Homeಮುಖಪುಟಭೋಪಾಲ್ ಅನಿಲ ದುರಂತಕ್ಕೆ 37 ವರ್ಷಗಳು; ಸಂತ್ರಸ್ತರ ಹೋರಾಟ ಮುಂದುವರೆದಿದೆ...

ಭೋಪಾಲ್ ಅನಿಲ ದುರಂತಕ್ಕೆ 37 ವರ್ಷಗಳು; ಸಂತ್ರಸ್ತರ ಹೋರಾಟ ಮುಂದುವರೆದಿದೆ…

- Advertisement -
- Advertisement -

ಭೋಪಾಲ್‌‌ ಅನಿಲ ದುರಂತ ನಡೆದು ಇಂದಿಗೆ 37 ವರ್ಷಗಳು ತುಂಬಿದೆ. ಸರ್ಕಾರವೇ ಒಪ್ಪಿಕೊಂಡಿರುವ ಹಾಗೆ ದುರಂತದಲ್ಲಿ ಮರಣ ಹೊಂದಿದವರು 3 ಸಾವಿರ ಜನರು. ಆದರೆ, ಅನಿಲ ದುರಂತ ಸಂತ್ರಸ್ತರ ಪ್ರಕಾರ ಅನಿಲ ಸೋರಿಕೆಯಿಂದ ಮೃತಪಟ್ಟವರು ಬರೋಬ್ಬರಿ 25 ಸಾವಿಕ್ಕೂ ಹೆಚ್ಚು. ಇದರಿಂದಾಗಿ ಗಾಯಗೊಂಡವರು ಮತ್ತು ವಿಕಲಚೇತನರಾದವರು 5.5 ಲಕ್ಷ ಜನರು. ವಿಶ್ವದ ಅತ್ಯಂತ ಭೀಕರ ಕೈಗಾರಿಕಾ ದುರಂತದಿಂದ ಬದುಕುಳಿದ ಜನರು ಈಗಲೂ ತಮ್ಮ ವೈದ್ಯಕೀಯ ಆರೈಕೆ ಮತ್ತು ಪರಿಹಾರವನ್ನು ಪಡೆಯಲು ಹೋರಾಟ ನಡೆಸುತ್ತಲೇ ಇದ್ದಾರೆ.

1984 ರ ಡಿಸೆಂಬರ್ 2-3 ರ ಮಧ್ಯರಾತ್ರಿಯಲ್ಲಿ ಯೂನಿಯನ್ ಕಾರ್ಬೈಡ್ ಇಂಡಿಯಾ ಲಿಮಿಟೆಡ್ (UCIL) ಕೀಟನಾಶಕ ಕಾರ್ಖಾನೆಯಿಂದ ಸೋರಿಕೆಯಾದ ವಿಷಕಾರಿ ಅನಿಲಗಳು ಲಕ್ಷಾಂತರ ಜನರ ಬದುಕನ್ನೇ ನಾಶ ಮಾಡಿದೆ. ಆಶ್ಚರ್ಯ ಮತ್ತು ದುರಂತವೇನೆಂದರೆ ಈ ದುರಂತದ ಪ್ರಧಾನ ಆರೋಪಿ ವಾರೆನ್ ಆಂಡರ್ಸನ್‌ಗೆ ಶಿಕ್ಷೆ ಆಗಲೇ ಇಲ್ಲ. ಆತ ಘಟನೆ ನಡೆದ ನಂತರ ಭಾರತದಿಂದ ಪರಾರಿಯಾಗಿ ಅಮೆರಿಕಾದಲ್ಲಿ ತುಂಬು ಜೀವನ ನಡೆಸಿ ತನ್ನ 92 ನೇ ವರ್ಷದಲ್ಲಿ ಮರಣ ಹೊಂದಿದ. ಇತರ ಅಪರಾಧಿಗಳಿಗೆ ಕೇವಲ 2 ವರ್ಷಗಳ ಸಜೆ ಸಿಕ್ಕಿದೆ. ಉಳಿದಂತೆ ತಮ್ಮ ಬದುಕನ್ನೇ ಕಳೆದುಕೊಂಡ ಸಂತ್ರಸ್ಥರಿಗೆ ಸಿಕ್ಕ ಪರಿಹಾರ ಕೇವಲ 15 ಸಾವಿರ ರೂಪಾಯಿಗಳು ಮಾತ್ರ. ಅದು ಕೂಡಾ ಘಟನೆ ನಡೆದು 26 ವರ್ಷಗಳ ನಂತರ. ಅಂದರೆ ಸಿಕ್ಕ ಪರಿಹಾರದ ಲೆಕ್ಕ ದಿನಕ್ಕೆ ಪ್ರತಿಯೊಬ್ಬರಿಗೆ ಕೇವಲ ಒಂದುವರೆ ರುಪಾಯಿ!

