Homeಚಳವಳಿಮೇಲ್ಜಾತಿ ದೌರ್ಜನ್ಯವನ್ನು ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ತಂದ ಕಾರಂಚೇಡು ದಲಿತರ ಹತ್ಯಾಕಾಂಡಕ್ಕೆ 35 ವರ್ಷ.

ಮೇಲ್ಜಾತಿ ದೌರ್ಜನ್ಯವನ್ನು ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ತಂದ ಕಾರಂಚೇಡು ದಲಿತರ ಹತ್ಯಾಕಾಂಡಕ್ಕೆ 35 ವರ್ಷ.

ಕೆರೆಯನ್ನು ಗಲೀಜು ಮಾಡಿದ್ದ ಮೇಲ್ಜಾತಿಯವನನ್ನು ದಲಿತನೊಬ್ಬ ಪ್ರಶ್ನನಿಸಿದ್ದೆ ದಲಿತರ ಭೀಕರ ಹತ್ಯಾಕಾಂಡಕ್ಕೆ ಕಾರಣವಾಯಿತು.

- Advertisement -
- Advertisement -

ದಲಿತ ದಮನಿತರ ಮೇಲಿನ ದೌರ್ಜನ್ಯದ ಕೇಸುಗಳನ್ನು ದುಡ್ಡಿರುವ ಮೇಲ್ಜಾತಿಯ ಜನ ಎಲ್ಲಿಬೇಕಾದರೂ ಗೆದ್ದು ಬರುತ್ತಾರೆ. ಈಗಲೂ ನಿರಂತರವಾಗಿ ದಲಿತರ ಮೇಲೆ ದೌರ್ಜನ್ಯಗಳು ನಡೆಯುತ್ತಲೇ ಬಂದಿವೆ. ಬಾಬಾ ಸಾಹೇಬ್ ಅಂಬೇಡ್ಕರರ ಕರೆಯಾದ ಶಿಕ್ಷಣ, ಸಂಘಟನೆ, ಸಂಘರ್ಷದ ಮೂಲಕ ತರುವ ಬದಲಾವಣೆಯೇ ದಲಿತರನ್ನು ಶೋಷಣೆಯ ಸಮುದ್ರದಿಂದ ಆಚೆ ತೆಗೆದು ದಡ ಸೇರಿಸಬಲ್ಲದು.

ಬರಹ: ಅನಿಲ್‌ ಕುಮಾರ್ ಚಿಕ್ಕದಾಳವಟ್ಟ

ದಲಿತರ ಮೇಲೆ ನಡೆದ ಅಮಾನುಷ ದೌರ್ಜನ್ಯಗಳಲ್ಲಿ ಒಂದಾದ ಕಾರಂಚೇಡು ಘಟನೆಗೆ ಇಂದಿಗೆ 35 ವರ್ಷ. ಮನುವಾದದ ವಿಷ ಬೀಜಗಳನ್ನು ನಿಧಾನಗತಿಯಲ್ಲಿ ಮೈ ಮನಸಲ್ಲಿ ಹರಡುವಂತೆ ಮಾಡುವಲ್ಲಿ ಬ್ರಾಹ್ಮಣ್ಯ ಕೆಲಸ ಮಾಡಿದೆ ಎನ್ನಲು ಈ ಭೀಕರ ಘಟನೆಗಳೇ ಸಾಕ್ಷ್ಯಗಳಾಗಿವೆ. ಅಶ್ಪಶ್ಯರನ್ನು ತಮ್ಮ ಭೂಮಿಗಳಲ್ಲಿ ದುಡಿಸಿಕೊಂಡು ಮೆರೆದ ಭೂಮಾಲಿಕರು ಎಂದೆದಿಂದಿಗೂ ದಲಿತರು ತಮ್ಮ ಕಾಲ ಕೆಳಗೆ ಇರಬೇಕೆಂದು ಶತ ಶತಮಾನಗಳಿಂದ ಬಯಸಿದ್ದರು.

