Homeಮುಖಪುಟಮಹಾರಾಷ್ಟ್ರದಲ್ಲಿ ಭಾರಿ ಮಳೆ: ಭೂಕುಸಿತದಲ್ಲಿ 36 ಜನರು ಸಾವು

ಮಹಾರಾಷ್ಟ್ರದಲ್ಲಿ ಭಾರಿ ಮಳೆ: ಭೂಕುಸಿತದಲ್ಲಿ 36 ಜನರು ಸಾವು

- Advertisement -
- Advertisement -

ಮಹಾರಾಷ್ಟ್ರದ ವಿಪರಿತವಾಗಿ ಸುರಿಯುತ್ತಿರುವ ಮಳೆಗೆ ರಾಯ್‌ಗಡ್ ಜಿಲ್ಲೆಯಲ್ಲಿ ಭೂಕುಸಿತ ಉಂಟಾಗಿದ್ದು, ಘಟನೆಯಲ್ಲಿ 36 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದ ಕೊಂಕಣ ಪ್ರದೇಶದಲ್ಲಿ ನಿರಂತರ ಮಳೆ ಸುರಿಯುತ್ತಿರುವುದರಿಂದ ಸಾವಿರಾರು ಜನರು ಪ್ರವಾಹ ಮತ್ತು ಭೂಕುಸಿತದಲ್ಲಿ ಸಿಲುಕಿದ್ದಾರೆ.

ಮುಂಬೈನಿಂದ 70 ಕಿ.ಮೀ ದೂರದಲ್ಲಿರುವ ರಾಯ್‌ಗಡ್‌ನ ಪ್ರವಾಹ ಪೀಡಿತ ಪ್ರದೇಶಗಳಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಹೆಲಿಕಾಪ್ಟರ್‌ಗಳನ್ನು ಬಳಸಲಾಗುತ್ತಿದೆ.

ಪ್ರವಾಹ ಮತ್ತು ಭೂಕುಸಿತದಲ್ಲಿ ಸಿಕ್ಕಿಬಿದ್ದವರು ತಮ್ಮ ಮನೆಯ ಮೇಲ್ಛಾವಣಿ ಅಥವಾ ಎತ್ತರದ ಪ್ರದೇಶಗಳಿಗೆ ಬರಲು ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದ ಹೆಲಿಕಾಪ್ಟರ್‌ಗಳಲ್ಲಿರುವ ರಕ್ಷಣಾ ತಂಡಗಳು ಸಂತ್ರಸ್ತರನ್ನು ಗುರುತಿಸಿ ಸ್ಥಳಾಂತರಿಸಬಹುದು ಎಂದಿದ್ದಾರೆ. ಮಹಾರಾಷ್ಟ್ರದಲ್ಲಿ ಕಳೆದ 40 ವರ್ಷಗಳಲ್ಲಿಯೇ ಅತಿ ಹೆಚ್ಚು ಮಳೆಯಾಗುತ್ತಿದೆ.

ಗುರುವಾರ ಸಂಭವಿಸಿದ ಮೂರು ಭೂಕುಸಿತಗಳಲ್ಲಿ 36 ಮಂದಿ ಸಾವನ್ನಪ್ಪಿದ್ದು, ಒಂದು ಸ್ಥಳದಲ್ಲಿ 32 ಮೃತದೇಹಗಳು, ಇನ್ನೊಂದು ಸ್ಥಳದಲ್ಲಿ ನಾಲ್ಕು ಶವಗಳು ಪತ್ತೆಯಾಗಿವೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಶುಕ್ರವಾರ ಸ್ಥಳೀಯ ಅಧಿಕಾರಿಗಳೊಂದಿಗೆ ಪರಿಸ್ಥಿತಿ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಭಾರಿ ಮಳೆ: ಕೊಂಕಣ ರೈಲ್ವೆಯಲ್ಲಿ ಸಿಲುಕಿಕೊಂಡ 6,000 ಪ್ರಯಾಣಿಕರು

