Homeಚಳವಳಿಮೇಲ್ಜಾತಿ ದೌರ್ಜನ್ಯವನ್ನು ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ತಂದ ಕಾರಂಚೇಡು ದಲಿತರ ಹತ್ಯಾಕಾಂಡಕ್ಕೆ 35 ವರ್ಷ.

ಮೇಲ್ಜಾತಿ ದೌರ್ಜನ್ಯವನ್ನು ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ತಂದ ಕಾರಂಚೇಡು ದಲಿತರ ಹತ್ಯಾಕಾಂಡಕ್ಕೆ 35 ವರ್ಷ.

ಕೆರೆಯನ್ನು ಗಲೀಜು ಮಾಡಿದ್ದ ಮೇಲ್ಜಾತಿಯವನನ್ನು ದಲಿತನೊಬ್ಬ ಪ್ರಶ್ನನಿಸಿದ್ದೆ ದಲಿತರ ಭೀಕರ ಹತ್ಯಾಕಾಂಡಕ್ಕೆ ಕಾರಣವಾಯಿತು.

- Advertisement -
- Advertisement -

ದಲಿತ ದಮನಿತರ ಮೇಲಿನ ದೌರ್ಜನ್ಯದ ಕೇಸುಗಳನ್ನು ದುಡ್ಡಿರುವ ಮೇಲ್ಜಾತಿಯ ಜನ ಎಲ್ಲಿಬೇಕಾದರೂ ಗೆದ್ದು ಬರುತ್ತಾರೆ. ಈಗಲೂ ನಿರಂತರವಾಗಿ ದಲಿತರ ಮೇಲೆ ದೌರ್ಜನ್ಯಗಳು ನಡೆಯುತ್ತಲೇ ಬಂದಿವೆ. ಬಾಬಾ ಸಾಹೇಬ್ ಅಂಬೇಡ್ಕರರ ಕರೆಯಾದ ಶಿಕ್ಷಣ, ಸಂಘಟನೆ, ಸಂಘರ್ಷದ ಮೂಲಕ ತರುವ ಬದಲಾವಣೆಯೇ ದಲಿತರನ್ನು ಶೋಷಣೆಯ ಸಮುದ್ರದಿಂದ ಆಚೆ ತೆಗೆದು ದಡ ಸೇರಿಸಬಲ್ಲದು.

ಬರಹ: ಅನಿಲ್‌ ಕುಮಾರ್ ಚಿಕ್ಕದಾಳವಟ್ಟ

ದಲಿತರ ಮೇಲೆ ನಡೆದ ಅಮಾನುಷ ದೌರ್ಜನ್ಯಗಳಲ್ಲಿ ಒಂದಾದ ಕಾರಂಚೇಡು ಘಟನೆಗೆ ಇಂದಿಗೆ 35 ವರ್ಷ. ಮನುವಾದದ ವಿಷ ಬೀಜಗಳನ್ನು ನಿಧಾನಗತಿಯಲ್ಲಿ ಮೈ ಮನಸಲ್ಲಿ ಹರಡುವಂತೆ ಮಾಡುವಲ್ಲಿ ಬ್ರಾಹ್ಮಣ್ಯ ಕೆಲಸ ಮಾಡಿದೆ ಎನ್ನಲು ಈ ಭೀಕರ ಘಟನೆಗಳೇ ಸಾಕ್ಷ್ಯಗಳಾಗಿವೆ. ಅಶ್ಪಶ್ಯರನ್ನು ತಮ್ಮ ಭೂಮಿಗಳಲ್ಲಿ ದುಡಿಸಿಕೊಂಡು ಮೆರೆದ ಭೂಮಾಲಿಕರು ಎಂದೆದಿಂದಿಗೂ ದಲಿತರು ತಮ್ಮ ಕಾಲ ಕೆಳಗೆ ಇರಬೇಕೆಂದು ಶತ ಶತಮಾನಗಳಿಂದ ಬಯಸಿದ್ದರು.

