Homeಮುಖಪುಟಭೋಪಾಲ್ ಅನಿಲ ದುರಂತಕ್ಕೆ 36 ವರ್ಷ: ಇನ್ನೂ ನ್ಯಾಯಕ್ಕಾಗಿ ಕಾಯುತ್ತಿರುವ ಸಂತ್ರಸ್ತರು

ಭೋಪಾಲ್ ಅನಿಲ ದುರಂತಕ್ಕೆ 36 ವರ್ಷ: ಇನ್ನೂ ನ್ಯಾಯಕ್ಕಾಗಿ ಕಾಯುತ್ತಿರುವ ಸಂತ್ರಸ್ತರು

ಸರ್ಕಾರಗಳ ಹೊಣೆಗೇಡಿತನದಿಂದಾಗಿ ಸಾವಿರಾರು ಜನರ ಸಾವಿಗೆ ಕಾರಣವಾದ ವ್ಯಕ್ತಿ ವಾರೆನ್ ಆಂಡರ್ಸನ್‌ಗೆ ಶಿಕ್ಷೆಯಾಗಲಿಲ್ಲ. ಆತ ತುಂಬು ಜೀವನ ನಡೆಸಿ 2014ರಲ್ಲಿ ತನ್ನ 92ನೇ ವಯಸ್ಸಿನಲ್ಲಿ ನಿಧನನಾದ.

- Advertisement -
- Advertisement -

1984ರ ಡಿಸೆಂಬರ್ 2-3  ರ ರಾತ್ರಿ ಯೂನಿಯನ್ ಕಾರ್ಬೈಡ್ ಎಂಬ ಕಂಪನಿ ಭೋಪಾಲಿನ 3000 ಕ್ಕೂ ಹೆಚ್ಚು ಮಂದಿಗೆ ಮಿಥೈಲ್ ಐಸೋಸಯನೇಟ್ ಎಂಬ ವಿಷ ಅನಿಲ ಕುಡಿಸಿ ಕೊಂದು ಹಾಕಿತ್ತು ಎಂದು ಸರ್ಕಾರದ ವರದಿಗಳು ಹೇಳುತ್ತವೆ. ಆದರೆ ಈ ಅನಿಲ ದುರಂತದಲ್ಲಿ ಮಡಿದ ಮತ್ತು ಬದುಕುಳಿದ ಜನರ ಪರವಾಗಿ ಹೋರಾಡುತ್ತಿರುವ ಸಂಘಟನೆಗಳು ಈ ದುರಂತದಿಂದಾಗಿ 25,000 ಜನ ಸಾವನಪ್ಪಿದ್ದಾರೆ ಎಂದು ವಾದಿಸುತ್ತಿದೆ. ಇಷ್ಟೆಲ್ಲದರ ನಡುವೆ ಪ್ರಪಂಚದ ಅತಿ ದೊಡ್ಡ ಔಧ್ಯಮಿಕ ದುರಂತದ ಈ ದುರ್ಘಟನೆ ನಡೆದು 36 ವರ್ಷ ಕಳೆದರೂ ಸಂತ್ರಸ್ತರಿಗೆ ನ್ಯಾಯವೆಂಬುದು ಮರೀಚಿಕೆಯಾಗಿದೆ.

