Homeಮುಖಪುಟಭೋಪಾಲ್ ಅನಿಲ ದುರಂತಕ್ಕೆ 36 ವರ್ಷ: ಇನ್ನೂ ನ್ಯಾಯಕ್ಕಾಗಿ ಕಾಯುತ್ತಿರುವ ಸಂತ್ರಸ್ತರು

ಭೋಪಾಲ್ ಅನಿಲ ದುರಂತಕ್ಕೆ 36 ವರ್ಷ: ಇನ್ನೂ ನ್ಯಾಯಕ್ಕಾಗಿ ಕಾಯುತ್ತಿರುವ ಸಂತ್ರಸ್ತರು

ಸರ್ಕಾರಗಳ ಹೊಣೆಗೇಡಿತನದಿಂದಾಗಿ ಸಾವಿರಾರು ಜನರ ಸಾವಿಗೆ ಕಾರಣವಾದ ವ್ಯಕ್ತಿ ವಾರೆನ್ ಆಂಡರ್ಸನ್‌ಗೆ ಶಿಕ್ಷೆಯಾಗಲಿಲ್ಲ. ಆತ ತುಂಬು ಜೀವನ ನಡೆಸಿ 2014ರಲ್ಲಿ ತನ್ನ 92ನೇ ವಯಸ್ಸಿನಲ್ಲಿ ನಿಧನನಾದ.

- Advertisement -
- Advertisement -

1984ರ ಡಿಸೆಂಬರ್ 2-3  ರ ರಾತ್ರಿ ಯೂನಿಯನ್ ಕಾರ್ಬೈಡ್ ಎಂಬ ಕಂಪನಿ ಭೋಪಾಲಿನ 3000 ಕ್ಕೂ ಹೆಚ್ಚು ಮಂದಿಗೆ ಮಿಥೈಲ್ ಐಸೋಸಯನೇಟ್ ಎಂಬ ವಿಷ ಅನಿಲ ಕುಡಿಸಿ ಕೊಂದು ಹಾಕಿತ್ತು ಎಂದು ಸರ್ಕಾರದ ವರದಿಗಳು ಹೇಳುತ್ತವೆ. ಆದರೆ ಈ ಅನಿಲ ದುರಂತದಲ್ಲಿ ಮಡಿದ ಮತ್ತು ಬದುಕುಳಿದ ಜನರ ಪರವಾಗಿ ಹೋರಾಡುತ್ತಿರುವ ಸಂಘಟನೆಗಳು ಈ ದುರಂತದಿಂದಾಗಿ 25,000 ಜನ ಸಾವನಪ್ಪಿದ್ದಾರೆ ಎಂದು ವಾದಿಸುತ್ತಿದೆ. ಇಷ್ಟೆಲ್ಲದರ ನಡುವೆ ಪ್ರಪಂಚದ ಅತಿ ದೊಡ್ಡ ಔಧ್ಯಮಿಕ ದುರಂತದ ಈ ದುರ್ಘಟನೆ ನಡೆದು 36 ವರ್ಷ ಕಳೆದರೂ ಸಂತ್ರಸ್ತರಿಗೆ ನ್ಯಾಯವೆಂಬುದು ಮರೀಚಿಕೆಯಾಗಿದೆ.