ಆಂಧ್ರ-ತೆಲಂಗಾಣಗಳಲ್ಲಿ ಸಾವಿರಗಟ್ಟಲೆ ಎಕರೆಗಳ ಮಾಲೀಕರಾದ ಮೇಲ್ಜಾತಿಯ ಜನ ಕೆಳವರ್ಗದವರನ್ನು ಜೀತದಾಳುಗಳಾಗಿರಿಸಿಕೊಂಡು, ಅವರಿಗೆ ಒಂದಿಂಚೂ ಭೂಮಿಯ ಒಡೆತನ ನೀಡದೆ ಶೋಷಣೆ ಮಾಡಿದ್ದರು (ಈಗ ಭೂಮಿಯಿದೆ ಆದರೆ, ಶೋಷಣೆ ನಿಂತಿಲ್ಲ). ಅಂತಹ ಭಯಾನಕವಾದ ಸಮಯದಲ್ಲೂ ಶೋಷಣೆಯ ವಿರುದ್ಧ ಸಿಡಿದೆದ್ದ ಸಾಕಷ್ಟು ಜನ ಹೋರಾಟಗರರು ಹುತಾತ್ಮರಾಗಿದ್ದಾರೆ. ದಲಿತರ ಮೇಲಿನ ಶೋಷಣೆಯನ್ನು ಪ್ರಶ್ನಿಸಿದ್ದಕ್ಕಾಗಿ ನಡೆದ ಕಾರಂಚೇಡು ದಲಿತರ ಮೇಲಿನ ಹತ್ಯಾಕಾಂಡಕ್ಕೆ ಇಂದಿಗೆ 35 ವರ್ಷ.

1985, ಆಗಿನ ವಿಶಾಲ ಆಂಧ್ರಪ್ರದೇಶದಲ್ಲಿನ ಪ್ರಕಾಶಂ ಜಿಲ್ಲೆಯ ಕಾರಂಚೇಡು ಎಂಬ ಗ್ರಾಮದಲ್ಲಿ ದಲಿತರು ಮತ್ತು ಮೇಲ್ಜಾತಿಯ ಜನಕ್ಕೆ ಪ್ರತ್ಯೇಕವಾಗಿ ಎರಡು ಕೆರೆಗಳನ್ನು ಮಾಡಿಕೊಂಡಿದ್ದರು. ದಲಿತ ಸಮುದಾಯದ ಮಾದಿಗ ಜನಾಂಗದ ಜನರು ತಮ್ಮ ಕೆರೆಯ ನೀರನ್ನು ಕುಡಿಯಲೂ ಸಹ ಬಳಸುತ್ತಿದ್ದರಿಂದ  ಅದನ್ನು ಶುಚಿಯಾಗಿ ಇಟ್ಟುಕೊಂಡಿದ್ದರು.


ಓದಿ: ಭಾರತದಲ್ಲಿ ನಿತ್ಯ ಐದು ಕಸ್ಟಡಿ ಸಾವು; ಬಹುತೇಕರು ಮುಸ್ಲಿಮರು, ದಲಿತರು ಮತ್ತು ಅಂಚಿಗೆ ತಳ್ಳಲ್ಪಟ್ಟವರು!


1985 ಜುಲೈ 16 ರಂದು ಕಮ್ಮ ಜಾತಿಗೆ ಸೇರಿದ ಕೊಳಕು ಮನಸ್ಸಿನ ಸವರ್ಣೀಯನೊಬ್ಬ ದಲಿತರ ಕುಡಿಯುವ ನೀರಿನ ಕೆರೆಗೆ ದನಗಳನ್ನು ಇಳಿಸಿ, ಅವುಗಳ ಮೈ ತೊಳೆದು, ಅವು ಕುಡಿದು ಉಳಿದ ಮುಸುರೆ ನೀರನ್ನು ಸುರಿದ. ಇದನ್ನು ಕಂಡ ಮಾದಿಗ ಜನಾಂಗದ ಯುವಕರು ಈ ರೀತಿ ಮಾಡಿದರೆ ನಾವು ನೀರು ಕುಡಿಯುವುದು ಹೇಗೆ ಎಂದು ಪ್ರಶ್ನಿಸಿದ್ದರು. ಕೆಳಜಾತಿಯವನಾಗಿ ನನಗೆ ಪ್ರಶ್ನೆ ಮಾಡುತ್ತಿರ ಎಂದು ಜಗಳ ತೆಗೆದ ಆತ, ತನ್ನ ಜಾತಿಯವರನ್ನು ಸೇರಿಸಿ ನಡೆದ ಘಟನೆಯ ಬಗ್ಗೆ ಚರ್ಚೆ ಮಾಡಿದ. ಅಲ್ಲಿ ಕಮ್ಮ ಮೇಲ್ಜಾತಿಯ ಭೂಮಾಲಿಕರು ದಲಿತರನ್ನು ಹೀಗೆ ಬಿಟ್ಟರೆ ಬೆಳೆದು ಬಿಡುತ್ತಾರೆ. ಅವರನ್ನು ಸುಮ್ಮನೆ  ಬಿಡಬಾರದು ಎಂದು ರಾತ್ರಿಯೇ ಸಂಚು ರೂಪಿಸಿದ್ದರು.