ಆಂಧ್ರ-ತೆಲಂಗಾಣಗಳಲ್ಲಿ ಸಾವಿರಗಟ್ಟಲೆ ಎಕರೆಗಳ ಮಾಲೀಕರಾದ ಮೇಲ್ಜಾತಿಯ ಜನ ಕೆಳವರ್ಗದವರನ್ನು ಜೀತದಾಳುಗಳಾಗಿರಿಸಿಕೊಂಡು, ಅವರಿಗೆ ಒಂದಿಂಚೂ ಭೂಮಿಯ ಒಡೆತನ ನೀಡದೆ ಶೋಷಣೆ ಮಾಡಿದ್ದರು (ಈಗ ಭೂಮಿಯಿದೆ ಆದರೆ, ಶೋಷಣೆ ನಿಂತಿಲ್ಲ). ಅಂತಹ ಭಯಾನಕವಾದ ಸಮಯದಲ್ಲೂ ಶೋಷಣೆಯ ವಿರುದ್ಧ ಸಿಡಿದೆದ್ದ ಸಾಕಷ್ಟು ಜನ ಹೋರಾಟಗರರು ಹುತಾತ್ಮರಾಗಿದ್ದಾರೆ. ದಲಿತರ ಮೇಲಿನ ಶೋಷಣೆಯನ್ನು ಪ್ರಶ್ನಿಸಿದ್ದಕ್ಕಾಗಿ ನಡೆದ ಕಾರಂಚೇಡು ದಲಿತರ ಮೇಲಿನ ಹತ್ಯಾಕಾಂಡಕ್ಕೆ ಇಂದಿಗೆ 35 ವರ್ಷ.

1985, ಆಗಿನ ವಿಶಾಲ ಆಂಧ್ರಪ್ರದೇಶದಲ್ಲಿನ ಪ್ರಕಾಶಂ ಜಿಲ್ಲೆಯ ಕಾರಂಚೇಡು ಎಂಬ ಗ್ರಾಮದಲ್ಲಿ ದಲಿತರು ಮತ್ತು ಮೇಲ್ಜಾತಿಯ ಜನಕ್ಕೆ ಪ್ರತ್ಯೇಕವಾಗಿ ಎರಡು ಕೆರೆಗಳನ್ನು ಮಾಡಿಕೊಂಡಿದ್ದರು. ದಲಿತ ಸಮುದಾಯದ ಮಾದಿಗ ಜನಾಂಗದ ಜನರು ತಮ್ಮ ಕೆರೆಯ ನೀರನ್ನು ಕುಡಿಯಲೂ ಸಹ ಬಳಸುತ್ತಿದ್ದರಿಂದ  ಅದನ್ನು ಶುಚಿಯಾಗಿ ಇಟ್ಟುಕೊಂಡಿದ್ದರು.


ಓದಿ: ಭಾರತದಲ್ಲಿ ನಿತ್ಯ ಐದು ಕಸ್ಟಡಿ ಸಾವು; ಬಹುತೇಕರು ಮುಸ್ಲಿಮರು, ದಲಿತರು ಮತ್ತು ಅಂಚಿಗೆ ತಳ್ಳಲ್ಪಟ್ಟವರು!


1985 ಜುಲೈ 16 ರಂದು ಕಮ್ಮ ಜಾತಿಗೆ ಸೇರಿದ ಕೊಳಕು ಮನಸ್ಸಿನ ಸವರ್ಣೀಯನೊಬ್ಬ ದಲಿತರ ಕುಡಿಯುವ ನೀರಿನ ಕೆರೆಗೆ ದನಗಳನ್ನು ಇಳಿಸಿ, ಅವುಗಳ ಮೈ ತೊಳೆದು, ಅವು ಕುಡಿದು ಉಳಿದ ಮುಸುರೆ ನೀರನ್ನು ಸುರಿದ. ಇದನ್ನು ಕಂಡ ಮಾದಿಗ ಜನಾಂಗದ ಯುವಕರು ಈ ರೀತಿ ಮಾಡಿದರೆ ನಾವು ನೀರು ಕುಡಿಯುವುದು ಹೇಗೆ ಎಂದು ಪ್ರಶ್ನಿಸಿದ್ದರು. ಕೆಳಜಾತಿಯವನಾಗಿ ನನಗೆ ಪ್ರಶ್ನೆ ಮಾಡುತ್ತಿರ ಎಂದು ಜಗಳ ತೆಗೆದ ಆತ, ತನ್ನ ಜಾತಿಯವರನ್ನು ಸೇರಿಸಿ ನಡೆದ ಘಟನೆಯ ಬಗ್ಗೆ ಚರ್ಚೆ ಮಾಡಿದ. ಅಲ್ಲಿ ಕಮ್ಮ ಮೇಲ್ಜಾತಿಯ ಭೂಮಾಲಿಕರು ದಲಿತರನ್ನು ಹೀಗೆ ಬಿಟ್ಟರೆ ಬೆಳೆದು ಬಿಡುತ್ತಾರೆ. ಅವರನ್ನು ಸುಮ್ಮನೆ  ಬಿಡಬಾರದು ಎಂದು ರಾತ್ರಿಯೇ ಸಂಚು ರೂಪಿಸಿದ್ದರು.