1984 ರಲ್ಲಿ ಸಂಭವಿಸಿದ ಭೋಪಾಲ್ ಅನಿಲ ದುರಂತದಿಂದಾಗಿ 8000 ಜನ ಸತ್ತು, 5,25,000 ಜನ ಬಾಧಿತರಾಗಿದ್ದಕ್ಕೆ ಕೊನೆಗೂ ಯೂನಿಯನ್ ಕಾರ್ಬೈಡ್ ಕಂಪನಿ ಪರಿಹಾರವಾಗಿ ಕೊಟ್ಟಿದ್ದು 450 ಮಿಲಿಯನ್ ಡಾಲರ್ – ಅಂದರೆ 1,500 ಕೋಟಿ ರೂಪಾಯಿಗಳನ್ನು ಮಾತ್ರ. ಅಲ್ಲದೆ ಭೋಪಾಲ್‍ನಲ್ಲಿ ಮಡಿದ ಭಾರತೀಯರಿಗೂ ಅಮೆರಿಕದ ಮಾಲೀಕತ್ವದ ಯೂನಿಯನ್ ಕಾರ್ಬೈಡ್ ಕಂಪನಿಗೂ ಯಾವುದೇ ಸಂಬಂಧವಿಲ್ಲ ಎಂಬಂತಲೇ ವರ್ತಿಸಿಕೊಂಡು ಬಂದಿರುವ ಈ ಕಂಪನಿಯು ತಾನು ಎಸಗಿದ ಕೊಲೆಗಳಿಂದ ಬಚಾವಾಗಲೂ ಮಾಡಿದ ಷಡ್ಯಂತ್ರಗಳು ಒಂದೆರಡಲ್ಲ. ಅವುಗಳಲ್ಲಿ ಪ್ರಮುಖವಾದದ್ದು 2000 ರಲ್ಲಿ ಯೂನಿಯನ್ ಕಾರ್ಬೈಡ್ ಕಂಪನಿಯನ್ನೇ ಡೌ ಎಂಬ ಮತ್ತೊಂದು ಕಂಪನಿಗೆ ಮಾರಿದ್ದು. ಇದನ್ನು ಡೌ ಕಂಪನಿಯು ಕೊಂಡಿದ್ದೇ ಯೂನಿಯನ್ ಕಾರ್ಬೈಡ್‍ನ ಯಾವ ಹೊಣೆಗಾರಿಕೆಗೂ ತಾನು ಜವಾಬ್ದಾರನಲ್ಲ ಎಂಬ ಷರತ್ತಿನ ಮೇಲೆ.

ಹತ್ತು ವರ್ಷಗಳ ಹಿಂದೆ 2010ರಲ್ಲಿ ಭೋಪಾಲ್ ಕೋರ್ಟ್ ತೀರ್ಪು ನೀಡಿತು. ಸಾವಿರಾರು ಜನರ ಸಾವಿಗೆ. ಲಕ್ಷಾಂತರ ಜನರ ನೋವಿಗೆ ನ್ಯಾಯವಾಗಿ ಅಪರಾಧಿಗಲಿಗೆ ಕೋರ್ಟ್ ಕೊಟ್ಟ ಶಿಕ್ಷೆ ಕೇವಲ 2 ವರ್ಷದ ಸಜೆ! ಆ ದುರಂತದಲ್ಲಿ ಸತ್ತವರಲ್ಲಿ ಬಹಳಷ್ಟು ಜನ ಬಡವರು, ಕೂಲಿ ಕಾರ್ಮಿಕರು, ಗುಡಿಸಲುಗಳಲ್ಲಿ ವಾಸಿಸುತ್ತಿದ್ದ ಕೆಲ ವರ್ಗದವರು. ಹಾಗೆಯೇ ಆ ದುರಂತದಲ್ಲಿ ಸಂತ್ರಸ್ತರಾದ ಐದೂವರೆ ಲಕ್ಷ ಜನರೂ ಕಡುಬಡವರು. ಈ ಜನ ಮಾತ್ರ ಪರಿಹಾರಕ್ಕಾಗಿ 26 ವರ್ಷಗಳ ಕಾಲ ಕಾಯಬೇಕಾಯಿತು. ಆಗಲೂ ಅವರಿಗೆ ದೊರಕಿದ ಹಣವೆಷ್ಟು? ತಲಾ 15,000 ರೂಪಾಯಿಗಳು ಮಾತ್ರ. ಅಂದರೆ ಆ ದುರಂತ ಸಂಭವಿಸಿ ಅವರ ಬದುಕೇ ನುಚ್ಚುನೂರಾಗಿದ್ದರೂ ಅಂದಿನಿಂದ ಇಂದಿನತನಕ ಅವರು ಅನುಭವಿಸಿದ ಯಾತನೆಗೆ ನೀಡಿದ ಪರಿಹಾರ: ಪ್ರತಿದಿನಕ್ಕೆ ಕೇವಲ ಒಂದೂವರೆ ರೂಪಾಯಿಗಳು!