1985 ಜುಲೈ 17 ರ ಬೆಳಗಿನ ಜಾವ ಕೈಗೆ ಸಿಕ್ಕ ಕತ್ತಿ, ಕೊಡಲಿ, ಮಾರಕಾಯುಧಗಳೊಂದಿಗೆ ಟ್ರಾಕ್ಟರ್‌ಗಳಲ್ಲಿ ಬಂದ ಸವರ್ಣೀಯರು, ಮಾದಿಗ ಸಮುದಾಯದ ದಲಿತರನ್ನು ಅಟ್ಟಾಡಿಸಿ ಭಯಾನಕವಾಗಿ ದಾಳಿ ಮಾಡಿದ್ದರು. ಸಿಕ್ಕಸಿಕ್ಕವರನ್ನು ಕತ್ತರಿಸಿ ಹಾಕಿದರು. ಸಾಕಷ್ಟು ಜನ ಹೆಣ್ಣು ಮಕ್ಕಳನ್ನು ಅಮಾನುಷವಾಗಿ ಅತ್ಯಾಚಾರವೆಸಗಿದರು.

ಈ ದುರ್ಘಟನೆಯಲ್ಲಿ ತೆಳ್ಳ ಯೋಹೌಷುವ, ದುಡ್ಡು ವಂದನಂ, ತೆಳ್ಳ ಮುತ್ತಯ್ಯ, ದುಡ್ಡು ರಮೇಶ್, ತೆಳ್ಳ ಮಾಷೆ, ದುಡ್ಡು ಅಬ್ರಹಾಂ ಎಂಬ ಆರು ಜನರು ಅಲ್ಲಿಯೇ ಕೊಲೆಯಾಗಿ ಹೋದರು. 20 ಕ್ಕೂ ಹೆಚ್ಚು ಜನರು ಗಂಬೀರ ಗಾಯಗಳಿಗೆ ತುತ್ತಾದರು. ಕಣ್ಣೆದುರೇ ಮಗನನ್ನು ಕಳೆದುಕೊಂಡ ಪ್ರತ್ಯಕ್ಷ ಸಾಕ್ಷಿ ದುಡ್ಡು ಆಲಿಸಮ್ಮನನ್ನು ಎರಡು ವರ್ಷಗಳ ನಂತರ ಕೊಲೆ ಮಾಡಿದರು.

ಈ ಘಟನೆ ದೇಶದ ಪ್ರಜ್ಞಾವಂತರ, ಮಾನವತವಾದಿಗಳ, ದಲಿತ ಸಂಘಟನೆಗಳ ಆಕ್ರೋಷಕ್ಕೆ ಕಾರಣವಾಗಿ ಬೃಹತ್ ಪ್ರತಿಭಟನೆಗಳು ನಡೆದವು. ಸತತವಾಗಿ ಆರು ತಿಂಗಳ ಕಾಲ ನಡೆದ ಕಾರಂಚೇಡು ಹೋರಾಟ ಬಹಳಷ್ಟು ಕಾನೂನುಗಳನ್ನು ರೂಪಿಸಲು ಕೂಡ ಕಾರಣವಾಯಿತು ಎಂದು ಕೂಡ ಹೇಳಲಾಗುತ್ತದೆ. 1989 ಎಸ್ಸಿ, ಎಸ್ಟಿ ದೌರ್ಜನ್ಯ ವಿರೋಧಿ ಕಾಯ್ದೆ ಬರಲು ಕೂಡ ಈ ಹೋರಾಟದ ಹಿನ್ನೆಲೆ ಇದೆ ಎನ್ನಲಾಗಿದೆ.

