Homeಮುಖಪುಟಭೋಪಾಲ್ ಅನಿಲ ದುರಂತಕ್ಕೆ 37 ವರ್ಷಗಳು; ಸಂತ್ರಸ್ತರ ಹೋರಾಟ ಮುಂದುವರೆದಿದೆ...

ಭೋಪಾಲ್ ಅನಿಲ ದುರಂತಕ್ಕೆ 37 ವರ್ಷಗಳು; ಸಂತ್ರಸ್ತರ ಹೋರಾಟ ಮುಂದುವರೆದಿದೆ…

- Advertisement -
- Advertisement -

ಭೋಪಾಲ್‌‌ ಅನಿಲ ದುರಂತ ನಡೆದು ಇಂದಿಗೆ 37 ವರ್ಷಗಳು ತುಂಬಿದೆ. ಸರ್ಕಾರವೇ ಒಪ್ಪಿಕೊಂಡಿರುವ ಹಾಗೆ ದುರಂತದಲ್ಲಿ ಮರಣ ಹೊಂದಿದವರು 3 ಸಾವಿರ ಜನರು. ಆದರೆ, ಅನಿಲ ದುರಂತ ಸಂತ್ರಸ್ತರ ಪ್ರಕಾರ ಅನಿಲ ಸೋರಿಕೆಯಿಂದ ಮೃತಪಟ್ಟವರು ಬರೋಬ್ಬರಿ 25 ಸಾವಿಕ್ಕೂ ಹೆಚ್ಚು. ಇದರಿಂದಾಗಿ ಗಾಯಗೊಂಡವರು ಮತ್ತು ವಿಕಲಚೇತನರಾದವರು 5.5 ಲಕ್ಷ ಜನರು. ವಿಶ್ವದ ಅತ್ಯಂತ ಭೀಕರ ಕೈಗಾರಿಕಾ ದುರಂತದಿಂದ ಬದುಕುಳಿದ ಜನರು ಈಗಲೂ ತಮ್ಮ ವೈದ್ಯಕೀಯ ಆರೈಕೆ ಮತ್ತು ಪರಿಹಾರವನ್ನು ಪಡೆಯಲು ಹೋರಾಟ ನಡೆಸುತ್ತಲೇ ಇದ್ದಾರೆ.

1984 ರ ಡಿಸೆಂಬರ್ 2-3 ರ ಮಧ್ಯರಾತ್ರಿಯಲ್ಲಿ ಯೂನಿಯನ್ ಕಾರ್ಬೈಡ್ ಇಂಡಿಯಾ ಲಿಮಿಟೆಡ್ (UCIL) ಕೀಟನಾಶಕ ಕಾರ್ಖಾನೆಯಿಂದ ಸೋರಿಕೆಯಾದ ವಿಷಕಾರಿ ಅನಿಲಗಳು ಲಕ್ಷಾಂತರ ಜನರ ಬದುಕನ್ನೇ ನಾಶ ಮಾಡಿದೆ. ಆಶ್ಚರ್ಯ ಮತ್ತು ದುರಂತವೇನೆಂದರೆ ಈ ದುರಂತದ ಪ್ರಧಾನ ಆರೋಪಿ ವಾರೆನ್ ಆಂಡರ್ಸನ್‌ಗೆ ಶಿಕ್ಷೆ ಆಗಲೇ ಇಲ್ಲ. ಆತ ಘಟನೆ ನಡೆದ ನಂತರ ಭಾರತದಿಂದ ಪರಾರಿಯಾಗಿ ಅಮೆರಿಕಾದಲ್ಲಿ ತುಂಬು ಜೀವನ ನಡೆಸಿ ತನ್ನ 92 ನೇ ವರ್ಷದಲ್ಲಿ ಮರಣ ಹೊಂದಿದ. ಇತರ ಅಪರಾಧಿಗಳಿಗೆ ಕೇವಲ 2 ವರ್ಷಗಳ ಸಜೆ ಸಿಕ್ಕಿದೆ. ಉಳಿದಂತೆ ತಮ್ಮ ಬದುಕನ್ನೇ ಕಳೆದುಕೊಂಡ ಸಂತ್ರಸ್ಥರಿಗೆ ಸಿಕ್ಕ ಪರಿಹಾರ ಕೇವಲ 15 ಸಾವಿರ ರೂಪಾಯಿಗಳು ಮಾತ್ರ. ಅದು ಕೂಡಾ ಘಟನೆ ನಡೆದು 26 ವರ್ಷಗಳ ನಂತರ. ಅಂದರೆ ಸಿಕ್ಕ ಪರಿಹಾರದ ಲೆಕ್ಕ ದಿನಕ್ಕೆ ಪ್ರತಿಯೊಬ್ಬರಿಗೆ ಕೇವಲ ಒಂದುವರೆ ರುಪಾಯಿ!

