Homeಕ್ರೀಡೆಕ್ರಿಕೆಟ್360 ಡಿಗ್ರಿ ಬ್ಯಾಟರ್ ಸೂರ್ಯಕುಮಾರ್ ಯಾದವ್‌: ಟಿ20ಯಲ್ಲಿ ಮತ್ತೆರೆಡು ದಾಖಲೆ

360 ಡಿಗ್ರಿ ಬ್ಯಾಟರ್ ಸೂರ್ಯಕುಮಾರ್ ಯಾದವ್‌: ಟಿ20ಯಲ್ಲಿ ಮತ್ತೆರೆಡು ದಾಖಲೆ

- Advertisement -
- Advertisement -

ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿದಂದಿನಿಂದ ಮಧ್ಯಮ ಕ್ರಮಾಂಕದ ಬ್ಯಾಟರ್ 32 ವರ್ಷದ ಸೂರ್ಯಕುಮಾರ್ ಯಾದವ್ ಒಂದಲ್ಲಾ ಒಂದು ದಾಖಲೆ ಬರೆಯುತ್ತಲೇ ಇದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ನಂಬರ್‌ 1 ಸ್ಥಾನ ಪಡೆದಿರುವ ಅವರು ಭಾನುವಾರ ನಡೆದ ಜಿಂಬಾಬ್ವೆ ಎದುರಿನ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ದಾಖಲಿಸುವ ಮೂಲಕ ಅವರು ಮತ್ತೆರಡು ವಿಶಿಷ್ಟ ದಾಖಲೆ ನಿರ್ಮಿಸಿದ್ದಾರೆ.

ಜಿಂಬಾಬ್ವೆ ಎದುರಿನ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ 25 ಎಸೆತಗಳಲ್ಲಿ ಅಜೇಯ 61 ರನ್ (6 ಬೌಂಡರಿ, 4 ಸಿಕ್ಸರ್) ದಾಖಲಿಸಿದ್ದರು. ಈ ವಿಶ್ವಕಪ್‌ನಲ್ಲಿ ಐದು ಪಂದ್ಯಗಳ ಪೈಕಿ ಸೂರ್ಯಕುಮಾರ್ ಯಾದವ್ ದಾಖಲಿಸುತ್ತಿರುವ ಮೂರನೇ ಅರ್ಧಶತಕ ಇದು. ಸೂರ್ಯಕುಮಾರ್ ಈ ಟೂರ್ನಿಯಲ್ಲಿ 225 ರನ್ ಗಳಿಸುವ ಮೂಲಕ ಅತಿ ಹೆಚ್ಚು ರನ್ ಗಳಿಸಿದವರ ಸಾಲಿನಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. 246 ರನ್‌ಗಳೊಂದಿಗೆ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಅತಿ ಹೆಚ್ಚು ಬೌಂಡರಿ ಗಳಿಸಿದವರ ಸಾಲಿನಲ್ಲಿ 33 ಬೌಂಡರಿ ಮೂಲಕ ಮೊದಲ ಸ್ಥಾನದಲ್ಲಿದ್ದಾರೆ. 10ಕ್ಕಿಂತ ಹೆಚ್ಚು ಎಸೆತ ಎದುರಿಸಿ ಅತಿ ಹೆಚ್ಚು ಸ್ಟ್ರೈಕ್‌ರೇಟ್ ಹೊಂದಿರುವವರಲ್ಲಿ ಯಾದವ್ ಮೊದಲ (193.96) ಸ್ಥಾನದಲ್ಲಿದ್ದಾರೆ.

ಇವುಗಳಲ್ಲದೆ ಈ ಪಂದ್ಯದಲ್ಲಿ ಸೂರ್ಯಕುಮಾರ್ ಎರಡು ವಿಶಿಷ್ಠ ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಹೌದು ಜಿಂಬಾಬ್ವೆ ವಿರುದ್ಧ ಅರ್ಧಶತಕ ದಾಖಲಿಸುವ ಮೂಲಕ ಕ್ಯಾಲೆಂಡರ್ ವರ್ಷದಲ್ಲಿ ಸಾವಿರ ಟಿ20 ರನ್ ಬಾರಿಸಿದ ವಿಶ್ವದ ಎರಡನೇ ಬ್ಯಾಟರ್ ಮತ್ತು ಭಾರತದ ಮೊದಲ ಬ್ಯಾಟರ್ ಎಂಬ ಶ್ರೇಯಕ್ಕೆ ಅವರು ಪಾತ್ರರಾಗಿದ್ದಾರೆ. 2022ರಲ್ಲಿ ಸೂರ್ಯಕುಮಾರ್ ಯಾದವ್ ಒಟ್ಟಾರೆ 44.60ರ ಸರಾಸರಿಯಲ್ಲಿ 1026 ರನ್ ಗಳಿಸಿದ್ದಾರೆ.

