Homeಮುಖಪುಟ20 ಲಕ್ಷ ಕೋಟಿ ಪ್ಯಾಕೇಜ್‌‌ ಘೋಷಿಸಿದರೂ 35% ಸಣ್ಣ ಉದ್ಯಮ ಸ್ಥಗಿತದತ್ತ: ಸಮೀಕ್ಷೆ

20 ಲಕ್ಷ ಕೋಟಿ ಪ್ಯಾಕೇಜ್‌‌ ಘೋಷಿಸಿದರೂ 35% ಸಣ್ಣ ಉದ್ಯಮ ಸ್ಥಗಿತದತ್ತ: ಸಮೀಕ್ಷೆ

ಸರ್ಕಾರ ಘೋಷಿಸಿದ ಹಣಕಾಸು ಪ್ಯಾಕೇಜ್‌ಗಳ ಪ್ರಯೋಜನಗಳು ಇನ್ನು ಎಂಎಸ್‌ಎಂಇಗಳ ಬಾಗಿಲನ್ನು ತಲುಪಿಲ್ಲ” ಎಂದು ಎಐಎಂಒ ಮಾಜಿ ಅಧ್ಯಕ್ಷ ರಘುನಾಥನ್ ಹೇಳಿದ್ದಾರೆ.

- Advertisement -
- Advertisement -

ಕೊರೊನಾ ಮತ್ತು ಎರಡು ತಿಂಗಳ ಲಾಕ್‌ಡೌನ್‌‌ ಮಧ್ಯೆ 35% ನಷ್ಟು ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಉದ್ಯಮ ಗಳು (ಎಂಎಸ್‌ಎಂಇ) ಹಾಗೂ 37% ಸ್ವಯಂ ಉದ್ಯೋಗಗಳು ತಮ್ಮ ವ್ಯವಹಾರಗಳನ್ನು ಸ್ಥಗಿತಗೊಳಿಸಲು ಮುಂದಾಗಿವೆ ಎಂದು ಅಖಿಲ ಭಾರತ ತಯಾರಕರ ಸಂಘ (ಎಐಎಂಒ) ಸಮೀಕ್ಷೆ ತಿಳಿಸಿದೆ.

ಮೇ 24 ಮತ್ತು ಮೇ 30 ರ ನಡುವೆ ಆನ್‌ಲೈನ್‌ನಲ್ಲಿ ಈ ಸಮೀಕ್ಷೆಯನ್ನು ನಡೆಸಲಾಗಿದ್ದು, ಇದರಲ್ಲಿ ಒಟ್ಟು 46,425 ಸ್ವಉದ್ಯೋಗಿಗಳು, ಎಂಎಸ್‌ಎಂಇ ಮಾಲೀಕರು, ಕಾರ್ಪೊರೇಟ್ ಉದ್ಯೋಗದಾತರು ಹಾಗೂ ಉದ್ಯೋಗಿಗಳು ಭಾಗವಹಿಸಿದ್ದರು. ವಿಶೇಷವೆಂದರೆ, ಕೇಂದ್ರ ಸರ್ಕಾರವು ‘ಆತ್ಮನಿರ್ಭರ ಭಾರತ್’ ಪ್ಯಾಕೇಜ್ ಎಂಬ 20 ಲಕ್ಷ ಕೋಟಿ ರೂ.ಗಳ ಹಣಕಾಸು ಪ್ಯಾಕೇಜ್ ಘೋಷಿಸಿದ ನಂತರ ಈ ಸಮೀಕ್ಷೆಯನ್ನು ನಡೆಸಲಾಗಿದೆ.

“ವ್ಯವಹಾರವನ್ನು ಮುಂದುವರೆಸುವ ಅನಿಶ್ಚಿತತೆಯು ಎಂಎಸ್ಎಂಇ ವಿಭಾಗದಲ್ಲಿ ಸುಮಾರು 11% ಇದ್ದರೆ ಸ್ವಯಂ ಉದ್ಯೋಗ ವಿಭಾಗದಲ್ಲಿ ಸುಮಾರು 17% ಆಗಿದೆ. ಅವರು ಇನ್ನೂ ಚೇತರಿಸಿಕೊಳ್ಳಲು ಅವಕಾಶವಿದೆ” ಎಂದು ಸಮೀಕ್ಷೆ ತಿಳಿಸಿದೆ.

