Homeಕ್ರೀಡೆಕ್ರಿಕೆಟ್360 ಡಿಗ್ರಿ ಬ್ಯಾಟರ್ ಸೂರ್ಯಕುಮಾರ್ ಯಾದವ್‌: ಟಿ20ಯಲ್ಲಿ ಮತ್ತೆರೆಡು ದಾಖಲೆ

360 ಡಿಗ್ರಿ ಬ್ಯಾಟರ್ ಸೂರ್ಯಕುಮಾರ್ ಯಾದವ್‌: ಟಿ20ಯಲ್ಲಿ ಮತ್ತೆರೆಡು ದಾಖಲೆ

- Advertisement -
- Advertisement -

ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿದಂದಿನಿಂದ ಮಧ್ಯಮ ಕ್ರಮಾಂಕದ ಬ್ಯಾಟರ್ 32 ವರ್ಷದ ಸೂರ್ಯಕುಮಾರ್ ಯಾದವ್ ಒಂದಲ್ಲಾ ಒಂದು ದಾಖಲೆ ಬರೆಯುತ್ತಲೇ ಇದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ನಂಬರ್‌ 1 ಸ್ಥಾನ ಪಡೆದಿರುವ ಅವರು ಭಾನುವಾರ ನಡೆದ ಜಿಂಬಾಬ್ವೆ ಎದುರಿನ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ದಾಖಲಿಸುವ ಮೂಲಕ ಅವರು ಮತ್ತೆರಡು ವಿಶಿಷ್ಟ ದಾಖಲೆ ನಿರ್ಮಿಸಿದ್ದಾರೆ.

ಜಿಂಬಾಬ್ವೆ ಎದುರಿನ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ 25 ಎಸೆತಗಳಲ್ಲಿ ಅಜೇಯ 61 ರನ್ (6 ಬೌಂಡರಿ, 4 ಸಿಕ್ಸರ್) ದಾಖಲಿಸಿದ್ದರು. ಈ ವಿಶ್ವಕಪ್‌ನಲ್ಲಿ ಐದು ಪಂದ್ಯಗಳ ಪೈಕಿ ಸೂರ್ಯಕುಮಾರ್ ಯಾದವ್ ದಾಖಲಿಸುತ್ತಿರುವ ಮೂರನೇ ಅರ್ಧಶತಕ ಇದು. ಸೂರ್ಯಕುಮಾರ್ ಈ ಟೂರ್ನಿಯಲ್ಲಿ 225 ರನ್ ಗಳಿಸುವ ಮೂಲಕ ಅತಿ ಹೆಚ್ಚು ರನ್ ಗಳಿಸಿದವರ ಸಾಲಿನಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. 246 ರನ್‌ಗಳೊಂದಿಗೆ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಅತಿ ಹೆಚ್ಚು ಬೌಂಡರಿ ಗಳಿಸಿದವರ ಸಾಲಿನಲ್ಲಿ 33 ಬೌಂಡರಿ ಮೂಲಕ ಮೊದಲ ಸ್ಥಾನದಲ್ಲಿದ್ದಾರೆ. 10ಕ್ಕಿಂತ ಹೆಚ್ಚು ಎಸೆತ ಎದುರಿಸಿ ಅತಿ ಹೆಚ್ಚು ಸ್ಟ್ರೈಕ್‌ರೇಟ್ ಹೊಂದಿರುವವರಲ್ಲಿ ಯಾದವ್ ಮೊದಲ (193.96) ಸ್ಥಾನದಲ್ಲಿದ್ದಾರೆ.

ಇವುಗಳಲ್ಲದೆ ಈ ಪಂದ್ಯದಲ್ಲಿ ಸೂರ್ಯಕುಮಾರ್ ಎರಡು ವಿಶಿಷ್ಠ ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಹೌದು ಜಿಂಬಾಬ್ವೆ ವಿರುದ್ಧ ಅರ್ಧಶತಕ ದಾಖಲಿಸುವ ಮೂಲಕ ಕ್ಯಾಲೆಂಡರ್ ವರ್ಷದಲ್ಲಿ ಸಾವಿರ ಟಿ20 ರನ್ ಬಾರಿಸಿದ ವಿಶ್ವದ ಎರಡನೇ ಬ್ಯಾಟರ್ ಮತ್ತು ಭಾರತದ ಮೊದಲ ಬ್ಯಾಟರ್ ಎಂಬ ಶ್ರೇಯಕ್ಕೆ ಅವರು ಪಾತ್ರರಾಗಿದ್ದಾರೆ. 2022ರಲ್ಲಿ ಸೂರ್ಯಕುಮಾರ್ ಯಾದವ್ ಒಟ್ಟಾರೆ 44.60ರ ಸರಾಸರಿಯಲ್ಲಿ 1026 ರನ್ ಗಳಿಸಿದ್ದಾರೆ.

