Homeಚಳವಳಿಮೇಲ್ಜಾತಿ ದೌರ್ಜನ್ಯವನ್ನು ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ತಂದ ಕಾರಂಚೇಡು ದಲಿತರ ಹತ್ಯಾಕಾಂಡಕ್ಕೆ 35 ವರ್ಷ.

ಮೇಲ್ಜಾತಿ ದೌರ್ಜನ್ಯವನ್ನು ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ತಂದ ಕಾರಂಚೇಡು ದಲಿತರ ಹತ್ಯಾಕಾಂಡಕ್ಕೆ 35 ವರ್ಷ.

ಕೆರೆಯನ್ನು ಗಲೀಜು ಮಾಡಿದ್ದ ಮೇಲ್ಜಾತಿಯವನನ್ನು ದಲಿತನೊಬ್ಬ ಪ್ರಶ್ನನಿಸಿದ್ದೆ ದಲಿತರ ಭೀಕರ ಹತ್ಯಾಕಾಂಡಕ್ಕೆ ಕಾರಣವಾಯಿತು.

- Advertisement -
- Advertisement -

ದಲಿತ ದಮನಿತರ ಮೇಲಿನ ದೌರ್ಜನ್ಯದ ಕೇಸುಗಳನ್ನು ದುಡ್ಡಿರುವ ಮೇಲ್ಜಾತಿಯ ಜನ ಎಲ್ಲಿಬೇಕಾದರೂ ಗೆದ್ದು ಬರುತ್ತಾರೆ. ಈಗಲೂ ನಿರಂತರವಾಗಿ ದಲಿತರ ಮೇಲೆ ದೌರ್ಜನ್ಯಗಳು ನಡೆಯುತ್ತಲೇ ಬಂದಿವೆ. ಬಾಬಾ ಸಾಹೇಬ್ ಅಂಬೇಡ್ಕರರ ಕರೆಯಾದ ಶಿಕ್ಷಣ, ಸಂಘಟನೆ, ಸಂಘರ್ಷದ ಮೂಲಕ ತರುವ ಬದಲಾವಣೆಯೇ ದಲಿತರನ್ನು ಶೋಷಣೆಯ ಸಮುದ್ರದಿಂದ ಆಚೆ ತೆಗೆದು ದಡ ಸೇರಿಸಬಲ್ಲದು.

ಬರಹ: ಅನಿಲ್‌ ಕುಮಾರ್ ಚಿಕ್ಕದಾಳವಟ್ಟ

ದಲಿತರ ಮೇಲೆ ನಡೆದ ಅಮಾನುಷ ದೌರ್ಜನ್ಯಗಳಲ್ಲಿ ಒಂದಾದ ಕಾರಂಚೇಡು ಘಟನೆಗೆ ಇಂದಿಗೆ 35 ವರ್ಷ. ಮನುವಾದದ ವಿಷ ಬೀಜಗಳನ್ನು ನಿಧಾನಗತಿಯಲ್ಲಿ ಮೈ ಮನಸಲ್ಲಿ ಹರಡುವಂತೆ ಮಾಡುವಲ್ಲಿ ಬ್ರಾಹ್ಮಣ್ಯ ಕೆಲಸ ಮಾಡಿದೆ ಎನ್ನಲು ಈ ಭೀಕರ ಘಟನೆಗಳೇ ಸಾಕ್ಷ್ಯಗಳಾಗಿವೆ. ಅಶ್ಪಶ್ಯರನ್ನು ತಮ್ಮ ಭೂಮಿಗಳಲ್ಲಿ ದುಡಿಸಿಕೊಂಡು ಮೆರೆದ ಭೂಮಾಲಿಕರು ಎಂದೆದಿಂದಿಗೂ ದಲಿತರು ತಮ್ಮ ಕಾಲ ಕೆಳಗೆ ಇರಬೇಕೆಂದು ಶತ ಶತಮಾನಗಳಿಂದ ಬಯಸಿದ್ದರು.