ಇದನ್ನೂ ಓದಿ:ಶ್ರದ್ಧಾಂಜಲಿ: ಭೋಪಾಲ್ ಅನಿಲ ದುರಂತದ ಸಂತ್ರಸ್ತರ ದನಿ ಹಮೀದಾ ಬೀ

ದುರಂತದಲ್ಲಿ ತನ್ನ ಪತಿ ಮತ್ತು ಮಗಳು ಸೇರಿದಂತೆ ತನ್ನ ಕುಟುಂಬದ ಮೂವರು ಸದಸ್ಯರನ್ನು ಕಳೆದುಕೊಂಡ 64 ವರ್ಷದ ಅನಿಲ ಸಂತ್ರಸ್ತ ಮಹಿಳೆ ರಯೀಸಾ ಬಿ ಹೇಳುವಂತೆ, “ಆಹಾರ ಧಾನ್ಯಗಳು ಮತ್ತು ವೈದ್ಯಕೀಯ ಆರೈಕೆ, ಪರಿಹಾರ ಮತ್ತು ವಿಧವಾ ಪಿಂಚಣಿ ಇವೆಲ್ಲವೂ ನಮ್ಮ ಸುದೀರ್ಘ ಪ್ರತಿಭಟನೆಗಳು, ಮನವಿ ಪತ್ರಗಳನ್ನು ಸಲ್ಲಿಸಿದ ನಂತರವೇ ಬಂದಿವೆ. ಸರ್ಕಾರಿ ಇಲಾಖೆಗಳಿಗೆ ಭೇಟಿ ನೀಡುವುದು, ಅಧಿಕಾರಿಗಳು ಮತ್ತು ಮಂತ್ರಿಗಳೊಂದಿಗೆ ಭೇಟಿ ಮತ್ತು ಸ್ಥಳೀಯ ನ್ಯಾಯಾಲಯದಲ್ಲಿ (ಭೋಪಾಲ್‌ನಲ್ಲಿ), ಹೈಕೋರ್ಟ್ (ಜಬಲ್‌ಪುರದಲ್ಲಿ) ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾದ ಅರ್ಜಿಗಳು. ಒಟ್ಟಿನಲ್ಲಿ ಅನಿಲ ಸಂತ್ರಸ್ತರ ಜೀವನವು ಫುಟ್‌ಬಾಲ್‌ನಂತೆಯೇ ಇರುತ್ತದೆ ಎಂದು ನಾನು ಭಾವಿಸುತ್ತೇನೆ” ಎನ್ನುತ್ತಾರೆ.

“ದುರದೃಷ್ಟವಶಾತ್, ದುರಂತದ ಮೂರೂವರೆ ದಶಕಗಳ ನಂತರವೂ, ರಾಜ್ಯ ಅಥವಾ ಒಕ್ಕೂಟ ಸರ್ಕಾರವು ವಿಪತ್ತಿನ ಪರಿಣಾಮಗಳ ಸಮಗ್ರ ಮೌಲ್ಯಮಾಪನವನ್ನು ಕೈಗೊಳ್ಳಲು ಅಥವಾ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಪ್ರಯತ್ನಿಸಲಿಲ್ಲ” ಎಂದು ರಯೀಸಾ ಬಿ ಹೇಳುತ್ತಾರೆ. ಅವರು ಭೋಪಾಲ್ ಗ್ಯಾಸ್ ಪೀಡಿತ್ ಮಹಿಳಾ ಉದ್ಯೋಗ್ ಸಂಘಟನೆಯ ಅಧ್ಯಕ್ಷರಾಗಿದ್ದಾರೆ.

