Homeಮುಖಪುಟಭೋಪಾಲ್ ಅನಿಲ ದುರಂತಕ್ಕೆ 36 ವರ್ಷ: ಇನ್ನೂ ನ್ಯಾಯಕ್ಕಾಗಿ ಕಾಯುತ್ತಿರುವ ಸಂತ್ರಸ್ತರು

ಭೋಪಾಲ್ ಅನಿಲ ದುರಂತಕ್ಕೆ 36 ವರ್ಷ: ಇನ್ನೂ ನ್ಯಾಯಕ್ಕಾಗಿ ಕಾಯುತ್ತಿರುವ ಸಂತ್ರಸ್ತರು

ಸರ್ಕಾರಗಳ ಹೊಣೆಗೇಡಿತನದಿಂದಾಗಿ ಸಾವಿರಾರು ಜನರ ಸಾವಿಗೆ ಕಾರಣವಾದ ವ್ಯಕ್ತಿ ವಾರೆನ್ ಆಂಡರ್ಸನ್‌ಗೆ ಶಿಕ್ಷೆಯಾಗಲಿಲ್ಲ. ಆತ ತುಂಬು ಜೀವನ ನಡೆಸಿ 2014ರಲ್ಲಿ ತನ್ನ 92ನೇ ವಯಸ್ಸಿನಲ್ಲಿ ನಿಧನನಾದ.

- Advertisement -
- Advertisement -

1984ರ ಡಿಸೆಂಬರ್ 2-3  ರ ರಾತ್ರಿ ಯೂನಿಯನ್ ಕಾರ್ಬೈಡ್ ಎಂಬ ಕಂಪನಿ ಭೋಪಾಲಿನ 3000 ಕ್ಕೂ ಹೆಚ್ಚು ಮಂದಿಗೆ ಮಿಥೈಲ್ ಐಸೋಸಯನೇಟ್ ಎಂಬ ವಿಷ ಅನಿಲ ಕುಡಿಸಿ ಕೊಂದು ಹಾಕಿತ್ತು ಎಂದು ಸರ್ಕಾರದ ವರದಿಗಳು ಹೇಳುತ್ತವೆ. ಆದರೆ ಈ ಅನಿಲ ದುರಂತದಲ್ಲಿ ಮಡಿದ ಮತ್ತು ಬದುಕುಳಿದ ಜನರ ಪರವಾಗಿ ಹೋರಾಡುತ್ತಿರುವ ಸಂಘಟನೆಗಳು ಈ ದುರಂತದಿಂದಾಗಿ 25,000 ಜನ ಸಾವನಪ್ಪಿದ್ದಾರೆ ಎಂದು ವಾದಿಸುತ್ತಿದೆ. ಇಷ್ಟೆಲ್ಲದರ ನಡುವೆ ಪ್ರಪಂಚದ ಅತಿ ದೊಡ್ಡ ಔಧ್ಯಮಿಕ ದುರಂತದ ಈ ದುರ್ಘಟನೆ ನಡೆದು 36 ವರ್ಷ ಕಳೆದರೂ ಸಂತ್ರಸ್ತರಿಗೆ ನ್ಯಾಯವೆಂಬುದು ಮರೀಚಿಕೆಯಾಗಿದೆ.

