Homeಕ್ರೀಡೆಕ್ರಿಕೆಟ್360 ಡಿಗ್ರಿ ಬ್ಯಾಟರ್ ಸೂರ್ಯಕುಮಾರ್ ಯಾದವ್‌: ಟಿ20ಯಲ್ಲಿ ಮತ್ತೆರೆಡು ದಾಖಲೆ

360 ಡಿಗ್ರಿ ಬ್ಯಾಟರ್ ಸೂರ್ಯಕುಮಾರ್ ಯಾದವ್‌: ಟಿ20ಯಲ್ಲಿ ಮತ್ತೆರೆಡು ದಾಖಲೆ

- Advertisement -
- Advertisement -

ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿದಂದಿನಿಂದ ಮಧ್ಯಮ ಕ್ರಮಾಂಕದ ಬ್ಯಾಟರ್ 32 ವರ್ಷದ ಸೂರ್ಯಕುಮಾರ್ ಯಾದವ್ ಒಂದಲ್ಲಾ ಒಂದು ದಾಖಲೆ ಬರೆಯುತ್ತಲೇ ಇದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ನಂಬರ್‌ 1 ಸ್ಥಾನ ಪಡೆದಿರುವ ಅವರು ಭಾನುವಾರ ನಡೆದ ಜಿಂಬಾಬ್ವೆ ಎದುರಿನ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ದಾಖಲಿಸುವ ಮೂಲಕ ಅವರು ಮತ್ತೆರಡು ವಿಶಿಷ್ಟ ದಾಖಲೆ ನಿರ್ಮಿಸಿದ್ದಾರೆ.

ಜಿಂಬಾಬ್ವೆ ಎದುರಿನ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ 25 ಎಸೆತಗಳಲ್ಲಿ ಅಜೇಯ 61 ರನ್ (6 ಬೌಂಡರಿ, 4 ಸಿಕ್ಸರ್) ದಾಖಲಿಸಿದ್ದರು. ಈ ವಿಶ್ವಕಪ್‌ನಲ್ಲಿ ಐದು ಪಂದ್ಯಗಳ ಪೈಕಿ ಸೂರ್ಯಕುಮಾರ್ ಯಾದವ್ ದಾಖಲಿಸುತ್ತಿರುವ ಮೂರನೇ ಅರ್ಧಶತಕ ಇದು. ಸೂರ್ಯಕುಮಾರ್ ಈ ಟೂರ್ನಿಯಲ್ಲಿ 225 ರನ್ ಗಳಿಸುವ ಮೂಲಕ ಅತಿ ಹೆಚ್ಚು ರನ್ ಗಳಿಸಿದವರ ಸಾಲಿನಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. 246 ರನ್‌ಗಳೊಂದಿಗೆ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಅತಿ ಹೆಚ್ಚು ಬೌಂಡರಿ ಗಳಿಸಿದವರ ಸಾಲಿನಲ್ಲಿ 33 ಬೌಂಡರಿ ಮೂಲಕ ಮೊದಲ ಸ್ಥಾನದಲ್ಲಿದ್ದಾರೆ. 10ಕ್ಕಿಂತ ಹೆಚ್ಚು ಎಸೆತ ಎದುರಿಸಿ ಅತಿ ಹೆಚ್ಚು ಸ್ಟ್ರೈಕ್‌ರೇಟ್ ಹೊಂದಿರುವವರಲ್ಲಿ ಯಾದವ್ ಮೊದಲ (193.96) ಸ್ಥಾನದಲ್ಲಿದ್ದಾರೆ.

ಇವುಗಳಲ್ಲದೆ ಈ ಪಂದ್ಯದಲ್ಲಿ ಸೂರ್ಯಕುಮಾರ್ ಎರಡು ವಿಶಿಷ್ಠ ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಹೌದು ಜಿಂಬಾಬ್ವೆ ವಿರುದ್ಧ ಅರ್ಧಶತಕ ದಾಖಲಿಸುವ ಮೂಲಕ ಕ್ಯಾಲೆಂಡರ್ ವರ್ಷದಲ್ಲಿ ಸಾವಿರ ಟಿ20 ರನ್ ಬಾರಿಸಿದ ವಿಶ್ವದ ಎರಡನೇ ಬ್ಯಾಟರ್ ಮತ್ತು ಭಾರತದ ಮೊದಲ ಬ್ಯಾಟರ್ ಎಂಬ ಶ್ರೇಯಕ್ಕೆ ಅವರು ಪಾತ್ರರಾಗಿದ್ದಾರೆ. 2022ರಲ್ಲಿ ಸೂರ್ಯಕುಮಾರ್ ಯಾದವ್ ಒಟ್ಟಾರೆ 44.60ರ ಸರಾಸರಿಯಲ್ಲಿ 1026 ರನ್ ಗಳಿಸಿದ್ದಾರೆ.