1984 ರಲ್ಲಿ ಸಂಭವಿಸಿದ ಭೋಪಾಲ್ ಅನಿಲ ದುರಂತದಿಂದಾಗಿ 8000 ಜನ ಸತ್ತು, 5,25,000 ಜನ ಬಾಧಿತರಾಗಿದ್ದಕ್ಕೆ ಕೊನೆಗೂ ಯೂನಿಯನ್ ಕಾರ್ಬೈಡ್ ಕಂಪನಿ ಪರಿಹಾರವಾಗಿ ಕೊಟ್ಟಿದ್ದು 450 ಮಿಲಿಯನ್ ಡಾಲರ್ – ಅಂದರೆ 1,500 ಕೋಟಿ ರೂಪಾಯಿಗಳನ್ನು ಮಾತ್ರ. ಅಲ್ಲದೆ ಭೋಪಾಲ್‍ನಲ್ಲಿ ಮಡಿದ ಭಾರತೀಯರಿಗೂ ಅಮೆರಿಕದ ಮಾಲೀಕತ್ವದ ಯೂನಿಯನ್ ಕಾರ್ಬೈಡ್ ಕಂಪನಿಗೂ ಯಾವುದೇ ಸಂಬಂಧವಿಲ್ಲ ಎಂಬಂತಲೇ ವರ್ತಿಸಿಕೊಂಡು ಬಂದಿರುವ ಈ ಕಂಪನಿಯು ತಾನು ಎಸಗಿದ ಕೊಲೆಗಳಿಂದ ಬಚಾವಾಗಲೂ ಮಾಡಿದ ಷಡ್ಯಂತ್ರಗಳು ಒಂದೆರಡಲ್ಲ. ಅವುಗಳಲ್ಲಿ ಪ್ರಮುಖವಾದದ್ದು 2000 ರಲ್ಲಿ ಯೂನಿಯನ್ ಕಾರ್ಬೈಡ್ ಕಂಪನಿಯನ್ನೇ ಡೌ ಎಂಬ ಮತ್ತೊಂದು ಕಂಪನಿಗೆ ಮಾರಿದ್ದು. ಇದನ್ನು ಡೌ ಕಂಪನಿಯು ಕೊಂಡಿದ್ದೇ ಯೂನಿಯನ್ ಕಾರ್ಬೈಡ್‍ನ ಯಾವ ಹೊಣೆಗಾರಿಕೆಗೂ ತಾನು ಜವಾಬ್ದಾರನಲ್ಲ ಎಂಬ ಷರತ್ತಿನ ಮೇಲೆ.

ಹತ್ತು ವರ್ಷಗಳ ಹಿಂದೆ 2010ರಲ್ಲಿ ಭೋಪಾಲ್ ಕೋರ್ಟ್ ತೀರ್ಪು ನೀಡಿತು. ಸಾವಿರಾರು ಜನರ ಸಾವಿಗೆ. ಲಕ್ಷಾಂತರ ಜನರ ನೋವಿಗೆ ನ್ಯಾಯವಾಗಿ ಅಪರಾಧಿಗಲಿಗೆ ಕೋರ್ಟ್ ಕೊಟ್ಟ ಶಿಕ್ಷೆ ಕೇವಲ 2 ವರ್ಷದ ಸಜೆ! ಆ ದುರಂತದಲ್ಲಿ ಸತ್ತವರಲ್ಲಿ ಬಹಳಷ್ಟು ಜನ ಬಡವರು, ಕೂಲಿ ಕಾರ್ಮಿಕರು, ಗುಡಿಸಲುಗಳಲ್ಲಿ ವಾಸಿಸುತ್ತಿದ್ದ ಕೆಲ ವರ್ಗದವರು. ಹಾಗೆಯೇ ಆ ದುರಂತದಲ್ಲಿ ಸಂತ್ರಸ್ತರಾದ ಐದೂವರೆ ಲಕ್ಷ ಜನರೂ ಕಡುಬಡವರು. ಈ ಜನ ಮಾತ್ರ ಪರಿಹಾರಕ್ಕಾಗಿ 26 ವರ್ಷಗಳ ಕಾಲ ಕಾಯಬೇಕಾಯಿತು. ಆಗಲೂ ಅವರಿಗೆ ದೊರಕಿದ ಹಣವೆಷ್ಟು? ತಲಾ 15,000 ರೂಪಾಯಿಗಳು ಮಾತ್ರ. ಅಂದರೆ ಆ ದುರಂತ ಸಂಭವಿಸಿ ಅವರ ಬದುಕೇ ನುಚ್ಚುನೂರಾಗಿದ್ದರೂ ಅಂದಿನಿಂದ ಇಂದಿನತನಕ ಅವರು ಅನುಭವಿಸಿದ ಯಾತನೆಗೆ ನೀಡಿದ ಪರಿಹಾರ: ಪ್ರತಿದಿನಕ್ಕೆ ಕೇವಲ ಒಂದೂವರೆ ರೂಪಾಯಿಗಳು!