1985 ಜುಲೈ 17 ರ ಬೆಳಗಿನ ಜಾವ ಕೈಗೆ ಸಿಕ್ಕ ಕತ್ತಿ, ಕೊಡಲಿ, ಮಾರಕಾಯುಧಗಳೊಂದಿಗೆ ಟ್ರಾಕ್ಟರ್‌ಗಳಲ್ಲಿ ಬಂದ ಸವರ್ಣೀಯರು, ಮಾದಿಗ ಸಮುದಾಯದ ದಲಿತರನ್ನು ಅಟ್ಟಾಡಿಸಿ ಭಯಾನಕವಾಗಿ ದಾಳಿ ಮಾಡಿದ್ದರು. ಸಿಕ್ಕಸಿಕ್ಕವರನ್ನು ಕತ್ತರಿಸಿ ಹಾಕಿದರು. ಸಾಕಷ್ಟು ಜನ ಹೆಣ್ಣು ಮಕ್ಕಳನ್ನು ಅಮಾನುಷವಾಗಿ ಅತ್ಯಾಚಾರವೆಸಗಿದರು.

ಈ ದುರ್ಘಟನೆಯಲ್ಲಿ ತೆಳ್ಳ ಯೋಹೌಷುವ, ದುಡ್ಡು ವಂದನಂ, ತೆಳ್ಳ ಮುತ್ತಯ್ಯ, ದುಡ್ಡು ರಮೇಶ್, ತೆಳ್ಳ ಮಾಷೆ, ದುಡ್ಡು ಅಬ್ರಹಾಂ ಎಂಬ ಆರು ಜನರು ಅಲ್ಲಿಯೇ ಕೊಲೆಯಾಗಿ ಹೋದರು. 20 ಕ್ಕೂ ಹೆಚ್ಚು ಜನರು ಗಂಬೀರ ಗಾಯಗಳಿಗೆ ತುತ್ತಾದರು. ಕಣ್ಣೆದುರೇ ಮಗನನ್ನು ಕಳೆದುಕೊಂಡ ಪ್ರತ್ಯಕ್ಷ ಸಾಕ್ಷಿ ದುಡ್ಡು ಆಲಿಸಮ್ಮನನ್ನು ಎರಡು ವರ್ಷಗಳ ನಂತರ ಕೊಲೆ ಮಾಡಿದರು.

ಈ ಘಟನೆ ದೇಶದ ಪ್ರಜ್ಞಾವಂತರ, ಮಾನವತವಾದಿಗಳ, ದಲಿತ ಸಂಘಟನೆಗಳ ಆಕ್ರೋಷಕ್ಕೆ ಕಾರಣವಾಗಿ ಬೃಹತ್ ಪ್ರತಿಭಟನೆಗಳು ನಡೆದವು. ಸತತವಾಗಿ ಆರು ತಿಂಗಳ ಕಾಲ ನಡೆದ ಕಾರಂಚೇಡು ಹೋರಾಟ ಬಹಳಷ್ಟು ಕಾನೂನುಗಳನ್ನು ರೂಪಿಸಲು ಕೂಡ ಕಾರಣವಾಯಿತು ಎಂದು ಕೂಡ ಹೇಳಲಾಗುತ್ತದೆ. 1989 ಎಸ್ಸಿ, ಎಸ್ಟಿ ದೌರ್ಜನ್ಯ ವಿರೋಧಿ ಕಾಯ್ದೆ ಬರಲು ಕೂಡ ಈ ಹೋರಾಟದ ಹಿನ್ನೆಲೆ ಇದೆ ಎನ್ನಲಾಗಿದೆ.