1984 ರಲ್ಲಿ ಸಂಭವಿಸಿದ ಭೋಪಾಲ್ ಅನಿಲ ದುರಂತದಿಂದಾಗಿ 8000 ಜನ ಸತ್ತು, 5,25,000 ಜನ ಬಾಧಿತರಾಗಿದ್ದಕ್ಕೆ ಕೊನೆಗೂ ಯೂನಿಯನ್ ಕಾರ್ಬೈಡ್ ಕಂಪನಿ ಪರಿಹಾರವಾಗಿ ಕೊಟ್ಟಿದ್ದು 450 ಮಿಲಿಯನ್ ಡಾಲರ್ – ಅಂದರೆ 1,500 ಕೋಟಿ ರೂಪಾಯಿಗಳನ್ನು ಮಾತ್ರ. ಅಲ್ಲದೆ ಭೋಪಾಲ್‍ನಲ್ಲಿ ಮಡಿದ ಭಾರತೀಯರಿಗೂ ಅಮೆರಿಕದ ಮಾಲೀಕತ್ವದ ಯೂನಿಯನ್ ಕಾರ್ಬೈಡ್ ಕಂಪನಿಗೂ ಯಾವುದೇ ಸಂಬಂಧವಿಲ್ಲ ಎಂಬಂತಲೇ ವರ್ತಿಸಿಕೊಂಡು ಬಂದಿರುವ ಈ ಕಂಪನಿಯು ತಾನು ಎಸಗಿದ ಕೊಲೆಗಳಿಂದ ಬಚಾವಾಗಲೂ ಮಾಡಿದ ಷಡ್ಯಂತ್ರಗಳು ಒಂದೆರಡಲ್ಲ. ಅವುಗಳಲ್ಲಿ ಪ್ರಮುಖವಾದದ್ದು 2000 ರಲ್ಲಿ ಯೂನಿಯನ್ ಕಾರ್ಬೈಡ್ ಕಂಪನಿಯನ್ನೇ ಡೌ ಎಂಬ ಮತ್ತೊಂದು ಕಂಪನಿಗೆ ಮಾರಿದ್ದು. ಇದನ್ನು ಡೌ ಕಂಪನಿಯು ಕೊಂಡಿದ್ದೇ ಯೂನಿಯನ್ ಕಾರ್ಬೈಡ್‍ನ ಯಾವ ಹೊಣೆಗಾರಿಕೆಗೂ ತಾನು ಜವಾಬ್ದಾರನಲ್ಲ ಎಂಬ ಷರತ್ತಿನ ಮೇಲೆ.

ಹತ್ತು ವರ್ಷಗಳ ಹಿಂದೆ 2010ರಲ್ಲಿ ಭೋಪಾಲ್ ಕೋರ್ಟ್ ತೀರ್ಪು ನೀಡಿತು. ಸಾವಿರಾರು ಜನರ ಸಾವಿಗೆ. ಲಕ್ಷಾಂತರ ಜನರ ನೋವಿಗೆ ನ್ಯಾಯವಾಗಿ ಅಪರಾಧಿಗಲಿಗೆ ಕೋರ್ಟ್ ಕೊಟ್ಟ ಶಿಕ್ಷೆ ಕೇವಲ 2 ವರ್ಷದ ಸಜೆ! ಆ ದುರಂತದಲ್ಲಿ ಸತ್ತವರಲ್ಲಿ ಬಹಳಷ್ಟು ಜನ ಬಡವರು, ಕೂಲಿ ಕಾರ್ಮಿಕರು, ಗುಡಿಸಲುಗಳಲ್ಲಿ ವಾಸಿಸುತ್ತಿದ್ದ ಕೆಲ ವರ್ಗದವರು. ಹಾಗೆಯೇ ಆ ದುರಂತದಲ್ಲಿ ಸಂತ್ರಸ್ತರಾದ ಐದೂವರೆ ಲಕ್ಷ ಜನರೂ ಕಡುಬಡವರು. ಈ ಜನ ಮಾತ್ರ ಪರಿಹಾರಕ್ಕಾಗಿ 26 ವರ್ಷಗಳ ಕಾಲ ಕಾಯಬೇಕಾಯಿತು. ಆಗಲೂ ಅವರಿಗೆ ದೊರಕಿದ ಹಣವೆಷ್ಟು? ತಲಾ 15,000 ರೂಪಾಯಿಗಳು ಮಾತ್ರ. ಅಂದರೆ ಆ ದುರಂತ ಸಂಭವಿಸಿ ಅವರ ಬದುಕೇ ನುಚ್ಚುನೂರಾಗಿದ್ದರೂ ಅಂದಿನಿಂದ ಇಂದಿನತನಕ ಅವರು ಅನುಭವಿಸಿದ ಯಾತನೆಗೆ ನೀಡಿದ ಪರಿಹಾರ: ಪ್ರತಿದಿನಕ್ಕೆ ಕೇವಲ ಒಂದೂವರೆ ರೂಪಾಯಿಗಳು!