ಇನ್ನು ಭೋಪಾಲ್ ಅನಿಲ ದುರಂತ ಸಂಭವಿಸಿದ ಸಂದರ್ಭದಲ್ಲಿ ಯೂನಿಯನ್ ಕಾರ್ಬೈಡ್ ಕಂಪನಿಯ ಸಿಇಓ ಆಗಿದ್ದವನು ವಾರೆನ್ ಆಂಡರ್ಸನ್. ಇಂತಹ ದೊಡ್ಡ ದುರಂತ ಸಂಭವಿಸಿ ಸಾವಿರಾರು ಜನ ಸಾಯುತ್ತಿದ್ದರೂ ಆತ ಅಮೆರಿಕಾಕ್ಕೆ ಪರಾರಿಯಾಗಲು ಆಗಿನ ಕಾಂಗ್ರೆಸ್ ಸರ್ಕಾರ ಸಹಾಯ ಮಾಡಿದೆ ಎಂಬ ಆರೋಪವಿದೆ. ಅಲ್ಲದೇ ಈ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರ ದೇಶದ ಬಡಜನರ ಬದಲು ಕಂಪನಿಯೊಂದಿಗೆ ಶಾಮೀಲಾಗಿತ್ತು ಎಂದು ಹೋರಾಟಗಾರರು ದೂರಿದ್ದರು. ಸಂತ್ರಸ್ತರಿಗೆ ನ್ಯಾಯ ವಿಳಂಬವಾಗಲು ಕಾಂಗ್ರೆಸ್ ಸರ್ಕಾರವೇ ಕಾರಣವಾಗಿತ್ತು.

ಈ ವಿಷಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಿಜೆಪಿ ತರಾಟೆಗೆ ತೆಗೆದುಕೊಳ್ಳುತ್ತಿದೆ. ಆದರೆ ಇದೇ ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಭೋಪಾಲ್ ಸಂತ್ರಸ್ತರಿಗೆ ಯಾವ ಸಹಾಯವನ್ನೂ ಮಾಡಲಿಲ್ಲ. ಅಷ್ಟೇ ಅಲ್ಲ, ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಅಂದರೆ ವಾಜಪೇಯಿ ಪ್ರಧಾನಿ ಆಗಿದ್ದಾಗ ಡೌ ಕಂಪನಿಯ ಮುಖ್ಯಸ್ಥನನ್ನು ಗಣರಾಜ್ಯೋತ್ಸವದ ಸಮಾರಂಭಕ್ಕೆ ಆಹ್ವಾನಿಸಿತ್ತು! ಮಾತ್ರವಲ್ಲ, ಸಾವಿರಾರು ಜನರ ಸಾವಿಗೆ ಕಾರಣನಾಗಿದ್ದೂ ಅಮೆರಿಕಕ್ಕೆ ಓಡಿಹೋಗಿದ್ದ ಯೂನಿಯನ್ ಕಾರ್ಬೈಡ್‍ನ ಮುಖ್ಯಸ್ಥ ವಾರೆನ್ ಆಂಡರ್ಸನ್ ಅನ್ನು ಭಾರತಕ್ಕೆ ಒಪ್ಪಿಸಬೇಕೆಂದು ಒಮ್ಮೆಯೂ ಬಿಜೆಪಿ ಸರ್ಕಾರ ಅಮೆರಿಕವನ್ನು ಕೇಳಿಕೊಂಡಿರಲಿಲ್ಲ!