ಇದನ್ನೂ ಓದಿ:ಶ್ರದ್ಧಾಂಜಲಿ: ಭೋಪಾಲ್ ಅನಿಲ ದುರಂತದ ಸಂತ್ರಸ್ತರ ದನಿ ಹಮೀದಾ ಬೀ

ದುರಂತದಲ್ಲಿ ತನ್ನ ಪತಿ ಮತ್ತು ಮಗಳು ಸೇರಿದಂತೆ ತನ್ನ ಕುಟುಂಬದ ಮೂವರು ಸದಸ್ಯರನ್ನು ಕಳೆದುಕೊಂಡ 64 ವರ್ಷದ ಅನಿಲ ಸಂತ್ರಸ್ತ ಮಹಿಳೆ ರಯೀಸಾ ಬಿ ಹೇಳುವಂತೆ, “ಆಹಾರ ಧಾನ್ಯಗಳು ಮತ್ತು ವೈದ್ಯಕೀಯ ಆರೈಕೆ, ಪರಿಹಾರ ಮತ್ತು ವಿಧವಾ ಪಿಂಚಣಿ ಇವೆಲ್ಲವೂ ನಮ್ಮ ಸುದೀರ್ಘ ಪ್ರತಿಭಟನೆಗಳು, ಮನವಿ ಪತ್ರಗಳನ್ನು ಸಲ್ಲಿಸಿದ ನಂತರವೇ ಬಂದಿವೆ. ಸರ್ಕಾರಿ ಇಲಾಖೆಗಳಿಗೆ ಭೇಟಿ ನೀಡುವುದು, ಅಧಿಕಾರಿಗಳು ಮತ್ತು ಮಂತ್ರಿಗಳೊಂದಿಗೆ ಭೇಟಿ ಮತ್ತು ಸ್ಥಳೀಯ ನ್ಯಾಯಾಲಯದಲ್ಲಿ (ಭೋಪಾಲ್‌ನಲ್ಲಿ), ಹೈಕೋರ್ಟ್ (ಜಬಲ್‌ಪುರದಲ್ಲಿ) ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾದ ಅರ್ಜಿಗಳು. ಒಟ್ಟಿನಲ್ಲಿ ಅನಿಲ ಸಂತ್ರಸ್ತರ ಜೀವನವು ಫುಟ್‌ಬಾಲ್‌ನಂತೆಯೇ ಇರುತ್ತದೆ ಎಂದು ನಾನು ಭಾವಿಸುತ್ತೇನೆ” ಎನ್ನುತ್ತಾರೆ.

“ದುರದೃಷ್ಟವಶಾತ್, ದುರಂತದ ಮೂರೂವರೆ ದಶಕಗಳ ನಂತರವೂ, ರಾಜ್ಯ ಅಥವಾ ಒಕ್ಕೂಟ ಸರ್ಕಾರವು ವಿಪತ್ತಿನ ಪರಿಣಾಮಗಳ ಸಮಗ್ರ ಮೌಲ್ಯಮಾಪನವನ್ನು ಕೈಗೊಳ್ಳಲು ಅಥವಾ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಪ್ರಯತ್ನಿಸಲಿಲ್ಲ” ಎಂದು ರಯೀಸಾ ಬಿ ಹೇಳುತ್ತಾರೆ. ಅವರು ಭೋಪಾಲ್ ಗ್ಯಾಸ್ ಪೀಡಿತ್ ಮಹಿಳಾ ಉದ್ಯೋಗ್ ಸಂಘಟನೆಯ ಅಧ್ಯಕ್ಷರಾಗಿದ್ದಾರೆ.