ಇನ್ನು ಭೋಪಾಲ್ ಅನಿಲ ದುರಂತ ಸಂಭವಿಸಿದ ಸಂದರ್ಭದಲ್ಲಿ ಯೂನಿಯನ್ ಕಾರ್ಬೈಡ್ ಕಂಪನಿಯ ಸಿಇಓ ಆಗಿದ್ದವನು ವಾರೆನ್ ಆಂಡರ್ಸನ್. ಇಂತಹ ದೊಡ್ಡ ದುರಂತ ಸಂಭವಿಸಿ ಸಾವಿರಾರು ಜನ ಸಾಯುತ್ತಿದ್ದರೂ ಆತ ಅಮೆರಿಕಾಕ್ಕೆ ಪರಾರಿಯಾಗಲು ಆಗಿನ ಕಾಂಗ್ರೆಸ್ ಸರ್ಕಾರ ಸಹಾಯ ಮಾಡಿದೆ ಎಂಬ ಆರೋಪವಿದೆ. ಅಲ್ಲದೇ ಈ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರ ದೇಶದ ಬಡಜನರ ಬದಲು ಕಂಪನಿಯೊಂದಿಗೆ ಶಾಮೀಲಾಗಿತ್ತು ಎಂದು ಹೋರಾಟಗಾರರು ದೂರಿದ್ದರು. ಸಂತ್ರಸ್ತರಿಗೆ ನ್ಯಾಯ ವಿಳಂಬವಾಗಲು ಕಾಂಗ್ರೆಸ್ ಸರ್ಕಾರವೇ ಕಾರಣವಾಗಿತ್ತು.

ಈ ವಿಷಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಿಜೆಪಿ ತರಾಟೆಗೆ ತೆಗೆದುಕೊಳ್ಳುತ್ತಿದೆ. ಆದರೆ ಇದೇ ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಭೋಪಾಲ್ ಸಂತ್ರಸ್ತರಿಗೆ ಯಾವ ಸಹಾಯವನ್ನೂ ಮಾಡಲಿಲ್ಲ. ಅಷ್ಟೇ ಅಲ್ಲ, ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಅಂದರೆ ವಾಜಪೇಯಿ ಪ್ರಧಾನಿ ಆಗಿದ್ದಾಗ ಡೌ ಕಂಪನಿಯ ಮುಖ್ಯಸ್ಥನನ್ನು ಗಣರಾಜ್ಯೋತ್ಸವದ ಸಮಾರಂಭಕ್ಕೆ ಆಹ್ವಾನಿಸಿತ್ತು! ಮಾತ್ರವಲ್ಲ, ಸಾವಿರಾರು ಜನರ ಸಾವಿಗೆ ಕಾರಣನಾಗಿದ್ದೂ ಅಮೆರಿಕಕ್ಕೆ ಓಡಿಹೋಗಿದ್ದ ಯೂನಿಯನ್ ಕಾರ್ಬೈಡ್‍ನ ಮುಖ್ಯಸ್ಥ ವಾರೆನ್ ಆಂಡರ್ಸನ್ ಅನ್ನು ಭಾರತಕ್ಕೆ ಒಪ್ಪಿಸಬೇಕೆಂದು ಒಮ್ಮೆಯೂ ಬಿಜೆಪಿ ಸರ್ಕಾರ ಅಮೆರಿಕವನ್ನು ಕೇಳಿಕೊಂಡಿರಲಿಲ್ಲ!