ಈ ಹಲ್ಲೆಯಲ್ಲಿ ಭಾಗಿದಾರರಾದ ಆರೋಪಿಗಳ ಮೇಲೆ ಪೋಲೀಸರು ಕೇಸು ದಾಖಲಿಸಿರಲಿಲ್ಲ. ಆದರೆ ಹೋರಾಟಗಾರು ಕೋರ್ಟಿಗೆ ಹೋದ ನಂತರ 9 ಸೆಕ್ಷನ್ಗಳ ಅಡಿಯಲ್ಲಿ 90 ಜನರನ್ನು ಆರೋಪಿಗಳನ್ನಾಗಿ ಮಾಡಿ ಚಾರ್ಜ್ ಶೀಟ್ ಹಾಕಿದರು.


ಓದಿ: ತಮ್ಮ ಭೂಮಿ ಆಕ್ರಮಿಸಿದ್ದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಕ್ಕೆ ದಲಿತ ಯುವಕನ ಹತ್ಯೆ


1994 ರ ಅಕ್ಟೋಬರ್ 30 ರಂದು ಐದು ಜನರಿಗೆ ಜೀವಾವಧಿ ಶಿಕ್ಷೆ ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟ ನಾಲ್ಕು ಜನ ವೃದ್ದರಿಗೆ 1000 ರೂ. ದಂಡ ಹಾಗೂ 46 ಜನರಿಗೆ ತಲಾ 3 ವರ್ಷ ಜೈಲು ಶಿಕ್ಷೆ ವಿಧಿಸಿತು. ಶಿಕ್ಷಗೆ ಒಳಗಾದಂತಹ ಎಲ್ಲರೂ ಹೈಕೋರ್ಟಿಗೆ ಮೇಲ್ಮನವಿ ಹಾಕಿದರು. 1998 ಜುಲೈ 24 ರ ತೀರ್ಪಿನಲ್ಲಿ ಬೆನಿಫಿಟ್ ಆಫ್ ಡೌಟ್ ಅಡಿಯಲ್ಲಿ ಶಿಕ್ಷೆ ರದ್ದುಗೊಳಿಸಲಾಯಿತು.

ಹೋರಾಟಗಾರರ ಸತತ ಪ್ರಯತ್ನದಿಂದ ಅಂತಿಮವಾಗಿ 1998 ರಲ್ಲಿ ಸುಪ್ರೀಂ ಕೋರ್ಟಿನಲ್ಲಿ ಸ್ಪಷಲ್ ಲೀವ್ ಪಿಟಿಷನ್ ದಾಖಲು ಮಾಡಲಾಯಿತು. ಅದಾಗಿ ಹತ್ತು ವರ್ಷಗಳ ನಂತರ 2008 ಡಿಸೆಂಬರ್ 19 ರಂದು ಸುಪ್ರೀಂಕೋರ್ಟ್ ಅಂಜಯ್ಯ ಎಂಬುವವರಿಗೆ ಜೀವಾವದಿ ಶಿಕ್ಷೆ ಮತ್ತು 29 ಮಂದಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿತು.

ದಲಿತ ದಮನಿತರ ಮೇಲಿನ ದೌರ್ಜನ್ಯದ ಕೇಸುಗಳನ್ನು ದುಡ್ಡಿರುವ ಮೇಲ್ಜಾತಿಯ ಜನ ಎಲ್ಲಿಬೇಕಾದರೂ ಗೆದ್ದು ಬರುತ್ತಾರೆ. ಈಗಲೂ ನಿರಂತರವಾಗಿ ದಲಿತರ ಮೇಲೆ ದೌರ್ಜನ್ಯಗಳು ನಡೆಯುತ್ತಲೇ ಬಂದಿವೆ. ಬಾಬಾ ಸಾಹೇಬ್ ಅಂಬೇಡ್ಕರರ ಕರೆಯಾದ ಶಿಕ್ಷಣ, ಸಂಘಟನೆ, ಸಂಘರ್ಷದ ಮೂಲಕ ತರುವ ಬದಲಾವಣೆಯೇ ದಲಿತರನ್ನು ಶೋಷಣೆಯ ಸಮುದ್ರದಿಂದ ಆಚೆ ತೆಗೆದು ದಡ ಸೇರಿಸಬಲ್ಲದು.


ಓದಿ: ನವ ಉದಾರವಾದಿ ಭಾರತದಲ್ಲಿ ದಲಿತರು: ಮೇಲ್ಚಲನೆಯೋ ಅಥವಾ ಮೂಲೆಗುಂಪೋ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...