Homeಕ್ರೀಡೆಕ್ರಿಕೆಟ್360 ಡಿಗ್ರಿ ಬ್ಯಾಟರ್ ಸೂರ್ಯಕುಮಾರ್ ಯಾದವ್‌: ಟಿ20ಯಲ್ಲಿ ಮತ್ತೆರೆಡು ದಾಖಲೆ

360 ಡಿಗ್ರಿ ಬ್ಯಾಟರ್ ಸೂರ್ಯಕುಮಾರ್ ಯಾದವ್‌: ಟಿ20ಯಲ್ಲಿ ಮತ್ತೆರೆಡು ದಾಖಲೆ

- Advertisement -
- Advertisement -

ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿದಂದಿನಿಂದ ಮಧ್ಯಮ ಕ್ರಮಾಂಕದ ಬ್ಯಾಟರ್ 32 ವರ್ಷದ ಸೂರ್ಯಕುಮಾರ್ ಯಾದವ್ ಒಂದಲ್ಲಾ ಒಂದು ದಾಖಲೆ ಬರೆಯುತ್ತಲೇ ಇದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ನಂಬರ್‌ 1 ಸ್ಥಾನ ಪಡೆದಿರುವ ಅವರು ಭಾನುವಾರ ನಡೆದ ಜಿಂಬಾಬ್ವೆ ಎದುರಿನ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ದಾಖಲಿಸುವ ಮೂಲಕ ಅವರು ಮತ್ತೆರಡು ವಿಶಿಷ್ಟ ದಾಖಲೆ ನಿರ್ಮಿಸಿದ್ದಾರೆ.

ಜಿಂಬಾಬ್ವೆ ಎದುರಿನ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ 25 ಎಸೆತಗಳಲ್ಲಿ ಅಜೇಯ 61 ರನ್ (6 ಬೌಂಡರಿ, 4 ಸಿಕ್ಸರ್) ದಾಖಲಿಸಿದ್ದರು. ಈ ವಿಶ್ವಕಪ್‌ನಲ್ಲಿ ಐದು ಪಂದ್ಯಗಳ ಪೈಕಿ ಸೂರ್ಯಕುಮಾರ್ ಯಾದವ್ ದಾಖಲಿಸುತ್ತಿರುವ ಮೂರನೇ ಅರ್ಧಶತಕ ಇದು. ಸೂರ್ಯಕುಮಾರ್ ಈ ಟೂರ್ನಿಯಲ್ಲಿ 225 ರನ್ ಗಳಿಸುವ ಮೂಲಕ ಅತಿ ಹೆಚ್ಚು ರನ್ ಗಳಿಸಿದವರ ಸಾಲಿನಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. 246 ರನ್‌ಗಳೊಂದಿಗೆ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಅತಿ ಹೆಚ್ಚು ಬೌಂಡರಿ ಗಳಿಸಿದವರ ಸಾಲಿನಲ್ಲಿ 33 ಬೌಂಡರಿ ಮೂಲಕ ಮೊದಲ ಸ್ಥಾನದಲ್ಲಿದ್ದಾರೆ. 10ಕ್ಕಿಂತ ಹೆಚ್ಚು ಎಸೆತ ಎದುರಿಸಿ ಅತಿ ಹೆಚ್ಚು ಸ್ಟ್ರೈಕ್‌ರೇಟ್ ಹೊಂದಿರುವವರಲ್ಲಿ ಯಾದವ್ ಮೊದಲ (193.96) ಸ್ಥಾನದಲ್ಲಿದ್ದಾರೆ.

ಇವುಗಳಲ್ಲದೆ ಈ ಪಂದ್ಯದಲ್ಲಿ ಸೂರ್ಯಕುಮಾರ್ ಎರಡು ವಿಶಿಷ್ಠ ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಹೌದು ಜಿಂಬಾಬ್ವೆ ವಿರುದ್ಧ ಅರ್ಧಶತಕ ದಾಖಲಿಸುವ ಮೂಲಕ ಕ್ಯಾಲೆಂಡರ್ ವರ್ಷದಲ್ಲಿ ಸಾವಿರ ಟಿ20 ರನ್ ಬಾರಿಸಿದ ವಿಶ್ವದ ಎರಡನೇ ಬ್ಯಾಟರ್ ಮತ್ತು ಭಾರತದ ಮೊದಲ ಬ್ಯಾಟರ್ ಎಂಬ ಶ್ರೇಯಕ್ಕೆ ಅವರು ಪಾತ್ರರಾಗಿದ್ದಾರೆ. 2022ರಲ್ಲಿ ಸೂರ್ಯಕುಮಾರ್ ಯಾದವ್ ಒಟ್ಟಾರೆ 44.60ರ ಸರಾಸರಿಯಲ್ಲಿ 1026 ರನ್ ಗಳಿಸಿದ್ದಾರೆ.