ಈ ರೀತಿಯಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಗಳ ದುಷ್ಟತನ, ಹೊಣೆಗೇಡಿತನದಿಂದಾಗಿ ಸಾವಿರಾರು ಜನರ ಸಾವಿಗೆ ಕಾರಣವಾದ ವ್ಯಕ್ತಿ ಯೂನಿಯನ್ ಕಾರ್ಬೈಡ್ ಕಂಪನಿಯ ಸಿಇಓ ವಾರೆನ್ ಆಂಡರ್ಸನ್ ತುಂಬು ಜೀವನ ನಡೆಸಿ 2014ರಲ್ಲಿ ತನ್ನ 92ನೇ ವಯಸ್ಸಿನಲ್ಲಿ ನಿಧನನಾದನೇ ಹೊರತು ಶಿಕ್ಷೆಯಿಂದಲ್ಲ! ಶಿಕ್ಷೆ ಇರಲಿ ಆತ ಭಾರತೀಯ ಕೋರ್ಟುಗಳು ವಿಚಾರಣೆಗೂ ಹಾಜರಾಗಲಿಲ್ಲ ಎಂದರೆ ನಂಬಲೇಬೇಕು.

ಅನಿಲ ದುರಂತದ ಸಂತ್ರಸ್ತರ ಪರವಾಗಿ ಇಂದಿರಾ ಜೈಸಿಂಗ್, ಅನಿಲ್ ಸದ್ಗೋಪಾಲ್ ಸೇರಿದಂತೆ ಸಾವಿರಾರು ಜನ ಸುಧೀರ್ಘ ಹೋರಾಟ ನಡೆಸಿದ್ದಾರೆ. ಇಂದು ಸಂತ್ರಸ್ತರಿಗೆ ಅಷ್ಟೋ ಇಷ್ಟೊ ಪರಿಹಾರ ಸಿಗಲು ದೇಶದ ಲಕ್ಷಾಂತರ ಜನ ಬೀದಿಗಿಳಿದಿ ಹೋರಾಟ ಮಾಡಬೇಕಾದ ದುಸ್ಥಿತಿ ನಮ್ಮ ದೇಶದ್ದು. ಆದರು ಇಂದಿಗೂ ಎಲ್ಲರಿಗೂ ನ್ಯಾಯ ಮತ್ತು ಪರಿಹಾರ ಸಿಕ್ಕಿಲ್ಲ. 36 ವರ್ಷ ಕಳೆದರೂ ಇಂದಿಗೂ ಹಲವು ಸಂಘಟನೆಗಳು ದನಿಯೆತ್ತುತ್ತಲೇ ಇವೆ.

ಅನಿಲ ದುರಂತದಿಂದ ಬದುಕುಳಿದವರಿಗೆ ದೀರ್ಘಾವಧಿಯ ಗಾಯಗಳು ಮತ್ತು ರೋಗಗಳು ಬಾಧಿಸುತ್ತಿವೆ. ಇಂದಿನ ಕೋವಿಡ್ ಸಾಂಕ್ರಾಮಿಕವು ಅವರನ್ನು ಇನ್ನಷ್ಟು ತೊಂದರೆಗೀಡುಮಾಡಿದೆ. ಆರೋಗ್ಯ ಇಲಾಖೆಯ ಅಧಿಕೃತ ದಾಖಲೆಯ ಪ್ರಕಾರ ಭೋಪಾಲ್ ಜಿಲ್ಲೆಯ ಅನಿಲ ಪೀಡಿತ ಜನಸಂಖ್ಯೆಯಲ್ಲಿ ಕೋವಿಡ್ -19 ಸಾವಿನ ಪ್ರಮಾಣ 6.5 ಪಟ್ಟು ಹೆಚ್ಚಾಗಿದೆ ಎಂದು ಭೋಪಾಲ್ ಗ್ಯಾಸ್ ಪೀಡಿತ ಮಹಿಳಾ ಪುರುಷ ಸಂಘರ್ಷ ಮೋರ್ಚಾದ ಅಧ್ಯಕ್ಷ ನವಾಬ್ ಖಾನ್ ಹೇಳಿದ್ದಾರೆ.