ಇದನ್ನೂ ಓದಿ:ಭೋಪಾಲ್ ಅನಿಲ ದುರಂತ: ಇನ್ನೂ ನ್ಯಾಯಕ್ಕಾಗಿ ಕಾಯುತ್ತಿರುವ ಸಂತ್ರಸ್ತರು

ಇಷ್ಟೆಲ್ಲಾ ಆದ ನಂತರವು ನಮ್ಮ ಸರ್ಕಾರ ದುರಂತ ನಡೆದ ಕಾರ್ಖಾನೆಯನ್ನು ಮುಚ್ಚಿಲ್ಲ, ಅದು ಈಗ ಮತ್ತೊಂದು ಬಹುರಾಷ್ಟ್ರೀಯ ಕಂಪೆನಿಯಾದ ‘ಡವ್‌ ಕೆಮಿಕಲ್‌’ನ ಮಾಲಿಕತ್ವದಲ್ಲಿದೆ. ಈ ಕಂಪೆನಿಯು ಇದನ್ನು ಕೊಂಡುಕೊಳ್ಳುವಾಗ UCIL ನ ಯಾವುದೆ ಹೊಣೆಗಾರಿಕೆ ತಾನು ಹೊತ್ತುಕೊಳ್ಳುವುದಿಲ್ಲ ಎಂದು ಹೇಳಿಯೇ ಪಡೆದುಕೊಂಡಿದೆ.

2012 ಆಗಸ್ಟ್ 9 ರಂದು ಸುಪ್ರೀಂ ಕೋರ್ಟ್‌, ಅನಿಲ ಸಂತ್ರಸ್ತರಿಗೆ ಅತ್ಯುತ್ತಮ ವೈದ್ಯಕೀಯ ಸೇವೆಯನ್ನು ಒದಗಿಸಲು ಭಾರತ ಒಕ್ಕೂಟ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಆದರೆ ಇದನ್ನು ಜಾರಿಗೆ ತರಲು ಅನಿಲ ಸಂತ್ರಸ್ತರಿಗಾಗಿ ಕೆಲಸ ಮಾಡುವ ಸಂಘಟನೆಗಳು ಈಗಲೂ ಹೋರಾಟ ನಡೆಸುತ್ತಿವೆ. ಈ ಸಂಘಟನೆಗಳು ಇನ್ನೂ ಇತರ ಕೆಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದೆ. ಎಲ್ಲಾ ನಿರ್ಗತಿಕ ಅನಿಲ ಸಂತ್ರಸ್ತರಿಗೆ, ವಿಶೇಷವಾಗಿ ವಿಧವೆಯರಿಗೆ ಸರಿಯಾದ ಪುನರ್ವಸತಿ ಕಲ್ಪಿಸಿಕೊಡುವುದು; ಸುರಕ್ಷಿತ ಕುಡಿಯುವ ನೀರಿನ ಪೂರೈಕೆ; ಉಚಿತ ವೈದ್ಯಕೀಯ ಆರೈಕೆ; ಕಲುಷಿತ ನೀರು ಮತ್ತು ವಿಷಕಾರಿ ತ್ಯಾಜ್ಯದ ಎಲ್ಲಾ ಸಂತ್ರಸ್ತರಿಗೆ ಪರಿಹಾರ; ಮತ್ತು ಆರೋಪಿಗಳ ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವುದು ಈ ಬೇಡಿಕೆಗಳಲ್ಲಿ ಸೇರಿದೆ.

ಇದನ್ನೂ ಓದಿ:ಭೋಪಲ್ ಅನಿಲ ದುರಂತ; ವಿಷಪೂರಿತ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...