ಈ ಹಲ್ಲೆಯಲ್ಲಿ ಭಾಗಿದಾರರಾದ ಆರೋಪಿಗಳ ಮೇಲೆ ಪೋಲೀಸರು ಕೇಸು ದಾಖಲಿಸಿರಲಿಲ್ಲ. ಆದರೆ ಹೋರಾಟಗಾರು ಕೋರ್ಟಿಗೆ ಹೋದ ನಂತರ 9 ಸೆಕ್ಷನ್ಗಳ ಅಡಿಯಲ್ಲಿ 90 ಜನರನ್ನು ಆರೋಪಿಗಳನ್ನಾಗಿ ಮಾಡಿ ಚಾರ್ಜ್ ಶೀಟ್ ಹಾಕಿದರು.


ಓದಿ: ತಮ್ಮ ಭೂಮಿ ಆಕ್ರಮಿಸಿದ್ದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಕ್ಕೆ ದಲಿತ ಯುವಕನ ಹತ್ಯೆ


1994 ರ ಅಕ್ಟೋಬರ್ 30 ರಂದು ಐದು ಜನರಿಗೆ ಜೀವಾವಧಿ ಶಿಕ್ಷೆ ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟ ನಾಲ್ಕು ಜನ ವೃದ್ದರಿಗೆ 1000 ರೂ. ದಂಡ ಹಾಗೂ 46 ಜನರಿಗೆ ತಲಾ 3 ವರ್ಷ ಜೈಲು ಶಿಕ್ಷೆ ವಿಧಿಸಿತು. ಶಿಕ್ಷಗೆ ಒಳಗಾದಂತಹ ಎಲ್ಲರೂ ಹೈಕೋರ್ಟಿಗೆ ಮೇಲ್ಮನವಿ ಹಾಕಿದರು. 1998 ಜುಲೈ 24 ರ ತೀರ್ಪಿನಲ್ಲಿ ಬೆನಿಫಿಟ್ ಆಫ್ ಡೌಟ್ ಅಡಿಯಲ್ಲಿ ಶಿಕ್ಷೆ ರದ್ದುಗೊಳಿಸಲಾಯಿತು.

ಹೋರಾಟಗಾರರ ಸತತ ಪ್ರಯತ್ನದಿಂದ ಅಂತಿಮವಾಗಿ 1998 ರಲ್ಲಿ ಸುಪ್ರೀಂ ಕೋರ್ಟಿನಲ್ಲಿ ಸ್ಪಷಲ್ ಲೀವ್ ಪಿಟಿಷನ್ ದಾಖಲು ಮಾಡಲಾಯಿತು. ಅದಾಗಿ ಹತ್ತು ವರ್ಷಗಳ ನಂತರ 2008 ಡಿಸೆಂಬರ್ 19 ರಂದು ಸುಪ್ರೀಂಕೋರ್ಟ್ ಅಂಜಯ್ಯ ಎಂಬುವವರಿಗೆ ಜೀವಾವದಿ ಶಿಕ್ಷೆ ಮತ್ತು 29 ಮಂದಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿತು.

ದಲಿತ ದಮನಿತರ ಮೇಲಿನ ದೌರ್ಜನ್ಯದ ಕೇಸುಗಳನ್ನು ದುಡ್ಡಿರುವ ಮೇಲ್ಜಾತಿಯ ಜನ ಎಲ್ಲಿಬೇಕಾದರೂ ಗೆದ್ದು ಬರುತ್ತಾರೆ. ಈಗಲೂ ನಿರಂತರವಾಗಿ ದಲಿತರ ಮೇಲೆ ದೌರ್ಜನ್ಯಗಳು ನಡೆಯುತ್ತಲೇ ಬಂದಿವೆ. ಬಾಬಾ ಸಾಹೇಬ್ ಅಂಬೇಡ್ಕರರ ಕರೆಯಾದ ಶಿಕ್ಷಣ, ಸಂಘಟನೆ, ಸಂಘರ್ಷದ ಮೂಲಕ ತರುವ ಬದಲಾವಣೆಯೇ ದಲಿತರನ್ನು ಶೋಷಣೆಯ ಸಮುದ್ರದಿಂದ ಆಚೆ ತೆಗೆದು ದಡ ಸೇರಿಸಬಲ್ಲದು.


ಓದಿ: ನವ ಉದಾರವಾದಿ ಭಾರತದಲ್ಲಿ ದಲಿತರು: ಮೇಲ್ಚಲನೆಯೋ ಅಥವಾ ಮೂಲೆಗುಂಪೋ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿಗೆ ಹಾರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...