ಮೇ 13 ರಂದು ಹಣಕಾಸು ಪ್ಯಾಕೇಜ್ ಘೋಷಿಸುವಾಗ, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು ಮರು ವರ್ಗೀಕರಿಸಲು ಎಂಎಸ್‌ಎಂಇಗಳ ವ್ಯಾಖ್ಯಾನವನ್ನು ವಿಸ್ತರಿಸಲಾಗುವುದು ಎಂದು ಹೇಳಿದ್ದರು. ಪ್ಯಾಕೇಜ್ ಅಡಿಯಲ್ಲಿ ಸುಮಾರು 3.5 ಲಕ್ಷ ಕೋಟಿ ರೂ.ಗಳನ್ನು ಬ್ಯಾಂಕುಗಳು ಮತ್ತು ಇತರ ಹಣಕಾಸು ಸಂಸ್ಥೆಗಳಿಂದ ಪಡೆದ ಸಾಲವಾಗಿ ಎಂಎಸ್‌ಎಂಇ ವಲಯಕ್ಕೆ ವಿಸ್ತರಿಸಲಾಯಿತು.

ಸಮೀಕ್ಷೆಯ ಇತರ ಸಂಶೋಧನೆಗಳ ಪೈಕಿ, 32% ಎಂಎಸ್‌ಎಂಇಗಳು ಮತ್ತು 26% ಕಾರ್ಪೊರೇಟ್‌ಗಳು ಕೊರೊನಾ ಪ್ರಭಾವದಿಂದ ಚೇತರಿಸಿಕೊಳ್ಳಲು ಆರು ತಿಂಗಳು ಬೇಕಾಗುತ್ತದೆ ಎಂದು ಹೇಳಿದ್ದಾರೆ. ಆದರೆ, 46% ಕಾರ್ಪೊರೇಟ್‌ಗಳು ಮತ್ತು 27% ಸ್ವಯಂ ಉದ್ಯೋಗಿಗಳು ಮೂರು ತಿಂಗಳೊಳಗೆ ಚೇತರಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.

ಸಮೀಕ್ಷೆಯ ಫಲಿತಾಂಶಗಳು: 

“ಕಾರ್ಪೊರೇಟ್ ವಲಯದಿಂದ ಪ್ರತಿಕ್ರಿಯಿಸಿದವರಲ್ಲಿ, ಕೊರೊನಾದಿಂದಾಗಿ ವ್ಯವಹಾರದ ಮೇಲೆ ಪರಿಣಾಮ ಬೀರಿದೆ ಎಂದು ಸೂಚಿಸಿದ 46% ಜನರು, ಇದರಿಂದ ಚೇತರಿಸಿಕೊಳ್ಳಲು ಮೂರು ತಿಂಗಳುಗಳು ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ. 26% ಜನರು ಆರು ತಿಂಗಳ ಅವಧಿಯಲ್ಲಿ ವರ್ಷದ ಅಂತ್ಯದ ವೇಳೆಗೆ ಸರಿಯಾಗುತ್ತದೆ ಎಂದು ಭಾವಿಸಿದ್ದಾರೆ. ಈ ವಲಯವು ಭಾರಿ ಮುಚ್ಚುವಿಕೆಗಳನ್ನು ನೋಡುವುದಿಲ್ಲವಾದರೂ,  ಅನೇಕ ಜನರು ಉದ್ಯೋಗ ಕಳೆದುಕೊಳ್ಳುವುದು, ಕೆಲಸದ ಪ್ರಮಾಣವನ್ನು ಕಡಿಮೆ ಮಾಡುವುದು ಇತ್ಯಾದಿ ಆಗುತ್ತದೆ” ಎಂದು ಎಐಎಂಒ ಗೌರವ ಪ್ರಧಾನ ಕಾರ್ಯದರ್ಶಿ ಕೆನ್ನಿ ರಾಮಾನಂದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಂಎಸ್‌ಎಂಇ ವಲಯವು ಕೃಷಿಯ ನಂತರ ದೇಶದ ಅತಿದೊಡ್ಡ ಉದ್ಯೋಗ ಸೃಷ್ಟಿಸುವ ವಲಯವಾಗಿದೆ.

ಅಗತ್ಯ ಸೇವಾ ಪೂರೈಕೆದಾರರ ವ್ಯವಹಾರಗಳಲ್ಲಿ, ಕೊರೊನಾದಿಂದ ಯಾವುದೇ ಪರಿಣಾಮ ಬೀಳಲಿಲ್ಲ ಎಂದು ಸಮೀಕ್ಷೆ ಹೇಳುತ್ತದೆ.