ಆಂಧ್ರ-ತೆಲಂಗಾಣಗಳಲ್ಲಿ ಸಾವಿರಗಟ್ಟಲೆ ಎಕರೆಗಳ ಮಾಲೀಕರಾದ ಮೇಲ್ಜಾತಿಯ ಜನ ಕೆಳವರ್ಗದವರನ್ನು ಜೀತದಾಳುಗಳಾಗಿರಿಸಿಕೊಂಡು, ಅವರಿಗೆ ಒಂದಿಂಚೂ ಭೂಮಿಯ ಒಡೆತನ ನೀಡದೆ ಶೋಷಣೆ ಮಾಡಿದ್ದರು (ಈಗ ಭೂಮಿಯಿದೆ ಆದರೆ, ಶೋಷಣೆ ನಿಂತಿಲ್ಲ). ಅಂತಹ ಭಯಾನಕವಾದ ಸಮಯದಲ್ಲೂ ಶೋಷಣೆಯ ವಿರುದ್ಧ ಸಿಡಿದೆದ್ದ ಸಾಕಷ್ಟು ಜನ ಹೋರಾಟಗರರು ಹುತಾತ್ಮರಾಗಿದ್ದಾರೆ. ದಲಿತರ ಮೇಲಿನ ಶೋಷಣೆಯನ್ನು ಪ್ರಶ್ನಿಸಿದ್ದಕ್ಕಾಗಿ ನಡೆದ ಕಾರಂಚೇಡು ದಲಿತರ ಮೇಲಿನ ಹತ್ಯಾಕಾಂಡಕ್ಕೆ ಇಂದಿಗೆ 35 ವರ್ಷ.

1985, ಆಗಿನ ವಿಶಾಲ ಆಂಧ್ರಪ್ರದೇಶದಲ್ಲಿನ ಪ್ರಕಾಶಂ ಜಿಲ್ಲೆಯ ಕಾರಂಚೇಡು ಎಂಬ ಗ್ರಾಮದಲ್ಲಿ ದಲಿತರು ಮತ್ತು ಮೇಲ್ಜಾತಿಯ ಜನಕ್ಕೆ ಪ್ರತ್ಯೇಕವಾಗಿ ಎರಡು ಕೆರೆಗಳನ್ನು ಮಾಡಿಕೊಂಡಿದ್ದರು. ದಲಿತ ಸಮುದಾಯದ ಮಾದಿಗ ಜನಾಂಗದ ಜನರು ತಮ್ಮ ಕೆರೆಯ ನೀರನ್ನು ಕುಡಿಯಲೂ ಸಹ ಬಳಸುತ್ತಿದ್ದರಿಂದ  ಅದನ್ನು ಶುಚಿಯಾಗಿ ಇಟ್ಟುಕೊಂಡಿದ್ದರು.


ಓದಿ: ಭಾರತದಲ್ಲಿ ನಿತ್ಯ ಐದು ಕಸ್ಟಡಿ ಸಾವು; ಬಹುತೇಕರು ಮುಸ್ಲಿಮರು, ದಲಿತರು ಮತ್ತು ಅಂಚಿಗೆ ತಳ್ಳಲ್ಪಟ್ಟವರು!


1985 ಜುಲೈ 16 ರಂದು ಕಮ್ಮ ಜಾತಿಗೆ ಸೇರಿದ ಕೊಳಕು ಮನಸ್ಸಿನ ಸವರ್ಣೀಯನೊಬ್ಬ ದಲಿತರ ಕುಡಿಯುವ ನೀರಿನ ಕೆರೆಗೆ ದನಗಳನ್ನು ಇಳಿಸಿ, ಅವುಗಳ ಮೈ ತೊಳೆದು, ಅವು ಕುಡಿದು ಉಳಿದ ಮುಸುರೆ ನೀರನ್ನು ಸುರಿದ. ಇದನ್ನು ಕಂಡ ಮಾದಿಗ ಜನಾಂಗದ ಯುವಕರು ಈ ರೀತಿ ಮಾಡಿದರೆ ನಾವು ನೀರು ಕುಡಿಯುವುದು ಹೇಗೆ ಎಂದು ಪ್ರಶ್ನಿಸಿದ್ದರು. ಕೆಳಜಾತಿಯವನಾಗಿ ನನಗೆ ಪ್ರಶ್ನೆ ಮಾಡುತ್ತಿರ ಎಂದು ಜಗಳ ತೆಗೆದ ಆತ, ತನ್ನ ಜಾತಿಯವರನ್ನು ಸೇರಿಸಿ ನಡೆದ ಘಟನೆಯ ಬಗ್ಗೆ ಚರ್ಚೆ ಮಾಡಿದ. ಅಲ್ಲಿ ಕಮ್ಮ ಮೇಲ್ಜಾತಿಯ ಭೂಮಾಲಿಕರು ದಲಿತರನ್ನು ಹೀಗೆ ಬಿಟ್ಟರೆ ಬೆಳೆದು ಬಿಡುತ್ತಾರೆ. ಅವರನ್ನು ಸುಮ್ಮನೆ  ಬಿಡಬಾರದು ಎಂದು ರಾತ್ರಿಯೇ ಸಂಚು ರೂಪಿಸಿದ್ದರು.

