ರಧಾನ ಕಾರ್ಯದರ್ಶಿ ಕೆನ್ನಿ ರಾಮಾನಂದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಂಎಸ್‌ಎಂಇ ವಲಯವು ಕೃಷಿಯ ನಂತರ ದೇಶದ ಅತಿದೊಡ್ಡ ಉದ್ಯೋಗ ಸೃಷ್ಟಿಸುವ ವಲಯವಾಗಿದೆ.

ಅಗತ್ಯ ಸೇವಾ ಪೂರೈಕೆದಾರರ ವ್ಯವಹಾರಗಳಲ್ಲಿ, ಕೊರೊನಾದಿಂದ ಯಾವುದೇ ಪರಿಣಾಮ ಬೀಳಲಿಲ್ಲ ಎಂದು ಸಮೀಕ್ಷೆ ಹೇಳುತ್ತದೆ.

ಸಂಗ್ರಹಿಸಿದ ದತ್ತಾಂಶಗಳ ಬಗ್ಗೆ ಎಐಎಂಒ ಹೆಚ್ಚಿನ ಫಲಿತಾಂಶಗಳನ್ನು ಈ ವಾರ ಬಿಡುಗಡೆ ಮಾಡಲಿದೆ ಎಂದು ಎಐಎಂಒ ಮಾಜಿ ಅಧ್ಯಕ್ಷ ಕೆ ಇ ರಘುನಾಥನ್ ತಿಳಿಸಿದ್ದಾರೆಂದು ನ್ಯೂಸ್ ಕ್ಲಿಕ್ ವರದಿ ಮಾಡಿದೆ.

“ಎಐಎಂಒ ಭಾರತದಲ್ಲಿನ ಎಂಎಸ್‌ಎಂಇಗಳ ಹೃದಯ ಬಡಿತವನ್ನು ತೋರಿಸುತ್ತಿದೆ. ಎಂಎಸ್‌ಎಂಇಗಳ ಅಗತ್ಯಗಳನ್ನು ಬೆಳಕಿಗೆ ತಂದಿದ್ದಕ್ಕಾಗಿ ನಾವು ಹಣಕಾಸು ಸಚಿವೆ ಮತ್ತು ಪ್ರಧಾನ ಮಂತ್ರಿಗಳನ್ನು ಶ್ಲಾಘಿಸುತ್ತೇವೆ.  ಭಾರತದಾದ್ಯಂತದ ವಿವಿಧ ಎಂಎಸ್‌ಎಂಇ ಸಂಘಗಳ ಸದಸ್ಯರು ಮತ್ತು ಕೈಗಾರಿಕೋದ್ಯಮಿಗಳೊಂದಿಗೆ ಮಾತನಾಡಿದ್ದೇವೆ. ಸರ್ಕಾರ ಘೋಷಿಸಿದ ಹಣಕಾಸು ಪ್ಯಾಕೇಜ್‌ಗಳ ಪ್ರಯೋಜನಗಳು ಇನ್ನು ಎಂಎಸ್‌ಎಂಇಗಳ ಬಾಗಿಲನ್ನು ತಲುಪಿಲ್ಲ” ಎಂದು ರಘುನಾಥನ್ ಹೇಳಿದ್ದಾರೆ.

ಈ ಸಮೀಕ್ಷೆಯು ಇದುವರೆಗಿನ ಅತಿದೊಡ್ಡ ಉದ್ಯಮ ಸಮೀಕ್ಷೆಯಾಗಿದೆ ಎಂದು ಎಐಎಂಒ ಹೇಳಿದೆ. ಸಾಮಾಜಿಕ ತಂತ್ರಜ್ಞಾನ ಉದ್ಯಮ ಮತ್ತು ಫೆಡರೇಶನ್ ಆಫ್ ಇಂಡಿಯಾ ಇಂಡಸ್ಟ್ರಿ, ಡಿಜಿಟಲ್ ಫಾರ್ ಎಂಪವರ್‌ಮೆಂಟ್ (ಡಿ 4 ಇ), ಅಸೋಸಿಯೇಷನ್ ​​ಆಫ್ ಇಂಡಿಯನ್ ಇಂಡಸ್ಟ್ರಿ, ಸಿಮೆಂಟ್ ತಯಾರಕರ ಕಲ್ಯಾಣ ಸಂಘ, ಭಾರತೀಯ ಮಹಿಳಾ ಉದ್ಯಮಿಗಳ ಒಕ್ಕೂಟ, ಭಾರತೀಯ ಮಹಿಳಾ ಉದ್ಯಮಿಗಳ ಫಡರೇಶನ್, ಫಸ್ಟ್ ವಲ್ಡ್ ಕಮ್ಯೂನಿಟಿ, ಚೇಂಬರ್ ಆಫ್ ಸ್ಮಾಲ್ ಇಂಡಸ್ಟ್ರಿ ಅಸೋಸಿಯೇಷನ್, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಒಕ್ಕೂಟ ಮತ್ತು ಲಕ್ನೋದ ಅಮೌಸಿ ಇಂಡಸ್ಟ್ರೀಸ್ ಅಸೋಸಿಯೇಷನ್ ಸೇರಿದಂದತೆ ಮುಂತಾದ ಸಂಘಟನೆಗಳ ಸಹಯೋಗದೊಂದಿಗೆ ಈ ಸಮೀಕ್ಷೆಯು ನಡೆದಿತ್ತು.


ಓದಿ: ಕೊರೊನ ಸಮಯದಲ್ಲಿ ಮೃತರಾದ ಪತ್ರಕರ್ತರಿಗೆ 50 ಲಕ್ಷ ಪರಿಹಾರ ನೀಡಿ: ಕರ್ನಾಟಕ ಹೈಕೋರ್ಟ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...