ಸಂಗ್ರಹಿಸಿದ ದತ್ತಾಂಶಗಳ ಬಗ್ಗೆ ಎಐಎಂಒ ಹೆಚ್ಚಿನ ಫಲಿತಾಂಶಗಳನ್ನು ಈ ವಾರ ಬಿಡುಗಡೆ ಮಾಡಲಿದೆ ಎಂದು ಎಐಎಂಒ ಮಾಜಿ ಅಧ್ಯಕ್ಷ ಕೆ ಇ ರಘುನಾಥನ್ ತಿಳಿಸಿದ್ದಾರೆಂದು ನ್ಯೂಸ್ ಕ್ಲಿಕ್ ವರದಿ ಮಾಡಿದೆ.

“ಎಐಎಂಒ ಭಾರತದಲ್ಲಿನ ಎಂಎಸ್‌ಎಂಇಗಳ ಹೃದಯ ಬಡಿತವನ್ನು ತೋರಿಸುತ್ತಿದೆ. ಎಂಎಸ್‌ಎಂಇಗಳ ಅಗತ್ಯಗಳನ್ನು ಬೆಳಕಿಗೆ ತಂದಿದ್ದಕ್ಕಾಗಿ ನಾವು ಹಣಕಾಸು ಸಚಿವೆ ಮತ್ತು ಪ್ರಧಾನ ಮಂತ್ರಿಗಳನ್ನು ಶ್ಲಾಘಿಸುತ್ತೇವೆ.  ಭಾರತದಾದ್ಯಂತದ ವಿವಿಧ ಎಂಎಸ್‌ಎಂಇ ಸಂಘಗಳ ಸದಸ್ಯರು ಮತ್ತು ಕೈಗಾರಿಕೋದ್ಯಮಿಗಳೊಂದಿಗೆ ಮಾತನಾಡಿದ್ದೇವೆ. ಸರ್ಕಾರ ಘೋಷಿಸಿದ ಹಣಕಾಸು ಪ್ಯಾಕೇಜ್‌ಗಳ ಪ್ರಯೋಜನಗಳು ಇನ್ನು ಎಂಎಸ್‌ಎಂಇಗಳ ಬಾಗಿಲನ್ನು ತಲುಪಿಲ್ಲ” ಎಂದು ರಘುನಾಥನ್ ಹೇಳಿದ್ದಾರೆ.

ಈ ಸಮೀಕ್ಷೆಯು ಇದುವರೆಗಿನ ಅತಿದೊಡ್ಡ ಉದ್ಯಮ ಸಮೀಕ್ಷೆಯಾಗಿದೆ ಎಂದು ಎಐಎಂಒ ಹೇಳಿದೆ. ಸಾಮಾಜಿಕ ತಂತ್ರಜ್ಞಾನ ಉದ್ಯಮ ಮತ್ತು ಫೆಡರೇಶನ್ ಆಫ್ ಇಂಡಿಯಾ ಇಂಡಸ್ಟ್ರಿ, ಡಿಜಿಟಲ್ ಫಾರ್ ಎಂಪವರ್‌ಮೆಂಟ್ (ಡಿ 4 ಇ), ಅಸೋಸಿಯೇಷನ್ ​​ಆಫ್ ಇಂಡಿಯನ್ ಇಂಡಸ್ಟ್ರಿ, ಸಿಮೆಂಟ್ ತಯಾರಕರ ಕಲ್ಯಾಣ ಸಂಘ, ಭಾರತೀಯ ಮಹಿಳಾ ಉದ್ಯಮಿಗಳ ಒಕ್ಕೂಟ, ಭಾರತೀಯ ಮಹಿಳಾ ಉದ್ಯಮಿಗಳ ಫಡರೇಶನ್, ಫಸ್ಟ್ ವಲ್ಡ್ ಕಮ್ಯೂನಿಟಿ, ಚೇಂಬರ್ ಆಫ್ ಸ್ಮಾಲ್ ಇಂಡಸ್ಟ್ರಿ ಅಸೋಸಿಯೇಷನ್, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಒಕ್ಕೂಟ ಮತ್ತು ಲಕ್ನೋದ ಅಮೌಸಿ ಇಂಡಸ್ಟ್ರೀಸ್ ಅಸೋಸಿಯೇಷನ್ ಸೇರಿದಂದತೆ ಮುಂತಾದ ಸಂಘಟನೆಗಳ ಸಹಯೋಗದೊಂದಿಗೆ ಈ ಸಮೀಕ್ಷೆಯು ನಡೆದಿತ್ತು.


ಓದಿ: ಕೊರೊನ ಸಮಯದಲ್ಲಿ ಮೃತರಾದ ಪತ್ರಕರ್ತರಿಗೆ 50 ಲಕ್ಷ ಪರಿಹಾರ ನೀಡಿ: ಕರ್ನಾಟಕ ಹೈಕೋರ್ಟ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...