1985 ಜುಲೈ 17 ರ ಬೆಳಗಿನ ಜಾವ ಕೈಗೆ ಸಿಕ್ಕ ಕತ್ತಿ, ಕೊಡಲಿ, ಮಾರಕಾಯುಧಗಳೊಂದಿಗೆ ಟ್ರಾಕ್ಟರ್‌ಗಳಲ್ಲಿ ಬಂದ ಸವರ್ಣೀಯರು, ಮಾದಿಗ ಸಮುದಾಯದ ದಲಿತರನ್ನು ಅಟ್ಟಾಡಿಸಿ ಭಯಾನಕವಾಗಿ ದಾಳಿ ಮಾಡಿದ್ದರು. ಸಿಕ್ಕಸಿಕ್ಕವರನ್ನು ಕತ್ತರಿಸಿ ಹಾಕಿದರು. ಸಾಕಷ್ಟು ಜನ ಹೆಣ್ಣು ಮಕ್ಕಳನ್ನು ಅಮಾನುಷವಾಗಿ ಅತ್ಯಾಚಾರವೆಸಗಿದರು.

ಈ ದುರ್ಘಟನೆಯಲ್ಲಿ ತೆಳ್ಳ ಯೋಹೌಷುವ, ದುಡ್ಡು ವಂದನಂ, ತೆಳ್ಳ ಮುತ್ತಯ್ಯ, ದುಡ್ಡು ರಮೇಶ್, ತೆಳ್ಳ ಮಾಷೆ, ದುಡ್ಡು ಅಬ್ರಹಾಂ ಎಂಬ ಆರು ಜನರು ಅಲ್ಲಿಯೇ ಕೊಲೆಯಾಗಿ ಹೋದರು. 20 ಕ್ಕೂ ಹೆಚ್ಚು ಜನರು ಗಂಬೀರ ಗಾಯಗಳಿಗೆ ತುತ್ತಾದರು. ಕಣ್ಣೆದುರೇ ಮಗನನ್ನು ಕಳೆದುಕೊಂಡ ಪ್ರತ್ಯಕ್ಷ ಸಾಕ್ಷಿ ದುಡ್ಡು ಆಲಿಸಮ್ಮನನ್ನು ಎರಡು ವರ್ಷಗಳ ನಂತರ ಕೊಲೆ ಮಾಡಿದರು.

ಈ ಘಟನೆ ದೇಶದ ಪ್ರಜ್ಞಾವಂತರ, ಮಾನವತವಾದಿಗಳ, ದಲಿತ ಸಂಘಟನೆಗಳ ಆಕ್ರೋಷಕ್ಕೆ ಕಾರಣವಾಗಿ ಬೃಹತ್ ಪ್ರತಿಭಟನೆಗಳು ನಡೆದವು. ಸತತವಾಗಿ ಆರು ತಿಂಗಳ ಕಾಲ ನಡೆದ ಕಾರಂಚೇಡು ಹೋರಾಟ ಬಹಳಷ್ಟು ಕಾನೂನುಗಳನ್ನು ರೂಪಿಸಲು ಕೂಡ ಕಾರಣವಾಯಿತು ಎಂದು ಕೂಡ ಹೇಳಲಾಗುತ್ತದೆ. 1989 ಎಸ್ಸಿ, ಎಸ್ಟಿ ದೌರ್ಜನ್ಯ ವಿರೋಧಿ ಕಾಯ್ದೆ ಬರಲು ಕೂಡ ಈ ಹೋರಾಟದ ಹಿನ್ನೆಲೆ ಇದೆ ಎನ್ನಲಾಗಿದೆ.