ಈ ರೀತಿಯಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಗಳ ದುಷ್ಟತನ, ಹೊಣೆಗೇಡಿತನದಿಂದಾಗಿ ಸಾವಿರಾರು ಜನರ ಸಾವಿಗೆ ಕಾರಣವಾದ ವ್ಯಕ್ತಿ ಯೂನಿಯನ್ ಕಾರ್ಬೈಡ್ ಕಂಪನಿಯ ಸಿಇಓ ವಾರೆನ್ ಆಂಡರ್ಸನ್ ತುಂಬು ಜೀವನ ನಡೆಸಿ 2014ರಲ್ಲಿ ತನ್ನ 92ನೇ ವಯಸ್ಸಿನಲ್ಲಿ ನಿಧನನಾದನೇ ಹೊರತು ಶಿಕ್ಷೆಯಿಂದಲ್ಲ! ಶಿಕ್ಷೆ ಇರಲಿ ಆತ ಭಾರತೀಯ ಕೋರ್ಟುಗಳು ವಿಚಾರಣೆಗೂ ಹಾಜರಾಗಲಿಲ್ಲ ಎಂದರೆ ನಂಬಲೇಬೇಕು.

ಅನಿಲ ದುರಂತದ ಸಂತ್ರಸ್ತರ ಪರವಾಗಿ ಇಂದಿರಾ ಜೈಸಿಂಗ್, ಅನಿಲ್ ಸದ್ಗೋಪಾಲ್ ಸೇರಿದಂತೆ ಸಾವಿರಾರು ಜನ ಸುಧೀರ್ಘ ಹೋರಾಟ ನಡೆಸಿದ್ದಾರೆ. ಇಂದು ಸಂತ್ರಸ್ತರಿಗೆ ಅಷ್ಟೋ ಇಷ್ಟೊ ಪರಿಹಾರ ಸಿಗಲು ದೇಶದ ಲಕ್ಷಾಂತರ ಜನ ಬೀದಿಗಿಳಿದಿ ಹೋರಾಟ ಮಾಡಬೇಕಾದ ದುಸ್ಥಿತಿ ನಮ್ಮ ದೇಶದ್ದು. ಆದರು ಇಂದಿಗೂ ಎಲ್ಲರಿಗೂ ನ್ಯಾಯ ಮತ್ತು ಪರಿಹಾರ ಸಿಕ್ಕಿಲ್ಲ. 36 ವರ್ಷ ಕಳೆದರೂ ಇಂದಿಗೂ ಹಲವು ಸಂಘಟನೆಗಳು ದನಿಯೆತ್ತುತ್ತಲೇ ಇವೆ.

ಅನಿಲ ದುರಂತದಿಂದ ಬದುಕುಳಿದವರಿಗೆ ದೀರ್ಘಾವಧಿಯ ಗಾಯಗಳು ಮತ್ತು ರೋಗಗಳು ಬಾಧಿಸುತ್ತಿವೆ. ಇಂದಿನ ಕೋವಿಡ್ ಸಾಂಕ್ರಾಮಿಕವು ಅವರನ್ನು ಇನ್ನಷ್ಟು ತೊಂದರೆಗೀಡುಮಾಡಿದೆ. ಆರೋಗ್ಯ ಇಲಾಖೆಯ ಅಧಿಕೃತ ದಾಖಲೆಯ ಪ್ರಕಾರ ಭೋಪಾಲ್ ಜಿಲ್ಲೆಯ ಅನಿಲ ಪೀಡಿತ ಜನಸಂಖ್ಯೆಯಲ್ಲಿ ಕೋವಿಡ್ -19 ಸಾವಿನ ಪ್ರಮಾಣ 6.5 ಪಟ್ಟು ಹೆಚ್ಚಾಗಿದೆ ಎಂದು ಭೋಪಾಲ್ ಗ್ಯಾಸ್ ಪೀಡಿತ ಮಹಿಳಾ ಪುರುಷ ಸಂಘರ್ಷ ಮೋರ್ಚಾದ ಅಧ್ಯಕ್ಷ ನವಾಬ್ ಖಾನ್ ಹೇಳಿದ್ದಾರೆ.