ಪಾಕಿಸ್ತಾನದ ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಜ್ವಾನ್ ಕಳೆದ ವರ್ಷ 1326 ರನ್ ದಾಖಲಿಸಿದ್ದರು. ಈ ಮೂಲಕ ವಿಶ್ವ ಟಿ20 ಕ್ರಿಕೆಟ್‌ನಲ್ಲಿ ಕ್ಯಾಲೆಂಡರ್ ವರ್ಷದಲ್ಲಿ ಸಾವಿರ ರನ್ ದಾಖಲಿಸಿದ ಮೊದಲ ಬ್ಯಾಟರ್ ಎಂಬ ಶ್ರೇಯಕ್ಕೆ ಪಾತ್ರರಾಗಿದ್ದರು. ಇದೀಗ ಆ ಪಟ್ಟಿಗೆ ಭಾರತದ ಸೂರ್ಯಕುಮಾರ್ ಯಾದವ್ ಸಹ ಸೇರ್ಪಡೆಯಾಗಿದ್ದಾರೆ.

ಈ ಪೈಕಿ ವಿಶೇಷವೆಂದರೆ, ರಿಜ್ವಾನ್ ಸಾವಿರ ರನ್ ಪೂರೈಸಲು 983 ಚೆಂಡುಗಳನ್ನು ಎದುರಿಸಿದ್ದರೆ, ಸೂರ್ಯಕುಮಾರ್ ಯಾದವ್ ಕೇವಲ 550 ಚೆಂಡುಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಅಂದರೆ 186.54ರ ಸ್ಟ್ರೈಕ್‌ರೇಟ್‌ನಲ್ಲಿ ಸೂರ್ಯಕುಮಾರ್ ಯಾದವ್ ಸಾವಿರ ರನ್ ಗಳಿಸಿದ್ದಾರೆ. ಇದೂ ಸಹ ಒಂದು ದಾಖಲೆಯಾಗಿದ್ದು, ವಿಶ್ವ ಚುಟುಕು ಕ್ರಿಕೆಟ್‌ನಲ್ಲಿ ಇಷ್ಟೊಂದು ಉತ್ತಮ ಸ್ಟ್ರೈಕ್‌ರೇಟ್‌ ಹೊಂದಿರುವ ಮೊದಲ ಬ್ಯಾಟರ್ ಎಂಬ ಶ್ರೇಯವೂ ಅವರ ಪಾಲಾಗಿದೆ.

ಇನ್ನು ಜಗತ್ತಿನ ಹಲವು ಕ್ರಿಕೆಟರ್‌ಗಳು ಸೂರ್ಯಕುಮಾರ್ ಯಾದವ್ ಅವರನ್ನು ಪ್ರಶಂಸಿಸಿವೆ. ಕೆಲವರು 360 ಡಿಗ್ರಿ ಬ್ಯಾಟರ್ ಎಂದು ಕರೆದಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಸೂರ್ಯಕುಮಾರ್ ಯಾದವ್, “ಎಬಿಡಿ ವಿಲಿಯರ್ಸ್ ಒಬ್ಬರೆ ಜಗತ್ತಿನ ಏಕೈಕ 360 ಡಿಗ್ರಿ ಆಟಗಾರ. ನಾನು ಅವರಂತೆ ಆಡಲು ಯತ್ನಿಸುತ್ತೇನೆ” ಎಂದಿದ್ದಾರೆ. ಇದಕ್ಕೆ “ಗೆಳೆಯ ನೀನು ಬೇಗ ಆ ಸ್ಥಾನ ಪಡೆಯುತ್ತೀಯ. ಇನ್ನೂ ಎತ್ತರಕ್ಕೆ ಬೆಳೆಯುವೆ. ಇಂದು ಚೆನ್ನಾಗಿ ಆಡಿದೆ” ಎಂದು ಎಬಿಡಿ ವಿಲಿಯರ್ಸ್ ಅಭಿನಂದಿಸಿದ್ದಾರೆ.

ಭಾರತ ತಂಡ ಮುಂದಿನ ಗುರುವಾರ ಇಂಗ್ಲೆಂಡ್ ವಿರುದ್ಧ ಸೆಮಿಫೈನಲ್ ಪಂದ್ಯವಾಡಲಿದ್ದು, ಸೂರ್ಯಕುಮಾರ್ ಯಾದವ್ ಫಾರ್ಮ್ ಭಾರತದ ಪಾಲಿಗೆ ವರದಾನವಾಗಿದೆ. ಕಳೆದ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಶತಕ ದಾಖಲಿಸುವ ಮೂಲಕ ಮಿಂಚಿದ್ದರು. ಹೀಗಾಗಿ ಸೆಮಿಫೈನಲ್ ಪಂದ್ಯದಲ್ಲೂ ಉತ್ತಮ ಪ್ರದರ್ಶನ ನೀಡುತ್ತಾರೆ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

ಇದನ್ನೂ ಓದಿ; ಟಿ20 ವಿಶ್ವಕಪ್: ಬಲಿಷ್ಟ ತಂಡಗಳನ್ನು ಮಣಿಸಿದ ಪುಟ್ಟ ಆದರೆ ದಿಟ್ಟ ತಂಡಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...