ಈ ಹಲ್ಲೆಯಲ್ಲಿ ಭಾಗಿದಾರರಾದ ಆರೋಪಿಗಳ ಮೇಲೆ ಪೋಲೀಸರು ಕೇಸು ದಾಖಲಿಸಿರಲಿಲ್ಲ. ಆದರೆ ಹೋರಾಟಗಾರು ಕೋರ್ಟಿಗೆ ಹೋದ ನಂತರ 9 ಸೆಕ್ಷನ್ಗಳ ಅಡಿಯಲ್ಲಿ 90 ಜನರನ್ನು ಆರೋಪಿಗಳನ್ನಾಗಿ ಮಾಡಿ ಚಾರ್ಜ್ ಶೀಟ್ ಹಾಕಿದರು.


ಓದಿ: ತಮ್ಮ ಭೂಮಿ ಆಕ್ರಮಿಸಿದ್ದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಕ್ಕೆ ದಲಿತ ಯುವಕನ ಹತ್ಯೆ


1994 ರ ಅಕ್ಟೋಬರ್ 30 ರಂದು ಐದು ಜನರಿಗೆ ಜೀವಾವಧಿ ಶಿಕ್ಷೆ ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟ ನಾಲ್ಕು ಜನ ವೃದ್ದರಿಗೆ 1000 ರೂ. ದಂಡ ಹಾಗೂ 46 ಜನರಿಗೆ ತಲಾ 3 ವರ್ಷ ಜೈಲು ಶಿಕ್ಷೆ ವಿಧಿಸಿತು. ಶಿಕ್ಷಗೆ ಒಳಗಾದಂತಹ ಎಲ್ಲರೂ ಹೈಕೋರ್ಟಿಗೆ ಮೇಲ್ಮನವಿ ಹಾಕಿದರು. 1998 ಜುಲೈ 24 ರ ತೀರ್ಪಿನಲ್ಲಿ ಬೆನಿಫಿಟ್ ಆಫ್ ಡೌಟ್ ಅಡಿಯಲ್ಲಿ ಶಿಕ್ಷೆ ರದ್ದುಗೊಳಿಸಲಾಯಿತು.

ಹೋರಾಟಗಾರರ ಸತತ ಪ್ರಯತ್ನದಿಂದ ಅಂತಿಮವಾಗಿ 1998 ರಲ್ಲಿ ಸುಪ್ರೀಂ ಕೋರ್ಟಿನಲ್ಲಿ ಸ್ಪಷಲ್ ಲೀವ್ ಪಿಟಿಷನ್ ದಾಖಲು ಮಾಡಲಾಯಿತು. ಅದಾಗಿ ಹತ್ತು ವರ್ಷಗಳ ನಂತರ 2008 ಡಿಸೆಂಬರ್ 19 ರಂದು ಸುಪ್ರೀಂಕೋರ್ಟ್ ಅಂಜಯ್ಯ ಎಂಬುವವರಿಗೆ ಜೀವಾವದಿ ಶಿಕ್ಷೆ ಮತ್ತು 29 ಮಂದಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿತು.

ದಲಿತ ದಮನಿತರ ಮೇಲಿನ ದೌರ್ಜನ್ಯದ ಕೇಸುಗಳನ್ನು ದುಡ್ಡಿರುವ ಮೇಲ್ಜಾತಿಯ ಜನ ಎಲ್ಲಿಬೇಕಾದರೂ ಗೆದ್ದು ಬರುತ್ತಾರೆ. ಈಗಲೂ ನಿರಂತರವಾಗಿ ದಲಿತರ ಮೇಲೆ ದೌರ್ಜನ್ಯಗಳು ನಡೆಯುತ್ತಲೇ ಬಂದಿವೆ. ಬಾಬಾ ಸಾಹೇಬ್ ಅಂಬೇಡ್ಕರರ ಕರೆಯಾದ ಶಿಕ್ಷಣ, ಸಂಘಟನೆ, ಸಂಘರ್ಷದ ಮೂಲಕ ತರುವ ಬದಲಾವಣೆಯೇ ದಲಿತರನ್ನು ಶೋಷಣೆಯ ಸಮುದ್ರದಿಂದ ಆಚೆ ತೆಗೆದು ದಡ ಸೇರಿಸಬಲ್ಲದು.


ಓದಿ: ನವ ಉದಾರವಾದಿ ಭಾರತದಲ್ಲಿ ದಲಿತರು: ಮೇಲ್ಚಲನೆಯೋ ಅಥವಾ ಮೂಲೆಗುಂಪೋ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...