ವಿಷಕಾರಿ ಪ್ರಕರಣದ ಪರಿಣಾಮಗಳನ್ನು ತಗ್ಗಿಸಲು ಸರ್ಕಾರಗಳು ಇಂದಿಗೂ ಯಾವುದೇ ಪ್ರಯತ್ನಗಳನ್ನು ಮಾಡುತ್ತಿಲ್ಲ ಎಂದು ಸಂತ್ರಸ್ತರ ಪರವಾಗಿ ಹೋರಾಡುತ್ತಿರುವ ಭೋಪಾಲ್ ಗ್ಯಾಸ್ ಪೀಡಿತ ಸಂಘರ್ಷ ಸಹಯೋಗ್ ಸಮಿತಿ ಎಂಬ ಮತ್ತೊಂದು ಸಂಘಟನೆಯ ಸಂಚಾಲಕಿ ಸಾಧನಾ ಕಾರ್ನಿಕ್ ಹೇಳುತ್ತಾರೆ.

“ಸ್ಥಾವರದಿಂದ ಸೋರಿಕೆಯಾದ ಅನಿಲವು ನಗರದ ವಿಶಾಲ ಪ್ರದೇಶದ ಜನರ ಮೇಲೆ ಪರಿಣಾಮ ಬೀರುತ್ತಿದೆ. ಆದರೆ ಈ ಸಮಸ್ಯೆಯನ್ನು ಪರಿಹರಿಸಲು ಕೇಂದ್ರ ಅಥವಾ ರಾಜ್ಯ ಸರ್ಕಾರಗಳ ಕಡೆಯಿಂದ ಯಾವುದೇ ಪ್ರಾಮಾಣಿಕ ಪ್ರಯತ್ನಗಳಾಗುತ್ತಿಲ್ಲ. ಸಂತ್ರಸ್ತರಿಗಾಗಿ ನಿರ್ಮಾಣವಾದ ಭೋಪಾಲ್ ಸ್ಮಾರಕ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ (ಬಿಎಮ್‌ಹೆಚ್‌ಆರ್‌ಸಿ)ವು ಅಸ್ತವ್ಯಸ್ತವಾಗಿದೆ. ಅಲ್ಲಿನ ಸೌಲಭ್ಯಗಳನ್ನು ಸುಧಾರಿಸಲು ಯಾರೂ ಮುಂದಾಗುತ್ತಿಲ್ಲ” ಎಂದು ಅವರು ದೂರಿದ್ದಾರೆ.

ಇನ್ನು ಮಧ್ಯಪ್ರದೇಶ ಸರ್ಕಾರವು “ಭೋಪಾಲ್ ಅನಿಲ ದುರಂತದ ಪರಿಹಾರ ಮತ್ತು ಪುನರ್ವಸತಿ ಖಾತೆ”ಯನ್ನು ಆರಂಭಿಸಿದೆ. ಅದರ ಸಚಿವ ವಿಶ್ವಸ್ ಸಾರಂಗ್ “ಪರಿಹಾರದ ವಿಷಯವು ಸುಪ್ರೀಂ ಕೋರ್ಟ್ ಮುಂದೆ ಬಾಕಿ ಇದೆ. ಆದ್ದರಿಂದ, ನಾನು ಅದರ ಬಗ್ಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ದುರಂತದಿಂದ ಬದುಕುಳಿದವರಿಗೆ ಉತ್ತಮ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ರಾಜ್ಯದ ನಮ್ಮ ಸರ್ಕಾರ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ಒಂದು ಆಸ್ಪತ್ರೆಯನ್ನು ಅವರಿಗಾಗಿ ಮೀಸಲಿಟ್ಟಿದ್ದೇವೆ” ಎನ್ನುತ್ತಾರೆ. ಇಂತಹ ಅಸೂಕ್ಷ್ಮ ವ್ಯಕ್ತಿಗಳು ಇರುವವರೆಗೂ ಸಂತ್ರಸ್ತರು ನ್ಯಾಯಕ್ಕಾಗಿ ಕಾಯುತ್ತಲೇ ಇರಬೇಕಿದೆ. justice delayed is justice denied ಎಂಬ ಆಂಗ್ಲಗಾದೆಯನ್ನು ಈ ದುರಂತ ನಿಜ ಮಾಡಿದೆ.


ಇದನ್ನೂ ಓದಿ: ಭೋಪಾಲ್ ಅನಿಲ ದುರಂತದ ಸಂತ್ರಸ್ತರಿಗೆ ಪರಿಹಾರದಲ್ಲಿಯೂ ತಾರತಮ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...