Homeಕ್ರೀಡೆಕ್ರಿಕೆಟ್360 ಡಿಗ್ರಿ ಬ್ಯಾಟರ್ ಸೂರ್ಯಕುಮಾರ್ ಯಾದವ್‌: ಟಿ20ಯಲ್ಲಿ ಮತ್ತೆರೆಡು ದಾಖಲೆ

360 ಡಿಗ್ರಿ ಬ್ಯಾಟರ್ ಸೂರ್ಯಕುಮಾರ್ ಯಾದವ್‌: ಟಿ20ಯಲ್ಲಿ ಮತ್ತೆರೆಡು ದಾಖಲೆ

- Advertisement -
- Advertisement -

ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿದಂದಿನಿಂದ ಮಧ್ಯಮ ಕ್ರಮಾಂಕದ ಬ್ಯಾಟರ್ 32 ವರ್ಷದ ಸೂರ್ಯಕುಮಾರ್ ಯಾದವ್ ಒಂದಲ್ಲಾ ಒಂದು ದಾಖಲೆ ಬರೆಯುತ್ತಲೇ ಇದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ನಂಬರ್‌ 1 ಸ್ಥಾನ ಪಡೆದಿರುವ ಅವರು ಭಾನುವಾರ ನಡೆದ ಜಿಂಬಾಬ್ವೆ ಎದುರಿನ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ದಾಖಲಿಸುವ ಮೂಲಕ ಅವರು ಮತ್ತೆರಡು ವಿಶಿಷ್ಟ ದಾಖಲೆ ನಿರ್ಮಿಸಿದ್ದಾರೆ.

ಜಿಂಬಾಬ್ವೆ ಎದುರಿನ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ 25 ಎಸೆತಗಳಲ್ಲಿ ಅಜೇಯ 61 ರನ್ (6 ಬೌಂಡರಿ, 4 ಸಿಕ್ಸರ್) ದಾಖಲಿಸಿದ್ದರು. ಈ ವಿಶ್ವಕಪ್‌ನಲ್ಲಿ ಐದು ಪಂದ್ಯಗಳ ಪೈಕಿ ಸೂರ್ಯಕುಮಾರ್ ಯಾದವ್ ದಾಖಲಿಸುತ್ತಿರುವ ಮೂರನೇ ಅರ್ಧಶತಕ ಇದು. ಸೂರ್ಯಕುಮಾರ್ ಈ ಟೂರ್ನಿಯಲ್ಲಿ 225 ರನ್ ಗಳಿಸುವ ಮೂಲಕ ಅತಿ ಹೆಚ್ಚು ರನ್ ಗಳಿಸಿದವರ ಸಾಲಿನಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. 246 ರನ್‌ಗಳೊಂದಿಗೆ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಅತಿ ಹೆಚ್ಚು ಬೌಂಡರಿ ಗಳಿಸಿದವರ ಸಾಲಿನಲ್ಲಿ 33 ಬೌಂಡರಿ ಮೂಲಕ ಮೊದಲ ಸ್ಥಾನದಲ್ಲಿದ್ದಾರೆ. 10ಕ್ಕಿಂತ ಹೆಚ್ಚು ಎಸೆತ ಎದುರಿಸಿ ಅತಿ ಹೆಚ್ಚು ಸ್ಟ್ರೈಕ್‌ರೇಟ್ ಹೊಂದಿರುವವರಲ್ಲಿ ಯಾದವ್ ಮೊದಲ (193.96) ಸ್ಥಾನದಲ್ಲಿದ್ದಾರೆ.

ಇವುಗಳಲ್ಲದೆ ಈ ಪಂದ್ಯದಲ್ಲಿ ಸೂರ್ಯಕುಮಾರ್ ಎರಡು ವಿಶಿಷ್ಠ ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಹೌದು ಜಿಂಬಾಬ್ವೆ ವಿರುದ್ಧ ಅರ್ಧಶತಕ ದಾಖಲಿಸುವ ಮೂಲಕ ಕ್ಯಾಲೆಂಡರ್ ವರ್ಷದಲ್ಲಿ ಸಾವಿರ ಟಿ20 ರನ್ ಬಾರಿಸಿದ ವಿಶ್ವದ ಎರಡನೇ ಬ್ಯಾಟರ್ ಮತ್ತು ಭಾರತದ ಮೊದಲ ಬ್ಯಾಟರ್ ಎಂಬ ಶ್ರೇಯಕ್ಕೆ ಅವರು ಪಾತ್ರರಾಗಿದ್ದಾರೆ. 2022ರಲ್ಲಿ ಸೂರ್ಯಕುಮಾರ್ ಯಾದವ್ ಒಟ್ಟಾರೆ 44.60ರ ಸರಾಸರಿಯಲ್ಲಿ 1026 ರನ್ ಗಳಿಸಿದ್ದಾರೆ.