ವಿಷಕಾರಿ ಪ್ರಕರಣದ ಪರಿಣಾಮಗಳನ್ನು ತಗ್ಗಿಸಲು ಸರ್ಕಾರಗಳು ಇಂದಿಗೂ ಯಾವುದೇ ಪ್ರಯತ್ನಗಳನ್ನು ಮಾಡುತ್ತಿಲ್ಲ ಎಂದು ಸಂತ್ರಸ್ತರ ಪರವಾಗಿ ಹೋರಾಡುತ್ತಿರುವ ಭೋಪಾಲ್ ಗ್ಯಾಸ್ ಪೀಡಿತ ಸಂಘರ್ಷ ಸಹಯೋಗ್ ಸಮಿತಿ ಎಂಬ ಮತ್ತೊಂದು ಸಂಘಟನೆಯ ಸಂಚಾಲಕಿ ಸಾಧನಾ ಕಾರ್ನಿಕ್ ಹೇಳುತ್ತಾರೆ.

“ಸ್ಥಾವರದಿಂದ ಸೋರಿಕೆಯಾದ ಅನಿಲವು ನಗರದ ವಿಶಾಲ ಪ್ರದೇಶದ ಜನರ ಮೇಲೆ ಪರಿಣಾಮ ಬೀರುತ್ತಿದೆ. ಆದರೆ ಈ ಸಮಸ್ಯೆಯನ್ನು ಪರಿಹರಿಸಲು ಕೇಂದ್ರ ಅಥವಾ ರಾಜ್ಯ ಸರ್ಕಾರಗಳ ಕಡೆಯಿಂದ ಯಾವುದೇ ಪ್ರಾಮಾಣಿಕ ಪ್ರಯತ್ನಗಳಾಗುತ್ತಿಲ್ಲ. ಸಂತ್ರಸ್ತರಿಗಾಗಿ ನಿರ್ಮಾಣವಾದ ಭೋಪಾಲ್ ಸ್ಮಾರಕ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ (ಬಿಎಮ್‌ಹೆಚ್‌ಆರ್‌ಸಿ)ವು ಅಸ್ತವ್ಯಸ್ತವಾಗಿದೆ. ಅಲ್ಲಿನ ಸೌಲಭ್ಯಗಳನ್ನು ಸುಧಾರಿಸಲು ಯಾರೂ ಮುಂದಾಗುತ್ತಿಲ್ಲ” ಎಂದು ಅವರು ದೂರಿದ್ದಾರೆ.

ಇನ್ನು ಮಧ್ಯಪ್ರದೇಶ ಸರ್ಕಾರವು “ಭೋಪಾಲ್ ಅನಿಲ ದುರಂತದ ಪರಿಹಾರ ಮತ್ತು ಪುನರ್ವಸತಿ ಖಾತೆ”ಯನ್ನು ಆರಂಭಿಸಿದೆ. ಅದರ ಸಚಿವ ವಿಶ್ವಸ್ ಸಾರಂಗ್ “ಪರಿಹಾರದ ವಿಷಯವು ಸುಪ್ರೀಂ ಕೋರ್ಟ್ ಮುಂದೆ ಬಾಕಿ ಇದೆ. ಆದ್ದರಿಂದ, ನಾನು ಅದರ ಬಗ್ಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ದುರಂತದಿಂದ ಬದುಕುಳಿದವರಿಗೆ ಉತ್ತಮ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ರಾಜ್ಯದ ನಮ್ಮ ಸರ್ಕಾರ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ಒಂದು ಆಸ್ಪತ್ರೆಯನ್ನು ಅವರಿಗಾಗಿ ಮೀಸಲಿಟ್ಟಿದ್ದೇವೆ” ಎನ್ನುತ್ತಾರೆ. ಇಂತಹ ಅಸೂಕ್ಷ್ಮ ವ್ಯಕ್ತಿಗಳು ಇರುವವರೆಗೂ ಸಂತ್ರಸ್ತರು ನ್ಯಾಯಕ್ಕಾಗಿ ಕಾಯುತ್ತಲೇ ಇರಬೇಕಿದೆ. justice delayed is justice denied ಎಂಬ ಆಂಗ್ಲಗಾದೆಯನ್ನು ಈ ದುರಂತ ನಿಜ ಮಾಡಿದೆ.


ಇದನ್ನೂ ಓದಿ: ಭೋಪಾಲ್ ಅನಿಲ ದುರಂತದ ಸಂತ್ರಸ್ತರಿಗೆ ಪರಿಹಾರದಲ್ಲಿಯೂ ತಾರತಮ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...