ಇನ್ನು ಭೋಪಾಲ್ ಅನಿಲ ದುರಂತ ಸಂಭವಿಸಿದ ಸಂದರ್ಭದಲ್ಲಿ ಯೂನಿಯನ್ ಕಾರ್ಬೈಡ್ ಕಂಪನಿಯ ಸಿಇಓ ಆಗಿದ್ದವನು ವಾರೆನ್ ಆಂಡರ್ಸನ್. ಇಂತಹ ದೊಡ್ಡ ದುರಂತ ಸಂಭವಿಸಿ ಸಾವಿರಾರು ಜನ ಸಾಯುತ್ತಿದ್ದರೂ ಆತ ಅಮೆರಿಕಾಕ್ಕೆ ಪರಾರಿಯಾಗಲು ಆಗಿನ ಕಾಂಗ್ರೆಸ್ ಸರ್ಕಾರ ಸಹಾಯ ಮಾಡಿದೆ ಎಂಬ ಆರೋಪವಿದೆ. ಅಲ್ಲದೇ ಈ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರ ದೇಶದ ಬಡಜನರ ಬದಲು ಕಂಪನಿಯೊಂದಿಗೆ ಶಾಮೀಲಾಗಿತ್ತು ಎಂದು ಹೋರಾಟಗಾರರು ದೂರಿದ್ದರು. ಸಂತ್ರಸ್ತರಿಗೆ ನ್ಯಾಯ ವಿಳಂಬವಾಗಲು ಕಾಂಗ್ರೆಸ್ ಸರ್ಕಾರವೇ ಕಾರಣವಾಗಿತ್ತು.

ಈ ವಿಷಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಿಜೆಪಿ ತರಾಟೆಗೆ ತೆಗೆದುಕೊಳ್ಳುತ್ತಿದೆ. ಆದರೆ ಇದೇ ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಭೋಪಾಲ್ ಸಂತ್ರಸ್ತರಿಗೆ ಯಾವ ಸಹಾಯವನ್ನೂ ಮಾಡಲಿಲ್ಲ. ಅಷ್ಟೇ ಅಲ್ಲ, ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಅಂದರೆ ವಾಜಪೇಯಿ ಪ್ರಧಾನಿ ಆಗಿದ್ದಾಗ ಡೌ ಕಂಪನಿಯ ಮುಖ್ಯಸ್ಥನನ್ನು ಗಣರಾಜ್ಯೋತ್ಸವದ ಸಮಾರಂಭಕ್ಕೆ ಆಹ್ವಾನಿಸಿತ್ತು! ಮಾತ್ರವಲ್ಲ, ಸಾವಿರಾರು ಜನರ ಸಾವಿಗೆ ಕಾರಣನಾಗಿದ್ದೂ ಅಮೆರಿಕಕ್ಕೆ ಓಡಿಹೋಗಿದ್ದ ಯೂನಿಯನ್ ಕಾರ್ಬೈಡ್‍ನ ಮುಖ್ಯಸ್ಥ ವಾರೆನ್ ಆಂಡರ್ಸನ್ ಅನ್ನು ಭಾರತಕ್ಕೆ ಒಪ್ಪಿಸಬೇಕೆಂದು ಒಮ್ಮೆಯೂ ಬಿಜೆಪಿ ಸರ್ಕಾರ ಅಮೆರಿಕವನ್ನು ಕೇಳಿಕೊಂಡಿರಲಿಲ್ಲ!