ಪಾಕಿಸ್ತಾನದ ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಜ್ವಾನ್ ಕಳೆದ ವರ್ಷ 1326 ರನ್ ದಾಖಲಿಸಿದ್ದರು. ಈ ಮೂಲಕ ವಿಶ್ವ ಟಿ20 ಕ್ರಿಕೆಟ್‌ನಲ್ಲಿ ಕ್ಯಾಲೆಂಡರ್ ವರ್ಷದಲ್ಲಿ ಸಾವಿರ ರನ್ ದಾಖಲಿಸಿದ ಮೊದಲ ಬ್ಯಾಟರ್ ಎಂಬ ಶ್ರೇಯಕ್ಕೆ ಪಾತ್ರರಾಗಿದ್ದರು. ಇದೀಗ ಆ ಪಟ್ಟಿಗೆ ಭಾರತದ ಸೂರ್ಯಕುಮಾರ್ ಯಾದವ್ ಸಹ ಸೇರ್ಪಡೆಯಾಗಿದ್ದಾರೆ.

ಈ ಪೈಕಿ ವಿಶೇಷವೆಂದರೆ, ರಿಜ್ವಾನ್ ಸಾವಿರ ರನ್ ಪೂರೈಸಲು 983 ಚೆಂಡುಗಳನ್ನು ಎದುರಿಸಿದ್ದರೆ, ಸೂರ್ಯಕುಮಾರ್ ಯಾದವ್ ಕೇವಲ 550 ಚೆಂಡುಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಅಂದರೆ 186.54ರ ಸ್ಟ್ರೈಕ್‌ರೇಟ್‌ನಲ್ಲಿ ಸೂರ್ಯಕುಮಾರ್ ಯಾದವ್ ಸಾವಿರ ರನ್ ಗಳಿಸಿದ್ದಾರೆ. ಇದೂ ಸಹ ಒಂದು ದಾಖಲೆಯಾಗಿದ್ದು, ವಿಶ್ವ ಚುಟುಕು ಕ್ರಿಕೆಟ್‌ನಲ್ಲಿ ಇಷ್ಟೊಂದು ಉತ್ತಮ ಸ್ಟ್ರೈಕ್‌ರೇಟ್‌ ಹೊಂದಿರುವ ಮೊದಲ ಬ್ಯಾಟರ್ ಎಂಬ ಶ್ರೇಯವೂ ಅವರ ಪಾಲಾಗಿದೆ.

ಇನ್ನು ಜಗತ್ತಿನ ಹಲವು ಕ್ರಿಕೆಟರ್‌ಗಳು ಸೂರ್ಯಕುಮಾರ್ ಯಾದವ್ ಅವರನ್ನು ಪ್ರಶಂಸಿಸಿವೆ. ಕೆಲವರು 360 ಡಿಗ್ರಿ ಬ್ಯಾಟರ್ ಎಂದು ಕರೆದಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಸೂರ್ಯಕುಮಾರ್ ಯಾದವ್, “ಎಬಿಡಿ ವಿಲಿಯರ್ಸ್ ಒಬ್ಬರೆ ಜಗತ್ತಿನ ಏಕೈಕ 360 ಡಿಗ್ರಿ ಆಟಗಾರ. ನಾನು ಅವರಂತೆ ಆಡಲು ಯತ್ನಿಸುತ್ತೇನೆ” ಎಂದಿದ್ದಾರೆ. ಇದಕ್ಕೆ “ಗೆಳೆಯ ನೀನು ಬೇಗ ಆ ಸ್ಥಾನ ಪಡೆಯುತ್ತೀಯ. ಇನ್ನೂ ಎತ್ತರಕ್ಕೆ ಬೆಳೆಯುವೆ. ಇಂದು ಚೆನ್ನಾಗಿ ಆಡಿದೆ” ಎಂದು ಎಬಿಡಿ ವಿಲಿಯರ್ಸ್ ಅಭಿನಂದಿಸಿದ್ದಾರೆ.

ಭಾರತ ತಂಡ ಮುಂದಿನ ಗುರುವಾರ ಇಂಗ್ಲೆಂಡ್ ವಿರುದ್ಧ ಸೆಮಿಫೈನಲ್ ಪಂದ್ಯವಾಡಲಿದ್ದು, ಸೂರ್ಯಕುಮಾರ್ ಯಾದವ್ ಫಾರ್ಮ್ ಭಾರತದ ಪಾಲಿಗೆ ವರದಾನವಾಗಿದೆ. ಕಳೆದ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಶತಕ ದಾಖಲಿಸುವ ಮೂಲಕ ಮಿಂಚಿದ್ದರು. ಹೀಗಾಗಿ ಸೆಮಿಫೈನಲ್ ಪಂದ್ಯದಲ್ಲೂ ಉತ್ತಮ ಪ್ರದರ್ಶನ ನೀಡುತ್ತಾರೆ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

ಇದನ್ನೂ ಓದಿ; ಟಿ20 ವಿಶ್ವಕಪ್: ಬಲಿಷ್ಟ ತಂಡಗಳನ್ನು ಮಣಿಸಿದ ಪುಟ್ಟ ಆದರೆ ದಿಟ್ಟ ತಂಡಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...