ಪಾಕಿಸ್ತಾನದ ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಜ್ವಾನ್ ಕಳೆದ ವರ್ಷ 1326 ರನ್ ದಾಖಲಿಸಿದ್ದರು. ಈ ಮೂಲಕ ವಿಶ್ವ ಟಿ20 ಕ್ರಿಕೆಟ್‌ನಲ್ಲಿ ಕ್ಯಾಲೆಂಡರ್ ವರ್ಷದಲ್ಲಿ ಸಾವಿರ ರನ್ ದಾಖಲಿಸಿದ ಮೊದಲ ಬ್ಯಾಟರ್ ಎಂಬ ಶ್ರೇಯಕ್ಕೆ ಪಾತ್ರರಾಗಿದ್ದರು. ಇದೀಗ ಆ ಪಟ್ಟಿಗೆ ಭಾರತದ ಸೂರ್ಯಕುಮಾರ್ ಯಾದವ್ ಸಹ ಸೇರ್ಪಡೆಯಾಗಿದ್ದಾರೆ.

ಈ ಪೈಕಿ ವಿಶೇಷವೆಂದರೆ, ರಿಜ್ವಾನ್ ಸಾವಿರ ರನ್ ಪೂರೈಸಲು 983 ಚೆಂಡುಗಳನ್ನು ಎದುರಿಸಿದ್ದರೆ, ಸೂರ್ಯಕುಮಾರ್ ಯಾದವ್ ಕೇವಲ 550 ಚೆಂಡುಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಅಂದರೆ 186.54ರ ಸ್ಟ್ರೈಕ್‌ರೇಟ್‌ನಲ್ಲಿ ಸೂರ್ಯಕುಮಾರ್ ಯಾದವ್ ಸಾವಿರ ರನ್ ಗಳಿಸಿದ್ದಾರೆ. ಇದೂ ಸಹ ಒಂದು ದಾಖಲೆಯಾಗಿದ್ದು, ವಿಶ್ವ ಚುಟುಕು ಕ್ರಿಕೆಟ್‌ನಲ್ಲಿ ಇಷ್ಟೊಂದು ಉತ್ತಮ ಸ್ಟ್ರೈಕ್‌ರೇಟ್‌ ಹೊಂದಿರುವ ಮೊದಲ ಬ್ಯಾಟರ್ ಎಂಬ ಶ್ರೇಯವೂ ಅವರ ಪಾಲಾಗಿದೆ.

ಇನ್ನು ಜಗತ್ತಿನ ಹಲವು ಕ್ರಿಕೆಟರ್‌ಗಳು ಸೂರ್ಯಕುಮಾರ್ ಯಾದವ್ ಅವರನ್ನು ಪ್ರಶಂಸಿಸಿವೆ. ಕೆಲವರು 360 ಡಿಗ್ರಿ ಬ್ಯಾಟರ್ ಎಂದು ಕರೆದಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಸೂರ್ಯಕುಮಾರ್ ಯಾದವ್, “ಎಬಿಡಿ ವಿಲಿಯರ್ಸ್ ಒಬ್ಬರೆ ಜಗತ್ತಿನ ಏಕೈಕ 360 ಡಿಗ್ರಿ ಆಟಗಾರ. ನಾನು ಅವರಂತೆ ಆಡಲು ಯತ್ನಿಸುತ್ತೇನೆ” ಎಂದಿದ್ದಾರೆ. ಇದಕ್ಕೆ “ಗೆಳೆಯ ನೀನು ಬೇಗ ಆ ಸ್ಥಾನ ಪಡೆಯುತ್ತೀಯ. ಇನ್ನೂ ಎತ್ತರಕ್ಕೆ ಬೆಳೆಯುವೆ. ಇಂದು ಚೆನ್ನಾಗಿ ಆಡಿದೆ” ಎಂದು ಎಬಿಡಿ ವಿಲಿಯರ್ಸ್ ಅಭಿನಂದಿಸಿದ್ದಾರೆ.

ಭಾರತ ತಂಡ ಮುಂದಿನ ಗುರುವಾರ ಇಂಗ್ಲೆಂಡ್ ವಿರುದ್ಧ ಸೆಮಿಫೈನಲ್ ಪಂದ್ಯವಾಡಲಿದ್ದು, ಸೂರ್ಯಕುಮಾರ್ ಯಾದವ್ ಫಾರ್ಮ್ ಭಾರತದ ಪಾಲಿಗೆ ವರದಾನವಾಗಿದೆ. ಕಳೆದ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಶತಕ ದಾಖಲಿಸುವ ಮೂಲಕ ಮಿಂಚಿದ್ದರು. ಹೀಗಾಗಿ ಸೆಮಿಫೈನಲ್ ಪಂದ್ಯದಲ್ಲೂ ಉತ್ತಮ ಪ್ರದರ್ಶನ ನೀಡುತ್ತಾರೆ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

ಇದನ್ನೂ ಓದಿ; ಟಿ20 ವಿಶ್ವಕಪ್: ಬಲಿಷ್ಟ ತಂಡಗಳನ್ನು ಮಣಿಸಿದ ಪುಟ್ಟ ಆದರೆ ದಿಟ್ಟ ತಂಡಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...