ಪಾಕಿಸ್ತಾನದ ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಜ್ವಾನ್ ಕಳೆದ ವರ್ಷ 1326 ರನ್ ದಾಖಲಿಸಿದ್ದರು. ಈ ಮೂಲಕ ವಿಶ್ವ ಟಿ20 ಕ್ರಿಕೆಟ್‌ನಲ್ಲಿ ಕ್ಯಾಲೆಂಡರ್ ವರ್ಷದಲ್ಲಿ ಸಾವಿರ ರನ್ ದಾಖಲಿಸಿದ ಮೊದಲ ಬ್ಯಾಟರ್ ಎಂಬ ಶ್ರೇಯಕ್ಕೆ ಪಾತ್ರರಾಗಿದ್ದರು. ಇದೀಗ ಆ ಪಟ್ಟಿಗೆ ಭಾರತದ ಸೂರ್ಯಕುಮಾರ್ ಯಾದವ್ ಸಹ ಸೇರ್ಪಡೆಯಾಗಿದ್ದಾರೆ.

ಈ ಪೈಕಿ ವಿಶೇಷವೆಂದರೆ, ರಿಜ್ವಾನ್ ಸಾವಿರ ರನ್ ಪೂರೈಸಲು 983 ಚೆಂಡುಗಳನ್ನು ಎದುರಿಸಿದ್ದರೆ, ಸೂರ್ಯಕುಮಾರ್ ಯಾದವ್ ಕೇವಲ 550 ಚೆಂಡುಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಅಂದರೆ 186.54ರ ಸ್ಟ್ರೈಕ್‌ರೇಟ್‌ನಲ್ಲಿ ಸೂರ್ಯಕುಮಾರ್ ಯಾದವ್ ಸಾವಿರ ರನ್ ಗಳಿಸಿದ್ದಾರೆ. ಇದೂ ಸಹ ಒಂದು ದಾಖಲೆಯಾಗಿದ್ದು, ವಿಶ್ವ ಚುಟುಕು ಕ್ರಿಕೆಟ್‌ನಲ್ಲಿ ಇಷ್ಟೊಂದು ಉತ್ತಮ ಸ್ಟ್ರೈಕ್‌ರೇಟ್‌ ಹೊಂದಿರುವ ಮೊದಲ ಬ್ಯಾಟರ್ ಎಂಬ ಶ್ರೇಯವೂ ಅವರ ಪಾಲಾಗಿದೆ.

ಇನ್ನು ಜಗತ್ತಿನ ಹಲವು ಕ್ರಿಕೆಟರ್‌ಗಳು ಸೂರ್ಯಕುಮಾರ್ ಯಾದವ್ ಅವರನ್ನು ಪ್ರಶಂಸಿಸಿವೆ. ಕೆಲವರು 360 ಡಿಗ್ರಿ ಬ್ಯಾಟರ್ ಎಂದು ಕರೆದಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಸೂರ್ಯಕುಮಾರ್ ಯಾದವ್, “ಎಬಿಡಿ ವಿಲಿಯರ್ಸ್ ಒಬ್ಬರೆ ಜಗತ್ತಿನ ಏಕೈಕ 360 ಡಿಗ್ರಿ ಆಟಗಾರ. ನಾನು ಅವರಂತೆ ಆಡಲು ಯತ್ನಿಸುತ್ತೇನೆ” ಎಂದಿದ್ದಾರೆ. ಇದಕ್ಕೆ “ಗೆಳೆಯ ನೀನು ಬೇಗ ಆ ಸ್ಥಾನ ಪಡೆಯುತ್ತೀಯ. ಇನ್ನೂ ಎತ್ತರಕ್ಕೆ ಬೆಳೆಯುವೆ. ಇಂದು ಚೆನ್ನಾಗಿ ಆಡಿದೆ” ಎಂದು ಎಬಿಡಿ ವಿಲಿಯರ್ಸ್ ಅಭಿನಂದಿಸಿದ್ದಾರೆ.

ಭಾರತ ತಂಡ ಮುಂದಿನ ಗುರುವಾರ ಇಂಗ್ಲೆಂಡ್ ವಿರುದ್ಧ ಸೆಮಿಫೈನಲ್ ಪಂದ್ಯವಾಡಲಿದ್ದು, ಸೂರ್ಯಕುಮಾರ್ ಯಾದವ್ ಫಾರ್ಮ್ ಭಾರತದ ಪಾಲಿಗೆ ವರದಾನವಾಗಿದೆ. ಕಳೆದ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಶತಕ ದಾಖಲಿಸುವ ಮೂಲಕ ಮಿಂಚಿದ್ದರು. ಹೀಗಾಗಿ ಸೆಮಿಫೈನಲ್ ಪಂದ್ಯದಲ್ಲೂ ಉತ್ತಮ ಪ್ರದರ್ಶನ ನೀಡುತ್ತಾರೆ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

ಇದನ್ನೂ ಓದಿ; ಟಿ20 ವಿಶ್ವಕಪ್: ಬಲಿಷ್ಟ ತಂಡಗಳನ್ನು ಮಣಿಸಿದ ಪುಟ್ಟ ಆದರೆ ದಿಟ್ಟ ತಂಡಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...