ಮುಂಬೈನಿಂದ 250 ಕಿ.ಮೀ ದೂರದಲ್ಲಿರುವ ರತ್ನಾಗಿರಿ ಜಿಲ್ಲೆಯ ಕರಾವಳಿ ಪಟ್ಟಣವಾದ ಚಿಪ್ಲುನ್‌ನ ಕೆಲವು ಭಾಗಗಳಲ್ಲಿ, 24 ಗಂಟೆಗಳೂ ನಿರಂತರ ಮಳೆಯಾದ್ದರಿಂದ ನೀರಿನ ಮಟ್ಟವು 12 ಅಡಿಗಳಷ್ಟು ಏರಿತ್ತು. ಇದರಿಂದ ವಶಿಷ್ಠಿ ನದಿ ಉಕ್ಕಿ ಹರಿದು, ರಸ್ತೆಗಳು ಮತ್ತು ಮನೆಗಳು ಮುಳುಗಿವೆ. ನಗರದಲ್ಲಿ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಲಾಗಿದೆ. ದೂರವಾಣಿ ಸಂಪರ್ಕಗಳು ಸ್ಥಗಿತಗೊಂಡಿವೆ. ಇನ್ನು ಕೋವಿಡ್ ಆಸ್ಪತ್ರೆ ಪ್ರವಾಹದಿಂದ ತುಂಬಿದ್ದು, ಕೊರೊನಾ ಸೋಂಕಿತ ರೋಗಿಗಳನ್ನು ದೋಣಿಗಳಲ್ಲಿ ರಕ್ಷಿಸಿ, ಬೇರೆಡೆಗೆ ಸ್ಥಳಾಂತರಿಸಲಾಗಿದೆ.

ನೌಕಾಪಡೆಯ ಎರಡು ರಕ್ಷಣಾ ತಂಡಗಳು, 12 ಸ್ಥಳೀಯ ಪರಿಹಾರ ತಂಡಗಳು, ಕೋಸ್ಟ್‌ಗಾರ್ಡ್‌ನಿಂದ ಎರಡು, ಮತ್ತು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ತಂಡದಿಂದ (NDRF) ಮೂರು ತಂಡಗಳನ್ನು ಪ್ರವಾಹ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ. ಜೊತೆಗೆ ನೌಕಾಪಡೆಯು ರಬ್ಬರ್ ಬೋಟ್‌ಗಳು, ಲೈಫ್ ಜಾಕೆಟ್‌ಗಳು ಹೊಂದಿರುವ ಏಳು ರಕ್ಷಣಾ ತಂಡಗಳನ್ನು ಪ್ರವಾಹ ಪೀಡಿತ ಪ್ರದೇಶಗಳಿಗೆ ನಿಯೋಜಿಸಲಾಗಿದೆ.

ಮುಂದಿನ ಕೆಲವು ದಿನಗಳವರೆಗೆ ಭಾರಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ರಾಜ್ಯದ ಹಲವಾರು ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ.

ಗುರುವಾರ ಭಾರಿ ಮಳೆಯಿಂದಾಗಿ ರತ್ನಾಗಿರಿ ಜಿಲ್ಲೆಯ ಕೊಂಕಣ ರೈಲ್ವೆ ಮಾರ್ಗದಲ್ಲಿ ಸುಮಾರು 6,000 ಪ್ರಯಾಣಿಕರು ರೈಲುಗಳಲ್ಲಿ ಸಿಲುಕಿಕೊಂಡಿದ್ದರು.

ಇತ್ತಿಚೆಗೆ ಚೆಂಬೂರ್ ಮತ್ತು ವಿಖ್ರೋಲಿ ಪ್ರದೇಶಗಳಲ್ಲಿ ಭೂಕುಸಿತವಾಗಿದ್ದು, ಎರಡು ಪ್ರತ್ಯೇಕ ಘಟನೆಗಳಲ್ಲಿ ಒಟ್ಟು 23 ಜನರು ಸಾವನ್ನಪ್ಪಿದ್ದರು. ಚೆಂಬೂರ್‌ನ ವಾಶಿ ನಾಕಾ ಪ್ರದೇಶದಲ್ಲಿ ಭೂಕುಸಿತ ಉಂಟಾಗಿದ್ದು, ಕೆಲವು ಮನೆಗಳ ಗೋಡೆ ಕುಸಿದು ಒಟ್ಟು 17 ಜನರು ಪ್ರಾಣ ಕಳೆದುಕೊಂಡಿದ್ದರು. ದುರಂತದಿಂದಾಗಿ ಮೃತಪಟ್ಟವರಿಗೆ ಒಕ್ಕೂಟ ಸರ್ಕಾರ ತಲಾ 2 ಲಕ್ಷ ಪರಿಹಾರ ಘೋಷಿಸಿತ್ತು.


ಇದನ್ನೂ ಓದಿ: ಮುಂಬೈ ಭಾರಿ ಮಳೆ: ಭೂಕುಸಿತದಿಂದ 23 ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...