ಪಾಕಿಸ್ತಾನದ ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಜ್ವಾನ್ ಕಳೆದ ವರ್ಷ 1326 ರನ್ ದಾಖಲಿಸಿದ್ದರು. ಈ ಮೂಲಕ ವಿಶ್ವ ಟಿ20 ಕ್ರಿಕೆಟ್‌ನಲ್ಲಿ ಕ್ಯಾಲೆಂಡರ್ ವರ್ಷದಲ್ಲಿ ಸಾವಿರ ರನ್ ದಾಖಲಿಸಿದ ಮೊದಲ ಬ್ಯಾಟರ್ ಎಂಬ ಶ್ರೇಯಕ್ಕೆ ಪಾತ್ರರಾಗಿದ್ದರು. ಇದೀಗ ಆ ಪಟ್ಟಿಗೆ ಭಾರತದ ಸೂರ್ಯಕುಮಾರ್ ಯಾದವ್ ಸಹ ಸೇರ್ಪಡೆಯಾಗಿದ್ದಾರೆ.

ಈ ಪೈಕಿ ವಿಶೇಷವೆಂದರೆ, ರಿಜ್ವಾನ್ ಸಾವಿರ ರನ್ ಪೂರೈಸಲು 983 ಚೆಂಡುಗಳನ್ನು ಎದುರಿಸಿದ್ದರೆ, ಸೂರ್ಯಕುಮಾರ್ ಯಾದವ್ ಕೇವಲ 550 ಚೆಂಡುಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಅಂದರೆ 186.54ರ ಸ್ಟ್ರೈಕ್‌ರೇಟ್‌ನಲ್ಲಿ ಸೂರ್ಯಕುಮಾರ್ ಯಾದವ್ ಸಾವಿರ ರನ್ ಗಳಿಸಿದ್ದಾರೆ. ಇದೂ ಸಹ ಒಂದು ದಾಖಲೆಯಾಗಿದ್ದು, ವಿಶ್ವ ಚುಟುಕು ಕ್ರಿಕೆಟ್‌ನಲ್ಲಿ ಇಷ್ಟೊಂದು ಉತ್ತಮ ಸ್ಟ್ರೈಕ್‌ರೇಟ್‌ ಹೊಂದಿರುವ ಮೊದಲ ಬ್ಯಾಟರ್ ಎಂಬ ಶ್ರೇಯವೂ ಅವರ ಪಾಲಾಗಿದೆ.

ಇನ್ನು ಜಗತ್ತಿನ ಹಲವು ಕ್ರಿಕೆಟರ್‌ಗಳು ಸೂರ್ಯಕುಮಾರ್ ಯಾದವ್ ಅವರನ್ನು ಪ್ರಶಂಸಿಸಿವೆ. ಕೆಲವರು 360 ಡಿಗ್ರಿ ಬ್ಯಾಟರ್ ಎಂದು ಕರೆದಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಸೂರ್ಯಕುಮಾರ್ ಯಾದವ್, “ಎಬಿಡಿ ವಿಲಿಯರ್ಸ್ ಒಬ್ಬರೆ ಜಗತ್ತಿನ ಏಕೈಕ 360 ಡಿಗ್ರಿ ಆಟಗಾರ. ನಾನು ಅವರಂತೆ ಆಡಲು ಯತ್ನಿಸುತ್ತೇನೆ” ಎಂದಿದ್ದಾರೆ. ಇದಕ್ಕೆ “ಗೆಳೆಯ ನೀನು ಬೇಗ ಆ ಸ್ಥಾನ ಪಡೆಯುತ್ತೀಯ. ಇನ್ನೂ ಎತ್ತರಕ್ಕೆ ಬೆಳೆಯುವೆ. ಇಂದು ಚೆನ್ನಾಗಿ ಆಡಿದೆ” ಎಂದು ಎಬಿಡಿ ವಿಲಿಯರ್ಸ್ ಅಭಿನಂದಿಸಿದ್ದಾರೆ.

ಭಾರತ ತಂಡ ಮುಂದಿನ ಗುರುವಾರ ಇಂಗ್ಲೆಂಡ್ ವಿರುದ್ಧ ಸೆಮಿಫೈನಲ್ ಪಂದ್ಯವಾಡಲಿದ್ದು, ಸೂರ್ಯಕುಮಾರ್ ಯಾದವ್ ಫಾರ್ಮ್ ಭಾರತದ ಪಾಲಿಗೆ ವರದಾನವಾಗಿದೆ. ಕಳೆದ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಶತಕ ದಾಖಲಿಸುವ ಮೂಲಕ ಮಿಂಚಿದ್ದರು. ಹೀಗಾಗಿ ಸೆಮಿಫೈನಲ್ ಪಂದ್ಯದಲ್ಲೂ ಉತ್ತಮ ಪ್ರದರ್ಶನ ನೀಡುತ್ತಾರೆ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

ಇದನ್ನೂ ಓದಿ; ಟಿ20 ವಿಶ್ವಕಪ್: ಬಲಿಷ್ಟ ತಂಡಗಳನ್ನು ಮಣಿಸಿದ ಪುಟ್ಟ ಆದರೆ ದಿಟ್ಟ ತಂಡಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....