ಇದನ್ನೂ ಓದಿ:ಭೋಪಾಲ್ ಅನಿಲ ದುರಂತ: ಇನ್ನೂ ನ್ಯಾಯಕ್ಕಾಗಿ ಕಾಯುತ್ತಿರುವ ಸಂತ್ರಸ್ತರು

ಇಷ್ಟೆಲ್ಲಾ ಆದ ನಂತರವು ನಮ್ಮ ಸರ್ಕಾರ ದುರಂತ ನಡೆದ ಕಾರ್ಖಾನೆಯನ್ನು ಮುಚ್ಚಿಲ್ಲ, ಅದು ಈಗ ಮತ್ತೊಂದು ಬಹುರಾಷ್ಟ್ರೀಯ ಕಂಪೆನಿಯಾದ ‘ಡವ್‌ ಕೆಮಿಕಲ್‌’ನ ಮಾಲಿಕತ್ವದಲ್ಲಿದೆ. ಈ ಕಂಪೆನಿಯು ಇದನ್ನು ಕೊಂಡುಕೊಳ್ಳುವಾಗ UCIL ನ ಯಾವುದೆ ಹೊಣೆಗಾರಿಕೆ ತಾನು ಹೊತ್ತುಕೊಳ್ಳುವುದಿಲ್ಲ ಎಂದು ಹೇಳಿಯೇ ಪಡೆದುಕೊಂಡಿದೆ.

2012 ಆಗಸ್ಟ್ 9 ರಂದು ಸುಪ್ರೀಂ ಕೋರ್ಟ್‌, ಅನಿಲ ಸಂತ್ರಸ್ತರಿಗೆ ಅತ್ಯುತ್ತಮ ವೈದ್ಯಕೀಯ ಸೇವೆಯನ್ನು ಒದಗಿಸಲು ಭಾರತ ಒಕ್ಕೂಟ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಆದರೆ ಇದನ್ನು ಜಾರಿಗೆ ತರಲು ಅನಿಲ ಸಂತ್ರಸ್ತರಿಗಾಗಿ ಕೆಲಸ ಮಾಡುವ ಸಂಘಟನೆಗಳು ಈಗಲೂ ಹೋರಾಟ ನಡೆಸುತ್ತಿವೆ. ಈ ಸಂಘಟನೆಗಳು ಇನ್ನೂ ಇತರ ಕೆಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದೆ. ಎಲ್ಲಾ ನಿರ್ಗತಿಕ ಅನಿಲ ಸಂತ್ರಸ್ತರಿಗೆ, ವಿಶೇಷವಾಗಿ ವಿಧವೆಯರಿಗೆ ಸರಿಯಾದ ಪುನರ್ವಸತಿ ಕಲ್ಪಿಸಿಕೊಡುವುದು; ಸುರಕ್ಷಿತ ಕುಡಿಯುವ ನೀರಿನ ಪೂರೈಕೆ; ಉಚಿತ ವೈದ್ಯಕೀಯ ಆರೈಕೆ; ಕಲುಷಿತ ನೀರು ಮತ್ತು ವಿಷಕಾರಿ ತ್ಯಾಜ್ಯದ ಎಲ್ಲಾ ಸಂತ್ರಸ್ತರಿಗೆ ಪರಿಹಾರ; ಮತ್ತು ಆರೋಪಿಗಳ ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವುದು ಈ ಬೇಡಿಕೆಗಳಲ್ಲಿ ಸೇರಿದೆ.

ಇದನ್ನೂ ಓದಿ:ಭೋಪಲ್ ಅನಿಲ ದುರಂತ; ವಿಷಪೂರಿತ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...