ಈ ರೀತಿಯಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಗಳ ದುಷ್ಟತನ, ಹೊಣೆಗೇಡಿತನದಿಂದಾಗಿ ಸಾವಿರಾರು ಜನರ ಸಾವಿಗೆ ಕಾರಣವಾದ ವ್ಯಕ್ತಿ ಯೂನಿಯನ್ ಕಾರ್ಬೈಡ್ ಕಂಪನಿಯ ಸಿಇಓ ವಾರೆನ್ ಆಂಡರ್ಸನ್ ತುಂಬು ಜೀವನ ನಡೆಸಿ 2014ರಲ್ಲಿ ತನ್ನ 92ನೇ ವಯಸ್ಸಿನಲ್ಲಿ ನಿಧನನಾದನೇ ಹೊರತು ಶಿಕ್ಷೆಯಿಂದಲ್ಲ! ಶಿಕ್ಷೆ ಇರಲಿ ಆತ ಭಾರತೀಯ ಕೋರ್ಟುಗಳು ವಿಚಾರಣೆಗೂ ಹಾಜರಾಗಲಿಲ್ಲ ಎಂದರೆ ನಂಬಲೇಬೇಕು.

ಅನಿಲ ದುರಂತದ ಸಂತ್ರಸ್ತರ ಪರವಾಗಿ ಇಂದಿರಾ ಜೈಸಿಂಗ್, ಅನಿಲ್ ಸದ್ಗೋಪಾಲ್ ಸೇರಿದಂತೆ ಸಾವಿರಾರು ಜನ ಸುಧೀರ್ಘ ಹೋರಾಟ ನಡೆಸಿದ್ದಾರೆ. ಇಂದು ಸಂತ್ರಸ್ತರಿಗೆ ಅಷ್ಟೋ ಇಷ್ಟೊ ಪರಿಹಾರ ಸಿಗಲು ದೇಶದ ಲಕ್ಷಾಂತರ ಜನ ಬೀದಿಗಿಳಿದಿ ಹೋರಾಟ ಮಾಡಬೇಕಾದ ದುಸ್ಥಿತಿ ನಮ್ಮ ದೇಶದ್ದು. ಆದರು ಇಂದಿಗೂ ಎಲ್ಲರಿಗೂ ನ್ಯಾಯ ಮತ್ತು ಪರಿಹಾರ ಸಿಕ್ಕಿಲ್ಲ. 36 ವರ್ಷ ಕಳೆದರೂ ಇಂದಿಗೂ ಹಲವು ಸಂಘಟನೆಗಳು ದನಿಯೆತ್ತುತ್ತಲೇ ಇವೆ.

ಅನಿಲ ದುರಂತದಿಂದ ಬದುಕುಳಿದವರಿಗೆ ದೀರ್ಘಾವಧಿಯ ಗಾಯಗಳು ಮತ್ತು ರೋಗಗಳು ಬಾಧಿಸುತ್ತಿವೆ. ಇಂದಿನ ಕೋವಿಡ್ ಸಾಂಕ್ರಾಮಿಕವು ಅವರನ್ನು ಇನ್ನಷ್ಟು ತೊಂದರೆಗೀಡುಮಾಡಿದೆ. ಆರೋಗ್ಯ ಇಲಾಖೆಯ ಅಧಿಕೃತ ದಾಖಲೆಯ ಪ್ರಕಾರ ಭೋಪಾಲ್ ಜಿಲ್ಲೆಯ ಅನಿಲ ಪೀಡಿತ ಜನಸಂಖ್ಯೆಯಲ್ಲಿ ಕೋವಿಡ್ -19 ಸಾವಿನ ಪ್ರಮಾಣ 6.5 ಪಟ್ಟು ಹೆಚ್ಚಾಗಿದೆ ಎಂದು ಭೋಪಾಲ್ ಗ್ಯಾಸ್ ಪೀಡಿತ ಮಹಿಳಾ ಪುರುಷ ಸಂಘರ್ಷ ಮೋರ್ಚಾದ ಅಧ್ಯಕ್ಷ ನವಾಬ್ ಖಾನ್ ಹೇಳಿದ್ದಾರೆ.

