Homeಮುಖಪುಟ3 ತಿಂಗಳಲ್ಲಿ 350 ಆನ್‌ಲೈನ್ ಕೋರ್ಸ್; ವಿಶ್ವದಾಖಲೆ ಮಾಡಿದ ಆರತಿ ರಂಗನಾಥ್!

3 ತಿಂಗಳಲ್ಲಿ 350 ಆನ್‌ಲೈನ್ ಕೋರ್ಸ್; ವಿಶ್ವದಾಖಲೆ ಮಾಡಿದ ಆರತಿ ರಂಗನಾಥ್!

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ಮಧ್ಯೆ, ಜನರು ಅನೇಕ ಹವ್ಯಾಸಗಳನ್ನ ರೂಡಿಸಿಕೊಂಡರು. ಕೆಲವು ಹೊಸ ಹೊಸ ಅಡಿಗೆ ಕಲಿಯಲು ಪ್ರಯತ್ನಿಸಿದರು. ಕೆಲವರು ಮನೆಯಲ್ಲೇ ಮಾಸ್ಕ್​ ತಯಾರಿಸೋದು, ಕೈದೋಟದ ಕೆಲಸ, ಮನೆಯಲ್ಲೇ ಜಿಮ್, ಡಯಟಿಂಗ್, ಹಾಡು, ಡ್ಯಾನ್ಸ್​ ತರಬೇತಿ ಮುಂತಾದವನ್ನು ಪ್ರಯತ್ನಿಸಿ ತಮ್ಮ ಬೇಸರ ಕಳೆದುಕೊಂಡಿದ್ದಾರೆ.

ಆದರೆ ಕೇರಳದ ಈ ಯುವತಿ ಲಾಕ್‌ಡೌನ್ ಸಮಯವನ್ನು ಅಧ್ಯಯನಕ್ಕಾಗಿ ಬಳಸಿ, 3 ತಿಂಗಳಲ್ಲಿ 350 ಆನ್‌ಲೈನ್ ಕೋರ್ಸ್‌ಗಳನ್ನು ಮಾಡಿದ್ದಾರೆ. ಈ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಆರತಿ ಕೊಚ್ಚಿಯ ಎಲಂಕಾರ ಮೂಲದವರಾಗಿದ್ದು, ಎಂಇಎಸ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂಎಸ್ಸಿ ಬಯೋಕೆಮಿಸ್ಟ್ರಿ ವಿದ್ಯಾರ್ಥಿನಿಯಾಗಿದ್ದಾರೆ.

ಇದನ್ನೂ ಓದಿ: ಹತ್ರಾಸ್ ಜಿಲ್ಲಾಧಿಕಾರಿ ಮೇಲೆ ಕ್ರಮ ಏಕಿಲ್ಲ?: ಮಾಯಾವತಿ ಪ್ರಶ್ನೆ

ವಿದ್ಯಾರ್ಥಿನಿ ಆರತಿ ಹೇಳುವಂತೆ, ’ನನ್ನ ಕಾಲೇಜು ಅಧ್ಯಾಪಕರು ನನಗೆ ಆನ್‌ಲೈನ್ ಕೋರ್ಸ್​​ಗಳನ್ನ ನನಗೆ ಪರಿಚಯಿಸಿದರು. ಆನ್‌ಲೈನ್ ಕೋರ್ಸ್‌ಗಳದ್ದು ಒಂದು ದೊಡ್ಡ ಶ್ರೇಣಿಯಿದೆ. ಪ್ರತಿ ಕೋರ್ಸ್​ನ ಅವಧಿ ಹಾಗೂ ಪಠ್ಯಕ್ರಮ ಭಿನ್ನವಾಗಿರುತ್ತದೆ. ನನ್ನ ಕಾಲೇಜು ಪ್ರಾಂಶುಪಾಲರಾದ ಪಿ.ಮೊಹಮ್ಮದ್, ಹನೀಫಾ ಕೆ.ಜಿ.ಮತ್ತು ಬೋಧಕ ಸಿಬ್ಬಂದಿ ನೀಲಿಮಾ ಟಿ.ಕೆ. ಅವರ ಸಹಾಯದಿಂದ ನಾನು ಪ್ರತಿ ಕೋರ್ಸ್ ಅನ್ನು ಸಮಯಕ್ಕೆ ಪೂರ್ಣಗೊಳಿಸಿದೆ’ ಎನ್ನುತ್ತಾರೆ.

ಆರತಿಯ ತಂದೆಯ ಹೆಸರು ಮಾಲಿಯೆಕ್ಕಲ್ ಮೇದತಿಲ್ ಎಂ.ಆರ್.ರಘುನಾಥ್ ಮತ್ತು ತಾಯಿಯ ಹೆಸರು ಕಲಾದೇವಿ. ವಿಶ್ವದಾಖಲೆ ನಿರ್ಮಿಸಿರುವ ಮಗಳ ಸಾಧನೆ ಬಗ್ಗೆ ತಂದೆ-ತಾಯಿ ಸಂತಸ ವ್ಯಕ್ತಪಡಿಸುತ್ತಾರೆ.

ಜಾನ್ ಹಾಕಿನ್ಸ್ ವಿಶ್ವವಿದ್ಯಾಲಯ, ವರ್ಜೀನಿಯಾ ವಿಶ್ವವಿದ್ಯಾಲಯ, ಕೊಲೊರಾಡೋ ಬೌಲ್ಡರ್ ವಿಶ್ವವಿದ್ಯಾಲಯ, ಕೋಪನ್ ಹ್ಯಾಗನ್ ವಿಶ್ವವಿದ್ಯಾಲಯ, ರೋಚೆಸ್ಟರ್ ವಿಶ್ವವಿದ್ಯಾಲಯ, ಎಮೋರಿ ವಿಶ್ವವಿದ್ಯಾಲಯ, ಕೊರ್ಸೆರಾ ಪ್ರಾಜೆಕ್ಟ್ ನೆಟ್‌ವರ್ಕ್ ಮತ್ತು ಡೆನ್ಮಾರ್ಕ್‌ನ ತಾಂತ್ರಿಕ ವಿಶ್ವವಿದ್ಯಾಲಯಗಳು ಆರತಿ ಕೋರ್ಸ್‌ಗಳನ್ನು ಪಡೆದ ವಿಶ್ವವಿದ್ಯಾಲಯಗಳಲ್ಲಿ ಸೇರಿವೆ ಎಂದು ವರದಿಯಾಗಿದೆ.


ಇದನ್ನೂ ಓದಿ: ಮೋದಿ ಸರ್ಕಾರದ ’ಸರ್ವಾಧಿಕಾರಿ ಧೋರಣೆ’ ಖಂಡಿಸಿ ಬ್ರಿಟಿಷ್ ಸಂಸದರು, ತಜ್ಞರ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...