ವಿಷಕಾರಿ ಪ್ರಕರಣದ ಪರಿಣಾಮಗಳನ್ನು ತಗ್ಗಿಸಲು ಸರ್ಕಾರಗಳು ಇಂದಿಗೂ ಯಾವುದೇ ಪ್ರಯತ್ನಗಳನ್ನು ಮಾಡುತ್ತಿಲ್ಲ ಎಂದು ಸಂತ್ರಸ್ತರ ಪರವಾಗಿ ಹೋರಾಡುತ್ತಿರುವ ಭೋಪಾಲ್ ಗ್ಯಾಸ್ ಪೀಡಿತ ಸಂಘರ್ಷ ಸಹಯೋಗ್ ಸಮಿತಿ ಎಂಬ ಮತ್ತೊಂದು ಸಂಘಟನೆಯ ಸಂಚಾಲಕಿ ಸಾಧನಾ ಕಾರ್ನಿಕ್ ಹೇಳುತ್ತಾರೆ.

“ಸ್ಥಾವರದಿಂದ ಸೋರಿಕೆಯಾದ ಅನಿಲವು ನಗರದ ವಿಶಾಲ ಪ್ರದೇಶದ ಜನರ ಮೇಲೆ ಪರಿಣಾಮ ಬೀರುತ್ತಿದೆ. ಆದರೆ ಈ ಸಮಸ್ಯೆಯನ್ನು ಪರಿಹರಿಸಲು ಕೇಂದ್ರ ಅಥವಾ ರಾಜ್ಯ ಸರ್ಕಾರಗಳ ಕಡೆಯಿಂದ ಯಾವುದೇ ಪ್ರಾಮಾಣಿಕ ಪ್ರಯತ್ನಗಳಾಗುತ್ತಿಲ್ಲ. ಸಂತ್ರಸ್ತರಿಗಾಗಿ ನಿರ್ಮಾಣವಾದ ಭೋಪಾಲ್ ಸ್ಮಾರಕ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ (ಬಿಎಮ್‌ಹೆಚ್‌ಆರ್‌ಸಿ)ವು ಅಸ್ತವ್ಯಸ್ತವಾಗಿದೆ. ಅಲ್ಲಿನ ಸೌಲಭ್ಯಗಳನ್ನು ಸುಧಾರಿಸಲು ಯಾರೂ ಮುಂದಾಗುತ್ತಿಲ್ಲ” ಎಂದು ಅವರು ದೂರಿದ್ದಾರೆ.

ಇನ್ನು ಮಧ್ಯಪ್ರದೇಶ ಸರ್ಕಾರವು “ಭೋಪಾಲ್ ಅನಿಲ ದುರಂತದ ಪರಿಹಾರ ಮತ್ತು ಪುನರ್ವಸತಿ ಖಾತೆ”ಯನ್ನು ಆರಂಭಿಸಿದೆ. ಅದರ ಸಚಿವ ವಿಶ್ವಸ್ ಸಾರಂಗ್ “ಪರಿಹಾರದ ವಿಷಯವು ಸುಪ್ರೀಂ ಕೋರ್ಟ್ ಮುಂದೆ ಬಾಕಿ ಇದೆ. ಆದ್ದರಿಂದ, ನಾನು ಅದರ ಬಗ್ಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ದುರಂತದಿಂದ ಬದುಕುಳಿದವರಿಗೆ ಉತ್ತಮ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ರಾಜ್ಯದ ನಮ್ಮ ಸರ್ಕಾರ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ಒಂದು ಆಸ್ಪತ್ರೆಯನ್ನು ಅವರಿಗಾಗಿ ಮೀಸಲಿಟ್ಟಿದ್ದೇವೆ” ಎನ್ನುತ್ತಾರೆ. ಇಂತಹ ಅಸೂಕ್ಷ್ಮ ವ್ಯಕ್ತಿಗಳು ಇರುವವರೆಗೂ ಸಂತ್ರಸ್ತರು ನ್ಯಾಯಕ್ಕಾಗಿ ಕಾಯುತ್ತಲೇ ಇರಬೇಕಿದೆ. justice delayed is justice denied ಎಂಬ ಆಂಗ್ಲಗಾದೆಯನ್ನು ಈ ದುರಂತ ನಿಜ ಮಾಡಿದೆ.


ಇದನ್ನೂ ಓದಿ: ಭೋಪಾಲ್ ಅನಿಲ ದುರಂತದ ಸಂತ್ರಸ್ತರಿಗೆ ಪರಿಹಾರದಲ್ಲಿಯೂ ತಾರತಮ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...